HomeUncategorizedFact Check : ಕೇರಳ ಸರ್ಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಹಿಂದೂಗಳನ್ನು ಕೀಳಾಗಿ ಚಿತ್ರಿಸಿದೆ ಎಂಬುವುದು...

Fact Check : ಕೇರಳ ಸರ್ಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಹಿಂದೂಗಳನ್ನು ಕೀಳಾಗಿ ಚಿತ್ರಿಸಿದೆ ಎಂಬುವುದು ಸುಳ್ಳು

- Advertisement -
- Advertisement -

“ಮುಸ್ಲಿಂ ಅಸ್ಲಂ: ಸ್ವಚ್ಚ ಇರುವವರು, ನಾವು ಅವರ ಅಂಗಡಿಯಿಂದ ಸಿಹಿ ತಿನಿಸು ಖರೀದಿಸಬಹುದು.”
“ಹಿಂದೂ ಅಪ್ಪನ್ : ಸ್ವಚ್ಚ ಇಲ್ಲದಿರುವವರು, ಇವರಿಂದ ಯಾರೂ ಕೂಡ ಸಿಹಿ ತಿನಿಸು ಖರೀದಿಸಬಾರದು.”

“ಮುಸ್ಲಿಂ ಆದಿಲ್: ಸ್ವಚ್ಚವಾಗಿರುವವರು, ಮತ್ತು ಒಳ್ಳೆಯ ಗುಣ ನಡತೆ ಹೊಂದಿರುವವರು”
“ಹಿಂದೂ ಅಭಿಮನ್ಯು : ಸ್ವಚ್ಚ ಇಲ್ಲದಿರುವವರು, ಅವರು ಸ್ನಾನ ಮಾಡಲ್ಲ, ಕೆಟ್ಟ ವಾಸನೆ ಬರುತ್ತಾರೆ.”

“ಇದು ಕೇರಳದ ಶಾಲೆಗಳಲ್ಲಿ ಮಕ್ಕಳಿಗೆ ಮಾಡುವ ಪಾಠ. ಇದು ಕಮ್ಯುನಿಷ್ಠರು ಸಣ್ಣ ಮಕ್ಕಳನ್ನು ಬ್ರೈನ್ ವಾಶ್ ಮಾಡುವ ರೀತಿ” ಎಂದು ಪ್ರತಿಪಾದಿಸಿ ಮಿ.ಸಿನ್ಹ (ಮೋದಿ ಫ್ಯಾಮಿಲಿ) ಎಂಬ ಎಕ್ಸ್ ಬಳಕೆದಾರ ಪುಸ್ತಕವೊಂದರ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಕೇರಳದ ಸರ್ಕಾರ ಅಧಿಕೃತವಾಗಿ ಶಾಲಾ ಮಕ್ಕಳಿಗೆ ವಿತರಿಸಿದ ಪಾಠ ಪುಸ್ತಕಗಳಲ್ಲಿ ಈ ರೀತಿಯಿದೆ ಎಂಬರ್ಥದಲ್ಲಿ ಸಿನ್ಹ ಸುದ್ದಿ ಹಬ್ಬಿಸಿದ್ದಾರೆ.

ಫ್ಯಾಕ್ಟ್‌ ಚೆಕ್ : ಎಕ್ಸ್ ಪೋಸ್ಟ್‌ನಲ್ಲಿರುವ ಹೇಳಿರುವ ವಿಷಯದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದಾಗ, ಇದು ಕೇರಳದ ಪೀಸ್ ಇಂಟರ್ನ್ಯಾಷನಲ್ ಸಮೂಹ ಶಿಕ್ಷಣ ಸಂಸ್ಥೆಗಳ ಪಠ್ಯ ಪುಸ್ತಕದ ಫೋಟೋ ಎಂದು ಗೊತ್ತಾಗಿದೆ.

ಕೇರಳದ ಎರ್ನಾಕುಲಂ ಕೆಂದ್ರವಾಗಿ ಕಾರ್ಯಾಚರಿಸುತ್ತಿದ್ದ ‘ಪೀಸ್ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್‌’ ರಾಜ್ಯಾದ್ಯಂತ ಪೀಸ್ ಇಂಟರ್ನ್ಯಾಷನಲ್ ಎಂಬ ಹೆಸರಿನ ಹಲವು ಶಾಲೆಗಳನ್ನು ನಡೆಸುತ್ತಿತ್ತು.

ಅಕ್ಟೋಬರ್ 8, 2016 ರಂದು ಮಲಯಾಳಂ ಸುದ್ದಿ ವೆಬ್‌ಸೈಟ್‌ ‘ಆನ್ ಮನೋರಮಾ‘ದಲ್ಲಿ ಪ್ರಕಟವಾದ ವರದಿಯ ಪ್ರಕಾರ, ನಾವು ಮೇಲೆ ಉಲ್ಲೇಖಿಸಿದ ಆಕ್ಷೇಪಾರ್ಹ ವಿಷಯವನ್ನು ಬೋಧಿಸಿದ್ದಕ್ಕಾಗಿ ಪೀಸ್ ಎಜುಕೇಷನಲ್ ಫೌಂಡೇಶನ್ ನಡೆಸುತ್ತಿದ್ದ ಎರ್ನಾಕುಲಂನ ತಮ್ಮನಮ್‌ಲ್ಲಿದ್ದ ಪೀಸ್ ಇಂಟರ್ನ್ಯಾಷನಲ್ ಸ್ಕೂಲ್ ವಿರುದ್ಧ ಪ್ರಕರಣ ದಾಖಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಜನವರಿ 4, 2018 ರಂದು ‘ಮಾತೃಭೂಮಿ‘ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿ ಪ್ರಕಾರ, ಪಠ್ಯ ಪುಸ್ತಕದಲ್ಲಿ ಆಕ್ಷೇಪಾರ್ಹ ಮತ್ತು ಜಾತ್ಯತೀತವಲ್ಲದ ವಿಷಯ ಪ್ರಕಟಿಸಿ, ಬೋಧಿಸಿದ ಎರ್ನಾಕುಲಂನ ಪೀಸ್ ಇಂಟರ್‌ನ್ಯಾಷನಲ್ ಸ್ಕೂಲ್ ಅನ್ನು ಮುಚ್ಚಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆದೇಶಿಸಿದ್ದಾರೆ.

ಸುದ್ದಿ ಲಿಂಕ್ ಇಲ್ಲಿದೆ 

ಕೋಮು ವಿಷಯಗಳನ್ನು ಕಲಿಸಿದ್ದಕ್ಕಾಗಿ ಎರ್ನಾಕುಲಂನ ವಿವಾದಾತ್ಮಕ ಪೀಸ್ ಇಂಟರ್ನ್ಯಾಷನಲ್ ಶಾಲೆಯನ್ನು ಮುಚ್ಚಲು ಕೇರಳ ಸರ್ಕಾರ 2018ರ ಜನವರಿಯಲ್ಲಿ ಆದೇಶಿಸಿತ್ತು. ಎರ್ನಾಕುಲಂ ಶಾಖೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಬೇರೆ ಶಾಲೆಗಳಿಗೆ ಸ್ಥಳಾಂತರಿಸಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಎರ್ನಾಕುಲಂನ ಪೀಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಕಲಿಸುವ ಪಠ್ಯಕ್ರಮದ ಭಾಗವಾಗಿರುವ ಆಕ್ಷೇಪಾರ್ಹ ವಿಷಯಗಳೊಂದಿಗೆ ಪಠ್ಯಪುಸ್ತಕಗಳನ್ನು ಮುದ್ರಿಸಿದ್ದಕ್ಕಾಗಿ ಕೊಚ್ಚಿ ನಗರ ಪೊಲೀಸರು ಡಿಸೆಂಬರ್ 3, 2016 ರಂದು ಮುಂಬೈ ಮೂಲದ ಮೂವರು ಪ್ರಕಾಶಕರನ್ನು ಬಂಧಿಸಿದ್ದರು ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಹೇಳಿತ್ತು.

ಸುದ್ದಿ ಲಿಂಕ್ ಇಲ್ಲಿದೆ 

ಎಕ್ಸ್ ಬಳಕೆದಾರ ಸಿನ್ಹ ಹಾಕಿದ್ದ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ್ದ ಕೇರಳದ ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ಅವರು ” ಈ ಪುಸ್ತಕವನ್ನು ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿಲ್ಲ ಎಂದು ಹೇಳಿದ್ದಾರೆ. “ಈ ಪುಸ್ತಕವನ್ನು ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿಲ್ಲ. ಇದು ರಾಜ್ಯದ ವಿರುದ್ಧ ದ್ವೇಷ ಹರಡುವ ಮತ್ತೊಂದು ಪ್ರಯತ್ನವಾಗಿದೆ. ನಮ್ಮ ಪರಿಚಯವಿರುವವರಿಗೆ ಕೇರಳಿಗರ ನಡುವಿನ ಸೌಹಾರ್ದತೆ ಮತ್ತು ಏಕತೆ ಅರ್ಥವಾಗುತ್ತದೆ. ದ್ವೇಷಕ್ಕೆ ಅವಕಾಶವಿಲ್ಲ, ಕೋಮುವಾದಿ ಕಾರ್ಯಸೂಚಿ ರಾಜ್ಯದಲ್ಲಿ ಬೇರೂರಲು ಏಕೆ ವಿಫಲವಾಗಿದೆ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ಅಂಶವೇನೆಂದರೆ, ಎಕ್ಸ್ ಬಳಕೆದಾರ ಸಿನ್ಹ ಹಂಚಿಕೊಂಡ ಶಾಲಾ ಪಠ್ಯ ಪುಸ್ತಕದ ಫೋಟೋ ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿದ ಅಥವಾ ವಿತರಿಸಿದ ಪುಸ್ತಕದ್ದಲ್ಲ. ಇದು ಎರ್ನಾಕುಲಂನ ಪೀಸ್ ಇಂಟರ್ನ್ಯಾಷನಲ್ ಶಾಲೆಯ ಆಡಳಿತ ಮಂಡಳಿ ಮಕ್ಕಳಿಗೆ ವಿತರಿಸಿದ್ದ ಪುಸ್ತಕ. ಆ ಶಾಲೆಯನ್ನು ಮುಚ್ಚಲು ಕಮ್ಯುನಿಷ್ಠ್ ಪಕ್ಷದ ನೇತೃತ್ವದ ಕೇರಳ ಸರ್ಕಾರದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 2018ರ ಜನವರಿಯಲ್ಲಿ ಆದೇಶಿಸಿದ್ದರು.

ಹಲವು ಆರೋಪಗಳು ಕೇಳಿ ಬಂದ ಬಳಿಕ ಕೇರಳದ ಎಲ್ಲಾ ಪೀಸ್ ಇಂಟರ್ನ್ಯಾಷನಲ್ ಶಾಲೆಗಳನ್ನು ಮುಚ್ಚಲಾಗಿದೆ ಎಂಬ ವರದಿಗಳಿವೆ. ಈ ಬಗ್ಗೆ ಖಚಿತ ಮಾಹಿತಿ ನಮಗೆ ಲಭ್ಯವಾಗಿಲ್ಲ. ಈ ಪೀಸ್ ಇಂಟರ್ನ್ಯಾಷನಲ್ ಶಾಲೆಗಳ ಮಾಲೀಕ ಎಂ.ಎಂ ಅಕ್ಬರ್. ಈ ವ್ಯಕ್ತಿಯನ್ನು ಕೇರಳದ ಝಾಕಿರ್ ನಾಯ್ಕ್ ಎಂದೇ ಹೇಳಲಾಗುತ್ತದೆ. ಇಸ್ಲಾಮಿಕ್ ವಿದ್ವಾಂಸ ಎಂದು ಗುರುತಿಸಿಕೊಂಡಿದ್ದ ಝಾಕಿರ್ ನಾಯ್ಕ್‌ ಪ್ರಸ್ತುತ ಹೊರ ದೇಶದಲ್ಲಿದ್ದಾರೆ. ಝಾಕಿರ್ ನಾಯ್ಕ್ ಮತ್ತು ಎಂ.ಎಂ ಅಕ್ಬರ್ ಇಬ್ಬರೂ ಕೂಡ ಇಸ್ಲಾಮಿನ ನೂತನವಾದಿ ಪಂಗಡ ಎಂದು ಗುರುತಿಸಲಾಗಿರುವ ಸಲಫಿ ಸಿದ್ದಾಂತದ ಬೋಧಕರಾಗಿದ್ದಾರೆ. ಇವರ ವಾದಗಳನ್ನು ಸುನ್ನೀ ಪಂಥದ ಮುಸ್ಲಿಮರು ಕಟುವಾಗಿ ವಿರೋಧಿಸುತ್ತಾರೆ. ಝಾಕಿರ್ ನಾಯ್ಕ್‌ ಕೂಡ ಪೀಸ್ ಹೆಸರಿನ ಸಂಸ್ಥೆಗಳನ್ನು ನಡೆಸುತ್ತಿದ್ದರು. ಅವುಗಳ ಮೇಲೆಯೂ ಹಲವು ಆರೋಪಗಳು ಕೇಳಿ ಬಂದಿತ್ತು.

ಇದನ್ನೂ ಓದಿ : Fact Check : ‘ಮಹಿಳಾ ಮೀಸಲಾತಿ ಮಸೂದೆ’ಯಿಂದ ಟಿಕೆಟ್ ಸಿಕ್ಕಿದೆ ಎಂಬ ಕಂಗನಾ ರಣಾವತ್ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...