Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್‌ ಪಠಿಸುವಂತೆ ಒತ್ತಾಯಿಸಲಾಗಿದೆ ಎಂಬುವುದು ಸುಳ್ಳು

FACT CHECK : ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್‌ ಪಠಿಸುವಂತೆ ಒತ್ತಾಯಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್ ಓದುವಂತೆ ಒತ್ತಾಯಿಸಲಾಗಿದೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ವಿಡಿಯೋದಲ್ಲಿ ಕಚೇರಿಯೊಂದರಲ್ಲಿ ವ್ಯಕ್ತಿಯೊಬ್ಬರು ಕುಳಿತಿರುವುದು, ಸುತ್ತಲು ಜನರು ಗುಂಪು ಸೇರಿರುವುದು ಮತ್ತು ಗಡ್ಡದಾರಿ ವ್ಯಕ್ತಿಯೊಬ್ಬ ಜೋರಾಗಿ ಕುರ್‌ಆನ್‌ ಓದುತ್ತಿರುವ ದೃಶ್ಯವಿದೆ.

ಪ್ರಧಾನಿ ನರೇಂದ್ರ ಮೋದಿಯವರು ಫಾಲೋ ಮಾಡುತ್ತಿರುವ ಬಲಪಂಥೀಯ ಎಕ್ಸ್ ಬಳಕೆದಾರ Jitendra pratap singh(@jpsin1) ಈ ವಿಡಿಯೋ ಹಂಚಿಕೊಂಡು “ಜಮಾತೆ ಇಸ್ಲಾಮಿಯ ವಿದ್ಯಾರ್ಥಿ ಸಂಘಟನೆಯು ಢಾಕಾ ಕಾಲೇಜಿನ ಹಿಂದೂ ಪ್ರೊಫೆಸರ್ ರಾಜೀನಾಮೆಯನ್ನು ಬಹಳ ವಿಚಿತ್ರವಾಗಿ ತೆಗೆದುಕೊಂಡಿದೆ. ಮೊದಲಿಗೆ, ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್ ಓದುವಂತೆ ಹೇಳಲಾಯಿತು. ಅಂದರೆ, ಕುರಾನ್‌ನ ಶ್ಲೋಕಗಳನ್ನು ಪಠಿಸಲಾಯಿತು. ನಂತರ ಅವರ ರಾಜೀನಾಮೆ ತೆಗೆದುಕೊಳ್ಳಲಾಯಿತು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಕುರ್‌ಆನ್ ಓದುವ ಮೂಲಕ ರಾಜೀನಾಮೆ ನೀಡುವಂತೆ ಒತ್ತಾಯಿಸಿರುವುದು ಮುಸ್ಲಿಂ ಪ್ರೊಫೆಸರ್‌ಗೆ ಹೊರತು, ಹಿಂದೂ ಪ್ರೊಫೆಸರ್‌ಗೆ ಅಲ್ಲ. ಇದರಲ್ಲಿ ಯಾವುದೇ ಕೋಮು ಆಯಾಮ ಇಲ್ಲ ಎಂದು ತಿಳಿದು ಬಂದಿದೆ.

ಈ ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋ ಸ್ಕ್ರೀನ್ ಶಾಟ್ ಹಾಕಿ ನಾವು ಮಾಹಿತಿ ಹುಡುಕಿದಾಗ ಢಾಕಾ ಪೋಸ್ಟ್ ಎಂಬ ವೆರಿಫೈಡ್ ಯೂಟ್ಯೂಬ್‌ ಚಾನೆಲ್‌ನಲ್ಲಿ ಆಗಸ್ಟ್ 19ರಂದು ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ಚಾನೆಲ್ ಪ್ರಕಾರ, ಢಾಕಾ ವಿಶ್ವವಿದ್ಯಾನಿಲಯದಲ್ಲಿ ರಂಝಾನ್ ತಿಂಗಳಲ್ಲಿ ಕುರ್‌ಆನ್‌ ಪಠಿಸಿದ ವಿದ್ಯಾರ್ಥಿಗಳ ವಿರುದ್ದ ಕ್ರಮ ಕೈಗೊಂಡಿದ್ದಕ್ಕೆ ಕಲಾ ವಿಭಾಗದ ಡೀನ್ ಪ್ರೊ.ಅಬ್ದುಲ್ ಬಶೀರ್ ಅವರ ರಾಜೀನಾಮೆಗೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಆಗಸ್ಟ್ 19ರಂದು ಢಾಕಾ ಟ್ರಿಬ್ಯೂನ್.ಕಾಂ ಮಾಡಿರುವ ವರದಿ ಪ್ರಕಾರ, “ವಿದ್ಯಾರ್ಥಿ ಮೇಲೆ ಆಪಾದಿತ ಹಲ್ಲೆ ಮಾಡಿರುವುದು ಮತ್ತು ವಿದ್ಯಾರ್ಥಿಗಳು ಕುರ್‌ಆನ್ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಕ್ರಮ ಕೈಗೊಳ್ಳಲು ಮುಂದಾಗಿರುವುದಕ್ಕೆ ವಿದ್ಯಾರ್ಥಿ ಸಂಘಟನೆಯವರು ಪ್ರತಿಭಟಿಸಿದ ಹಿನ್ನೆಲೆ ಪ್ರೊ. ಅಬ್ದುಲ್ ಬಶೀರ್ ಅವರು ಢಾಕಾ ವಿವಿಯ ಕಲಾ ವಿಭಾಗದ ಡೀನ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದೆ.

ಬಶೀರ್ ಅವರ ರಾಜೀನಾಮೆ ಬಳಿಕ ದೇಶದಲ್ಲಿ ಶಾಂತಿ ನೆಲೆಸಲು, ಕುರ್‌ಆನ್‌ ವಿರುದ್ದದ ದ್ವೇಷ ಮತ್ತು ಇಸ್ಲಾಮೋಫೋಬಿಕ್ ತೊಲಗಳು ಢಾಕಾ ವಿಶ್ವವಿದ್ಯಾನಿಲಯದಲ್ಲಿ ಕುರ್‌ಆನ್‌ ಪಠಣ ಮತ್ತು ಪ್ರಾರ್ಥನೆ ನಡೆದಿದೆ ಎಂದು ವರದಿ ತಿಳಿಸಿದೆ.

ಪ್ರೊ. ಬಶೀರ್ ಅವರ ರಾಜೀನಾಮೆ ಕುರಿತು ಭಾರತೀಯ ಮಾಧ್ಯಮಗಳಾದ ಟೈಮ್ಸ್‌ ನೌ ಸೇರಿದಂತೆ ಅನೇಕ ಮಾಧ್ಯಮಗಳು ವರದಿ ಮಾಡಿವೆ.

ಒಟ್ಟಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಢಾಕಾ ವಿಶ್ವವಿದ್ಯಾಲಯದ ಪ್ರೊಫೆಸರ್ ರಾಜೀನಾಮೆ ನೀಡಿರುವುದು ಹೌದು. ಆದರೆ, ಅವರು ಹಿಂದೂ ಪ್ರೊಫಸೆರ್ ಅಲ್ಲ, ಮುಸ್ಲಿಂ ಪ್ರೊಫೆಸರ್. ಈ ಘಟನೆಯಲ್ಲಿ ಯಾವುದೇ ಕೋಮು ಆಯಾಮಗಳಿಲ್ಲ. ಅಲ್ಲದೆ, ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್‌ ಓದುವಂತೆ ಒತ್ತಾಯಿಸಲಾಗಿದೆ ಎಂಬುವುದು ಸುಳ್ಳು

ಇದನ್ನೂ ಓದಿ : FACT CHECK : ಸ್ವಾತಂತ್ರ್ಯ ದಿನದಂದು ಶ್ರೀನಗರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...