HomeUncategorizedFact Check : ಕೇರಳ ಸರ್ಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಹಿಂದೂಗಳನ್ನು ಕೀಳಾಗಿ ಚಿತ್ರಿಸಿದೆ ಎಂಬುವುದು...

Fact Check : ಕೇರಳ ಸರ್ಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಹಿಂದೂಗಳನ್ನು ಕೀಳಾಗಿ ಚಿತ್ರಿಸಿದೆ ಎಂಬುವುದು ಸುಳ್ಳು

- Advertisement -
- Advertisement -

“ಮುಸ್ಲಿಂ ಅಸ್ಲಂ: ಸ್ವಚ್ಚ ಇರುವವರು, ನಾವು ಅವರ ಅಂಗಡಿಯಿಂದ ಸಿಹಿ ತಿನಿಸು ಖರೀದಿಸಬಹುದು.”
“ಹಿಂದೂ ಅಪ್ಪನ್ : ಸ್ವಚ್ಚ ಇಲ್ಲದಿರುವವರು, ಇವರಿಂದ ಯಾರೂ ಕೂಡ ಸಿಹಿ ತಿನಿಸು ಖರೀದಿಸಬಾರದು.”

“ಮುಸ್ಲಿಂ ಆದಿಲ್: ಸ್ವಚ್ಚವಾಗಿರುವವರು, ಮತ್ತು ಒಳ್ಳೆಯ ಗುಣ ನಡತೆ ಹೊಂದಿರುವವರು”
“ಹಿಂದೂ ಅಭಿಮನ್ಯು : ಸ್ವಚ್ಚ ಇಲ್ಲದಿರುವವರು, ಅವರು ಸ್ನಾನ ಮಾಡಲ್ಲ, ಕೆಟ್ಟ ವಾಸನೆ ಬರುತ್ತಾರೆ.”

“ಇದು ಕೇರಳದ ಶಾಲೆಗಳಲ್ಲಿ ಮಕ್ಕಳಿಗೆ ಮಾಡುವ ಪಾಠ. ಇದು ಕಮ್ಯುನಿಷ್ಠರು ಸಣ್ಣ ಮಕ್ಕಳನ್ನು ಬ್ರೈನ್ ವಾಶ್ ಮಾಡುವ ರೀತಿ” ಎಂದು ಪ್ರತಿಪಾದಿಸಿ ಮಿ.ಸಿನ್ಹ (ಮೋದಿ ಫ್ಯಾಮಿಲಿ) ಎಂಬ ಎಕ್ಸ್ ಬಳಕೆದಾರ ಪುಸ್ತಕವೊಂದರ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಕೇರಳದ ಸರ್ಕಾರ ಅಧಿಕೃತವಾಗಿ ಶಾಲಾ ಮಕ್ಕಳಿಗೆ ವಿತರಿಸಿದ ಪಾಠ ಪುಸ್ತಕಗಳಲ್ಲಿ ಈ ರೀತಿಯಿದೆ ಎಂಬರ್ಥದಲ್ಲಿ ಸಿನ್ಹ ಸುದ್ದಿ ಹಬ್ಬಿಸಿದ್ದಾರೆ.

ಫ್ಯಾಕ್ಟ್‌ ಚೆಕ್ : ಎಕ್ಸ್ ಪೋಸ್ಟ್‌ನಲ್ಲಿರುವ ಹೇಳಿರುವ ವಿಷಯದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದಾಗ, ಇದು ಕೇರಳದ ಪೀಸ್ ಇಂಟರ್ನ್ಯಾಷನಲ್ ಸಮೂಹ ಶಿಕ್ಷಣ ಸಂಸ್ಥೆಗಳ ಪಠ್ಯ ಪುಸ್ತಕದ ಫೋಟೋ ಎಂದು ಗೊತ್ತಾಗಿದೆ.

ಕೇರಳದ ಎರ್ನಾಕುಲಂ ಕೆಂದ್ರವಾಗಿ ಕಾರ್ಯಾಚರಿಸುತ್ತಿದ್ದ ‘ಪೀಸ್ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್‌’ ರಾಜ್ಯಾದ್ಯಂತ ಪೀಸ್ ಇಂಟರ್ನ್ಯಾಷನಲ್ ಎಂಬ ಹೆಸರಿನ ಹಲವು ಶಾಲೆಗಳನ್ನು ನಡೆಸುತ್ತಿತ್ತು.

ಅಕ್ಟೋಬರ್ 8, 2016 ರಂದು ಮಲಯಾಳಂ ಸುದ್ದಿ ವೆಬ್‌ಸೈಟ್‌ ‘ಆನ್ ಮನೋರಮಾ‘ದಲ್ಲಿ ಪ್ರಕಟವಾದ ವರದಿಯ ಪ್ರಕಾರ, ನಾವು ಮೇಲೆ ಉಲ್ಲೇಖಿಸಿದ ಆಕ್ಷೇಪಾರ್ಹ ವಿಷಯವನ್ನು ಬೋಧಿಸಿದ್ದಕ್ಕಾಗಿ ಪೀಸ್ ಎಜುಕೇಷನಲ್ ಫೌಂಡೇಶನ್ ನಡೆಸುತ್ತಿದ್ದ ಎರ್ನಾಕುಲಂನ ತಮ್ಮನಮ್‌ಲ್ಲಿದ್ದ ಪೀಸ್ ಇಂಟರ್ನ್ಯಾಷನಲ್ ಸ್ಕೂಲ್ ವಿರುದ್ಧ ಪ್ರಕರಣ ದಾಖಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಜನವರಿ 4, 2018 ರಂದು ‘ಮಾತೃಭೂಮಿ‘ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿ ಪ್ರಕಾರ, ಪಠ್ಯ ಪುಸ್ತಕದಲ್ಲಿ ಆಕ್ಷೇಪಾರ್ಹ ಮತ್ತು ಜಾತ್ಯತೀತವಲ್ಲದ ವಿಷಯ ಪ್ರಕಟಿಸಿ, ಬೋಧಿಸಿದ ಎರ್ನಾಕುಲಂನ ಪೀಸ್ ಇಂಟರ್‌ನ್ಯಾಷನಲ್ ಸ್ಕೂಲ್ ಅನ್ನು ಮುಚ್ಚಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆದೇಶಿಸಿದ್ದಾರೆ.

ಸುದ್ದಿ ಲಿಂಕ್ ಇಲ್ಲಿದೆ 

ಕೋಮು ವಿಷಯಗಳನ್ನು ಕಲಿಸಿದ್ದಕ್ಕಾಗಿ ಎರ್ನಾಕುಲಂನ ವಿವಾದಾತ್ಮಕ ಪೀಸ್ ಇಂಟರ್ನ್ಯಾಷನಲ್ ಶಾಲೆಯನ್ನು ಮುಚ್ಚಲು ಕೇರಳ ಸರ್ಕಾರ 2018ರ ಜನವರಿಯಲ್ಲಿ ಆದೇಶಿಸಿತ್ತು. ಎರ್ನಾಕುಲಂ ಶಾಖೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಬೇರೆ ಶಾಲೆಗಳಿಗೆ ಸ್ಥಳಾಂತರಿಸಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಎರ್ನಾಕುಲಂನ ಪೀಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಕಲಿಸುವ ಪಠ್ಯಕ್ರಮದ ಭಾಗವಾಗಿರುವ ಆಕ್ಷೇಪಾರ್ಹ ವಿಷಯಗಳೊಂದಿಗೆ ಪಠ್ಯಪುಸ್ತಕಗಳನ್ನು ಮುದ್ರಿಸಿದ್ದಕ್ಕಾಗಿ ಕೊಚ್ಚಿ ನಗರ ಪೊಲೀಸರು ಡಿಸೆಂಬರ್ 3, 2016 ರಂದು ಮುಂಬೈ ಮೂಲದ ಮೂವರು ಪ್ರಕಾಶಕರನ್ನು ಬಂಧಿಸಿದ್ದರು ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಹೇಳಿತ್ತು.

ಸುದ್ದಿ ಲಿಂಕ್ ಇಲ್ಲಿದೆ 

ಎಕ್ಸ್ ಬಳಕೆದಾರ ಸಿನ್ಹ ಹಾಕಿದ್ದ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ್ದ ಕೇರಳದ ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ಅವರು ” ಈ ಪುಸ್ತಕವನ್ನು ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿಲ್ಲ ಎಂದು ಹೇಳಿದ್ದಾರೆ. “ಈ ಪುಸ್ತಕವನ್ನು ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿಲ್ಲ. ಇದು ರಾಜ್ಯದ ವಿರುದ್ಧ ದ್ವೇಷ ಹರಡುವ ಮತ್ತೊಂದು ಪ್ರಯತ್ನವಾಗಿದೆ. ನಮ್ಮ ಪರಿಚಯವಿರುವವರಿಗೆ ಕೇರಳಿಗರ ನಡುವಿನ ಸೌಹಾರ್ದತೆ ಮತ್ತು ಏಕತೆ ಅರ್ಥವಾಗುತ್ತದೆ. ದ್ವೇಷಕ್ಕೆ ಅವಕಾಶವಿಲ್ಲ, ಕೋಮುವಾದಿ ಕಾರ್ಯಸೂಚಿ ರಾಜ್ಯದಲ್ಲಿ ಬೇರೂರಲು ಏಕೆ ವಿಫಲವಾಗಿದೆ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ಅಂಶವೇನೆಂದರೆ, ಎಕ್ಸ್ ಬಳಕೆದಾರ ಸಿನ್ಹ ಹಂಚಿಕೊಂಡ ಶಾಲಾ ಪಠ್ಯ ಪುಸ್ತಕದ ಫೋಟೋ ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿದ ಅಥವಾ ವಿತರಿಸಿದ ಪುಸ್ತಕದ್ದಲ್ಲ. ಇದು ಎರ್ನಾಕುಲಂನ ಪೀಸ್ ಇಂಟರ್ನ್ಯಾಷನಲ್ ಶಾಲೆಯ ಆಡಳಿತ ಮಂಡಳಿ ಮಕ್ಕಳಿಗೆ ವಿತರಿಸಿದ್ದ ಪುಸ್ತಕ. ಆ ಶಾಲೆಯನ್ನು ಮುಚ್ಚಲು ಕಮ್ಯುನಿಷ್ಠ್ ಪಕ್ಷದ ನೇತೃತ್ವದ ಕೇರಳ ಸರ್ಕಾರದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 2018ರ ಜನವರಿಯಲ್ಲಿ ಆದೇಶಿಸಿದ್ದರು.

ಹಲವು ಆರೋಪಗಳು ಕೇಳಿ ಬಂದ ಬಳಿಕ ಕೇರಳದ ಎಲ್ಲಾ ಪೀಸ್ ಇಂಟರ್ನ್ಯಾಷನಲ್ ಶಾಲೆಗಳನ್ನು ಮುಚ್ಚಲಾಗಿದೆ ಎಂಬ ವರದಿಗಳಿವೆ. ಈ ಬಗ್ಗೆ ಖಚಿತ ಮಾಹಿತಿ ನಮಗೆ ಲಭ್ಯವಾಗಿಲ್ಲ. ಈ ಪೀಸ್ ಇಂಟರ್ನ್ಯಾಷನಲ್ ಶಾಲೆಗಳ ಮಾಲೀಕ ಎಂ.ಎಂ ಅಕ್ಬರ್. ಈ ವ್ಯಕ್ತಿಯನ್ನು ಕೇರಳದ ಝಾಕಿರ್ ನಾಯ್ಕ್ ಎಂದೇ ಹೇಳಲಾಗುತ್ತದೆ. ಇಸ್ಲಾಮಿಕ್ ವಿದ್ವಾಂಸ ಎಂದು ಗುರುತಿಸಿಕೊಂಡಿದ್ದ ಝಾಕಿರ್ ನಾಯ್ಕ್‌ ಪ್ರಸ್ತುತ ಹೊರ ದೇಶದಲ್ಲಿದ್ದಾರೆ. ಝಾಕಿರ್ ನಾಯ್ಕ್ ಮತ್ತು ಎಂ.ಎಂ ಅಕ್ಬರ್ ಇಬ್ಬರೂ ಕೂಡ ಇಸ್ಲಾಮಿನ ನೂತನವಾದಿ ಪಂಗಡ ಎಂದು ಗುರುತಿಸಲಾಗಿರುವ ಸಲಫಿ ಸಿದ್ದಾಂತದ ಬೋಧಕರಾಗಿದ್ದಾರೆ. ಇವರ ವಾದಗಳನ್ನು ಸುನ್ನೀ ಪಂಥದ ಮುಸ್ಲಿಮರು ಕಟುವಾಗಿ ವಿರೋಧಿಸುತ್ತಾರೆ. ಝಾಕಿರ್ ನಾಯ್ಕ್‌ ಕೂಡ ಪೀಸ್ ಹೆಸರಿನ ಸಂಸ್ಥೆಗಳನ್ನು ನಡೆಸುತ್ತಿದ್ದರು. ಅವುಗಳ ಮೇಲೆಯೂ ಹಲವು ಆರೋಪಗಳು ಕೇಳಿ ಬಂದಿತ್ತು.

ಇದನ್ನೂ ಓದಿ : Fact Check : ‘ಮಹಿಳಾ ಮೀಸಲಾತಿ ಮಸೂದೆ’ಯಿಂದ ಟಿಕೆಟ್ ಸಿಕ್ಕಿದೆ ಎಂಬ ಕಂಗನಾ ರಣಾವತ್ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...