HomeUncategorizedFact Check : ಕೇರಳ ಸರ್ಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಹಿಂದೂಗಳನ್ನು ಕೀಳಾಗಿ ಚಿತ್ರಿಸಿದೆ ಎಂಬುವುದು...

Fact Check : ಕೇರಳ ಸರ್ಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಹಿಂದೂಗಳನ್ನು ಕೀಳಾಗಿ ಚಿತ್ರಿಸಿದೆ ಎಂಬುವುದು ಸುಳ್ಳು

- Advertisement -
- Advertisement -

“ಮುಸ್ಲಿಂ ಅಸ್ಲಂ: ಸ್ವಚ್ಚ ಇರುವವರು, ನಾವು ಅವರ ಅಂಗಡಿಯಿಂದ ಸಿಹಿ ತಿನಿಸು ಖರೀದಿಸಬಹುದು.”
“ಹಿಂದೂ ಅಪ್ಪನ್ : ಸ್ವಚ್ಚ ಇಲ್ಲದಿರುವವರು, ಇವರಿಂದ ಯಾರೂ ಕೂಡ ಸಿಹಿ ತಿನಿಸು ಖರೀದಿಸಬಾರದು.”

“ಮುಸ್ಲಿಂ ಆದಿಲ್: ಸ್ವಚ್ಚವಾಗಿರುವವರು, ಮತ್ತು ಒಳ್ಳೆಯ ಗುಣ ನಡತೆ ಹೊಂದಿರುವವರು”
“ಹಿಂದೂ ಅಭಿಮನ್ಯು : ಸ್ವಚ್ಚ ಇಲ್ಲದಿರುವವರು, ಅವರು ಸ್ನಾನ ಮಾಡಲ್ಲ, ಕೆಟ್ಟ ವಾಸನೆ ಬರುತ್ತಾರೆ.”

“ಇದು ಕೇರಳದ ಶಾಲೆಗಳಲ್ಲಿ ಮಕ್ಕಳಿಗೆ ಮಾಡುವ ಪಾಠ. ಇದು ಕಮ್ಯುನಿಷ್ಠರು ಸಣ್ಣ ಮಕ್ಕಳನ್ನು ಬ್ರೈನ್ ವಾಶ್ ಮಾಡುವ ರೀತಿ” ಎಂದು ಪ್ರತಿಪಾದಿಸಿ ಮಿ.ಸಿನ್ಹ (ಮೋದಿ ಫ್ಯಾಮಿಲಿ) ಎಂಬ ಎಕ್ಸ್ ಬಳಕೆದಾರ ಪುಸ್ತಕವೊಂದರ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಕೇರಳದ ಸರ್ಕಾರ ಅಧಿಕೃತವಾಗಿ ಶಾಲಾ ಮಕ್ಕಳಿಗೆ ವಿತರಿಸಿದ ಪಾಠ ಪುಸ್ತಕಗಳಲ್ಲಿ ಈ ರೀತಿಯಿದೆ ಎಂಬರ್ಥದಲ್ಲಿ ಸಿನ್ಹ ಸುದ್ದಿ ಹಬ್ಬಿಸಿದ್ದಾರೆ.

ಫ್ಯಾಕ್ಟ್‌ ಚೆಕ್ : ಎಕ್ಸ್ ಪೋಸ್ಟ್‌ನಲ್ಲಿರುವ ಹೇಳಿರುವ ವಿಷಯದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದಾಗ, ಇದು ಕೇರಳದ ಪೀಸ್ ಇಂಟರ್ನ್ಯಾಷನಲ್ ಸಮೂಹ ಶಿಕ್ಷಣ ಸಂಸ್ಥೆಗಳ ಪಠ್ಯ ಪುಸ್ತಕದ ಫೋಟೋ ಎಂದು ಗೊತ್ತಾಗಿದೆ.

ಕೇರಳದ ಎರ್ನಾಕುಲಂ ಕೆಂದ್ರವಾಗಿ ಕಾರ್ಯಾಚರಿಸುತ್ತಿದ್ದ ‘ಪೀಸ್ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್‌’ ರಾಜ್ಯಾದ್ಯಂತ ಪೀಸ್ ಇಂಟರ್ನ್ಯಾಷನಲ್ ಎಂಬ ಹೆಸರಿನ ಹಲವು ಶಾಲೆಗಳನ್ನು ನಡೆಸುತ್ತಿತ್ತು.

ಅಕ್ಟೋಬರ್ 8, 2016 ರಂದು ಮಲಯಾಳಂ ಸುದ್ದಿ ವೆಬ್‌ಸೈಟ್‌ ‘ಆನ್ ಮನೋರಮಾ‘ದಲ್ಲಿ ಪ್ರಕಟವಾದ ವರದಿಯ ಪ್ರಕಾರ, ನಾವು ಮೇಲೆ ಉಲ್ಲೇಖಿಸಿದ ಆಕ್ಷೇಪಾರ್ಹ ವಿಷಯವನ್ನು ಬೋಧಿಸಿದ್ದಕ್ಕಾಗಿ ಪೀಸ್ ಎಜುಕೇಷನಲ್ ಫೌಂಡೇಶನ್ ನಡೆಸುತ್ತಿದ್ದ ಎರ್ನಾಕುಲಂನ ತಮ್ಮನಮ್‌ಲ್ಲಿದ್ದ ಪೀಸ್ ಇಂಟರ್ನ್ಯಾಷನಲ್ ಸ್ಕೂಲ್ ವಿರುದ್ಧ ಪ್ರಕರಣ ದಾಖಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಜನವರಿ 4, 2018 ರಂದು ‘ಮಾತೃಭೂಮಿ‘ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿ ಪ್ರಕಾರ, ಪಠ್ಯ ಪುಸ್ತಕದಲ್ಲಿ ಆಕ್ಷೇಪಾರ್ಹ ಮತ್ತು ಜಾತ್ಯತೀತವಲ್ಲದ ವಿಷಯ ಪ್ರಕಟಿಸಿ, ಬೋಧಿಸಿದ ಎರ್ನಾಕುಲಂನ ಪೀಸ್ ಇಂಟರ್‌ನ್ಯಾಷನಲ್ ಸ್ಕೂಲ್ ಅನ್ನು ಮುಚ್ಚಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆದೇಶಿಸಿದ್ದಾರೆ.

ಸುದ್ದಿ ಲಿಂಕ್ ಇಲ್ಲಿದೆ 

ಕೋಮು ವಿಷಯಗಳನ್ನು ಕಲಿಸಿದ್ದಕ್ಕಾಗಿ ಎರ್ನಾಕುಲಂನ ವಿವಾದಾತ್ಮಕ ಪೀಸ್ ಇಂಟರ್ನ್ಯಾಷನಲ್ ಶಾಲೆಯನ್ನು ಮುಚ್ಚಲು ಕೇರಳ ಸರ್ಕಾರ 2018ರ ಜನವರಿಯಲ್ಲಿ ಆದೇಶಿಸಿತ್ತು. ಎರ್ನಾಕುಲಂ ಶಾಖೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಬೇರೆ ಶಾಲೆಗಳಿಗೆ ಸ್ಥಳಾಂತರಿಸಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಎರ್ನಾಕುಲಂನ ಪೀಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಕಲಿಸುವ ಪಠ್ಯಕ್ರಮದ ಭಾಗವಾಗಿರುವ ಆಕ್ಷೇಪಾರ್ಹ ವಿಷಯಗಳೊಂದಿಗೆ ಪಠ್ಯಪುಸ್ತಕಗಳನ್ನು ಮುದ್ರಿಸಿದ್ದಕ್ಕಾಗಿ ಕೊಚ್ಚಿ ನಗರ ಪೊಲೀಸರು ಡಿಸೆಂಬರ್ 3, 2016 ರಂದು ಮುಂಬೈ ಮೂಲದ ಮೂವರು ಪ್ರಕಾಶಕರನ್ನು ಬಂಧಿಸಿದ್ದರು ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಹೇಳಿತ್ತು.

ಸುದ್ದಿ ಲಿಂಕ್ ಇಲ್ಲಿದೆ 

ಎಕ್ಸ್ ಬಳಕೆದಾರ ಸಿನ್ಹ ಹಾಕಿದ್ದ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ್ದ ಕೇರಳದ ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ಅವರು ” ಈ ಪುಸ್ತಕವನ್ನು ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿಲ್ಲ ಎಂದು ಹೇಳಿದ್ದಾರೆ. “ಈ ಪುಸ್ತಕವನ್ನು ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿಲ್ಲ. ಇದು ರಾಜ್ಯದ ವಿರುದ್ಧ ದ್ವೇಷ ಹರಡುವ ಮತ್ತೊಂದು ಪ್ರಯತ್ನವಾಗಿದೆ. ನಮ್ಮ ಪರಿಚಯವಿರುವವರಿಗೆ ಕೇರಳಿಗರ ನಡುವಿನ ಸೌಹಾರ್ದತೆ ಮತ್ತು ಏಕತೆ ಅರ್ಥವಾಗುತ್ತದೆ. ದ್ವೇಷಕ್ಕೆ ಅವಕಾಶವಿಲ್ಲ, ಕೋಮುವಾದಿ ಕಾರ್ಯಸೂಚಿ ರಾಜ್ಯದಲ್ಲಿ ಬೇರೂರಲು ಏಕೆ ವಿಫಲವಾಗಿದೆ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ಅಂಶವೇನೆಂದರೆ, ಎಕ್ಸ್ ಬಳಕೆದಾರ ಸಿನ್ಹ ಹಂಚಿಕೊಂಡ ಶಾಲಾ ಪಠ್ಯ ಪುಸ್ತಕದ ಫೋಟೋ ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿದ ಅಥವಾ ವಿತರಿಸಿದ ಪುಸ್ತಕದ್ದಲ್ಲ. ಇದು ಎರ್ನಾಕುಲಂನ ಪೀಸ್ ಇಂಟರ್ನ್ಯಾಷನಲ್ ಶಾಲೆಯ ಆಡಳಿತ ಮಂಡಳಿ ಮಕ್ಕಳಿಗೆ ವಿತರಿಸಿದ್ದ ಪುಸ್ತಕ. ಆ ಶಾಲೆಯನ್ನು ಮುಚ್ಚಲು ಕಮ್ಯುನಿಷ್ಠ್ ಪಕ್ಷದ ನೇತೃತ್ವದ ಕೇರಳ ಸರ್ಕಾರದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 2018ರ ಜನವರಿಯಲ್ಲಿ ಆದೇಶಿಸಿದ್ದರು.

ಹಲವು ಆರೋಪಗಳು ಕೇಳಿ ಬಂದ ಬಳಿಕ ಕೇರಳದ ಎಲ್ಲಾ ಪೀಸ್ ಇಂಟರ್ನ್ಯಾಷನಲ್ ಶಾಲೆಗಳನ್ನು ಮುಚ್ಚಲಾಗಿದೆ ಎಂಬ ವರದಿಗಳಿವೆ. ಈ ಬಗ್ಗೆ ಖಚಿತ ಮಾಹಿತಿ ನಮಗೆ ಲಭ್ಯವಾಗಿಲ್ಲ. ಈ ಪೀಸ್ ಇಂಟರ್ನ್ಯಾಷನಲ್ ಶಾಲೆಗಳ ಮಾಲೀಕ ಎಂ.ಎಂ ಅಕ್ಬರ್. ಈ ವ್ಯಕ್ತಿಯನ್ನು ಕೇರಳದ ಝಾಕಿರ್ ನಾಯ್ಕ್ ಎಂದೇ ಹೇಳಲಾಗುತ್ತದೆ. ಇಸ್ಲಾಮಿಕ್ ವಿದ್ವಾಂಸ ಎಂದು ಗುರುತಿಸಿಕೊಂಡಿದ್ದ ಝಾಕಿರ್ ನಾಯ್ಕ್‌ ಪ್ರಸ್ತುತ ಹೊರ ದೇಶದಲ್ಲಿದ್ದಾರೆ. ಝಾಕಿರ್ ನಾಯ್ಕ್ ಮತ್ತು ಎಂ.ಎಂ ಅಕ್ಬರ್ ಇಬ್ಬರೂ ಕೂಡ ಇಸ್ಲಾಮಿನ ನೂತನವಾದಿ ಪಂಗಡ ಎಂದು ಗುರುತಿಸಲಾಗಿರುವ ಸಲಫಿ ಸಿದ್ದಾಂತದ ಬೋಧಕರಾಗಿದ್ದಾರೆ. ಇವರ ವಾದಗಳನ್ನು ಸುನ್ನೀ ಪಂಥದ ಮುಸ್ಲಿಮರು ಕಟುವಾಗಿ ವಿರೋಧಿಸುತ್ತಾರೆ. ಝಾಕಿರ್ ನಾಯ್ಕ್‌ ಕೂಡ ಪೀಸ್ ಹೆಸರಿನ ಸಂಸ್ಥೆಗಳನ್ನು ನಡೆಸುತ್ತಿದ್ದರು. ಅವುಗಳ ಮೇಲೆಯೂ ಹಲವು ಆರೋಪಗಳು ಕೇಳಿ ಬಂದಿತ್ತು.

ಇದನ್ನೂ ಓದಿ : Fact Check : ‘ಮಹಿಳಾ ಮೀಸಲಾತಿ ಮಸೂದೆ’ಯಿಂದ ಟಿಕೆಟ್ ಸಿಕ್ಕಿದೆ ಎಂಬ ಕಂಗನಾ ರಣಾವತ್ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...

‘ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ’: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಗಲಕೋಟೆ: ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಾದಿಸಿದರು.  ಮಾರ್ಚ್ 14ರಂದು, ಬಾಗಲಕೋಟೆ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಸಂಶೋಧನಾ...

ಮಣಿಪುರ ಹಿಂಸಾಚಾರ: ಕಾಮ್ಜಾಂಗ್‌ನಲ್ಲಿ ಇಬ್ಬರು ಕುಕಿ ಪುರುಷರು ಶವವಾಗಿ ಪತ್ತೆ; ಹೆಚ್ಚಿದ ಉದ್ವಿಗ್ನತೆ 

ಮಣಿಪುರದ ಕಾಮ್ಜಾಂಗ್ ಜಿಲ್ಲೆಯಲ್ಲಿ ಬುಧವಾರದಿಂದ ನಾಪತ್ತೆಯಾಗಿದ್ದ ಇಬ್ಬರು ಕುಕಿ ಪುರುಷರು ಗುರುವಾರ ಥವಾಯ್ ಕುಕಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಶವವಾಗಿ ಪತ್ತೆಯಾಗಿದ್ದರಿಂದ ಉದ್ವಿಗ್ನತೆ ಹೆಚ್ಚಾಗಿದೆ. ಜಿಲ್ಲೆಯ ಥಾವಾಯಿ ಕುಕಿ ಗ್ರಾಮದ 42 ವರ್ಷದ ಥೇಂಗಿನ್...

ಉತ್ತರ ಪ್ರದೇಶ | ಮುಸ್ಲಿಮರೊಂದಿಗಿನ ಶಾಂತಿ ಸಭೆಯಲ್ಲಿ ‘ಇರಾನ್‌ಗೆ ಹೋಗಿ’ ಎಂದ ಪೊಲೀಸ್‌ ಅಧಿಕಾರಿ : ತೀವ್ರ ಆಕ್ರೋಶ

ಉತ್ತರ ಪ್ರದೇಶದಲ್ಲಿ ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು ನೀಡಿದ ಹೇಳಿಕೆ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭಾಲ್ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ ರಂಝಾನ್ ತಿಂಗಳ ಕೊನೆಯ...

ಪಶ್ಚಿಮ ಏಷ್ಯಾ ಸಂಘರ್ಷ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...