HomeUncategorizedFact Check : ಕೇರಳ ಸರ್ಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಹಿಂದೂಗಳನ್ನು ಕೀಳಾಗಿ ಚಿತ್ರಿಸಿದೆ ಎಂಬುವುದು...

Fact Check : ಕೇರಳ ಸರ್ಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಹಿಂದೂಗಳನ್ನು ಕೀಳಾಗಿ ಚಿತ್ರಿಸಿದೆ ಎಂಬುವುದು ಸುಳ್ಳು

- Advertisement -
- Advertisement -

“ಮುಸ್ಲಿಂ ಅಸ್ಲಂ: ಸ್ವಚ್ಚ ಇರುವವರು, ನಾವು ಅವರ ಅಂಗಡಿಯಿಂದ ಸಿಹಿ ತಿನಿಸು ಖರೀದಿಸಬಹುದು.”
“ಹಿಂದೂ ಅಪ್ಪನ್ : ಸ್ವಚ್ಚ ಇಲ್ಲದಿರುವವರು, ಇವರಿಂದ ಯಾರೂ ಕೂಡ ಸಿಹಿ ತಿನಿಸು ಖರೀದಿಸಬಾರದು.”

“ಮುಸ್ಲಿಂ ಆದಿಲ್: ಸ್ವಚ್ಚವಾಗಿರುವವರು, ಮತ್ತು ಒಳ್ಳೆಯ ಗುಣ ನಡತೆ ಹೊಂದಿರುವವರು”
“ಹಿಂದೂ ಅಭಿಮನ್ಯು : ಸ್ವಚ್ಚ ಇಲ್ಲದಿರುವವರು, ಅವರು ಸ್ನಾನ ಮಾಡಲ್ಲ, ಕೆಟ್ಟ ವಾಸನೆ ಬರುತ್ತಾರೆ.”

“ಇದು ಕೇರಳದ ಶಾಲೆಗಳಲ್ಲಿ ಮಕ್ಕಳಿಗೆ ಮಾಡುವ ಪಾಠ. ಇದು ಕಮ್ಯುನಿಷ್ಠರು ಸಣ್ಣ ಮಕ್ಕಳನ್ನು ಬ್ರೈನ್ ವಾಶ್ ಮಾಡುವ ರೀತಿ” ಎಂದು ಪ್ರತಿಪಾದಿಸಿ ಮಿ.ಸಿನ್ಹ (ಮೋದಿ ಫ್ಯಾಮಿಲಿ) ಎಂಬ ಎಕ್ಸ್ ಬಳಕೆದಾರ ಪುಸ್ತಕವೊಂದರ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಕೇರಳದ ಸರ್ಕಾರ ಅಧಿಕೃತವಾಗಿ ಶಾಲಾ ಮಕ್ಕಳಿಗೆ ವಿತರಿಸಿದ ಪಾಠ ಪುಸ್ತಕಗಳಲ್ಲಿ ಈ ರೀತಿಯಿದೆ ಎಂಬರ್ಥದಲ್ಲಿ ಸಿನ್ಹ ಸುದ್ದಿ ಹಬ್ಬಿಸಿದ್ದಾರೆ.

ಫ್ಯಾಕ್ಟ್‌ ಚೆಕ್ : ಎಕ್ಸ್ ಪೋಸ್ಟ್‌ನಲ್ಲಿರುವ ಹೇಳಿರುವ ವಿಷಯದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದಾಗ, ಇದು ಕೇರಳದ ಪೀಸ್ ಇಂಟರ್ನ್ಯಾಷನಲ್ ಸಮೂಹ ಶಿಕ್ಷಣ ಸಂಸ್ಥೆಗಳ ಪಠ್ಯ ಪುಸ್ತಕದ ಫೋಟೋ ಎಂದು ಗೊತ್ತಾಗಿದೆ.

ಕೇರಳದ ಎರ್ನಾಕುಲಂ ಕೆಂದ್ರವಾಗಿ ಕಾರ್ಯಾಚರಿಸುತ್ತಿದ್ದ ‘ಪೀಸ್ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್‌’ ರಾಜ್ಯಾದ್ಯಂತ ಪೀಸ್ ಇಂಟರ್ನ್ಯಾಷನಲ್ ಎಂಬ ಹೆಸರಿನ ಹಲವು ಶಾಲೆಗಳನ್ನು ನಡೆಸುತ್ತಿತ್ತು.

ಅಕ್ಟೋಬರ್ 8, 2016 ರಂದು ಮಲಯಾಳಂ ಸುದ್ದಿ ವೆಬ್‌ಸೈಟ್‌ ‘ಆನ್ ಮನೋರಮಾ‘ದಲ್ಲಿ ಪ್ರಕಟವಾದ ವರದಿಯ ಪ್ರಕಾರ, ನಾವು ಮೇಲೆ ಉಲ್ಲೇಖಿಸಿದ ಆಕ್ಷೇಪಾರ್ಹ ವಿಷಯವನ್ನು ಬೋಧಿಸಿದ್ದಕ್ಕಾಗಿ ಪೀಸ್ ಎಜುಕೇಷನಲ್ ಫೌಂಡೇಶನ್ ನಡೆಸುತ್ತಿದ್ದ ಎರ್ನಾಕುಲಂನ ತಮ್ಮನಮ್‌ಲ್ಲಿದ್ದ ಪೀಸ್ ಇಂಟರ್ನ್ಯಾಷನಲ್ ಸ್ಕೂಲ್ ವಿರುದ್ಧ ಪ್ರಕರಣ ದಾಖಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಜನವರಿ 4, 2018 ರಂದು ‘ಮಾತೃಭೂಮಿ‘ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿ ಪ್ರಕಾರ, ಪಠ್ಯ ಪುಸ್ತಕದಲ್ಲಿ ಆಕ್ಷೇಪಾರ್ಹ ಮತ್ತು ಜಾತ್ಯತೀತವಲ್ಲದ ವಿಷಯ ಪ್ರಕಟಿಸಿ, ಬೋಧಿಸಿದ ಎರ್ನಾಕುಲಂನ ಪೀಸ್ ಇಂಟರ್‌ನ್ಯಾಷನಲ್ ಸ್ಕೂಲ್ ಅನ್ನು ಮುಚ್ಚಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆದೇಶಿಸಿದ್ದಾರೆ.

ಸುದ್ದಿ ಲಿಂಕ್ ಇಲ್ಲಿದೆ 

ಕೋಮು ವಿಷಯಗಳನ್ನು ಕಲಿಸಿದ್ದಕ್ಕಾಗಿ ಎರ್ನಾಕುಲಂನ ವಿವಾದಾತ್ಮಕ ಪೀಸ್ ಇಂಟರ್ನ್ಯಾಷನಲ್ ಶಾಲೆಯನ್ನು ಮುಚ್ಚಲು ಕೇರಳ ಸರ್ಕಾರ 2018ರ ಜನವರಿಯಲ್ಲಿ ಆದೇಶಿಸಿತ್ತು. ಎರ್ನಾಕುಲಂ ಶಾಖೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಬೇರೆ ಶಾಲೆಗಳಿಗೆ ಸ್ಥಳಾಂತರಿಸಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಎರ್ನಾಕುಲಂನ ಪೀಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಕಲಿಸುವ ಪಠ್ಯಕ್ರಮದ ಭಾಗವಾಗಿರುವ ಆಕ್ಷೇಪಾರ್ಹ ವಿಷಯಗಳೊಂದಿಗೆ ಪಠ್ಯಪುಸ್ತಕಗಳನ್ನು ಮುದ್ರಿಸಿದ್ದಕ್ಕಾಗಿ ಕೊಚ್ಚಿ ನಗರ ಪೊಲೀಸರು ಡಿಸೆಂಬರ್ 3, 2016 ರಂದು ಮುಂಬೈ ಮೂಲದ ಮೂವರು ಪ್ರಕಾಶಕರನ್ನು ಬಂಧಿಸಿದ್ದರು ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಹೇಳಿತ್ತು.

ಸುದ್ದಿ ಲಿಂಕ್ ಇಲ್ಲಿದೆ 

ಎಕ್ಸ್ ಬಳಕೆದಾರ ಸಿನ್ಹ ಹಾಕಿದ್ದ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ್ದ ಕೇರಳದ ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ಅವರು ” ಈ ಪುಸ್ತಕವನ್ನು ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿಲ್ಲ ಎಂದು ಹೇಳಿದ್ದಾರೆ. “ಈ ಪುಸ್ತಕವನ್ನು ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿಲ್ಲ. ಇದು ರಾಜ್ಯದ ವಿರುದ್ಧ ದ್ವೇಷ ಹರಡುವ ಮತ್ತೊಂದು ಪ್ರಯತ್ನವಾಗಿದೆ. ನಮ್ಮ ಪರಿಚಯವಿರುವವರಿಗೆ ಕೇರಳಿಗರ ನಡುವಿನ ಸೌಹಾರ್ದತೆ ಮತ್ತು ಏಕತೆ ಅರ್ಥವಾಗುತ್ತದೆ. ದ್ವೇಷಕ್ಕೆ ಅವಕಾಶವಿಲ್ಲ, ಕೋಮುವಾದಿ ಕಾರ್ಯಸೂಚಿ ರಾಜ್ಯದಲ್ಲಿ ಬೇರೂರಲು ಏಕೆ ವಿಫಲವಾಗಿದೆ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ಅಂಶವೇನೆಂದರೆ, ಎಕ್ಸ್ ಬಳಕೆದಾರ ಸಿನ್ಹ ಹಂಚಿಕೊಂಡ ಶಾಲಾ ಪಠ್ಯ ಪುಸ್ತಕದ ಫೋಟೋ ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿದ ಅಥವಾ ವಿತರಿಸಿದ ಪುಸ್ತಕದ್ದಲ್ಲ. ಇದು ಎರ್ನಾಕುಲಂನ ಪೀಸ್ ಇಂಟರ್ನ್ಯಾಷನಲ್ ಶಾಲೆಯ ಆಡಳಿತ ಮಂಡಳಿ ಮಕ್ಕಳಿಗೆ ವಿತರಿಸಿದ್ದ ಪುಸ್ತಕ. ಆ ಶಾಲೆಯನ್ನು ಮುಚ್ಚಲು ಕಮ್ಯುನಿಷ್ಠ್ ಪಕ್ಷದ ನೇತೃತ್ವದ ಕೇರಳ ಸರ್ಕಾರದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 2018ರ ಜನವರಿಯಲ್ಲಿ ಆದೇಶಿಸಿದ್ದರು.

ಹಲವು ಆರೋಪಗಳು ಕೇಳಿ ಬಂದ ಬಳಿಕ ಕೇರಳದ ಎಲ್ಲಾ ಪೀಸ್ ಇಂಟರ್ನ್ಯಾಷನಲ್ ಶಾಲೆಗಳನ್ನು ಮುಚ್ಚಲಾಗಿದೆ ಎಂಬ ವರದಿಗಳಿವೆ. ಈ ಬಗ್ಗೆ ಖಚಿತ ಮಾಹಿತಿ ನಮಗೆ ಲಭ್ಯವಾಗಿಲ್ಲ. ಈ ಪೀಸ್ ಇಂಟರ್ನ್ಯಾಷನಲ್ ಶಾಲೆಗಳ ಮಾಲೀಕ ಎಂ.ಎಂ ಅಕ್ಬರ್. ಈ ವ್ಯಕ್ತಿಯನ್ನು ಕೇರಳದ ಝಾಕಿರ್ ನಾಯ್ಕ್ ಎಂದೇ ಹೇಳಲಾಗುತ್ತದೆ. ಇಸ್ಲಾಮಿಕ್ ವಿದ್ವಾಂಸ ಎಂದು ಗುರುತಿಸಿಕೊಂಡಿದ್ದ ಝಾಕಿರ್ ನಾಯ್ಕ್‌ ಪ್ರಸ್ತುತ ಹೊರ ದೇಶದಲ್ಲಿದ್ದಾರೆ. ಝಾಕಿರ್ ನಾಯ್ಕ್ ಮತ್ತು ಎಂ.ಎಂ ಅಕ್ಬರ್ ಇಬ್ಬರೂ ಕೂಡ ಇಸ್ಲಾಮಿನ ನೂತನವಾದಿ ಪಂಗಡ ಎಂದು ಗುರುತಿಸಲಾಗಿರುವ ಸಲಫಿ ಸಿದ್ದಾಂತದ ಬೋಧಕರಾಗಿದ್ದಾರೆ. ಇವರ ವಾದಗಳನ್ನು ಸುನ್ನೀ ಪಂಥದ ಮುಸ್ಲಿಮರು ಕಟುವಾಗಿ ವಿರೋಧಿಸುತ್ತಾರೆ. ಝಾಕಿರ್ ನಾಯ್ಕ್‌ ಕೂಡ ಪೀಸ್ ಹೆಸರಿನ ಸಂಸ್ಥೆಗಳನ್ನು ನಡೆಸುತ್ತಿದ್ದರು. ಅವುಗಳ ಮೇಲೆಯೂ ಹಲವು ಆರೋಪಗಳು ಕೇಳಿ ಬಂದಿತ್ತು.

ಇದನ್ನೂ ಓದಿ : Fact Check : ‘ಮಹಿಳಾ ಮೀಸಲಾತಿ ಮಸೂದೆ’ಯಿಂದ ಟಿಕೆಟ್ ಸಿಕ್ಕಿದೆ ಎಂಬ ಕಂಗನಾ ರಣಾವತ್ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...