Homeಫ್ಯಾಕ್ಟ್‌ಚೆಕ್FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

FACT CHECK : ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಸರ್ಕಾರ ದಂಡ ವಿಧಿಸಲಿದೆ ಎಂಬುವುದು ಸುಳ್ಳು

- Advertisement -
- Advertisement -

ಒಂದೇ ಮೊಬೈಲ್‌ನಲ್ಲಿ ಎರಡು ಸಿಮ್ ಕಾರ್ಡ್ ಹೊಂದಿರುವವರಿಗೆ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ದಂಡ ವಿಧಿಸಲು ಯೋಜಿಸುತ್ತಿದೆ ಎಂದು ಸುದ್ದಿಯೊಂದು ಹಬ್ಬಿದೆ.

ನೆಟ್‌ವರ್ಕ್ ಸೇವಾ ಪೂರೈಕೆದಾರರು ದಂಡದ ಹಣವನ್ನು ಒಂದು ದೊಡ್ಡ ಮೊತ್ತವಾಗಿ ಅಥವಾ ವಾರ್ಷಿಕ ಆಧಾರದ ಮೇಲೆ ಪಡೆದುಕೊಳ್ಳಬಹುದು ಎಂದು ಕೆಲವರು ಸಾಮಾಜಿಕ ಮಾಧ್ಯಮಗಳಲ್ಲಿ ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುದ್ದಿಯ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ಈ ಗೂಗಲ್‌ನಲ್ಲಿ ಕೀ ವರ್ಡ್ಸ್ ಬಳಸಿ ಮಾಹಿತಿ ಹುಡುಕಿದಾಗ ಜೂನ್ 13,2024ರಂದು ಎಕಾನಾಮಿಕ್ಸ್ ಟೈಮ್ಸ್ ಪ್ರಕಟಿಸಿರುವ ಸುದ್ದಿಯೊಂದು ದೊರೆತಿದೆ.

ಸುದ್ದಿಯಲ್ಲಿ ಟ್ರಾಯ್ ‘ಸಂಖ್ಯಾ ಸಂಪನ್ಮೂಲ ನಿಯಂತ್ರಣ'(regulate numbering resources) ಪ್ರಸ್ತಾಪವನ್ನು ಕೇಂದ್ರ ದೂರ ಸಂಪರ್ಕ ಸಚಿವಾಲಯದ ಮುಂದಿಟ್ಟಿದೆ ಎಂದು ಹೇಳಲಾಗಿದೆ.

ಟ್ರಾಯ್ ಫೋನ್ ನಂಬರ್‌ಗಳನ್ನು ‘ಪರಿಮಿತವಲ್ಲದ ಹೆಚ್ಚು ಮೌಲ್ಯಯುತವಾದ ಸಾರ್ವಜನಿಕ ಸಂಪನ್ಮೂಲ’ ಎಂದು ಪರಿಗಣಿಸುತ್ತದೆ ಎಂದು ವರದಿ ಉಲ್ಲೇಖಿಸಿದೆ. ಆದ್ದರಿಂದ, ಕಡಿಮೆ ಬಳಕೆಯೊಂದಿಗೆ ಸಂಖ್ಯೆಗಳನ್ನು ಹೊಂದಿರುವ ಮೊಬೈಲ್ ಆಪರೇಟರ್‌ಗಳ ಮೇಲೆ ಶುಲ್ಕಗಳನ್ನು ವಿಧಿಸಲು ಯೋಜಿಸುತ್ತಿದೆ’ ಎಂದಿದೆ.

ದೀರ್ಘಾವಧಿಯವರೆಗೆ ಬಳಸದೆ ಇರುವ ಸಂಖ್ಯೆಗಳ ಮೇಲೆ ಗ್ರಾಹಕರಿಗೆ ಏಕರೂಪವಾಗಿ ಅಥವಾ ವಾರ್ಷಿಕ ಶುಲ್ಕದ ರೂಪದಲ್ಲಿ ದಂಡ ವಿಧಿಸಬಹುದು ಎಂದು ವರದಿ ಹೇಳಿದೆ.

ಒಂದು ಹೆಸರಿನಲ್ಲಿ ಎರಡು ಫೋನ್ ನಂಬರ್‌ಗಳಿದ್ದು, ಅವುಗಳಲ್ಲಿ ಒಂದನ್ನು ಮಾತ್ರ ಬಳಸಿ, ಇನ್ನೊಂದು ಬಳಸದೇ ಇದ್ದರೆ ಅಂಥವರ ಮೇಲೆ ಮಾತ್ರ ದಂಡ ವಿಧಿಸುವುದು ಪ್ರಸ್ತಾವಣೆಯಲ್ಲಿದೆ ಎಂದು ತಿಳಿಸಿದೆ.

ಇದೇ ವಿಷಯಕ್ಕೆ ಸಂಬಂಧಿಸಿದಂತೆ ‘ರಾಷ್ಟ್ರೀಯ ಸಂಖ್ಯಾ ಯೋಜನೆಯ ಪರಿಷ್ಕರಣೆ‘ ಎಂಬ ಶೀರ್ಷಿಕೆಯಲ್ಲಿ ಜೂನ್ 6, 2024ರಂದು ಟ್ರಾಯ್ ಹೊರಡಿಸಿದ ಪ್ರಕಟನೆ ಅದರ ವೆಬ್‌ಸೈಟ್‌ನಲ್ಲಿ ಲಭ್ಯವಾಗಿದೆ.

ಪ್ರಕಟಣೆಯಲ್ಲಿ, ಎರಡು ಸಿಮ್‌ ಕಾರ್ಡ್‌ಗಳನ್ನು ಹೊಂದಿರುವ ಕಾರಣಕ್ಕೆ ದಂಡ ವಿಧಿಸಲಾಗುತ್ತದೆ ಎಂದು ಎಲ್ಲೂ ಹೇಳಿಲ್ಲ.

ಆದರೆ, ಪ್ರಕಟಣೆಯ ಒಂದು ವಿಭಾಗದಲ್ಲಿ ವ್ಯಾನಿಟಿ ಸಂಖ್ಯೆಗಳ ಕುರಿತು ಚರ್ಚಿಸಲಾಗಿದೆ. ಟೆಲಿಕಾಂ ಸೇವಾ ಪೂರೈಕೆದಾರರು (ಟಿಎಸ್‌ಪಿಗಳು) ಹಂಚಿಕೆ ಮಾಡಿದ ಸಂಖ್ಯೆಗಳನ್ನು ಗ್ರಾಹಕರು ಬಳಸಬಹುದು, ಬಳಸದೇ ಇರಬಹುದು ಅಥವಾ ಅವುಗಳನ್ನು ಸಂಗ್ರಹಿಸಿಡಬಹುದು. ಈ ಸಂಖ್ಯೆಗಳಿಗೆ ವ್ಯಾನಿಟಿ ಸಂಖ್ಯೆಗಳು ಎನ್ನಲಾಗುತ್ತದೆ. ಇಂತಹ ‘ಸಂಖ್ಯೆಗಳು ಸಂಪನ್ಮೂಲಗಳ ಅಸಮರ್ಥ ಬಳಕೆಗೆ’ ಕಾರಣವಾಗುತ್ತದೆ ಎಂದು ಹೇಳಲಾಗಿದೆ.

ಟಿಎಸ್‌ಪಿಯಲ್ಲಿ ಬಳಕೆಯಾಗದ ಸಂಖ್ಯೆಗಳಿಗೆ ಒಂದು ಬಾರಿ ಅಥವಾ ಪ್ರತಿ ವರ್ಷ ಶುಲ್ಕಗಳನ್ನು ವಿಧಿಸುವುದು ನಿಷ್ಕ್ರಿಯಗೊಳಿಸಿದ ಫೋನ್ ನಂಬರ್‌ಗಳನ್ನು ಮರುಹಂಚಿಕೆ ಮಾಡದೆಯೇ ಹಿಡಿದಿಟ್ಟುಕೊಳ್ಳುವ ಟಿಎಸ್‌ಪಿಗಳ ಮೇಲೆ ಆರ್ಥಿಕ ನಿರಾಕರಣೆ ವಿಧಿಸುವುದನ್ನು ಟ್ರಾಯ್ ವಿವರಿಸಿದೆ.

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಯ ಕುರಿತು ಜೂನ್ 14ರಂದು ಟ್ರಾಯ್‌ ತನ್ನ ಎಕ್ಸ್‌ ಖಾತೆಯಲ್ಲಿ ಸ್ಪಷ್ಟನೆ ನೀಡಿದ್ದು, “ಒಂದಕ್ಕಿಂತ ಹೆಚ್ಚು ಸಿಮ್‌ಗಳು ಅಥವಾ ಸಂಖ್ಯೆಗಳು ಹೊಂದಿರುವ ಗ್ರಾಹಕರ ಮೇಲೆ ಶುಲ್ಕ ವಿಧಿಸಲು ಟ್ರಾಯ್ ಉದ್ದೇಶಿಸಿದೆ ಎಂಬುವುದು ಸುಳ್ಳು, ಆಧಾರ ರಹಿತ ಮತ್ತು  ಸಾರ್ವಜನಿಕರನ್ನು ತಪ್ಪು ದಾರಿಗೆಳೆಯುವ ಸುದ್ದಿಯಾಗಿದೆ ಎಂದು ಸ್ಪಷ್ಟಪಡಿಸಿದೆ.

ಇದನ್ನೂ ಓದಿ : FACT CHECK : ವಸತಿ ಸಂಕೀರ್ಣದ ಮುಂದೆ ಜಾನುವಾರು ಹತ್ಯೆ ಮಾಡಿರುವ ವಿಡಿಯೋ ಭಾರತದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...