Homeಫ್ಯಾಕ್ಟ್‌ಚೆಕ್FACT CHECK : ಗುಲ್ಬರ್ಗಾ, ಬೀದರ್​ನ ಇರಾನಿ ಗ್ಯಾಂಗ್‌ ವಿವಿದೆಡೆ ದರೋಡೆಗಿಳಿದಿದೆ ಎಂಬುವುದು ಸುಳ್ಳು

FACT CHECK : ಗುಲ್ಬರ್ಗಾ, ಬೀದರ್​ನ ಇರಾನಿ ಗ್ಯಾಂಗ್‌ ವಿವಿದೆಡೆ ದರೋಡೆಗಿಳಿದಿದೆ ಎಂಬುವುದು ಸುಳ್ಳು

- Advertisement -
- Advertisement -

ಗುಲ್ಬರ್ಗಾ ಮತ್ತು ಬೀದರ್​ನ ಇರಾನಿ ಗ್ಯಾಂಗ್‌ನ ಜನರು ಕಂಬಳಿ ಮಾರುವವರಂತೆ ನಟಿಸಿ ಜನರ ಮನೆಗಳಿಗೆ ತೆರಳಿ ಲೂಟಿ ಮಾಡುತ್ತಾರೆ ಎಂದು ದೆಹಲಿ ಪೊಲೀಸರು ಎಚ್ಚರಿಸಿದ್ದಾಗಿ ಕೆಲ ಪುರುಷರ ಪೋಟೋಗಳೊಂದಿಗೆ ಪೋಸ್ಟ್ ಒಂದನ್ನು ಹಂಚಿಕೊಳ್ಳಲಾಗುತ್ತಿದೆ.

ಆಗಸ್ಟ್ 23,2024 ರಂದು ಲೈವ್ ನ್ಯೂಸ್ ಹಿಮಾಚಲ ಟಿವಿ ಎಂಬ ಫೇಸ್​ಬುಕ್ ಖಾತೆಯಲ್ಲಿ ಈ ವೈರಲ್ ಫೋಟೋವನ್ನು ಹಂಚಿಕೊಂಡು ಶೀರ್ಷಿಕೆಯಲ್ಲಿ ಹೀಗೆ ಬರೆದಿದ್ದಾರೆ, “ಇವರು ಬೀದರ್ ಮತ್ತು ಗುಲ್ಬರ್ಗಾದ ಇರಾನಿ ಗ್ಯಾಂಗ್, ಬೆಡ್‌ಶೀಟ್ ಮಾರಾಟ ಮಾಡುವಂತೆ ನಟಿಸುತ್ತಿದ್ದಾರೆ. ದಯವಿಟ್ಟು ಗಮನಿಸಿ, ಅವರೆಲ್ಲರೂ ದರೋಡೆಕೋರರು. ಇವರು ಹಗಲಿನಲ್ಲಿ ಕಂಬಳಿ ಮಾರಾಟಗಾರರಂತೆ ನಟಿಸುವ ಮೂಲಕ ಜನರ ಬಳಿ ಬರುತ್ತಾರೆ, ಮನೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ನಂತರ ಮನೆಯನ್ನು ದರೋಡೆ ಮಾಡುತ್ತಾರೆ, ಹೀಗಾಗಿ ಪ್ರತಿಯೊಬ್ಬರೂ ಇದನ್ನು ಆದಷ್ಟು ಶೇರ್ ಮಾಡಿಕೊಳ್ಳಿ. ದೆಹಲಿ ಪೊಲೀಸ್” ಎಂದು ಬರೆಯಲಾಗಿದೆ.

ಇನ್ನೂ ಹಲವರು ಬೀದರ್ ಮತ್ತು ಗುಲ್ಬರ್ಗಾದ ಇರಾನ್ ಗ್ಯಾಂಗ್ ಮನೆಗಳನ್ನು ದರೋಡೆ ಮಾಡುವ ಕಂಬಳಿ ಮಾರಾಟಗಾರರಂತೆ ನಟಿಸುತ್ತಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್ ಅನ್ನು ಹಂಚಿಕೊಳ್ಳುತ್ತಿದ್ದಾರೆ. ಹಾಗಿದ್ದರೆ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 29 ಜುಲೈ 2019 ರಂದು ಉದಯವಾಣಿ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಕಂಬಳಿ ಮಾರಾಟದ ನೆಪದಲ್ಲಿ ಬಂದಿರುವ ಇರಾನಿ ಗ್ಯಾಂಗ್‌ನ ಬಗ್ಗೆ ಬಜ್ಪೆ ಪೊಲೀಸರು ಎಚ್ಚರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಈ ಗ್ಯಾಂಗ್ ಈಗಾಗಲೇ ಸಕ್ರಿಯವಾಗಿದೆ. ಹಗಲು ಹೊತ್ತಿನಲ್ಲಿ ಕಂಬಳಿ ಮಾರುವವರಾಗಿ ಸಾರ್ವಜನಿಕರನ್ನು ಸಂಪರ್ಕಿಸಿ, ಮನೆ ಸಮೀಕ್ಷೆ ನಡೆಸಿ ನಂತರ ಮನೆ ಲೂಟಿ ಮಾಡುವುದು ಗ್ಯಾಂಗ್ ಸದಸ್ಯರ ವಿಧಾನವಾಗಿದೆ” ಎಂದು ಮಂಗಳೂರಿನ ಬಜ್ಪೆ ಪೊಲೀಸರು ಹೇಳಿರುವುದಾಗಿ ತಿಳಿಸಲಾಗಿದೆ.

ಜುಲೈ 29,2019 ರಂದು ಕರಾವಳಿಯ ಡೈಜಿ ವರ್ಲ್ಡ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯಲ್ಲಿ, ಈ ಜನರು ಇರಾನಿ ಗ್ಯಾಂಗ್‌ನ ಸದಸ್ಯರು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಹೊದಿಕೆ ಮಾರುವ ನೆಪದಲ್ಲಿ ಹಗಲೊತ್ತಿಲ್ಲಿ ಮನೆಗಳಿಗೆ ನುಗ್ಗಿ ಇಡೀ ಮನೆಯನ್ನು ಶೋಧಿಸುತ್ತಾರೆ. ಸಂಜೆಯಾಗುತ್ತಿದ್ದಂತೆ ಇತರೆ ಸದಸ್ಯರು ಬಂದು ಮನೆ ದೋಚುತ್ತಾರೆ” ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ನಾವು ವೈರಲ್ ಪೋಸ್ಟ್‌ ಬಗ್ಗೆ ಇನ್ನಷ್ಟು ಮಾಹಿತಿ ಹುಡುಕಿದಾಗ ಆ ಪೋಸ್ಟ್ 2019 ರಿಂದ ಅನೇಕ ರಾಜ್ಯಗಳ ಹೆಸರಿನಲ್ಲಿ ವೈರಲ್ ಆಗಿರುವುದು ಕಂಡು ಬಂದಿದೆ. 2019 ರಲ್ಲಿ, ಈ ಪೋಸ್ಟ್ ತೆಲಂಗಾಣ ಹೆಸರಿನಲ್ಲಿ ವೈರಲ್ ಆಗಿತ್ತು. ಆ ಸಮಯದಲ್ಲಿ, ಎಕ್ಸ್‌ ಖಾತೆಯ ಬಳಕೆದಾರರೊಬ್ಬರು ಹೈದರಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿ ಅದರ ಸತ್ಯಾಸತ್ಯತೆಯ ಬಗ್ಗೆ ಕೇಳಿದ್ದರು. ಆಗ ಪೊಲೀಸರು ಇದು ಪೋಸ್ಟ್ ನಕಲಿ ಎಂದು ಉತ್ತರಿಸಿದ್ದರು.

ಒಟ್ಟಿನಲ್ಲಿ, ಮಂಗಳೂರಿನ ಬಜ್ಪೆ ಪೊಲೀಸರು ಮನೆಗಳನ್ನು ದರೋಡೆ ಮಾಡಲು ಕಂಬಳಿ ಮಾರಾಟಗಾರರಂತೆ ಬರುತ್ತಿರುವ ಇರಾನಿನ ಗ್ಯಾಂಗ್ ಬಗ್ಗೆ 2019ರ ಜುಲೈನಲ್ಲಿ ಎಚ್ಚರಿಕೆ ನೀಡಿದ್ದ ಪೋಸ್ಟ್‌ ಅನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ವೈರಲ್ ವಿಡಿಯೋ ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಯದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...