Homeಫ್ಯಾಕ್ಟ್‌ಚೆಕ್FACT CHECK : ಗುಲ್ಬರ್ಗಾ, ಬೀದರ್​ನ ಇರಾನಿ ಗ್ಯಾಂಗ್‌ ವಿವಿದೆಡೆ ದರೋಡೆಗಿಳಿದಿದೆ ಎಂಬುವುದು ಸುಳ್ಳು

FACT CHECK : ಗುಲ್ಬರ್ಗಾ, ಬೀದರ್​ನ ಇರಾನಿ ಗ್ಯಾಂಗ್‌ ವಿವಿದೆಡೆ ದರೋಡೆಗಿಳಿದಿದೆ ಎಂಬುವುದು ಸುಳ್ಳು

- Advertisement -
- Advertisement -

ಗುಲ್ಬರ್ಗಾ ಮತ್ತು ಬೀದರ್​ನ ಇರಾನಿ ಗ್ಯಾಂಗ್‌ನ ಜನರು ಕಂಬಳಿ ಮಾರುವವರಂತೆ ನಟಿಸಿ ಜನರ ಮನೆಗಳಿಗೆ ತೆರಳಿ ಲೂಟಿ ಮಾಡುತ್ತಾರೆ ಎಂದು ದೆಹಲಿ ಪೊಲೀಸರು ಎಚ್ಚರಿಸಿದ್ದಾಗಿ ಕೆಲ ಪುರುಷರ ಪೋಟೋಗಳೊಂದಿಗೆ ಪೋಸ್ಟ್ ಒಂದನ್ನು ಹಂಚಿಕೊಳ್ಳಲಾಗುತ್ತಿದೆ.

ಆಗಸ್ಟ್ 23,2024 ರಂದು ಲೈವ್ ನ್ಯೂಸ್ ಹಿಮಾಚಲ ಟಿವಿ ಎಂಬ ಫೇಸ್​ಬುಕ್ ಖಾತೆಯಲ್ಲಿ ಈ ವೈರಲ್ ಫೋಟೋವನ್ನು ಹಂಚಿಕೊಂಡು ಶೀರ್ಷಿಕೆಯಲ್ಲಿ ಹೀಗೆ ಬರೆದಿದ್ದಾರೆ, “ಇವರು ಬೀದರ್ ಮತ್ತು ಗುಲ್ಬರ್ಗಾದ ಇರಾನಿ ಗ್ಯಾಂಗ್, ಬೆಡ್‌ಶೀಟ್ ಮಾರಾಟ ಮಾಡುವಂತೆ ನಟಿಸುತ್ತಿದ್ದಾರೆ. ದಯವಿಟ್ಟು ಗಮನಿಸಿ, ಅವರೆಲ್ಲರೂ ದರೋಡೆಕೋರರು. ಇವರು ಹಗಲಿನಲ್ಲಿ ಕಂಬಳಿ ಮಾರಾಟಗಾರರಂತೆ ನಟಿಸುವ ಮೂಲಕ ಜನರ ಬಳಿ ಬರುತ್ತಾರೆ, ಮನೆಯನ್ನು ಸೂಕ್ಷ್ಮವಾಗಿ ಗಮನಿಸುತ್ತಾರೆ. ನಂತರ ಮನೆಯನ್ನು ದರೋಡೆ ಮಾಡುತ್ತಾರೆ, ಹೀಗಾಗಿ ಪ್ರತಿಯೊಬ್ಬರೂ ಇದನ್ನು ಆದಷ್ಟು ಶೇರ್ ಮಾಡಿಕೊಳ್ಳಿ. ದೆಹಲಿ ಪೊಲೀಸ್” ಎಂದು ಬರೆಯಲಾಗಿದೆ.

ಇನ್ನೂ ಹಲವರು ಬೀದರ್ ಮತ್ತು ಗುಲ್ಬರ್ಗಾದ ಇರಾನ್ ಗ್ಯಾಂಗ್ ಮನೆಗಳನ್ನು ದರೋಡೆ ಮಾಡುವ ಕಂಬಳಿ ಮಾರಾಟಗಾರರಂತೆ ನಟಿಸುತ್ತಿದ್ದಾರೆ ಎಂಬ ಪ್ರತಿಪಾದನೆಯೊಂದಿಗೆ ಪೋಸ್ಟ್ ಅನ್ನು ಹಂಚಿಕೊಳ್ಳುತ್ತಿದ್ದಾರೆ. ಹಾಗಿದ್ದರೆ, ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಸರ್ಚ್ ಮಾಡಿದಾಗ, 29 ಜುಲೈ 2019 ರಂದು ಉದಯವಾಣಿ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ಕಂಬಳಿ ಮಾರಾಟದ ನೆಪದಲ್ಲಿ ಬಂದಿರುವ ಇರಾನಿ ಗ್ಯಾಂಗ್‌ನ ಬಗ್ಗೆ ಬಜ್ಪೆ ಪೊಲೀಸರು ಎಚ್ಚರಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಈ ಗ್ಯಾಂಗ್ ಈಗಾಗಲೇ ಸಕ್ರಿಯವಾಗಿದೆ. ಹಗಲು ಹೊತ್ತಿನಲ್ಲಿ ಕಂಬಳಿ ಮಾರುವವರಾಗಿ ಸಾರ್ವಜನಿಕರನ್ನು ಸಂಪರ್ಕಿಸಿ, ಮನೆ ಸಮೀಕ್ಷೆ ನಡೆಸಿ ನಂತರ ಮನೆ ಲೂಟಿ ಮಾಡುವುದು ಗ್ಯಾಂಗ್ ಸದಸ್ಯರ ವಿಧಾನವಾಗಿದೆ” ಎಂದು ಮಂಗಳೂರಿನ ಬಜ್ಪೆ ಪೊಲೀಸರು ಹೇಳಿರುವುದಾಗಿ ತಿಳಿಸಲಾಗಿದೆ.

ಜುಲೈ 29,2019 ರಂದು ಕರಾವಳಿಯ ಡೈಜಿ ವರ್ಲ್ಡ್ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿಯಲ್ಲಿ, ಈ ಜನರು ಇರಾನಿ ಗ್ಯಾಂಗ್‌ನ ಸದಸ್ಯರು ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಹೊದಿಕೆ ಮಾರುವ ನೆಪದಲ್ಲಿ ಹಗಲೊತ್ತಿಲ್ಲಿ ಮನೆಗಳಿಗೆ ನುಗ್ಗಿ ಇಡೀ ಮನೆಯನ್ನು ಶೋಧಿಸುತ್ತಾರೆ. ಸಂಜೆಯಾಗುತ್ತಿದ್ದಂತೆ ಇತರೆ ಸದಸ್ಯರು ಬಂದು ಮನೆ ದೋಚುತ್ತಾರೆ” ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಹೇಳಲಾಗಿದೆ.

ನಾವು ವೈರಲ್ ಪೋಸ್ಟ್‌ ಬಗ್ಗೆ ಇನ್ನಷ್ಟು ಮಾಹಿತಿ ಹುಡುಕಿದಾಗ ಆ ಪೋಸ್ಟ್ 2019 ರಿಂದ ಅನೇಕ ರಾಜ್ಯಗಳ ಹೆಸರಿನಲ್ಲಿ ವೈರಲ್ ಆಗಿರುವುದು ಕಂಡು ಬಂದಿದೆ. 2019 ರಲ್ಲಿ, ಈ ಪೋಸ್ಟ್ ತೆಲಂಗಾಣ ಹೆಸರಿನಲ್ಲಿ ವೈರಲ್ ಆಗಿತ್ತು. ಆ ಸಮಯದಲ್ಲಿ, ಎಕ್ಸ್‌ ಖಾತೆಯ ಬಳಕೆದಾರರೊಬ್ಬರು ಹೈದರಾಬಾದ್ ಪೊಲೀಸರನ್ನು ಟ್ಯಾಗ್ ಮಾಡಿ ಅದರ ಸತ್ಯಾಸತ್ಯತೆಯ ಬಗ್ಗೆ ಕೇಳಿದ್ದರು. ಆಗ ಪೊಲೀಸರು ಇದು ಪೋಸ್ಟ್ ನಕಲಿ ಎಂದು ಉತ್ತರಿಸಿದ್ದರು.

ಒಟ್ಟಿನಲ್ಲಿ, ಮಂಗಳೂರಿನ ಬಜ್ಪೆ ಪೊಲೀಸರು ಮನೆಗಳನ್ನು ದರೋಡೆ ಮಾಡಲು ಕಂಬಳಿ ಮಾರಾಟಗಾರರಂತೆ ಬರುತ್ತಿರುವ ಇರಾನಿನ ಗ್ಯಾಂಗ್ ಬಗ್ಗೆ 2019ರ ಜುಲೈನಲ್ಲಿ ಎಚ್ಚರಿಕೆ ನೀಡಿದ್ದ ಪೋಸ್ಟ್‌ ಅನ್ನು ಇತ್ತೀಚಿನದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ.

ಇದನ್ನೂ ಓದಿ : FACT CHECK : ವೈರಲ್ ವಿಡಿಯೋ ಕೋಲ್ಕತ್ತಾ ಅತ್ಯಾಚಾರ ಸಂತ್ರಸ್ತೆಯದ್ದಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...