Homeಫ್ಯಾಕ್ಟ್‌ಚೆಕ್FACT CHECK : ಗುಲ್ಬರ್ಗಾ, ಬೀದರ್​ನ ಇರಾನಿ ಗ್ಯಾಂಗ್‌ ವಿವಿದೆಡೆ ದರೋಡೆಗಿಳಿದಿದೆ ಎಂಬುವುದು ಸುಳ್ಳು

FACT CHECK : ಗುಲ್ಬರ್ಗಾ, ಬೀದರ್​ನ ಇರಾನಿ ಗ್ಯಾಂಗ್‌ ವಿವಿದೆಡೆ ದರೋಡೆಗಿಳಿದಿದೆ ಎಂಬುವುದು ಸುಳ್ಳು

- Advertisement -
- Advertisement -

ಗುಲ್ಬರ್ಗಾ ಮತ್ತು ಬೀದರ್​ನ ಇರಾನಿ ಗ್ಯಾಂಗ್‌ನ ಜನರು ಕಂಬಳಿ ಮಾರುವವರಂತೆ ನಟಿಸಿ ಜನರ ಮನೆಗಳಿಗೆ ತೆರಳಿ ಲೂಟಿ ಮಾಡುತ್ತಾರೆ ಎಂದು ದೆಹಲಿ ಪೊಲೀಸರು ಎಚ್ಚರಿಸಿದ್ದಾಗಿ ಕೆಲ ಪುರುಷರ ಪೋಟೋಗಳೊಂದಿಗೆ ಪೋಸ್ಟ್ ಒಂದನ್ನು ಹಂಚಿಕೊಳ್ಳಲಾಗುತ್ತಿದೆ.

ಆಗಸ್ಟ್ 23,2024 ರಂದು ಲೈವ್ ನ್ಯೂಸ್ ಹಿಮಾಚಲ ಟಿವಿ ಎಂಬ ಫೇಸ್​ಬುಕ್ ಖಾತೆಯಲ್ಲಿ ಈ ವೈರಲ್ ಫೋಟೋವನ್ನು ಹಂಚಿಕೊಂಡು ಶೀರ್ಷಿಕೆಯಲ್ಲಿ ಹೀಗೆ ಬರೆದಿದ್ದಾರೆ, “ಇವರು ಬೀದರ್ ಮತ್ತು ಗುಲ್ಬರ್ಗಾದ ಇರಾನಿ ಗ್ಯಾಂಗ್, ಬೆಡ್‌ಶೀಟ್ ಮಾರಾಟ ಮಾಡುವಂತೆ ನಟಿಸುತ್ತಿದ್ದಾರೆ. ದಯವಿಟ್ಟು ಗಮನಿಸಿ, ಅವರೆಲ್ಲರೂ ದರೋಡೆಕೋರರು. ಇವರು ಹಗಲಿನಲ್ಲಿ ಕಂಬಳಿ ಮಾರಾಟಗಾರರಂತೆ ನಟಿಸುವ ಮೂಲಕ ಜನರ ಬಳಿ ಬರುತ್ತಾರೆ, ಮನೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ನಂತರ ಮನೆಯನ್ನು ದರೋಡೆ ಮಾಡುತ್ತಾರೆ, ಹೀಗಾಗಿ ಪ್ರತಿಯೊಬ್ಬರೂ ಇದನ್ನು ಆದಷ್ಟು ಶೇರ್ ಮಾಡಿಕೊಳ್ಳಿ. ದೆಹಲಿ ಪೊಲೀಸ್” ಎಂದು ಬರೆಯಲಾಗಿದೆ.

ಇನ್ನೂ ಹಲವರು ಬೀದರ್ ಮತ್ತು ಗುಲ್ಬರ್ಗಾದ ಇರಾನ್ ಗ್ಯಾಂಗ್ ಮನೆಗಳನ್ನು ದರೋಡೆ ಮಾಡುವ ಕಂಬಳಿ ಮಾರಾಟಗಾರರಂತೆ ನಟಿಸುತ್ತಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್ ಅನ್ನು ಹಂಚಿಕೊಳ್ಳುತ್ತಿದ್ದಾರೆ. ಹಾಗಿದ್ದರೆ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 29 ಜುಲೈ 2019 ರಂದು ಉದಯವಾಣಿ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಕಂಬಳಿ ಮಾರಾಟದ ನೆಪದಲ್ಲಿ ಬಂದಿರುವ ಇರಾನಿ ಗ್ಯಾಂಗ್‌ನ ಬಗ್ಗೆ ಬಜ್ಪೆ ಪೊಲೀಸರು ಎಚ್ಚರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಈ ಗ್ಯಾಂಗ್ ಈಗಾಗಲೇ ಸಕ್ರಿಯವಾಗಿದೆ. ಹಗಲು ಹೊತ್ತಿನಲ್ಲಿ ಕಂಬಳಿ ಮಾರುವವರಾಗಿ ಸಾರ್ವಜನಿಕರನ್ನು ಸಂಪರ್ಕಿಸಿ, ಮನೆ ಸಮೀಕ್ಷೆ ನಡೆಸಿ ನಂತರ ಮನೆ ಲೂಟಿ ಮಾಡುವುದು ಗ್ಯಾಂಗ್ ಸದಸ್ಯರ ವಿಧಾನವಾಗಿದೆ” ಎಂದು ಮಂಗಳೂರಿನ ಬಜ್ಪೆ ಪೊಲೀಸರು ಹೇಳಿರುವುದಾಗಿ ತಿಳಿಸಲಾಗಿದೆ.

ಜುಲೈ 29,2019 ರಂದು ಕರಾವಳಿಯ ಡೈಜಿ ವರ್ಲ್ಡ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯಲ್ಲಿ, ಈ ಜನರು ಇರಾನಿ ಗ್ಯಾಂಗ್‌ನ ಸದಸ್ಯರು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಹೊದಿಕೆ ಮಾರುವ ನೆಪದಲ್ಲಿ ಹಗಲೊತ್ತಿಲ್ಲಿ ಮನೆಗಳಿಗೆ ನುಗ್ಗಿ ಇಡೀ ಮನೆಯನ್ನು ಶೋಧಿಸುತ್ತಾರೆ. ಸಂಜೆಯಾಗುತ್ತಿದ್ದಂತೆ ಇತರೆ ಸದಸ್ಯರು ಬಂದು ಮನೆ ದೋಚುತ್ತಾರೆ” ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ನಾವು ವೈರಲ್ ಪೋಸ್ಟ್‌ ಬಗ್ಗೆ ಇನ್ನಷ್ಟು ಮಾಹಿತಿ ಹುಡುಕಿದಾಗ ಆ ಪೋಸ್ಟ್ 2019 ರಿಂದ ಅನೇಕ ರಾಜ್ಯಗಳ ಹೆಸರಿನಲ್ಲಿ ವೈರಲ್ ಆಗಿರುವುದು ಕಂಡು ಬಂದಿದೆ. 2019 ರಲ್ಲಿ, ಈ ಪೋಸ್ಟ್ ತೆಲಂಗಾಣ ಹೆಸರಿನಲ್ಲಿ ವೈರಲ್ ಆಗಿತ್ತು. ಆ ಸಮಯದಲ್ಲಿ, ಎಕ್ಸ್‌ ಖಾತೆಯ ಬಳಕೆದಾರರೊಬ್ಬರು ಹೈದರಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿ ಅದರ ಸತ್ಯಾಸತ್ಯತೆಯ ಬಗ್ಗೆ ಕೇಳಿದ್ದರು. ಆಗ ಪೊಲೀಸರು ಇದು ಪೋಸ್ಟ್ ನಕಲಿ ಎಂದು ಉತ್ತರಿಸಿದ್ದರು.

ಒಟ್ಟಿನಲ್ಲಿ, ಮಂಗಳೂರಿನ ಬಜ್ಪೆ ಪೊಲೀಸರು ಮನೆಗಳನ್ನು ದರೋಡೆ ಮಾಡಲು ಕಂಬಳಿ ಮಾರಾಟಗಾರರಂತೆ ಬರುತ್ತಿರುವ ಇರಾನಿನ ಗ್ಯಾಂಗ್ ಬಗ್ಗೆ 2019ರ ಜುಲೈನಲ್ಲಿ ಎಚ್ಚರಿಕೆ ನೀಡಿದ್ದ ಪೋಸ್ಟ್‌ ಅನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ವೈರಲ್ ವಿಡಿಯೋ ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಯದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎನ್‌ಡಿಎ ಸೇರಿದರೆ ಪ್ರಧಾನಿ ಮೋದಿಯಿಂದ ಕೇರಳಕ್ಕೆ ದೊಡ್ಡ ಪ್ಯಾಕೇಜ್: ಪಿಣರಾಯಿ ವಿಜಯನ್‌ಗೆ ಆಫರ್ ಕೊಟ್ಟ ಅಠಾವಳೆ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಸೇರಬೇಕೆಂದು ಕೇಂದ್ರ ರಾಜ್ಯ ಸಚಿವ ರಾಮದಾಸ್ ಬಂಡು ಅಠಾವಳೆ ಬುಧವಾರ ಸಲಹೆ ನೀಡಿದ್ದಾರೆ. ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ರಾಜ್ಯ ಸಚಿವ...

ಸದನದಲ್ಲೇ ನೀಲಿ ಚಿತ್ರ ನೋಡಿ ರಾಜ್ಯದ ಮಾನ ಕಳೆದವರು ಯಾವ ಪಕ್ಷದವರು? ಬಿಜೆಪಿಗೆ ಹರಿಪ್ರಸಾದ್ ತಿರುಗೇಟು

ಸದನದ ಶಿಸ್ತು, ಘನತೆ, ಗೌರವದ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಕಿಂಚಿತ್ತಾದರೂ ನೈತಿಕತೆ ಇದೆಯೇ? ಎಂದು ವಿಧಾನಪರಿಷತ್ ಸದಸ್ಯ ಹಾಗೂ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ ಹರಿಪ್ರಸಾದ್ ಪ್ರಶ್ನಿಸಿದ್ದಾರೆ. ಗುರುವಾರ (ಜ.22) ವಿಶೇಷ ಅಧಿವೇಶನದ ವೇಳೆ...

ಆಂಧ್ರದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆ ನಿಷೇಧ?

ಕಳೆದ ತಿಂಗಳು ಆಸ್ಟ್ರೇಲಿಯಾ ಜಾರಿಗೆ ತಂದಂತೆಯೇ, 16 ವರ್ಷದೊಳಗಿನ ಮಕ್ಕಳಿಗಾಗಿ ಸರ್ಕಾರವು ಸಾಮಾಜಿಕ ಮಾಧ್ಯಮವನ್ನು ನಿಷೇಧಿಸಲು ಯೋಜಿಸುತ್ತಿದೆ ಎಂದು ಆಂಧ್ರಪ್ರದೇಶ ಸಚಿವ ನಾರಾ ಲೋಕೇಶ್ ಬಹಿರಂಗಪಡಿಸಿದ್ದಾರೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ...

ಜಾರ್ಖಂಡ್| ಚೈಬಾಸಾ ಎನ್‌ಕೌಂಟರ್‌; ಕುಖ್ಯಾತ ಮಾವೋವಾದಿ ನಾಯಕ ‘ಅನಲ್ ದಾ’ ಸೇರಿ 8 ನಕ್ಸಲರ ಹತ್ಯೆ

ಜಾರ್ಖಂಡ್ ಪೊಲೀಸರು ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್‌) ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಮುಖ ಯಶಸ್ಸನ್ನು ಸಾಧಿಸಿದೆ. ಚೈಬಾಸಾ ಜಿಲ್ಲೆಯಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ, ಭದ್ರತಾ ಪಡೆಗಳು 8 ನಕ್ಸಲರನ್ನು ಕೊಂದಿವೆ....

‘ಕರ್ನಾಟಕವನ್ನು ಎಲ್ಲಾ ರೀತಿಯಲ್ಲಿ ಕಡೆಗಣಿಸುತ್ತಿದ್ದ ಬಿಜೆಪಿ ಈಗ ರಾಜ್ಯಪಾಲರ ಮೂಲಕವೇ ಕನ್ನಡಿಗರನ್ನು ಅವಮಾನಿಸಿದೆ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಕನ್ನಡಿಗರನ್ನು ಅವಮಾನಿಸುವ ಪ್ರಕ್ರಿಯೆ ಮುಂದುವರೆದಿದೆ ಎಂದು ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.  2026 ಜನವರಿ 22ರ, ಗುರುವಾರ ಸದನದಲ್ಲಿ ನಡೆದ ಬೆಳವಣಿಗೆಗಳ ಕುರಿತು ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಖರ್ಗೆ, ‘ಸರ್ಕಾರದ ಭಾಷಣವನ್ನು...

ಭೋಜಶಾಲಾ-ಕಮಾಲ್ ಮೌಲಾ ಮಸೀದಿ ವಿವಾದ : ವಸಂತ ಪಂಚಮಿ ಪೂಜೆ, ಜುಮಾ ನಮಾಜ್ ಶಾಂತಿಯುತವಾಗಿ ನಡೆಸಲು ಸುಪ್ರೀಂ ಆದೇಶ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಭೋಜ ಶಾಲಾ-ಕಮಾಲ್ ಮೌಲಾ ಸಂಕೀರ್ಣದಲ್ಲಿ ವಸಂತ ಪಂಚಮಿ ಪೂಜೆ ಮತ್ತು ಶುಕ್ರವಾರದ ಜುಮಾ ನಮಾಝ್ ಎರಡನ್ನೂ ಶಾಂತಿಯುತವಾಗಿ ನಡೆಸುವಂತೆ ನೋಡಿಕೊಳ್ಳಲು ಸುಪ್ರೀಂ ಕೋರ್ಟ್ ಗುರುವಾರ (ಜ.22) ನಿರ್ದೇಶನಗಳನ್ನು ನೀಡಿದೆ. ಭೋಜ...

ಜಮ್ಮು-ಕಾಶ್ಮೀರ| 200 ಅಡಿ ಆಳದ ಕಂದಕಕ್ಕೆ ಉರುಳಿದ ವಾಹನ; 10 ಜನ ಸೇನಾ ಸಿಬ್ಬಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾ ಪ್ರದೇಶದಲ್ಲಿ 200 ಅಡಿ ಆಳದ ಕಂದಕಕ್ಕೆ ವಾಹನ ಉರುಳಿ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ. ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ...

ಉತ್ತರ ಪ್ರದೇಶ ಮರ್ಯಾದೆಗೇಡು ಹತ್ಯೆ; ಅಂತರ್ಧರ್ಮೀಯ ಜೋಡಿಯನ್ನು ಕೊಂದ ಯುವತಿ ಸಹೋದರರು

ಉತ್ತರ ಪ್ರದೇಶದ ಮೊರಾದಾಬಾದ್‌ನ ಕಾಡಿನಲ್ಲಿ ಅಂತರ್ಧರ್ಮೀಯ ಜೋಡಿಯ ಶವ ಪತ್ತೆಯಾಗಿದ್ದು, ಪ್ರಾಥಮಿಕ ತನಿಖೆಯಲ್ಲಿ ಆಕೆಯ ಸಹೋದರರು ಮರ್ಯಾದೆಗೇಡು ಹತ್ಯೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವತಿಯನ್ನು 19 ವರ್ಷದ ಕಾಜಲ್ ಎಂದು ಗುರುತಿಸಲಾಗಿದ್ದು, ಮೃತ...

ತೀವ್ರ ವಿರೋಧದ ನಂತರ ಇಸ್ಲಾಮೋಫೋಬಿಕ್ ಹೇಳಿಕೆ ಹಿಂಪಡೆದು, ಕ್ಷಮೆಯಾಚಿಸಿದ ಕೇರಳದ ಸಿಪಿಐ(ಎಂ) ಸಚಿವ ಸಾಜಿ ಚೆರಿಯನ್

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಮುಸ್ಲಿಂ ವಿಜೇತರ ಬಗ್ಗೆ ತಮ್ಮ ಇಸ್ಲಾಮೋಫೋಬಿಕ್ ಹೇಳಿಕೆಗಳನ್ನು ನೀಡಿದ್ದ ಸಿಪಿಐ(ಎಂ) ಹಿರಿಯ ನಾಯಕ ಮತ್ತು ಕೇರಳ ಸಚಿವ ಸಾಜಿ ಚೆರಿಯನ್ ಬುಧವಾರ ತಮ್ಮ ಹೇಳಿಕೆಯನ್ನು  ಹಿಂತೆಗೆದುಕೊಂಡಿದ್ದಾರೆ. ಪಕ್ಷ,...

ರಾಜ್ಯಪಾಲರಿಂದ ಸಂವಿಧಾನದ ವಿಧಿಗಳ ಉಲ್ಲಂಘನೆ; ಜನಪ್ರತಿನಿಧಿಗಳ ಸಭೆಯನ್ನು ಅವಮಾನಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

"ವರ್ಷದ ಮೊದಲ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘಿಸಿದ್ದಾರೆ. ಅವರ ಈ ನಡೆ ಜನಪ್ರತಿನಿಧಿಗಳ ಸಭೆಗೆ ಮಾಡಿದ ಅವಮಾನ. ಇದನ್ನು ನಾವು ಖಂಡಿಸುತ್ತೇವೆ. ಈ...