Homeಫ್ಯಾಕ್ಟ್‌ಚೆಕ್FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

- Advertisement -
- Advertisement -

ಒಂದೇ ಮೊಬೈಲ್‌ನಲ್ಲಿ ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ದಂಡ ವಿಧಿಸಲು ಯೋಜಿಸುತ್ತಿದೆ ಎಂದು ಸುದ್ದಿಯೊಂದು ಹಬ್ಬಿದೆ.

ನೆಟ್‌ವರ್ಕ್ ಸೇವಾ ಪೂರೈಕೆದಾರರು ದಂಡದ ಹಣವನ್ನು ಒಂದು ದೊಡ್ಡ ಮೊತ್ತವಾಗಿ ಅಥವಾ ವಾರ್ಷಿಕ ಆಧಾರದ ಮೇಲೆ ಪಡೆದುಕೊಳ್ಳಬಹುದು ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುದ್ದಿಯ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ಗೂಗಲ್‌ನಲ್ಲಿ ಕೀ ವರ್ಡ್ಸ್ ಬಳಸಿ ಮಾಹಿತಿ ಹುಡುಕಿದಾಗ ಜೂನ್ 13,2024ರಂದು ಎಕಾನಾಮಿಕ್ಸ್ ಟೈಮ್ಸ್ ಪ್ರಕಟಿಸಿರುವ ಸುದ್ದಿಯೊಂದು ದೊರೆತಿದೆ.

ಸುದ್ದಿಯಲ್ಲಿ ಟ್ರಾಯ್ ‘ಸಂಖ್ಯಾ ಸಂಪನ್ಮೂಲ ನಿಯಂತ್ರಣ'(regulate numbering resources) ಪ್ರಸ್ತಾಪವನ್ನು ಕೇಂದ್ರ ದೂರ ಸಂಪರ್ಕ ಸಚಿವಾಲಯದ ಮುಂದಿಟ್ಟಿದೆ ಎಂದು ಹೇಳಲಾಗಿದೆ.

ಟ್ರಾಯ್ ಫೋನ್ ನಂಬರ್‌ಗಳನ್ನು ‘ಪರಿಮಿತವಲ್ಲದ ಹೆಚ್ಚು ಮೌಲ್ಯಯುತವಾದ ಸಾರ್ವಜನಿಕ ಸಂಪನ್ಮೂಲ’ ಎಂದು ಪರಿಗಣಿಸುತ್ತದೆ ಎಂದು ವರದಿ ಉಲ್ಲೇಖಿಸಿದೆ. ಆದ್ದರಿಂದ, ಕಡಿಮೆ ಬಳಕೆಯೊಂದಿಗೆ ಸಂಖ್ಯೆಗಳನ್ನು ಹೊಂದಿರುವ ಮೊಬೈಲ್ ಆಪರೇಟರ್‌ಗಳ ಮೇಲೆ ಶುಲ್ಕಗಳನ್ನು ವಿಧಿಸಲು ಯೋಜಿಸುತ್ತಿದೆ’ ಎಂದಿದೆ.

ದೀರ್ಘಾವಧಿಯವರೆಗೆ ಬಳಸದೆ ಇರುವ ಸಂಖ್ಯೆಗಳ ಮೇಲೆ ಗ್ರಾಹಕರಿಗೆ ಏಕರೂಪವಾಗಿ ಅಥವಾ ವಾರ್ಷಿಕ ಶುಲ್ಕದ ರೂಪದಲ್ಲಿ ದಂಡ ವಿಧಿಸಬಹುದು ಎಂದು ವರದಿ ಹೇಳಿದೆ.

ಒಂದು ಹೆಸರಿನಲ್ಲಿ ಎರಡು ಫೋನ್ ನಂಬರ್‌ಗಳಿದ್ದು, ಅವುಗಳಲ್ಲಿ ಒಂದನ್ನು ಮಾತ್ರ ಬಳಸಿ, ಇನ್ನೊಂದು ಬಳಸದೇ ಇದ್ದರೆ ಅಂಥವರ ಮೇಲೆ ಮಾತ್ರ ದಂಡ ವಿಧಿಸುವುದು ಪ್ರಸ್ತಾವಣೆಯಲ್ಲಿದೆ ಎಂದು ತಿಳಿಸಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ‘ರಾಷ್ಟ್ರೀಯ ಸಂಖ್ಯಾ ಯೋಜನೆಯ ಪರಿಷ್ಕರಣೆ‘ ಎಂಬ ಶೀರ್ಷಿಕೆಯಲ್ಲಿ ಜೂನ್ 6, 2024ರಂದು ಟ್ರಾಯ್ ಹೊರಡಿಸಿದ ಪ್ರಕಟನೆ ಅದರ ವೆಬ್‌ಸೈಟ್‌ನಲ್ಲಿ ಲಭ್ಯವಾಗಿದೆ.

ಪ್ರಕಟಣೆಯಲ್ಲಿ, ಎರಡು ಸಿಮ್‌ ಕಾರ್ಡ್‌ಗಳನ್ನು ಹೊಂದಿರುವ ಕಾರಣಕ್ಕೆ ದಂಡ ವಿಧಿಸಲಾಗುತ್ತದೆ ಎಂದು ಎಲ್ಲೂ ಹೇಳಿಲ್ಲ.

ಆದರೆ, ಪ್ರಕಟಣೆಯ ಒಂದು ವಿಭಾಗದಲ್ಲಿ ವ್ಯಾನಿಟಿ ಸಂಖ್ಯೆಗಳ ಕುರಿತು ಚರ್ಚಿಸಲಾಗಿದೆ. ಟೆಲಿಕಾಂ ಸೇವಾ ಪೂರೈಕೆದಾರರು (ಟಿಎಸ್‌ಪಿಗಳು) ಹಂಚಿಕೆ ಮಾಡಿದ ಸಂಖ್ಯೆಗಳನ್ನು ಗ್ರಾಹಕರು ಬಳಸಬಹುದು, ಬಳಸದೇ ಇರಬಹುದು ಅಥವಾ ಅವುಗಳನ್ನು ಸಂಗ್ರಹಿಸಿಡಬಹುದು. ಈ ಸಂಖ್ಯೆಗಳಿಗೆ ವ್ಯಾನಿಟಿ ಸಂಖ್ಯೆಗಳು ಎನ್ನಲಾಗುತ್ತದೆ. ಇಂತಹ ‘ಸಂಖ್ಯೆಗಳು ಸಂಪನ್ಮೂಲಗಳ ಅಸಮರ್ಥ ಬಳಕೆಗೆ’ ಕಾರಣವಾಗುತ್ತದೆ ಎಂದು ಹೇಳಲಾಗಿದೆ.

ಟಿಎಸ್‌ಪಿಯಲ್ಲಿ ಬಳಕೆಯಾಗದ ಸಂಖ್ಯೆಗಳಿಗೆ ಒಂದು ಬಾರಿ ಅಥವಾ ಪ್ರತಿ ವರ್ಷ ಶುಲ್ಕಗಳನ್ನು ವಿಧಿಸುವುದು ನಿಷ್ಕ್ರಿಯಗೊಳಿಸಿದ ಫೋನ್ ನಂಬರ್‌ಗಳನ್ನು ಮರುಹಂಚಿಕೆ ಮಾಡದೆಯೇ ಹಿಡಿದಿಟ್ಟುಕೊಳ್ಳುವ ಟಿಎಸ್‌ಪಿಗಳ ಮೇಲೆ ಆರ್ಥಿಕ ನಿರಾಕರಣೆ ವಿಧಿಸುವುದನ್ನು ಟ್ರಾಯ್ ವಿವರಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಕುರಿತು ಜೂನ್ 14ರಂದು ಟ್ರಾಯ್‌ ತನ್ನ ಎಕ್ಸ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, “ಒಂದಕ್ಕಿಂತ ಹೆಚ್ಚು ಸಿಮ್‌ಗಳು ಅಥವಾ ಸಂಖ್ಯೆಗಳು ಹೊಂದಿರುವ ಗ್ರಾಹಕರ ಮೇಲೆ ಶುಲ್ಕ ವಿಧಿಸಲು ಟ್ರಾಯ್ ಉದ್ದೇಶಿಸಿದೆ ಎಂಬುವುದು ಸುಳ್ಳು, ಆಧಾರ ರಹಿತ ಮತ್ತು  ಸಾರ್ವಜನಿಕರನ್ನು ತಪ್ಪು ದಾರಿಗೆಳೆಯುವ ಸುದ್ದಿಯಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ : FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...