Homeಫ್ಯಾಕ್ಟ್‌ಚೆಕ್FACT CHECK : ಗುಲ್ಬರ್ಗಾ, ಬೀದರ್​ನ ಇರಾನಿ ಗ್ಯಾಂಗ್‌ ವಿವಿದೆಡೆ ದರೋಡೆಗಿಳಿದಿದೆ ಎಂಬುವುದು ಸುಳ್ಳು

FACT CHECK : ಗುಲ್ಬರ್ಗಾ, ಬೀದರ್​ನ ಇರಾನಿ ಗ್ಯಾಂಗ್‌ ವಿವಿದೆಡೆ ದರೋಡೆಗಿಳಿದಿದೆ ಎಂಬುವುದು ಸುಳ್ಳು

- Advertisement -
- Advertisement -

ಗುಲ್ಬರ್ಗಾ ಮತ್ತು ಬೀದರ್​ನ ಇರಾನಿ ಗ್ಯಾಂಗ್‌ನ ಜನರು ಕಂಬಳಿ ಮಾರುವವರಂತೆ ನಟಿಸಿ ಜನರ ಮನೆಗಳಿಗೆ ತೆರಳಿ ಲೂಟಿ ಮಾಡುತ್ತಾರೆ ಎಂದು ದೆಹಲಿ ಪೊಲೀಸರು ಎಚ್ಚರಿಸಿದ್ದಾಗಿ ಕೆಲ ಪುರುಷರ ಪೋಟೋಗಳೊಂದಿಗೆ ಪೋಸ್ಟ್ ಒಂದನ್ನು ಹಂಚಿಕೊಳ್ಳಲಾಗುತ್ತಿದೆ.

ಆಗಸ್ಟ್ 23,2024 ರಂದು ಲೈವ್ ನ್ಯೂಸ್ ಹಿಮಾಚಲ ಟಿವಿ ಎಂಬ ಫೇಸ್​ಬುಕ್ ಖಾತೆಯಲ್ಲಿ ಈ ವೈರಲ್ ಫೋಟೋವನ್ನು ಹಂಚಿಕೊಂಡು ಶೀರ್ಷಿಕೆಯಲ್ಲಿ ಹೀಗೆ ಬರೆದಿದ್ದಾರೆ, “ಇವರು ಬೀದರ್ ಮತ್ತು ಗುಲ್ಬರ್ಗಾದ ಇರಾನಿ ಗ್ಯಾಂಗ್, ಬೆಡ್‌ಶೀಟ್ ಮಾರಾಟ ಮಾಡುವಂತೆ ನಟಿಸುತ್ತಿದ್ದಾರೆ. ದಯವಿಟ್ಟು ಗಮನಿಸಿ, ಅವರೆಲ್ಲರೂ ದರೋಡೆಕೋರರು. ಇವರು ಹಗಲಿನಲ್ಲಿ ಕಂಬಳಿ ಮಾರಾಟಗಾರರಂತೆ ನಟಿಸುವ ಮೂಲಕ ಜನರ ಬಳಿ ಬರುತ್ತಾರೆ, ಮನೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ನಂತರ ಮನೆಯನ್ನು ದರೋಡೆ ಮಾಡುತ್ತಾರೆ, ಹೀಗಾಗಿ ಪ್ರತಿಯೊಬ್ಬರೂ ಇದನ್ನು ಆದಷ್ಟು ಶೇರ್ ಮಾಡಿಕೊಳ್ಳಿ. ದೆಹಲಿ ಪೊಲೀಸ್” ಎಂದು ಬರೆಯಲಾಗಿದೆ.

ಇನ್ನೂ ಹಲವರು ಬೀದರ್ ಮತ್ತು ಗುಲ್ಬರ್ಗಾದ ಇರಾನ್ ಗ್ಯಾಂಗ್ ಮನೆಗಳನ್ನು ದರೋಡೆ ಮಾಡುವ ಕಂಬಳಿ ಮಾರಾಟಗಾರರಂತೆ ನಟಿಸುತ್ತಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್ ಅನ್ನು ಹಂಚಿಕೊಳ್ಳುತ್ತಿದ್ದಾರೆ. ಹಾಗಿದ್ದರೆ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 29 ಜುಲೈ 2019 ರಂದು ಉದಯವಾಣಿ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಕಂಬಳಿ ಮಾರಾಟದ ನೆಪದಲ್ಲಿ ಬಂದಿರುವ ಇರಾನಿ ಗ್ಯಾಂಗ್‌ನ ಬಗ್ಗೆ ಬಜ್ಪೆ ಪೊಲೀಸರು ಎಚ್ಚರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಈ ಗ್ಯಾಂಗ್ ಈಗಾಗಲೇ ಸಕ್ರಿಯವಾಗಿದೆ. ಹಗಲು ಹೊತ್ತಿನಲ್ಲಿ ಕಂಬಳಿ ಮಾರುವವರಾಗಿ ಸಾರ್ವಜನಿಕರನ್ನು ಸಂಪರ್ಕಿಸಿ, ಮನೆ ಸಮೀಕ್ಷೆ ನಡೆಸಿ ನಂತರ ಮನೆ ಲೂಟಿ ಮಾಡುವುದು ಗ್ಯಾಂಗ್ ಸದಸ್ಯರ ವಿಧಾನವಾಗಿದೆ” ಎಂದು ಮಂಗಳೂರಿನ ಬಜ್ಪೆ ಪೊಲೀಸರು ಹೇಳಿರುವುದಾಗಿ ತಿಳಿಸಲಾಗಿದೆ.

ಜುಲೈ 29,2019 ರಂದು ಕರಾವಳಿಯ ಡೈಜಿ ವರ್ಲ್ಡ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯಲ್ಲಿ, ಈ ಜನರು ಇರಾನಿ ಗ್ಯಾಂಗ್‌ನ ಸದಸ್ಯರು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಹೊದಿಕೆ ಮಾರುವ ನೆಪದಲ್ಲಿ ಹಗಲೊತ್ತಿಲ್ಲಿ ಮನೆಗಳಿಗೆ ನುಗ್ಗಿ ಇಡೀ ಮನೆಯನ್ನು ಶೋಧಿಸುತ್ತಾರೆ. ಸಂಜೆಯಾಗುತ್ತಿದ್ದಂತೆ ಇತರೆ ಸದಸ್ಯರು ಬಂದು ಮನೆ ದೋಚುತ್ತಾರೆ” ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ನಾವು ವೈರಲ್ ಪೋಸ್ಟ್‌ ಬಗ್ಗೆ ಇನ್ನಷ್ಟು ಮಾಹಿತಿ ಹುಡುಕಿದಾಗ ಆ ಪೋಸ್ಟ್ 2019 ರಿಂದ ಅನೇಕ ರಾಜ್ಯಗಳ ಹೆಸರಿನಲ್ಲಿ ವೈರಲ್ ಆಗಿರುವುದು ಕಂಡು ಬಂದಿದೆ. 2019 ರಲ್ಲಿ, ಈ ಪೋಸ್ಟ್ ತೆಲಂಗಾಣ ಹೆಸರಿನಲ್ಲಿ ವೈರಲ್ ಆಗಿತ್ತು. ಆ ಸಮಯದಲ್ಲಿ, ಎಕ್ಸ್‌ ಖಾತೆಯ ಬಳಕೆದಾರರೊಬ್ಬರು ಹೈದರಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿ ಅದರ ಸತ್ಯಾಸತ್ಯತೆಯ ಬಗ್ಗೆ ಕೇಳಿದ್ದರು. ಆಗ ಪೊಲೀಸರು ಇದು ಪೋಸ್ಟ್ ನಕಲಿ ಎಂದು ಉತ್ತರಿಸಿದ್ದರು.

ಒಟ್ಟಿನಲ್ಲಿ, ಮಂಗಳೂರಿನ ಬಜ್ಪೆ ಪೊಲೀಸರು ಮನೆಗಳನ್ನು ದರೋಡೆ ಮಾಡಲು ಕಂಬಳಿ ಮಾರಾಟಗಾರರಂತೆ ಬರುತ್ತಿರುವ ಇರಾನಿನ ಗ್ಯಾಂಗ್ ಬಗ್ಗೆ 2019ರ ಜುಲೈನಲ್ಲಿ ಎಚ್ಚರಿಕೆ ನೀಡಿದ್ದ ಪೋಸ್ಟ್‌ ಅನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ವೈರಲ್ ವಿಡಿಯೋ ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಯದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...