Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್‌ ಪಠಿಸುವಂತೆ ಒತ್ತಾಯಿಸಲಾಗಿದೆ ಎಂಬುವುದು ಸುಳ್ಳು

FACT CHECK : ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್‌ ಪಠಿಸುವಂತೆ ಒತ್ತಾಯಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಬಾಂಗ್ಲಾದೇಶದಲ್ಲಿ ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್ ಓದುವಂತೆ ಒತ್ತಾಯಿಸಲಾಗಿದೆ ಎಂದು ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ವಿಡಿಯೋದಲ್ಲಿ ಕಚೇರಿಯೊಂದರಲ್ಲಿ ವ್ಯಕ್ತಿಯೊಬ್ಬರು ಕುಳಿತಿರುವುದು, ಸುತ್ತಲು ಜನರು ಗುಂಪು ಸೇರಿರುವುದು ಮತ್ತು ಗಡ್ಡದಾರಿ ವ್ಯಕ್ತಿಯೊಬ್ಬ ಜೋರಾಗಿ ಕುರ್‌ಆನ್‌ ಓದುತ್ತಿರುವ ದೃಶ್ಯವಿದೆ.

ಪ್ರಧಾನಿ ನರೇಂದ್ರ ಮೋದಿಯವರು ಫಾಲೋ ಮಾಡುತ್ತಿರುವ ಬಲಪಂಥೀಯ ಎಕ್ಸ್ ಬಳಕೆದಾರ Jitendra pratap singh(@jpsin1) ಈ ವಿಡಿಯೋ ಹಂಚಿಕೊಂಡು “ಜಮಾತೆ ಇಸ್ಲಾಮಿಯ ವಿದ್ಯಾರ್ಥಿ ಸಂಘಟನೆಯು ಢಾಕಾ ಕಾಲೇಜಿನ ಹಿಂದೂ ಪ್ರೊಫೆಸರ್ ರಾಜೀನಾಮೆಯನ್ನು ಬಹಳ ವಿಚಿತ್ರವಾಗಿ ತೆಗೆದುಕೊಂಡಿದೆ. ಮೊದಲಿಗೆ, ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್ ಓದುವಂತೆ ಹೇಳಲಾಯಿತು. ಅಂದರೆ, ಕುರಾನ್‌ನ ಶ್ಲೋಕಗಳನ್ನು ಪಠಿಸಲಾಯಿತು. ನಂತರ ಅವರ ರಾಜೀನಾಮೆ ತೆಗೆದುಕೊಳ್ಳಲಾಯಿತು” ಎಂದು ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಈ ವೇಳೆ ಕುರ್‌ಆನ್ ಓದುವ ಮೂಲಕ ರಾಜೀನಾಮೆ ನೀಡುವಂತೆ ಒತ್ತಾಯಿಸಿರುವುದು ಮುಸ್ಲಿಂ ಪ್ರೊಫೆಸರ್‌ಗೆ ಹೊರತು, ಹಿಂದೂ ಪ್ರೊಫೆಸರ್‌ಗೆ ಅಲ್ಲ. ಇದರಲ್ಲಿ ಯಾವುದೇ ಕೋಮು ಆಯಾಮ ಇಲ್ಲ ಎಂದು ತಿಳಿದು ಬಂದಿದೆ.

ಈ ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ವಿಡಿಯೋ ಸ್ಕ್ರೀನ್ ಶಾಟ್ ಹಾಕಿ ನಾವು ಮಾಹಿತಿ ಹುಡುಕಿದಾಗ ಢಾಕಾ ಪೋಸ್ಟ್ ಎಂಬ ವೆರಿಫೈಡ್ ಯೂಟ್ಯೂಬ್‌ ಚಾನೆಲ್‌ನಲ್ಲಿ ಆಗಸ್ಟ್ 19ರಂದು ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ಚಾನೆಲ್ ಪ್ರಕಾರ, ಢಾಕಾ ವಿಶ್ವವಿದ್ಯಾನಿಲಯದಲ್ಲಿ ರಂಝಾನ್ ತಿಂಗಳಲ್ಲಿ ಕುರ್‌ಆನ್‌ ಪಠಿಸಿದ ವಿದ್ಯಾರ್ಥಿಗಳ ವಿರುದ್ದ ಕ್ರಮ ಕೈಗೊಂಡಿದ್ದಕ್ಕೆ ಕಲಾ ವಿಭಾಗದ ಡೀನ್ ಪ್ರೊ.ಅಬ್ದುಲ್ ಬಶೀರ್ ಅವರ ರಾಜೀನಾಮೆಗೆ ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ಆಗಸ್ಟ್ 19ರಂದು ಢಾಕಾ ಟ್ರಿಬ್ಯೂನ್.ಕಾಂ ಮಾಡಿರುವ ವರದಿ ಪ್ರಕಾರ, “ವಿದ್ಯಾರ್ಥಿ ಮೇಲೆ ಆಪಾದಿತ ಹಲ್ಲೆ ಮಾಡಿರುವುದು ಮತ್ತು ವಿದ್ಯಾರ್ಥಿಗಳು ಕುರ್‌ಆನ್ ಪಠಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಕ್ರಮ ಕೈಗೊಳ್ಳಲು ಮುಂದಾಗಿರುವುದಕ್ಕೆ ವಿದ್ಯಾರ್ಥಿ ಸಂಘಟನೆಯವರು ಪ್ರತಿಭಟಿಸಿದ ಹಿನ್ನೆಲೆ ಪ್ರೊ. ಅಬ್ದುಲ್ ಬಶೀರ್ ಅವರು ಢಾಕಾ ವಿವಿಯ ಕಲಾ ವಿಭಾಗದ ಡೀನ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಿದೆ.

ಬಶೀರ್ ಅವರ ರಾಜೀನಾಮೆ ಬಳಿಕ ದೇಶದಲ್ಲಿ ಶಾಂತಿ ನೆಲೆಸಲು, ಕುರ್‌ಆನ್‌ ವಿರುದ್ದದ ದ್ವೇಷ ಮತ್ತು ಇಸ್ಲಾಮೋಫೋಬಿಕ್ ತೊಲಗಳು ಢಾಕಾ ವಿಶ್ವವಿದ್ಯಾನಿಲಯದಲ್ಲಿ ಕುರ್‌ಆನ್‌ ಪಠಣ ಮತ್ತು ಪ್ರಾರ್ಥನೆ ನಡೆದಿದೆ ಎಂದು ವರದಿ ತಿಳಿಸಿದೆ.

ಪ್ರೊ. ಬಶೀರ್ ಅವರ ರಾಜೀನಾಮೆ ಕುರಿತು ಭಾರತೀಯ ಮಾಧ್ಯಮಗಳಾದ ಟೈಮ್ಸ್‌ ನೌ ಸೇರಿದಂತೆ ಅನೇಕ ಮಾಧ್ಯಮಗಳು ವರದಿ ಮಾಡಿವೆ.

ಒಟ್ಟಿನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದು ಢಾಕಾ ವಿಶ್ವವಿದ್ಯಾಲಯದ ಪ್ರೊಫೆಸರ್ ರಾಜೀನಾಮೆ ನೀಡಿರುವುದು ಹೌದು. ಆದರೆ, ಅವರು ಹಿಂದೂ ಪ್ರೊಫಸೆರ್ ಅಲ್ಲ, ಮುಸ್ಲಿಂ ಪ್ರೊಫೆಸರ್. ಈ ಘಟನೆಯಲ್ಲಿ ಯಾವುದೇ ಕೋಮು ಆಯಾಮಗಳಿಲ್ಲ. ಅಲ್ಲದೆ, ಹಿಂದೂ ಪ್ರೊಫೆಸರ್‌ಗೆ ಕುರ್‌ಆನ್‌ ಓದುವಂತೆ ಒತ್ತಾಯಿಸಲಾಗಿದೆ ಎಂಬುವುದು ಸುಳ್ಳು

ಇದನ್ನೂ ಓದಿ : FACT CHECK : ಸ್ವಾತಂತ್ರ್ಯ ದಿನದಂದು ಶ್ರೀನಗರದಲ್ಲಿ ಪಾಕಿಸ್ತಾನದ ಧ್ವಜ ಹಾರಿಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...