HomeUncategorizedFact Check : ಕೇರಳ ಸರ್ಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಹಿಂದೂಗಳನ್ನು ಕೀಳಾಗಿ ಚಿತ್ರಿಸಿದೆ ಎಂಬುವುದು...

Fact Check : ಕೇರಳ ಸರ್ಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಹಿಂದೂಗಳನ್ನು ಕೀಳಾಗಿ ಚಿತ್ರಿಸಿದೆ ಎಂಬುವುದು ಸುಳ್ಳು

- Advertisement -
- Advertisement -

“ಮುಸ್ಲಿಂ ಅಸ್ಲಂ: ಸ್ವಚ್ಚ ಇರುವವರು, ನಾವು ಅವರ ಅಂಗಡಿಯಿಂದ ಸಿಹಿ ತಿನಿಸು ಖರೀದಿಸಬಹುದು.”
“ಹಿಂದೂ ಅಪ್ಪನ್ : ಸ್ವಚ್ಚ ಇಲ್ಲದಿರುವವರು, ಇವರಿಂದ ಯಾರೂ ಕೂಡ ಸಿಹಿ ತಿನಿಸು ಖರೀದಿಸಬಾರದು.”

“ಮುಸ್ಲಿಂ ಆದಿಲ್: ಸ್ವಚ್ಚವಾಗಿರುವವರು, ಮತ್ತು ಒಳ್ಳೆಯ ಗುಣ ನಡತೆ ಹೊಂದಿರುವವರು”
“ಹಿಂದೂ ಅಭಿಮನ್ಯು : ಸ್ವಚ್ಚ ಇಲ್ಲದಿರುವವರು, ಅವರು ಸ್ನಾನ ಮಾಡಲ್ಲ, ಕೆಟ್ಟ ವಾಸನೆ ಬರುತ್ತಾರೆ.”

“ಇದು ಕೇರಳದ ಶಾಲೆಗಳಲ್ಲಿ ಮಕ್ಕಳಿಗೆ ಮಾಡುವ ಪಾಠ. ಇದು ಕಮ್ಯುನಿಷ್ಠರು ಸಣ್ಣ ಮಕ್ಕಳನ್ನು ಬ್ರೈನ್ ವಾಶ್ ಮಾಡುವ ರೀತಿ” ಎಂದು ಪ್ರತಿಪಾದಿಸಿ ಮಿ.ಸಿನ್ಹ (ಮೋದಿ ಫ್ಯಾಮಿಲಿ) ಎಂಬ ಎಕ್ಸ್ ಬಳಕೆದಾರ ಪುಸ್ತಕವೊಂದರ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಕೇರಳದ ಸರ್ಕಾರ ಅಧಿಕೃತವಾಗಿ ಶಾಲಾ ಮಕ್ಕಳಿಗೆ ವಿತರಿಸಿದ ಪಾಠ ಪುಸ್ತಕಗಳಲ್ಲಿ ಈ ರೀತಿಯಿದೆ ಎಂಬರ್ಥದಲ್ಲಿ ಸಿನ್ಹ ಸುದ್ದಿ ಹಬ್ಬಿಸಿದ್ದಾರೆ.

ಫ್ಯಾಕ್ಟ್‌ ಚೆಕ್ : ಎಕ್ಸ್ ಪೋಸ್ಟ್‌ನಲ್ಲಿರುವ ಹೇಳಿರುವ ವಿಷಯದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದಾಗ, ಇದು ಕೇರಳದ ಪೀಸ್ ಇಂಟರ್ನ್ಯಾಷನಲ್ ಸಮೂಹ ಶಿಕ್ಷಣ ಸಂಸ್ಥೆಗಳ ಪಠ್ಯ ಪುಸ್ತಕದ ಫೋಟೋ ಎಂದು ಗೊತ್ತಾಗಿದೆ.

ಕೇರಳದ ಎರ್ನಾಕುಲಂ ಕೆಂದ್ರವಾಗಿ ಕಾರ್ಯಾಚರಿಸುತ್ತಿದ್ದ ‘ಪೀಸ್ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್‌’ ರಾಜ್ಯಾದ್ಯಂತ ಪೀಸ್ ಇಂಟರ್ನ್ಯಾಷನಲ್ ಎಂಬ ಹೆಸರಿನ ಹಲವು ಶಾಲೆಗಳನ್ನು ನಡೆಸುತ್ತಿತ್ತು.

ಅಕ್ಟೋಬರ್ 8, 2016 ರಂದು ಮಲಯಾಳಂ ಸುದ್ದಿ ವೆಬ್‌ಸೈಟ್‌ ‘ಆನ್ ಮನೋರಮಾ‘ದಲ್ಲಿ ಪ್ರಕಟವಾದ ವರದಿಯ ಪ್ರಕಾರ, ನಾವು ಮೇಲೆ ಉಲ್ಲೇಖಿಸಿದ ಆಕ್ಷೇಪಾರ್ಹ ವಿಷಯವನ್ನು ಬೋಧಿಸಿದ್ದಕ್ಕಾಗಿ ಪೀಸ್ ಎಜುಕೇಷನಲ್ ಫೌಂಡೇಶನ್ ನಡೆಸುತ್ತಿದ್ದ ಎರ್ನಾಕುಲಂನ ತಮ್ಮನಮ್‌ಲ್ಲಿದ್ದ ಪೀಸ್ ಇಂಟರ್ನ್ಯಾಷನಲ್ ಸ್ಕೂಲ್ ವಿರುದ್ಧ ಪ್ರಕರಣ ದಾಖಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಜನವರಿ 4, 2018 ರಂದು ‘ಮಾತೃಭೂಮಿ‘ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿ ಪ್ರಕಾರ, ಪಠ್ಯ ಪುಸ್ತಕದಲ್ಲಿ ಆಕ್ಷೇಪಾರ್ಹ ಮತ್ತು ಜಾತ್ಯತೀತವಲ್ಲದ ವಿಷಯ ಪ್ರಕಟಿಸಿ, ಬೋಧಿಸಿದ ಎರ್ನಾಕುಲಂನ ಪೀಸ್ ಇಂಟರ್‌ನ್ಯಾಷನಲ್ ಸ್ಕೂಲ್ ಅನ್ನು ಮುಚ್ಚಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆದೇಶಿಸಿದ್ದಾರೆ.

ಸುದ್ದಿ ಲಿಂಕ್ ಇಲ್ಲಿದೆ 

ಕೋಮು ವಿಷಯಗಳನ್ನು ಕಲಿಸಿದ್ದಕ್ಕಾಗಿ ಎರ್ನಾಕುಲಂನ ವಿವಾದಾತ್ಮಕ ಪೀಸ್ ಇಂಟರ್ನ್ಯಾಷನಲ್ ಶಾಲೆಯನ್ನು ಮುಚ್ಚಲು ಕೇರಳ ಸರ್ಕಾರ 2018ರ ಜನವರಿಯಲ್ಲಿ ಆದೇಶಿಸಿತ್ತು. ಎರ್ನಾಕುಲಂ ಶಾಖೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಬೇರೆ ಶಾಲೆಗಳಿಗೆ ಸ್ಥಳಾಂತರಿಸಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಎರ್ನಾಕುಲಂನ ಪೀಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಕಲಿಸುವ ಪಠ್ಯಕ್ರಮದ ಭಾಗವಾಗಿರುವ ಆಕ್ಷೇಪಾರ್ಹ ವಿಷಯಗಳೊಂದಿಗೆ ಪಠ್ಯಪುಸ್ತಕಗಳನ್ನು ಮುದ್ರಿಸಿದ್ದಕ್ಕಾಗಿ ಕೊಚ್ಚಿ ನಗರ ಪೊಲೀಸರು ಡಿಸೆಂಬರ್ 3, 2016 ರಂದು ಮುಂಬೈ ಮೂಲದ ಮೂವರು ಪ್ರಕಾಶಕರನ್ನು ಬಂಧಿಸಿದ್ದರು ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಹೇಳಿತ್ತು.

ಸುದ್ದಿ ಲಿಂಕ್ ಇಲ್ಲಿದೆ 

ಎಕ್ಸ್ ಬಳಕೆದಾರ ಸಿನ್ಹ ಹಾಕಿದ್ದ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ್ದ ಕೇರಳದ ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ಅವರು ” ಈ ಪುಸ್ತಕವನ್ನು ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿಲ್ಲ ಎಂದು ಹೇಳಿದ್ದಾರೆ. “ಈ ಪುಸ್ತಕವನ್ನು ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿಲ್ಲ. ಇದು ರಾಜ್ಯದ ವಿರುದ್ಧ ದ್ವೇಷ ಹರಡುವ ಮತ್ತೊಂದು ಪ್ರಯತ್ನವಾಗಿದೆ. ನಮ್ಮ ಪರಿಚಯವಿರುವವರಿಗೆ ಕೇರಳಿಗರ ನಡುವಿನ ಸೌಹಾರ್ದತೆ ಮತ್ತು ಏಕತೆ ಅರ್ಥವಾಗುತ್ತದೆ. ದ್ವೇಷಕ್ಕೆ ಅವಕಾಶವಿಲ್ಲ, ಕೋಮುವಾದಿ ಕಾರ್ಯಸೂಚಿ ರಾಜ್ಯದಲ್ಲಿ ಬೇರೂರಲು ಏಕೆ ವಿಫಲವಾಗಿದೆ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ಅಂಶವೇನೆಂದರೆ, ಎಕ್ಸ್ ಬಳಕೆದಾರ ಸಿನ್ಹ ಹಂಚಿಕೊಂಡ ಶಾಲಾ ಪಠ್ಯ ಪುಸ್ತಕದ ಫೋಟೋ ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿದ ಅಥವಾ ವಿತರಿಸಿದ ಪುಸ್ತಕದ್ದಲ್ಲ. ಇದು ಎರ್ನಾಕುಲಂನ ಪೀಸ್ ಇಂಟರ್ನ್ಯಾಷನಲ್ ಶಾಲೆಯ ಆಡಳಿತ ಮಂಡಳಿ ಮಕ್ಕಳಿಗೆ ವಿತರಿಸಿದ್ದ ಪುಸ್ತಕ. ಆ ಶಾಲೆಯನ್ನು ಮುಚ್ಚಲು ಕಮ್ಯುನಿಷ್ಠ್ ಪಕ್ಷದ ನೇತೃತ್ವದ ಕೇರಳ ಸರ್ಕಾರದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 2018ರ ಜನವರಿಯಲ್ಲಿ ಆದೇಶಿಸಿದ್ದರು.

ಹಲವು ಆರೋಪಗಳು ಕೇಳಿ ಬಂದ ಬಳಿಕ ಕೇರಳದ ಎಲ್ಲಾ ಪೀಸ್ ಇಂಟರ್ನ್ಯಾಷನಲ್ ಶಾಲೆಗಳನ್ನು ಮುಚ್ಚಲಾಗಿದೆ ಎಂಬ ವರದಿಗಳಿವೆ. ಈ ಬಗ್ಗೆ ಖಚಿತ ಮಾಹಿತಿ ನಮಗೆ ಲಭ್ಯವಾಗಿಲ್ಲ. ಈ ಪೀಸ್ ಇಂಟರ್ನ್ಯಾಷನಲ್ ಶಾಲೆಗಳ ಮಾಲೀಕ ಎಂ.ಎಂ ಅಕ್ಬರ್. ಈ ವ್ಯಕ್ತಿಯನ್ನು ಕೇರಳದ ಝಾಕಿರ್ ನಾಯ್ಕ್ ಎಂದೇ ಹೇಳಲಾಗುತ್ತದೆ. ಇಸ್ಲಾಮಿಕ್ ವಿದ್ವಾಂಸ ಎಂದು ಗುರುತಿಸಿಕೊಂಡಿದ್ದ ಝಾಕಿರ್ ನಾಯ್ಕ್‌ ಪ್ರಸ್ತುತ ಹೊರ ದೇಶದಲ್ಲಿದ್ದಾರೆ. ಝಾಕಿರ್ ನಾಯ್ಕ್ ಮತ್ತು ಎಂ.ಎಂ ಅಕ್ಬರ್ ಇಬ್ಬರೂ ಕೂಡ ಇಸ್ಲಾಮಿನ ನೂತನವಾದಿ ಪಂಗಡ ಎಂದು ಗುರುತಿಸಲಾಗಿರುವ ಸಲಫಿ ಸಿದ್ದಾಂತದ ಬೋಧಕರಾಗಿದ್ದಾರೆ. ಇವರ ವಾದಗಳನ್ನು ಸುನ್ನೀ ಪಂಥದ ಮುಸ್ಲಿಮರು ಕಟುವಾಗಿ ವಿರೋಧಿಸುತ್ತಾರೆ. ಝಾಕಿರ್ ನಾಯ್ಕ್‌ ಕೂಡ ಪೀಸ್ ಹೆಸರಿನ ಸಂಸ್ಥೆಗಳನ್ನು ನಡೆಸುತ್ತಿದ್ದರು. ಅವುಗಳ ಮೇಲೆಯೂ ಹಲವು ಆರೋಪಗಳು ಕೇಳಿ ಬಂದಿತ್ತು.

ಇದನ್ನೂ ಓದಿ : Fact Check : ‘ಮಹಿಳಾ ಮೀಸಲಾತಿ ಮಸೂದೆ’ಯಿಂದ ಟಿಕೆಟ್ ಸಿಕ್ಕಿದೆ ಎಂಬ ಕಂಗನಾ ರಣಾವತ್ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...