Homeಫ್ಯಾಕ್ಟ್‌ಚೆಕ್FACT CHECK : ಗುಲ್ಬರ್ಗಾ, ಬೀದರ್​ನ ಇರಾನಿ ಗ್ಯಾಂಗ್‌ ವಿವಿದೆಡೆ ದರೋಡೆಗಿಳಿದಿದೆ ಎಂಬುವುದು ಸುಳ್ಳು

FACT CHECK : ಗುಲ್ಬರ್ಗಾ, ಬೀದರ್​ನ ಇರಾನಿ ಗ್ಯಾಂಗ್‌ ವಿವಿದೆಡೆ ದರೋಡೆಗಿಳಿದಿದೆ ಎಂಬುವುದು ಸುಳ್ಳು

- Advertisement -
- Advertisement -

ಗುಲ್ಬರ್ಗಾ ಮತ್ತು ಬೀದರ್​ನ ಇರಾನಿ ಗ್ಯಾಂಗ್‌ನ ಜನರು ಕಂಬಳಿ ಮಾರುವವರಂತೆ ನಟಿಸಿ ಜನರ ಮನೆಗಳಿಗೆ ತೆರಳಿ ಲೂಟಿ ಮಾಡುತ್ತಾರೆ ಎಂದು ದೆಹಲಿ ಪೊಲೀಸರು ಎಚ್ಚರಿಸಿದ್ದಾಗಿ ಕೆಲ ಪುರುಷರ ಪೋಟೋಗಳೊಂದಿಗೆ ಪೋಸ್ಟ್ ಒಂದನ್ನು ಹಂಚಿಕೊಳ್ಳಲಾಗುತ್ತಿದೆ.

ಆಗಸ್ಟ್ 23,2024 ರಂದು ಲೈವ್ ನ್ಯೂಸ್ ಹಿಮಾಚಲ ಟಿವಿ ಎಂಬ ಫೇಸ್​ಬುಕ್ ಖಾತೆಯಲ್ಲಿ ಈ ವೈರಲ್ ಫೋಟೋವನ್ನು ಹಂಚಿಕೊಂಡು ಶೀರ್ಷಿಕೆಯಲ್ಲಿ ಹೀಗೆ ಬರೆದಿದ್ದಾರೆ, “ಇವರು ಬೀದರ್ ಮತ್ತು ಗುಲ್ಬರ್ಗಾದ ಇರಾನಿ ಗ್ಯಾಂಗ್, ಬೆಡ್‌ಶೀಟ್ ಮಾರಾಟ ಮಾಡುವಂತೆ ನಟಿಸುತ್ತಿದ್ದಾರೆ. ದಯವಿಟ್ಟು ಗಮನಿಸಿ, ಅವರೆಲ್ಲರೂ ದರೋಡೆಕೋರರು. ಇವರು ಹಗಲಿನಲ್ಲಿ ಕಂಬಳಿ ಮಾರಾಟಗಾರರಂತೆ ನಟಿಸುವ ಮೂಲಕ ಜನರ ಬಳಿ ಬರುತ್ತಾರೆ, ಮನೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ನಂತರ ಮನೆಯನ್ನು ದರೋಡೆ ಮಾಡುತ್ತಾರೆ, ಹೀಗಾಗಿ ಪ್ರತಿಯೊಬ್ಬರೂ ಇದನ್ನು ಆದಷ್ಟು ಶೇರ್ ಮಾಡಿಕೊಳ್ಳಿ. ದೆಹಲಿ ಪೊಲೀಸ್” ಎಂದು ಬರೆಯಲಾಗಿದೆ.

ಇನ್ನೂ ಹಲವರು ಬೀದರ್ ಮತ್ತು ಗುಲ್ಬರ್ಗಾದ ಇರಾನ್ ಗ್ಯಾಂಗ್ ಮನೆಗಳನ್ನು ದರೋಡೆ ಮಾಡುವ ಕಂಬಳಿ ಮಾರಾಟಗಾರರಂತೆ ನಟಿಸುತ್ತಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್ ಅನ್ನು ಹಂಚಿಕೊಳ್ಳುತ್ತಿದ್ದಾರೆ. ಹಾಗಿದ್ದರೆ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 29 ಜುಲೈ 2019 ರಂದು ಉದಯವಾಣಿ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಕಂಬಳಿ ಮಾರಾಟದ ನೆಪದಲ್ಲಿ ಬಂದಿರುವ ಇರಾನಿ ಗ್ಯಾಂಗ್‌ನ ಬಗ್ಗೆ ಬಜ್ಪೆ ಪೊಲೀಸರು ಎಚ್ಚರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಈ ಗ್ಯಾಂಗ್ ಈಗಾಗಲೇ ಸಕ್ರಿಯವಾಗಿದೆ. ಹಗಲು ಹೊತ್ತಿನಲ್ಲಿ ಕಂಬಳಿ ಮಾರುವವರಾಗಿ ಸಾರ್ವಜನಿಕರನ್ನು ಸಂಪರ್ಕಿಸಿ, ಮನೆ ಸಮೀಕ್ಷೆ ನಡೆಸಿ ನಂತರ ಮನೆ ಲೂಟಿ ಮಾಡುವುದು ಗ್ಯಾಂಗ್ ಸದಸ್ಯರ ವಿಧಾನವಾಗಿದೆ” ಎಂದು ಮಂಗಳೂರಿನ ಬಜ್ಪೆ ಪೊಲೀಸರು ಹೇಳಿರುವುದಾಗಿ ತಿಳಿಸಲಾಗಿದೆ.

ಜುಲೈ 29,2019 ರಂದು ಕರಾವಳಿಯ ಡೈಜಿ ವರ್ಲ್ಡ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯಲ್ಲಿ, ಈ ಜನರು ಇರಾನಿ ಗ್ಯಾಂಗ್‌ನ ಸದಸ್ಯರು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಹೊದಿಕೆ ಮಾರುವ ನೆಪದಲ್ಲಿ ಹಗಲೊತ್ತಿಲ್ಲಿ ಮನೆಗಳಿಗೆ ನುಗ್ಗಿ ಇಡೀ ಮನೆಯನ್ನು ಶೋಧಿಸುತ್ತಾರೆ. ಸಂಜೆಯಾಗುತ್ತಿದ್ದಂತೆ ಇತರೆ ಸದಸ್ಯರು ಬಂದು ಮನೆ ದೋಚುತ್ತಾರೆ” ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ನಾವು ವೈರಲ್ ಪೋಸ್ಟ್‌ ಬಗ್ಗೆ ಇನ್ನಷ್ಟು ಮಾಹಿತಿ ಹುಡುಕಿದಾಗ ಆ ಪೋಸ್ಟ್ 2019 ರಿಂದ ಅನೇಕ ರಾಜ್ಯಗಳ ಹೆಸರಿನಲ್ಲಿ ವೈರಲ್ ಆಗಿರುವುದು ಕಂಡು ಬಂದಿದೆ. 2019 ರಲ್ಲಿ, ಈ ಪೋಸ್ಟ್ ತೆಲಂಗಾಣ ಹೆಸರಿನಲ್ಲಿ ವೈರಲ್ ಆಗಿತ್ತು. ಆ ಸಮಯದಲ್ಲಿ, ಎಕ್ಸ್‌ ಖಾತೆಯ ಬಳಕೆದಾರರೊಬ್ಬರು ಹೈದರಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿ ಅದರ ಸತ್ಯಾಸತ್ಯತೆಯ ಬಗ್ಗೆ ಕೇಳಿದ್ದರು. ಆಗ ಪೊಲೀಸರು ಇದು ಪೋಸ್ಟ್ ನಕಲಿ ಎಂದು ಉತ್ತರಿಸಿದ್ದರು.

ಒಟ್ಟಿನಲ್ಲಿ, ಮಂಗಳೂರಿನ ಬಜ್ಪೆ ಪೊಲೀಸರು ಮನೆಗಳನ್ನು ದರೋಡೆ ಮಾಡಲು ಕಂಬಳಿ ಮಾರಾಟಗಾರರಂತೆ ಬರುತ್ತಿರುವ ಇರಾನಿನ ಗ್ಯಾಂಗ್ ಬಗ್ಗೆ 2019ರ ಜುಲೈನಲ್ಲಿ ಎಚ್ಚರಿಕೆ ನೀಡಿದ್ದ ಪೋಸ್ಟ್‌ ಅನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ವೈರಲ್ ವಿಡಿಯೋ ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಯದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...