Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್‌ ಪಠಿಸುವಂತೆ ಒತ್ತಾಯಿಸಲಾಗಿದೆ ಎಂಬುವುದು ಸುಳ್ಳು

FACT CHECK : ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್‌ ಪಠಿಸುವಂತೆ ಒತ್ತಾಯಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್ ಓದುವಂತೆ ಒತ್ತಾಯಿಸಲಾಗಿದೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ವಿಡಿಯೋದಲ್ಲಿ ಕಚೇರಿಯೊಂದರಲ್ಲಿ ವ್ಯಕ್ತಿಯೊಬ್ಬರು ಕುಳಿತಿರುವುದು, ಸುತ್ತಲು ಜನರು ಗುಂಪು ಸೇರಿರುವುದು ಮತ್ತು ಗಡ್ಡದಾರಿ ವ್ಯಕ್ತಿಯೊಬ್ಬ ಜೋರಾಗಿ ಕುರ್‌ಆನ್‌ ಓದುತ್ತಿರುವ ದೃಶ್ಯವಿದೆ.

ಪ್ರಧಾನಿ ನರೇಂದ್ರ ಮೋದಿಯವರು ಫಾಲೋ ಮಾಡುತ್ತಿರುವ ಬಲಪಂಥೀಯ ಎಕ್ಸ್ ಬಳಕೆದಾರ Jitendra pratap singh(@jpsin1) ಈ ವಿಡಿಯೋ ಹಂಚಿಕೊಂಡು “ಜಮಾತೆ ಇಸ್ಲಾಮಿಯ ವಿದ್ಯಾರ್ಥಿ ಸಂಘಟನೆಯು ಢಾಕಾ ಕಾಲೇಜಿನ ಹಿಂದೂ ಪ್ರೊಫೆಸರ್ ರಾಜೀನಾಮೆಯನ್ನು ಬಹಳ ವಿಚಿತ್ರವಾಗಿ ತೆಗೆದುಕೊಂಡಿದೆ. ಮೊದಲಿಗೆ, ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್ ಓದುವಂತೆ ಹೇಳಲಾಯಿತು. ಅಂದರೆ, ಕುರಾನ್‌ನ ಶ್ಲೋಕಗಳನ್ನು ಪಠಿಸಲಾಯಿತು. ನಂತರ ಅವರ ರಾಜೀನಾಮೆ ತೆಗೆದುಕೊಳ್ಳಲಾಯಿತು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಕುರ್‌ಆನ್ ಓದುವ ಮೂಲಕ ರಾಜೀನಾಮೆ ನೀಡುವಂತೆ ಒತ್ತಾಯಿಸಿರುವುದು ಮುಸ್ಲಿಂ ಪ್ರೊಫೆಸರ್‌ಗೆ ಹೊರತು, ಹಿಂದೂ ಪ್ರೊಫೆಸರ್‌ಗೆ ಅಲ್ಲ. ಇದರಲ್ಲಿ ಯಾವುದೇ ಕೋಮು ಆಯಾಮ ಇಲ್ಲ ಎಂದು ತಿಳಿದು ಬಂದಿದೆ.

ಈ ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋ ಸ್ಕ್ರೀನ್ ಶಾಟ್ ಹಾಕಿ ನಾವು ಮಾಹಿತಿ ಹುಡುಕಿದಾಗ ಢಾಕಾ ಪೋಸ್ಟ್ ಎಂಬ ವೆರಿಫೈಡ್ ಯೂಟ್ಯೂಬ್‌ ಚಾನೆಲ್‌ನಲ್ಲಿ ಆಗಸ್ಟ್ 19ರಂದು ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ಚಾನೆಲ್ ಪ್ರಕಾರ, ಢಾಕಾ ವಿಶ್ವವಿದ್ಯಾನಿಲಯದಲ್ಲಿ ರಂಝಾನ್ ತಿಂಗಳಲ್ಲಿ ಕುರ್‌ಆನ್‌ ಪಠಿಸಿದ ವಿದ್ಯಾರ್ಥಿಗಳ ವಿರುದ್ದ ಕ್ರಮ ಕೈಗೊಂಡಿದ್ದಕ್ಕೆ ಕಲಾ ವಿಭಾಗದ ಡೀನ್ ಪ್ರೊ.ಅಬ್ದುಲ್ ಬಶೀರ್ ಅವರ ರಾಜೀನಾಮೆಗೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಆಗಸ್ಟ್ 19ರಂದು ಢಾಕಾ ಟ್ರಿಬ್ಯೂನ್.ಕಾಂ ಮಾಡಿರುವ ವರದಿ ಪ್ರಕಾರ, “ವಿದ್ಯಾರ್ಥಿ ಮೇಲೆ ಆಪಾದಿತ ಹಲ್ಲೆ ಮಾಡಿರುವುದು ಮತ್ತು ವಿದ್ಯಾರ್ಥಿಗಳು ಕುರ್‌ಆನ್ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಕ್ರಮ ಕೈಗೊಳ್ಳಲು ಮುಂದಾಗಿರುವುದಕ್ಕೆ ವಿದ್ಯಾರ್ಥಿ ಸಂಘಟನೆಯವರು ಪ್ರತಿಭಟಿಸಿದ ಹಿನ್ನೆಲೆ ಪ್ರೊ. ಅಬ್ದುಲ್ ಬಶೀರ್ ಅವರು ಢಾಕಾ ವಿವಿಯ ಕಲಾ ವಿಭಾಗದ ಡೀನ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದೆ.

ಬಶೀರ್ ಅವರ ರಾಜೀನಾಮೆ ಬಳಿಕ ದೇಶದಲ್ಲಿ ಶಾಂತಿ ನೆಲೆಸಲು, ಕುರ್‌ಆನ್‌ ವಿರುದ್ದದ ದ್ವೇಷ ಮತ್ತು ಇಸ್ಲಾಮೋಫೋಬಿಕ್ ತೊಲಗಳು ಢಾಕಾ ವಿಶ್ವವಿದ್ಯಾನಿಲಯದಲ್ಲಿ ಕುರ್‌ಆನ್‌ ಪಠಣ ಮತ್ತು ಪ್ರಾರ್ಥನೆ ನಡೆದಿದೆ ಎಂದು ವರದಿ ತಿಳಿಸಿದೆ.

ಪ್ರೊ. ಬಶೀರ್ ಅವರ ರಾಜೀನಾಮೆ ಕುರಿತು ಭಾರತೀಯ ಮಾಧ್ಯಮಗಳಾದ ಟೈಮ್ಸ್‌ ನೌ ಸೇರಿದಂತೆ ಅನೇಕ ಮಾಧ್ಯಮಗಳು ವರದಿ ಮಾಡಿವೆ.

ಒಟ್ಟಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಢಾಕಾ ವಿಶ್ವವಿದ್ಯಾಲಯದ ಪ್ರೊಫೆಸರ್ ರಾಜೀನಾಮೆ ನೀಡಿರುವುದು ಹೌದು. ಆದರೆ, ಅವರು ಹಿಂದೂ ಪ್ರೊಫಸೆರ್ ಅಲ್ಲ, ಮುಸ್ಲಿಂ ಪ್ರೊಫೆಸರ್. ಈ ಘಟನೆಯಲ್ಲಿ ಯಾವುದೇ ಕೋಮು ಆಯಾಮಗಳಿಲ್ಲ. ಅಲ್ಲದೆ, ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್‌ ಓದುವಂತೆ ಒತ್ತಾಯಿಸಲಾಗಿದೆ ಎಂಬುವುದು ಸುಳ್ಳು

ಇದನ್ನೂ ಓದಿ : FACT CHECK : ಸ್ವಾತಂತ್ರ್ಯ ದಿನದಂದು ಶ್ರೀನಗರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...