HomeUncategorizedFact Check : ಕೇರಳ ಸರ್ಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಹಿಂದೂಗಳನ್ನು ಕೀಳಾಗಿ ಚಿತ್ರಿಸಿದೆ ಎಂಬುವುದು...

Fact Check : ಕೇರಳ ಸರ್ಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಹಿಂದೂಗಳನ್ನು ಕೀಳಾಗಿ ಚಿತ್ರಿಸಿದೆ ಎಂಬುವುದು ಸುಳ್ಳು

- Advertisement -
- Advertisement -

“ಮುಸ್ಲಿಂ ಅಸ್ಲಂ: ಸ್ವಚ್ಚ ಇರುವವರು, ನಾವು ಅವರ ಅಂಗಡಿಯಿಂದ ಸಿಹಿ ತಿನಿಸು ಖರೀದಿಸಬಹುದು.”
“ಹಿಂದೂ ಅಪ್ಪನ್ : ಸ್ವಚ್ಚ ಇಲ್ಲದಿರುವವರು, ಇವರಿಂದ ಯಾರೂ ಕೂಡ ಸಿಹಿ ತಿನಿಸು ಖರೀದಿಸಬಾರದು.”

“ಮುಸ್ಲಿಂ ಆದಿಲ್: ಸ್ವಚ್ಚವಾಗಿರುವವರು, ಮತ್ತು ಒಳ್ಳೆಯ ಗುಣ ನಡತೆ ಹೊಂದಿರುವವರು”
“ಹಿಂದೂ ಅಭಿಮನ್ಯು : ಸ್ವಚ್ಚ ಇಲ್ಲದಿರುವವರು, ಅವರು ಸ್ನಾನ ಮಾಡಲ್ಲ, ಕೆಟ್ಟ ವಾಸನೆ ಬರುತ್ತಾರೆ.”

“ಇದು ಕೇರಳದ ಶಾಲೆಗಳಲ್ಲಿ ಮಕ್ಕಳಿಗೆ ಮಾಡುವ ಪಾಠ. ಇದು ಕಮ್ಯುನಿಷ್ಠರು ಸಣ್ಣ ಮಕ್ಕಳನ್ನು ಬ್ರೈನ್ ವಾಶ್ ಮಾಡುವ ರೀತಿ” ಎಂದು ಪ್ರತಿಪಾದಿಸಿ ಮಿ.ಸಿನ್ಹ (ಮೋದಿ ಫ್ಯಾಮಿಲಿ) ಎಂಬ ಎಕ್ಸ್ ಬಳಕೆದಾರ ಪುಸ್ತಕವೊಂದರ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಕೇರಳದ ಸರ್ಕಾರ ಅಧಿಕೃತವಾಗಿ ಶಾಲಾ ಮಕ್ಕಳಿಗೆ ವಿತರಿಸಿದ ಪಾಠ ಪುಸ್ತಕಗಳಲ್ಲಿ ಈ ರೀತಿಯಿದೆ ಎಂಬರ್ಥದಲ್ಲಿ ಸಿನ್ಹ ಸುದ್ದಿ ಹಬ್ಬಿಸಿದ್ದಾರೆ.

ಫ್ಯಾಕ್ಟ್‌ ಚೆಕ್ : ಎಕ್ಸ್ ಪೋಸ್ಟ್‌ನಲ್ಲಿರುವ ಹೇಳಿರುವ ವಿಷಯದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದಾಗ, ಇದು ಕೇರಳದ ಪೀಸ್ ಇಂಟರ್ನ್ಯಾಷನಲ್ ಸಮೂಹ ಶಿಕ್ಷಣ ಸಂಸ್ಥೆಗಳ ಪಠ್ಯ ಪುಸ್ತಕದ ಫೋಟೋ ಎಂದು ಗೊತ್ತಾಗಿದೆ.

ಕೇರಳದ ಎರ್ನಾಕುಲಂ ಕೆಂದ್ರವಾಗಿ ಕಾರ್ಯಾಚರಿಸುತ್ತಿದ್ದ ‘ಪೀಸ್ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್‌’ ರಾಜ್ಯಾದ್ಯಂತ ಪೀಸ್ ಇಂಟರ್ನ್ಯಾಷನಲ್ ಎಂಬ ಹೆಸರಿನ ಹಲವು ಶಾಲೆಗಳನ್ನು ನಡೆಸುತ್ತಿತ್ತು.

ಅಕ್ಟೋಬರ್ 8, 2016 ರಂದು ಮಲಯಾಳಂ ಸುದ್ದಿ ವೆಬ್‌ಸೈಟ್‌ ‘ಆನ್ ಮನೋರಮಾ‘ದಲ್ಲಿ ಪ್ರಕಟವಾದ ವರದಿಯ ಪ್ರಕಾರ, ನಾವು ಮೇಲೆ ಉಲ್ಲೇಖಿಸಿದ ಆಕ್ಷೇಪಾರ್ಹ ವಿಷಯವನ್ನು ಬೋಧಿಸಿದ್ದಕ್ಕಾಗಿ ಪೀಸ್ ಎಜುಕೇಷನಲ್ ಫೌಂಡೇಶನ್ ನಡೆಸುತ್ತಿದ್ದ ಎರ್ನಾಕುಲಂನ ತಮ್ಮನಮ್‌ಲ್ಲಿದ್ದ ಪೀಸ್ ಇಂಟರ್ನ್ಯಾಷನಲ್ ಸ್ಕೂಲ್ ವಿರುದ್ಧ ಪ್ರಕರಣ ದಾಖಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಜನವರಿ 4, 2018 ರಂದು ‘ಮಾತೃಭೂಮಿ‘ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿ ಪ್ರಕಾರ, ಪಠ್ಯ ಪುಸ್ತಕದಲ್ಲಿ ಆಕ್ಷೇಪಾರ್ಹ ಮತ್ತು ಜಾತ್ಯತೀತವಲ್ಲದ ವಿಷಯ ಪ್ರಕಟಿಸಿ, ಬೋಧಿಸಿದ ಎರ್ನಾಕುಲಂನ ಪೀಸ್ ಇಂಟರ್‌ನ್ಯಾಷನಲ್ ಸ್ಕೂಲ್ ಅನ್ನು ಮುಚ್ಚಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆದೇಶಿಸಿದ್ದಾರೆ.

ಸುದ್ದಿ ಲಿಂಕ್ ಇಲ್ಲಿದೆ 

ಕೋಮು ವಿಷಯಗಳನ್ನು ಕಲಿಸಿದ್ದಕ್ಕಾಗಿ ಎರ್ನಾಕುಲಂನ ವಿವಾದಾತ್ಮಕ ಪೀಸ್ ಇಂಟರ್ನ್ಯಾಷನಲ್ ಶಾಲೆಯನ್ನು ಮುಚ್ಚಲು ಕೇರಳ ಸರ್ಕಾರ 2018ರ ಜನವರಿಯಲ್ಲಿ ಆದೇಶಿಸಿತ್ತು. ಎರ್ನಾಕುಲಂ ಶಾಖೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಬೇರೆ ಶಾಲೆಗಳಿಗೆ ಸ್ಥಳಾಂತರಿಸಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಎರ್ನಾಕುಲಂನ ಪೀಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಕಲಿಸುವ ಪಠ್ಯಕ್ರಮದ ಭಾಗವಾಗಿರುವ ಆಕ್ಷೇಪಾರ್ಹ ವಿಷಯಗಳೊಂದಿಗೆ ಪಠ್ಯಪುಸ್ತಕಗಳನ್ನು ಮುದ್ರಿಸಿದ್ದಕ್ಕಾಗಿ ಕೊಚ್ಚಿ ನಗರ ಪೊಲೀಸರು ಡಿಸೆಂಬರ್ 3, 2016 ರಂದು ಮುಂಬೈ ಮೂಲದ ಮೂವರು ಪ್ರಕಾಶಕರನ್ನು ಬಂಧಿಸಿದ್ದರು ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಹೇಳಿತ್ತು.

ಸುದ್ದಿ ಲಿಂಕ್ ಇಲ್ಲಿದೆ 

ಎಕ್ಸ್ ಬಳಕೆದಾರ ಸಿನ್ಹ ಹಾಕಿದ್ದ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ್ದ ಕೇರಳದ ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ಅವರು ” ಈ ಪುಸ್ತಕವನ್ನು ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿಲ್ಲ ಎಂದು ಹೇಳಿದ್ದಾರೆ. “ಈ ಪುಸ್ತಕವನ್ನು ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿಲ್ಲ. ಇದು ರಾಜ್ಯದ ವಿರುದ್ಧ ದ್ವೇಷ ಹರಡುವ ಮತ್ತೊಂದು ಪ್ರಯತ್ನವಾಗಿದೆ. ನಮ್ಮ ಪರಿಚಯವಿರುವವರಿಗೆ ಕೇರಳಿಗರ ನಡುವಿನ ಸೌಹಾರ್ದತೆ ಮತ್ತು ಏಕತೆ ಅರ್ಥವಾಗುತ್ತದೆ. ದ್ವೇಷಕ್ಕೆ ಅವಕಾಶವಿಲ್ಲ, ಕೋಮುವಾದಿ ಕಾರ್ಯಸೂಚಿ ರಾಜ್ಯದಲ್ಲಿ ಬೇರೂರಲು ಏಕೆ ವಿಫಲವಾಗಿದೆ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ಅಂಶವೇನೆಂದರೆ, ಎಕ್ಸ್ ಬಳಕೆದಾರ ಸಿನ್ಹ ಹಂಚಿಕೊಂಡ ಶಾಲಾ ಪಠ್ಯ ಪುಸ್ತಕದ ಫೋಟೋ ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿದ ಅಥವಾ ವಿತರಿಸಿದ ಪುಸ್ತಕದ್ದಲ್ಲ. ಇದು ಎರ್ನಾಕುಲಂನ ಪೀಸ್ ಇಂಟರ್ನ್ಯಾಷನಲ್ ಶಾಲೆಯ ಆಡಳಿತ ಮಂಡಳಿ ಮಕ್ಕಳಿಗೆ ವಿತರಿಸಿದ್ದ ಪುಸ್ತಕ. ಆ ಶಾಲೆಯನ್ನು ಮುಚ್ಚಲು ಕಮ್ಯುನಿಷ್ಠ್ ಪಕ್ಷದ ನೇತೃತ್ವದ ಕೇರಳ ಸರ್ಕಾರದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 2018ರ ಜನವರಿಯಲ್ಲಿ ಆದೇಶಿಸಿದ್ದರು.

ಹಲವು ಆರೋಪಗಳು ಕೇಳಿ ಬಂದ ಬಳಿಕ ಕೇರಳದ ಎಲ್ಲಾ ಪೀಸ್ ಇಂಟರ್ನ್ಯಾಷನಲ್ ಶಾಲೆಗಳನ್ನು ಮುಚ್ಚಲಾಗಿದೆ ಎಂಬ ವರದಿಗಳಿವೆ. ಈ ಬಗ್ಗೆ ಖಚಿತ ಮಾಹಿತಿ ನಮಗೆ ಲಭ್ಯವಾಗಿಲ್ಲ. ಈ ಪೀಸ್ ಇಂಟರ್ನ್ಯಾಷನಲ್ ಶಾಲೆಗಳ ಮಾಲೀಕ ಎಂ.ಎಂ ಅಕ್ಬರ್. ಈ ವ್ಯಕ್ತಿಯನ್ನು ಕೇರಳದ ಝಾಕಿರ್ ನಾಯ್ಕ್ ಎಂದೇ ಹೇಳಲಾಗುತ್ತದೆ. ಇಸ್ಲಾಮಿಕ್ ವಿದ್ವಾಂಸ ಎಂದು ಗುರುತಿಸಿಕೊಂಡಿದ್ದ ಝಾಕಿರ್ ನಾಯ್ಕ್‌ ಪ್ರಸ್ತುತ ಹೊರ ದೇಶದಲ್ಲಿದ್ದಾರೆ. ಝಾಕಿರ್ ನಾಯ್ಕ್ ಮತ್ತು ಎಂ.ಎಂ ಅಕ್ಬರ್ ಇಬ್ಬರೂ ಕೂಡ ಇಸ್ಲಾಮಿನ ನೂತನವಾದಿ ಪಂಗಡ ಎಂದು ಗುರುತಿಸಲಾಗಿರುವ ಸಲಫಿ ಸಿದ್ದಾಂತದ ಬೋಧಕರಾಗಿದ್ದಾರೆ. ಇವರ ವಾದಗಳನ್ನು ಸುನ್ನೀ ಪಂಥದ ಮುಸ್ಲಿಮರು ಕಟುವಾಗಿ ವಿರೋಧಿಸುತ್ತಾರೆ. ಝಾಕಿರ್ ನಾಯ್ಕ್‌ ಕೂಡ ಪೀಸ್ ಹೆಸರಿನ ಸಂಸ್ಥೆಗಳನ್ನು ನಡೆಸುತ್ತಿದ್ದರು. ಅವುಗಳ ಮೇಲೆಯೂ ಹಲವು ಆರೋಪಗಳು ಕೇಳಿ ಬಂದಿತ್ತು.

ಇದನ್ನೂ ಓದಿ : Fact Check : ‘ಮಹಿಳಾ ಮೀಸಲಾತಿ ಮಸೂದೆ’ಯಿಂದ ಟಿಕೆಟ್ ಸಿಕ್ಕಿದೆ ಎಂಬ ಕಂಗನಾ ರಣಾವತ್ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...