HomeUncategorizedFact Check : ಕೇರಳ ಸರ್ಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಹಿಂದೂಗಳನ್ನು ಕೀಳಾಗಿ ಚಿತ್ರಿಸಿದೆ ಎಂಬುವುದು...

Fact Check : ಕೇರಳ ಸರ್ಕಾರ ಶಾಲಾ ಪಠ್ಯ ಪುಸ್ತಕದಲ್ಲಿ ಹಿಂದೂಗಳನ್ನು ಕೀಳಾಗಿ ಚಿತ್ರಿಸಿದೆ ಎಂಬುವುದು ಸುಳ್ಳು

- Advertisement -
- Advertisement -

“ಮುಸ್ಲಿಂ ಅಸ್ಲಂ: ಸ್ವಚ್ಚ ಇರುವವರು, ನಾವು ಅವರ ಅಂಗಡಿಯಿಂದ ಸಿಹಿ ತಿನಿಸು ಖರೀದಿಸಬಹುದು.”
“ಹಿಂದೂ ಅಪ್ಪನ್ : ಸ್ವಚ್ಚ ಇಲ್ಲದಿರುವವರು, ಇವರಿಂದ ಯಾರೂ ಕೂಡ ಸಿಹಿ ತಿನಿಸು ಖರೀದಿಸಬಾರದು.”

“ಮುಸ್ಲಿಂ ಆದಿಲ್: ಸ್ವಚ್ಚವಾಗಿರುವವರು, ಮತ್ತು ಒಳ್ಳೆಯ ಗುಣ ನಡತೆ ಹೊಂದಿರುವವರು”
“ಹಿಂದೂ ಅಭಿಮನ್ಯು : ಸ್ವಚ್ಚ ಇಲ್ಲದಿರುವವರು, ಅವರು ಸ್ನಾನ ಮಾಡಲ್ಲ, ಕೆಟ್ಟ ವಾಸನೆ ಬರುತ್ತಾರೆ.”

“ಇದು ಕೇರಳದ ಶಾಲೆಗಳಲ್ಲಿ ಮಕ್ಕಳಿಗೆ ಮಾಡುವ ಪಾಠ. ಇದು ಕಮ್ಯುನಿಷ್ಠರು ಸಣ್ಣ ಮಕ್ಕಳನ್ನು ಬ್ರೈನ್ ವಾಶ್ ಮಾಡುವ ರೀತಿ” ಎಂದು ಪ್ರತಿಪಾದಿಸಿ ಮಿ.ಸಿನ್ಹ (ಮೋದಿ ಫ್ಯಾಮಿಲಿ) ಎಂಬ ಎಕ್ಸ್ ಬಳಕೆದಾರ ಪುಸ್ತಕವೊಂದರ ಫೋಟೋವನ್ನು ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

ಕೇರಳದ ಸರ್ಕಾರ ಅಧಿಕೃತವಾಗಿ ಶಾಲಾ ಮಕ್ಕಳಿಗೆ ವಿತರಿಸಿದ ಪಾಠ ಪುಸ್ತಕಗಳಲ್ಲಿ ಈ ರೀತಿಯಿದೆ ಎಂಬರ್ಥದಲ್ಲಿ ಸಿನ್ಹ ಸುದ್ದಿ ಹಬ್ಬಿಸಿದ್ದಾರೆ.

ಫ್ಯಾಕ್ಟ್‌ ಚೆಕ್ : ಎಕ್ಸ್ ಪೋಸ್ಟ್‌ನಲ್ಲಿರುವ ಹೇಳಿರುವ ವಿಷಯದ ಸತ್ಯಾಸತ್ಯತೆಯನ್ನು ನಾನುಗೌರಿ.ಕಾಂ ಪರಿಶೀಲನೆ ನಡೆಸಿದಾಗ, ಇದು ಕೇರಳದ ಪೀಸ್ ಇಂಟರ್ನ್ಯಾಷನಲ್ ಸಮೂಹ ಶಿಕ್ಷಣ ಸಂಸ್ಥೆಗಳ ಪಠ್ಯ ಪುಸ್ತಕದ ಫೋಟೋ ಎಂದು ಗೊತ್ತಾಗಿದೆ.

ಕೇರಳದ ಎರ್ನಾಕುಲಂ ಕೆಂದ್ರವಾಗಿ ಕಾರ್ಯಾಚರಿಸುತ್ತಿದ್ದ ‘ಪೀಸ್ ಎಜುಕೇಶನಲ್ & ಚಾರಿಟೇಬಲ್ ಟ್ರಸ್ಟ್‌’ ರಾಜ್ಯಾದ್ಯಂತ ಪೀಸ್ ಇಂಟರ್ನ್ಯಾಷನಲ್ ಎಂಬ ಹೆಸರಿನ ಹಲವು ಶಾಲೆಗಳನ್ನು ನಡೆಸುತ್ತಿತ್ತು.

ಅಕ್ಟೋಬರ್ 8, 2016 ರಂದು ಮಲಯಾಳಂ ಸುದ್ದಿ ವೆಬ್‌ಸೈಟ್‌ ‘ಆನ್ ಮನೋರಮಾ‘ದಲ್ಲಿ ಪ್ರಕಟವಾದ ವರದಿಯ ಪ್ರಕಾರ, ನಾವು ಮೇಲೆ ಉಲ್ಲೇಖಿಸಿದ ಆಕ್ಷೇಪಾರ್ಹ ವಿಷಯವನ್ನು ಬೋಧಿಸಿದ್ದಕ್ಕಾಗಿ ಪೀಸ್ ಎಜುಕೇಷನಲ್ ಫೌಂಡೇಶನ್ ನಡೆಸುತ್ತಿದ್ದ ಎರ್ನಾಕುಲಂನ ತಮ್ಮನಮ್‌ಲ್ಲಿದ್ದ ಪೀಸ್ ಇಂಟರ್ನ್ಯಾಷನಲ್ ಸ್ಕೂಲ್ ವಿರುದ್ಧ ಪ್ರಕರಣ ದಾಖಲಾಗಿದೆ.

ಸುದ್ದಿ ಲಿಂಕ್ ಇಲ್ಲಿದೆ 

ಜನವರಿ 4, 2018 ರಂದು ‘ಮಾತೃಭೂಮಿ‘ ವೆಬ್‌ಸೈಟ್‌ನಲ್ಲಿ ಪ್ರಕಟವಾದ ವರದಿ ಪ್ರಕಾರ, ಪಠ್ಯ ಪುಸ್ತಕದಲ್ಲಿ ಆಕ್ಷೇಪಾರ್ಹ ಮತ್ತು ಜಾತ್ಯತೀತವಲ್ಲದ ವಿಷಯ ಪ್ರಕಟಿಸಿ, ಬೋಧಿಸಿದ ಎರ್ನಾಕುಲಂನ ಪೀಸ್ ಇಂಟರ್‌ನ್ಯಾಷನಲ್ ಸ್ಕೂಲ್ ಅನ್ನು ಮುಚ್ಚಲು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆದೇಶಿಸಿದ್ದಾರೆ.

ಸುದ್ದಿ ಲಿಂಕ್ ಇಲ್ಲಿದೆ 

ಕೋಮು ವಿಷಯಗಳನ್ನು ಕಲಿಸಿದ್ದಕ್ಕಾಗಿ ಎರ್ನಾಕುಲಂನ ವಿವಾದಾತ್ಮಕ ಪೀಸ್ ಇಂಟರ್ನ್ಯಾಷನಲ್ ಶಾಲೆಯನ್ನು ಮುಚ್ಚಲು ಕೇರಳ ಸರ್ಕಾರ 2018ರ ಜನವರಿಯಲ್ಲಿ ಆದೇಶಿಸಿತ್ತು. ಎರ್ನಾಕುಲಂ ಶಾಖೆಯಲ್ಲಿ ಓದುತ್ತಿರುವ ವಿದ್ಯಾರ್ಥಿಗಳನ್ನು ಬೇರೆ ಶಾಲೆಗಳಿಗೆ ಸ್ಥಳಾಂತರಿಸಲಾಗುವುದು ಎಂದು ವರದಿಯಲ್ಲಿ ತಿಳಿಸಲಾಗಿತ್ತು. ಎರ್ನಾಕುಲಂನ ಪೀಸ್ ಇಂಟರ್ನ್ಯಾಷನಲ್ ಶಾಲೆಯಲ್ಲಿ ಕಲಿಸುವ ಪಠ್ಯಕ್ರಮದ ಭಾಗವಾಗಿರುವ ಆಕ್ಷೇಪಾರ್ಹ ವಿಷಯಗಳೊಂದಿಗೆ ಪಠ್ಯಪುಸ್ತಕಗಳನ್ನು ಮುದ್ರಿಸಿದ್ದಕ್ಕಾಗಿ ಕೊಚ್ಚಿ ನಗರ ಪೊಲೀಸರು ಡಿಸೆಂಬರ್ 3, 2016 ರಂದು ಮುಂಬೈ ಮೂಲದ ಮೂವರು ಪ್ರಕಾಶಕರನ್ನು ಬಂಧಿಸಿದ್ದರು ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಹೇಳಿತ್ತು.

ಸುದ್ದಿ ಲಿಂಕ್ ಇಲ್ಲಿದೆ 

ಎಕ್ಸ್ ಬಳಕೆದಾರ ಸಿನ್ಹ ಹಾಕಿದ್ದ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿದ್ದ ಕೇರಳದ ಶಿಕ್ಷಣ ಸಚಿವ ವಿ. ಶಿವನ್ ಕುಟ್ಟಿ ಅವರು ” ಈ ಪುಸ್ತಕವನ್ನು ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿಲ್ಲ ಎಂದು ಹೇಳಿದ್ದಾರೆ. “ಈ ಪುಸ್ತಕವನ್ನು ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿಲ್ಲ. ಇದು ರಾಜ್ಯದ ವಿರುದ್ಧ ದ್ವೇಷ ಹರಡುವ ಮತ್ತೊಂದು ಪ್ರಯತ್ನವಾಗಿದೆ. ನಮ್ಮ ಪರಿಚಯವಿರುವವರಿಗೆ ಕೇರಳಿಗರ ನಡುವಿನ ಸೌಹಾರ್ದತೆ ಮತ್ತು ಏಕತೆ ಅರ್ಥವಾಗುತ್ತದೆ. ದ್ವೇಷಕ್ಕೆ ಅವಕಾಶವಿಲ್ಲ, ಕೋಮುವಾದಿ ಕಾರ್ಯಸೂಚಿ ರಾಜ್ಯದಲ್ಲಿ ಬೇರೂರಲು ಏಕೆ ವಿಫಲವಾಗಿದೆ” ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ನಮ್ಮ ಪರಿಶೀಲನೆಯಲ್ಲಿ ತಿಳಿದು ಬಂದ ಅಂಶವೇನೆಂದರೆ, ಎಕ್ಸ್ ಬಳಕೆದಾರ ಸಿನ್ಹ ಹಂಚಿಕೊಂಡ ಶಾಲಾ ಪಠ್ಯ ಪುಸ್ತಕದ ಫೋಟೋ ಕೇರಳ ಸರ್ಕಾರದ ಶಿಕ್ಷಣ ಇಲಾಖೆ ಪ್ರಕಟಿಸಿದ ಅಥವಾ ವಿತರಿಸಿದ ಪುಸ್ತಕದ್ದಲ್ಲ. ಇದು ಎರ್ನಾಕುಲಂನ ಪೀಸ್ ಇಂಟರ್ನ್ಯಾಷನಲ್ ಶಾಲೆಯ ಆಡಳಿತ ಮಂಡಳಿ ಮಕ್ಕಳಿಗೆ ವಿತರಿಸಿದ್ದ ಪುಸ್ತಕ. ಆ ಶಾಲೆಯನ್ನು ಮುಚ್ಚಲು ಕಮ್ಯುನಿಷ್ಠ್ ಪಕ್ಷದ ನೇತೃತ್ವದ ಕೇರಳ ಸರ್ಕಾರದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು 2018ರ ಜನವರಿಯಲ್ಲಿ ಆದೇಶಿಸಿದ್ದರು.

ಹಲವು ಆರೋಪಗಳು ಕೇಳಿ ಬಂದ ಬಳಿಕ ಕೇರಳದ ಎಲ್ಲಾ ಪೀಸ್ ಇಂಟರ್ನ್ಯಾಷನಲ್ ಶಾಲೆಗಳನ್ನು ಮುಚ್ಚಲಾಗಿದೆ ಎಂಬ ವರದಿಗಳಿವೆ. ಈ ಬಗ್ಗೆ ಖಚಿತ ಮಾಹಿತಿ ನಮಗೆ ಲಭ್ಯವಾಗಿಲ್ಲ. ಈ ಪೀಸ್ ಇಂಟರ್ನ್ಯಾಷನಲ್ ಶಾಲೆಗಳ ಮಾಲೀಕ ಎಂ.ಎಂ ಅಕ್ಬರ್. ಈ ವ್ಯಕ್ತಿಯನ್ನು ಕೇರಳದ ಝಾಕಿರ್ ನಾಯ್ಕ್ ಎಂದೇ ಹೇಳಲಾಗುತ್ತದೆ. ಇಸ್ಲಾಮಿಕ್ ವಿದ್ವಾಂಸ ಎಂದು ಗುರುತಿಸಿಕೊಂಡಿದ್ದ ಝಾಕಿರ್ ನಾಯ್ಕ್‌ ಪ್ರಸ್ತುತ ಹೊರ ದೇಶದಲ್ಲಿದ್ದಾರೆ. ಝಾಕಿರ್ ನಾಯ್ಕ್ ಮತ್ತು ಎಂ.ಎಂ ಅಕ್ಬರ್ ಇಬ್ಬರೂ ಕೂಡ ಇಸ್ಲಾಮಿನ ನೂತನವಾದಿ ಪಂಗಡ ಎಂದು ಗುರುತಿಸಲಾಗಿರುವ ಸಲಫಿ ಸಿದ್ದಾಂತದ ಬೋಧಕರಾಗಿದ್ದಾರೆ. ಇವರ ವಾದಗಳನ್ನು ಸುನ್ನೀ ಪಂಥದ ಮುಸ್ಲಿಮರು ಕಟುವಾಗಿ ವಿರೋಧಿಸುತ್ತಾರೆ. ಝಾಕಿರ್ ನಾಯ್ಕ್‌ ಕೂಡ ಪೀಸ್ ಹೆಸರಿನ ಸಂಸ್ಥೆಗಳನ್ನು ನಡೆಸುತ್ತಿದ್ದರು. ಅವುಗಳ ಮೇಲೆಯೂ ಹಲವು ಆರೋಪಗಳು ಕೇಳಿ ಬಂದಿತ್ತು.

ಇದನ್ನೂ ಓದಿ : Fact Check : ‘ಮಹಿಳಾ ಮೀಸಲಾತಿ ಮಸೂದೆ’ಯಿಂದ ಟಿಕೆಟ್ ಸಿಕ್ಕಿದೆ ಎಂಬ ಕಂಗನಾ ರಣಾವತ್ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...