Homeಫ್ಯಾಕ್ಟ್‌ಚೆಕ್FACT CHECK : ಹಸುವಿನ ಬಾಲ ಕತ್ತರಿಸಿ ದೇವಸ್ಥಾನದ ಮುಂದೆ ಎಸೆದ ಮುಸ್ಲಿಂ ಯುವಕರಿಗೆ ಪೊಲೀಸರು...

FACT CHECK : ಹಸುವಿನ ಬಾಲ ಕತ್ತರಿಸಿ ದೇವಸ್ಥಾನದ ಮುಂದೆ ಎಸೆದ ಮುಸ್ಲಿಂ ಯುವಕರಿಗೆ ಪೊಲೀಸರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ರಾಜಸ್ಥಾನದಲ್ಲಿ ಹಸುವಿನ ಬಾಲ ಕತ್ತರಿಸಿ ದೇವಸ್ಥಾನದ ಮುಂಭಾಗ ಎಸೆದ ಮುಸ್ಲಿಂ ಯುವಕರಿಗೆ ಪೊಲೀಸರು ಥಳಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ.

“ರಾಜಸ್ಥಾನದ ಭಿಲ್ವಾರದಲ್ಲಿ 25 ಆಗಸ್ಟ್ 24ರಂದು ಹಸುವಿನ ಬಾಲ ಕತ್ತರಿಸಿ ದೇವಸ್ಥಾನ ಬಾಗಿಲಿಗೆ ಎಸೆದ ಮುಸ್ಲಿಂ ಸಮುದಾಯದ 8 ದಾರಿ ತಪ್ಪಿದ ಯುವಕರಿಗೆ ರಾಜಸ್ಥಾನ ಪೊಲೀಸರು ಆತಿಥ್ಯವನ್ನು ನೀಡಿದರು” ಎಂದು ಆಗಸ್ಟ್ 31ರಂದು ಮಲ್ಲಿಕಾರ್ಜುನ (@Mallika52160729) ಎಂಬ ಎಕ್ಸ್‌ ಬಳಕೆದಾರ ವಿಡಿಯೋ ಹಂಚಿಕೊಂಡಿದ್ದರು. 

ಅದೇ ವಿಡಿಯೋವನ್ನು ಜ್ಞಾನ್ ಪ್ರಕಾಶ್ ಓಜಾ (@gyanprakashojಎಂಬ ಎಕ್ಸ್‌ ಬಳಕೆದಾರ ಆಗಸ್ಟ್ 31, 2024ರಂದು ಹಂಚಿಕೊಂಡು “ರಾಜಸ್ಥಾನದ ಭಿಲ್ವಾರಾದಲ್ಲಿ ಆಗಸ್ಟ್ 25, 2024 ರಂದು ಪೊಲೀಸರು ಹಸುವಿನ ಬಾಲವನ್ನು ಕತ್ತರಿಸಿ ದೇವಾಲಯದ ಬಾಗಿಲಿಗೆ ಎಸೆದ ‘ಶಾಂತಿದೂತ’ ಸಮುದಾಯದ 8 ಜಿಹಾದಿ ಯುವಕರಿಗೆ ವಿಶೇಷ ಆತಿಥ್ಯ ನೀಡಿದರು. ಈ ಟ್ರೀಟ್‌ಮೆಂಟ್ ಸರಿಯಾಗಿದೆ ಅಲ್ಲವೇ?” ಎಂದು ಬರೆದುಕೊಂಡಿದ್ದರು.

ವಿಡಿಯೋದಲ್ಲಿ ಪೊಲೀಸ್ ಸಮವಸ್ತ್ರ ತೊಟ್ಟವರು ಕೆಲ ವ್ಯಕ್ತಿಗಳನ್ನು ಕೊಠಡಿಯೊಳಗೆ ಕೂಡಿ ಹಾಕಿ ಲಾಠಿಯಿಂದ ಹೊಡೆಯುತ್ತಿರುವ ದೃಶ್ಯವಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಇದು ಉತ್ತರ ಪ್ರದೇಶದ ಹಳೆಯ ವಿಡಿಯೋ ಎಂದು ಗೊತ್ತಾಗಿದೆ.

ವಿಡಿಯೋ ಸ್ಕ್ರೀನ್ ಶಾಟ್‌ ಅನ್ನು ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಜುಲೈ 5, 2022ರಂದು ಎನ್‌ಡಿಟಿವಿಯಲ್ಲಿ ಈ ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ.

“ಕಳೆದ ತಿಂಗಳು ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ಪ್ರತಿಭಟನೆಯ ನಂತರ ವೈರಲ್ ವಿಡಿಯೋದಲ್ಲಿ ಪೊಲೀಸರ ಕಸ್ಟಡಿಯಲ್ಲಿದ್ದ ಎಂಟು ಮಂದಿಯನ್ನು ಆರೋಪ ಮುಕ್ತಗೊಳಿಸಲಾಗಿದೆ. ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಪೊಲೀಸರು ಹೇಳಿದ ನಂತರ ಸ್ಥಳೀಯ ನ್ಯಾಯಾಲಯ ಅವರನ್ನು ಬಿಡುಗಡೆ ಮಾಡಿದೆ. ಅವರು ನಿನ್ನೆ ಜೈಲಿನಿಂದ ಹೊರ ಬಂದಿದ್ದಾರೆ. ಇದರರ್ಥ ಈಗ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದರ ವಿರುದ್ಧ ನೀಡಿದ ಹೇಳಿಕೆಗಳ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ನಡೆಸಿದ 85 ಜನರ ವಿರುದ್ಧ ಆರಂಭದಲ್ಲಿ ದಾಖಲಿಸಲಾದ ಎಫ್‌ಐಆರ್‌ನಲ್ಲಿ ಇವರ ಹೆಸರುಗಳಿಲ್ಲ ಎಂದಾಗಿದೆ. ಎನ್‌ಡಿಟಿವಿಯ ವರದಿಯ ನಂತರ ಪೊಲೀಸ್ ದೌರ್ಜನ್ಯದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ” ಎಂದು ವಿಡಿಯೋ ಕುರಿತು ಎನ್‌ಡಿಟಿವಿ ವಿವರಿಸಿದೆ.

“ಜೂನ್ 21, 2022ರಂದು ಇಂಡಿಯಾ ಟುಡೇ ಪ್ರಕಟಿಸಿದ ವರದಿಯಲ್ಲೂ ವೈರಲ್ ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ವರದಿಯಲ್ಲಿ “ಉತ್ತರ ಪ್ರದೇಶದಲ್ಲಿ ನೂಪುರ್ ಶರ್ಮಾ ಅವರ ಪ್ರವಾದಿಯ ಕುರಿತ ಹೇಳಿಕೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಗಳ ಮೇಲಿನ ಪೊಲೀಸ್ ದೌರ್ಜನ್ಯ ಮತ್ತು ಅಮಾನವೀಯ ವರ್ತನೆಯ ಆರೋಪಗಳ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಹೆಚ್‌ಆರ್‌ಸಿ) ಎಸ್‌ಎಸ್‌ಪಿ ಸಹರಾನ್‌ಪುರದಿಂದ ಪ್ರತಿಕ್ರಿಯೆ ಕೇಳಿದೆ” ಎಂದು ಹೇಳಲಾಗಿದೆ.

“ವಕೀಲ ಮಹ್‌ರೂಫ್ ಅನ್ಸಾರಿ ಅವರು ನೀಡಿದ ದೂರಿನ ಪ್ರಕಾರ, ಜೂನ್ 10 ರಂದು, ಸಹರಾನ್‌ಪುರದ ಠಾಣಾ ಕೊತ್ವಾಲಿ ನಗರದ ಪೊಲೀಸ್ ಅಧಿಕಾರಿಗಳ ತಂಡವು ಕೆಲವು ಪ್ರತಿಭಟನಾಕಾರರನ್ನು ಬಂಧಿಸಿತ್ತು. ನಂತರ ಅವರನ್ನು ಪೊಲೀಸ್ ಕಸ್ಟಡಿಯಲ್ಲಿ ನಿರ್ದಯವಾಗಿ ಥಳಿಸಲಾಗಿದೆ” ಎಂದು ವರದಿ ವಿವರಿಸಿದೆ.

ಹಸುವಿನ ಬಾಲ ಕತ್ತರಿಸಿದ ಆರೋಪಿಯ ಬಂಧನ

ಹಸುವಿನ ಬಾಲ ಕತ್ತರಿಸಿ ದೇವಸ್ಥಾನ ಬಾಗಿಲಿಗೆ ಎಸೆದ ಘಟನೆ ಆಗಸ್ಟ್ 25, 2024ರಂದು ರಾಜಸ್ಥಾನದ ಬಿಲ್ವಾರದಲ್ಲಿ ನಡೆದಿರುವುದು ನಿಜ. ಎಬಿಪಿ ಲೈವ್ ವರದಿಯ ಪ್ರಕಾರ, ಹಸುವಿನ ಬಾಲ ಕತ್ತರಿಸಿ ಬಿಲ್ವಾರದ ಗಾಂಧಿ ಸಾಗರದ ಬಳಿ ಇರುವ ವೀರ್ ಹನುಮಾನ್ ದೇವಸ್ಥಾನ ಮುಂಭಾಗ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊತ್ವಾಲಿ ಪೊಲೀಸರು ಹುಸೇನ್ ಕಾಲೋನಿ ಶಾಸ್ತ್ರಿನಗರ ನಿವಾಸಿ ನಿಸಾರ್ ಮೊಹಮ್ಮದ್ ಅವರ ಮಗ ಬಬ್ಲು ಶಾ (40 ವರ್ಷ) ಎಂಬಾತನನ್ನು ಬಂಧಿಸಿದ್ದಾರೆ. ಇನ್ನೂ ನಾಲ್ವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.

ಆದರೆ, ಪೊಲೀಸರು ಥಳಿಸಿರು ವಿಡಿಯೋ ಹಸುವಿನ ಬಾಲ ಕತ್ತರಿಸಿದ ಘಟನೆಗೆ ಸಂಬಂಧಿಸಿದ್ದಲ್ಲ. ಅದು ನೂಪೂರ್ ಶರ್ಮಾ ಹೇಳಿಕೆ ವಿರುದ್ದ ಪ್ರತಿಭಟಿಸಿದ್ದ ಯುವಕರನ್ನು ಪೊಲೀಸರು ಕೂಡಿ ಹಾಕಿ ಅಮಾನುಷವಾಗಿ ಥಳಿಸಿದ ಘಟನೆಯದ್ದಾಗಿದೆ.

ಇದನ್ನೂ ಓದಿ : FACT CHECK : ಕಂದಹಾರ್ ವಿಮಾನ ಅಪಹರಣದ ವೆಬ್‌ ಸೀರಿಸ್‌ನಲ್ಲಿ ಹಿಂದೂಗಳಿಗೆ ಅವಮಾನ? ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...