Homeಫ್ಯಾಕ್ಟ್‌ಚೆಕ್FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

- Advertisement -
- Advertisement -

ಒಂದೇ ಮೊಬೈಲ್‌ನಲ್ಲಿ ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ದಂಡ ವಿಧಿಸಲು ಯೋಜಿಸುತ್ತಿದೆ ಎಂದು ಸುದ್ದಿಯೊಂದು ಹಬ್ಬಿದೆ.

ನೆಟ್‌ವರ್ಕ್ ಸೇವಾ ಪೂರೈಕೆದಾರರು ದಂಡದ ಹಣವನ್ನು ಒಂದು ದೊಡ್ಡ ಮೊತ್ತವಾಗಿ ಅಥವಾ ವಾರ್ಷಿಕ ಆಧಾರದ ಮೇಲೆ ಪಡೆದುಕೊಳ್ಳಬಹುದು ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುದ್ದಿಯ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ಗೂಗಲ್‌ನಲ್ಲಿ ಕೀ ವರ್ಡ್ಸ್ ಬಳಸಿ ಮಾಹಿತಿ ಹುಡುಕಿದಾಗ ಜೂನ್ 13,2024ರಂದು ಎಕಾನಾಮಿಕ್ಸ್ ಟೈಮ್ಸ್ ಪ್ರಕಟಿಸಿರುವ ಸುದ್ದಿಯೊಂದು ದೊರೆತಿದೆ.

ಸುದ್ದಿಯಲ್ಲಿ ಟ್ರಾಯ್ ‘ಸಂಖ್ಯಾ ಸಂಪನ್ಮೂಲ ನಿಯಂತ್ರಣ'(regulate numbering resources) ಪ್ರಸ್ತಾಪವನ್ನು ಕೇಂದ್ರ ದೂರ ಸಂಪರ್ಕ ಸಚಿವಾಲಯದ ಮುಂದಿಟ್ಟಿದೆ ಎಂದು ಹೇಳಲಾಗಿದೆ.

ಟ್ರಾಯ್ ಫೋನ್ ನಂಬರ್‌ಗಳನ್ನು ‘ಪರಿಮಿತವಲ್ಲದ ಹೆಚ್ಚು ಮೌಲ್ಯಯುತವಾದ ಸಾರ್ವಜನಿಕ ಸಂಪನ್ಮೂಲ’ ಎಂದು ಪರಿಗಣಿಸುತ್ತದೆ ಎಂದು ವರದಿ ಉಲ್ಲೇಖಿಸಿದೆ. ಆದ್ದರಿಂದ, ಕಡಿಮೆ ಬಳಕೆಯೊಂದಿಗೆ ಸಂಖ್ಯೆಗಳನ್ನು ಹೊಂದಿರುವ ಮೊಬೈಲ್ ಆಪರೇಟರ್‌ಗಳ ಮೇಲೆ ಶುಲ್ಕಗಳನ್ನು ವಿಧಿಸಲು ಯೋಜಿಸುತ್ತಿದೆ’ ಎಂದಿದೆ.

ದೀರ್ಘಾವಧಿಯವರೆಗೆ ಬಳಸದೆ ಇರುವ ಸಂಖ್ಯೆಗಳ ಮೇಲೆ ಗ್ರಾಹಕರಿಗೆ ಏಕರೂಪವಾಗಿ ಅಥವಾ ವಾರ್ಷಿಕ ಶುಲ್ಕದ ರೂಪದಲ್ಲಿ ದಂಡ ವಿಧಿಸಬಹುದು ಎಂದು ವರದಿ ಹೇಳಿದೆ.

ಒಂದು ಹೆಸರಿನಲ್ಲಿ ಎರಡು ಫೋನ್ ನಂಬರ್‌ಗಳಿದ್ದು, ಅವುಗಳಲ್ಲಿ ಒಂದನ್ನು ಮಾತ್ರ ಬಳಸಿ, ಇನ್ನೊಂದು ಬಳಸದೇ ಇದ್ದರೆ ಅಂಥವರ ಮೇಲೆ ಮಾತ್ರ ದಂಡ ವಿಧಿಸುವುದು ಪ್ರಸ್ತಾವಣೆಯಲ್ಲಿದೆ ಎಂದು ತಿಳಿಸಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ‘ರಾಷ್ಟ್ರೀಯ ಸಂಖ್ಯಾ ಯೋಜನೆಯ ಪರಿಷ್ಕರಣೆ‘ ಎಂಬ ಶೀರ್ಷಿಕೆಯಲ್ಲಿ ಜೂನ್ 6, 2024ರಂದು ಟ್ರಾಯ್ ಹೊರಡಿಸಿದ ಪ್ರಕಟನೆ ಅದರ ವೆಬ್‌ಸೈಟ್‌ನಲ್ಲಿ ಲಭ್ಯವಾಗಿದೆ.

ಪ್ರಕಟಣೆಯಲ್ಲಿ, ಎರಡು ಸಿಮ್‌ ಕಾರ್ಡ್‌ಗಳನ್ನು ಹೊಂದಿರುವ ಕಾರಣಕ್ಕೆ ದಂಡ ವಿಧಿಸಲಾಗುತ್ತದೆ ಎಂದು ಎಲ್ಲೂ ಹೇಳಿಲ್ಲ.

ಆದರೆ, ಪ್ರಕಟಣೆಯ ಒಂದು ವಿಭಾಗದಲ್ಲಿ ವ್ಯಾನಿಟಿ ಸಂಖ್ಯೆಗಳ ಕುರಿತು ಚರ್ಚಿಸಲಾಗಿದೆ. ಟೆಲಿಕಾಂ ಸೇವಾ ಪೂರೈಕೆದಾರರು (ಟಿಎಸ್‌ಪಿಗಳು) ಹಂಚಿಕೆ ಮಾಡಿದ ಸಂಖ್ಯೆಗಳನ್ನು ಗ್ರಾಹಕರು ಬಳಸಬಹುದು, ಬಳಸದೇ ಇರಬಹುದು ಅಥವಾ ಅವುಗಳನ್ನು ಸಂಗ್ರಹಿಸಿಡಬಹುದು. ಈ ಸಂಖ್ಯೆಗಳಿಗೆ ವ್ಯಾನಿಟಿ ಸಂಖ್ಯೆಗಳು ಎನ್ನಲಾಗುತ್ತದೆ. ಇಂತಹ ‘ಸಂಖ್ಯೆಗಳು ಸಂಪನ್ಮೂಲಗಳ ಅಸಮರ್ಥ ಬಳಕೆಗೆ’ ಕಾರಣವಾಗುತ್ತದೆ ಎಂದು ಹೇಳಲಾಗಿದೆ.

ಟಿಎಸ್‌ಪಿಯಲ್ಲಿ ಬಳಕೆಯಾಗದ ಸಂಖ್ಯೆಗಳಿಗೆ ಒಂದು ಬಾರಿ ಅಥವಾ ಪ್ರತಿ ವರ್ಷ ಶುಲ್ಕಗಳನ್ನು ವಿಧಿಸುವುದು ನಿಷ್ಕ್ರಿಯಗೊಳಿಸಿದ ಫೋನ್ ನಂಬರ್‌ಗಳನ್ನು ಮರುಹಂಚಿಕೆ ಮಾಡದೆಯೇ ಹಿಡಿದಿಟ್ಟುಕೊಳ್ಳುವ ಟಿಎಸ್‌ಪಿಗಳ ಮೇಲೆ ಆರ್ಥಿಕ ನಿರಾಕರಣೆ ವಿಧಿಸುವುದನ್ನು ಟ್ರಾಯ್ ವಿವರಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಕುರಿತು ಜೂನ್ 14ರಂದು ಟ್ರಾಯ್‌ ತನ್ನ ಎಕ್ಸ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, “ಒಂದಕ್ಕಿಂತ ಹೆಚ್ಚು ಸಿಮ್‌ಗಳು ಅಥವಾ ಸಂಖ್ಯೆಗಳು ಹೊಂದಿರುವ ಗ್ರಾಹಕರ ಮೇಲೆ ಶುಲ್ಕ ವಿಧಿಸಲು ಟ್ರಾಯ್ ಉದ್ದೇಶಿಸಿದೆ ಎಂಬುವುದು ಸುಳ್ಳು, ಆಧಾರ ರಹಿತ ಮತ್ತು  ಸಾರ್ವಜನಿಕರನ್ನು ತಪ್ಪು ದಾರಿಗೆಳೆಯುವ ಸುದ್ದಿಯಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ : FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...