Homeಫ್ಯಾಕ್ಟ್‌ಚೆಕ್FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

- Advertisement -
- Advertisement -

ಒಂದೇ ಮೊಬೈಲ್‌ನಲ್ಲಿ ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ದಂಡ ವಿಧಿಸಲು ಯೋಜಿಸುತ್ತಿದೆ ಎಂದು ಸುದ್ದಿಯೊಂದು ಹಬ್ಬಿದೆ.

ನೆಟ್‌ವರ್ಕ್ ಸೇವಾ ಪೂರೈಕೆದಾರರು ದಂಡದ ಹಣವನ್ನು ಒಂದು ದೊಡ್ಡ ಮೊತ್ತವಾಗಿ ಅಥವಾ ವಾರ್ಷಿಕ ಆಧಾರದ ಮೇಲೆ ಪಡೆದುಕೊಳ್ಳಬಹುದು ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುದ್ದಿಯ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ಗೂಗಲ್‌ನಲ್ಲಿ ಕೀ ವರ್ಡ್ಸ್ ಬಳಸಿ ಮಾಹಿತಿ ಹುಡುಕಿದಾಗ ಜೂನ್ 13,2024ರಂದು ಎಕಾನಾಮಿಕ್ಸ್ ಟೈಮ್ಸ್ ಪ್ರಕಟಿಸಿರುವ ಸುದ್ದಿಯೊಂದು ದೊರೆತಿದೆ.

ಸುದ್ದಿಯಲ್ಲಿ ಟ್ರಾಯ್ ‘ಸಂಖ್ಯಾ ಸಂಪನ್ಮೂಲ ನಿಯಂತ್ರಣ'(regulate numbering resources) ಪ್ರಸ್ತಾಪವನ್ನು ಕೇಂದ್ರ ದೂರ ಸಂಪರ್ಕ ಸಚಿವಾಲಯದ ಮುಂದಿಟ್ಟಿದೆ ಎಂದು ಹೇಳಲಾಗಿದೆ.

ಟ್ರಾಯ್ ಫೋನ್ ನಂಬರ್‌ಗಳನ್ನು ‘ಪರಿಮಿತವಲ್ಲದ ಹೆಚ್ಚು ಮೌಲ್ಯಯುತವಾದ ಸಾರ್ವಜನಿಕ ಸಂಪನ್ಮೂಲ’ ಎಂದು ಪರಿಗಣಿಸುತ್ತದೆ ಎಂದು ವರದಿ ಉಲ್ಲೇಖಿಸಿದೆ. ಆದ್ದರಿಂದ, ಕಡಿಮೆ ಬಳಕೆಯೊಂದಿಗೆ ಸಂಖ್ಯೆಗಳನ್ನು ಹೊಂದಿರುವ ಮೊಬೈಲ್ ಆಪರೇಟರ್‌ಗಳ ಮೇಲೆ ಶುಲ್ಕಗಳನ್ನು ವಿಧಿಸಲು ಯೋಜಿಸುತ್ತಿದೆ’ ಎಂದಿದೆ.

ದೀರ್ಘಾವಧಿಯವರೆಗೆ ಬಳಸದೆ ಇರುವ ಸಂಖ್ಯೆಗಳ ಮೇಲೆ ಗ್ರಾಹಕರಿಗೆ ಏಕರೂಪವಾಗಿ ಅಥವಾ ವಾರ್ಷಿಕ ಶುಲ್ಕದ ರೂಪದಲ್ಲಿ ದಂಡ ವಿಧಿಸಬಹುದು ಎಂದು ವರದಿ ಹೇಳಿದೆ.

ಒಂದು ಹೆಸರಿನಲ್ಲಿ ಎರಡು ಫೋನ್ ನಂಬರ್‌ಗಳಿದ್ದು, ಅವುಗಳಲ್ಲಿ ಒಂದನ್ನು ಮಾತ್ರ ಬಳಸಿ, ಇನ್ನೊಂದು ಬಳಸದೇ ಇದ್ದರೆ ಅಂಥವರ ಮೇಲೆ ಮಾತ್ರ ದಂಡ ವಿಧಿಸುವುದು ಪ್ರಸ್ತಾವಣೆಯಲ್ಲಿದೆ ಎಂದು ತಿಳಿಸಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ‘ರಾಷ್ಟ್ರೀಯ ಸಂಖ್ಯಾ ಯೋಜನೆಯ ಪರಿಷ್ಕರಣೆ‘ ಎಂಬ ಶೀರ್ಷಿಕೆಯಲ್ಲಿ ಜೂನ್ 6, 2024ರಂದು ಟ್ರಾಯ್ ಹೊರಡಿಸಿದ ಪ್ರಕಟನೆ ಅದರ ವೆಬ್‌ಸೈಟ್‌ನಲ್ಲಿ ಲಭ್ಯವಾಗಿದೆ.

ಪ್ರಕಟಣೆಯಲ್ಲಿ, ಎರಡು ಸಿಮ್‌ ಕಾರ್ಡ್‌ಗಳನ್ನು ಹೊಂದಿರುವ ಕಾರಣಕ್ಕೆ ದಂಡ ವಿಧಿಸಲಾಗುತ್ತದೆ ಎಂದು ಎಲ್ಲೂ ಹೇಳಿಲ್ಲ.

ಆದರೆ, ಪ್ರಕಟಣೆಯ ಒಂದು ವಿಭಾಗದಲ್ಲಿ ವ್ಯಾನಿಟಿ ಸಂಖ್ಯೆಗಳ ಕುರಿತು ಚರ್ಚಿಸಲಾಗಿದೆ. ಟೆಲಿಕಾಂ ಸೇವಾ ಪೂರೈಕೆದಾರರು (ಟಿಎಸ್‌ಪಿಗಳು) ಹಂಚಿಕೆ ಮಾಡಿದ ಸಂಖ್ಯೆಗಳನ್ನು ಗ್ರಾಹಕರು ಬಳಸಬಹುದು, ಬಳಸದೇ ಇರಬಹುದು ಅಥವಾ ಅವುಗಳನ್ನು ಸಂಗ್ರಹಿಸಿಡಬಹುದು. ಈ ಸಂಖ್ಯೆಗಳಿಗೆ ವ್ಯಾನಿಟಿ ಸಂಖ್ಯೆಗಳು ಎನ್ನಲಾಗುತ್ತದೆ. ಇಂತಹ ‘ಸಂಖ್ಯೆಗಳು ಸಂಪನ್ಮೂಲಗಳ ಅಸಮರ್ಥ ಬಳಕೆಗೆ’ ಕಾರಣವಾಗುತ್ತದೆ ಎಂದು ಹೇಳಲಾಗಿದೆ.

ಟಿಎಸ್‌ಪಿಯಲ್ಲಿ ಬಳಕೆಯಾಗದ ಸಂಖ್ಯೆಗಳಿಗೆ ಒಂದು ಬಾರಿ ಅಥವಾ ಪ್ರತಿ ವರ್ಷ ಶುಲ್ಕಗಳನ್ನು ವಿಧಿಸುವುದು ನಿಷ್ಕ್ರಿಯಗೊಳಿಸಿದ ಫೋನ್ ನಂಬರ್‌ಗಳನ್ನು ಮರುಹಂಚಿಕೆ ಮಾಡದೆಯೇ ಹಿಡಿದಿಟ್ಟುಕೊಳ್ಳುವ ಟಿಎಸ್‌ಪಿಗಳ ಮೇಲೆ ಆರ್ಥಿಕ ನಿರಾಕರಣೆ ವಿಧಿಸುವುದನ್ನು ಟ್ರಾಯ್ ವಿವರಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಕುರಿತು ಜೂನ್ 14ರಂದು ಟ್ರಾಯ್‌ ತನ್ನ ಎಕ್ಸ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, “ಒಂದಕ್ಕಿಂತ ಹೆಚ್ಚು ಸಿಮ್‌ಗಳು ಅಥವಾ ಸಂಖ್ಯೆಗಳು ಹೊಂದಿರುವ ಗ್ರಾಹಕರ ಮೇಲೆ ಶುಲ್ಕ ವಿಧಿಸಲು ಟ್ರಾಯ್ ಉದ್ದೇಶಿಸಿದೆ ಎಂಬುವುದು ಸುಳ್ಳು, ಆಧಾರ ರಹಿತ ಮತ್ತು  ಸಾರ್ವಜನಿಕರನ್ನು ತಪ್ಪು ದಾರಿಗೆಳೆಯುವ ಸುದ್ದಿಯಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ : FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...