Homeಫ್ಯಾಕ್ಟ್‌ಚೆಕ್FACT CHECK : ಹಸುವಿನ ಬಾಲ ಕತ್ತರಿಸಿ ದೇವಸ್ಥಾನದ ಮುಂದೆ ಎಸೆದ ಮುಸ್ಲಿಂ ಯುವಕರಿಗೆ ಪೊಲೀಸರು...

FACT CHECK : ಹಸುವಿನ ಬಾಲ ಕತ್ತರಿಸಿ ದೇವಸ್ಥಾನದ ಮುಂದೆ ಎಸೆದ ಮುಸ್ಲಿಂ ಯುವಕರಿಗೆ ಪೊಲೀಸರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ರಾಜಸ್ಥಾನದಲ್ಲಿ ಹಸುವಿನ ಬಾಲ ಕತ್ತರಿಸಿ ದೇವಸ್ಥಾನದ ಮುಂಭಾಗ ಎಸೆದ ಮುಸ್ಲಿಂ ಯುವಕರಿಗೆ ಪೊಲೀಸರು ಥಳಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ವೈರಲ್ ಆಗುತ್ತಿದೆ.

“ರಾಜಸ್ಥಾನದ ಭಿಲ್ವಾರದಲ್ಲಿ 25 ಆಗಸ್ಟ್ 24ರಂದು ಹಸುವಿನ ಬಾಲ ಕತ್ತರಿಸಿ ದೇವಸ್ಥಾನ ಬಾಗಿಲಿಗೆ ಎಸೆದ ಮುಸ್ಲಿಂ ಸಮುದಾಯದ 8 ದಾರಿ ತಪ್ಪಿದ ಯುವಕರಿಗೆ ರಾಜಸ್ಥಾನ ಪೊಲೀಸರು ಆತಿಥ್ಯವನ್ನು ನೀಡಿದರು” ಎಂದು ಆಗಸ್ಟ್ 31ರಂದು ಮಲ್ಲಿಕಾರ್ಜುನ (@Mallika52160729) ಎಂಬ ಎಕ್ಸ್‌ ಬಳಕೆದಾರ ವಿಡಿಯೋ ಹಂಚಿಕೊಂಡಿದ್ದರು. 

ಅದೇ ವಿಡಿಯೋವನ್ನು ಜ್ಞಾನ್ ಪ್ರಕಾಶ್ ಓಜಾ (@gyanprakashojಎಂಬ ಎಕ್ಸ್‌ ಬಳಕೆದಾರ ಆಗಸ್ಟ್ 31, 2024ರಂದು ಹಂಚಿಕೊಂಡು “ರಾಜಸ್ಥಾನದ ಭಿಲ್ವಾರಾದಲ್ಲಿ ಆಗಸ್ಟ್ 25, 2024 ರಂದು ಪೊಲೀಸರು ಹಸುವಿನ ಬಾಲವನ್ನು ಕತ್ತರಿಸಿ ದೇವಾಲಯದ ಬಾಗಿಲಿಗೆ ಎಸೆದ ‘ಶಾಂತಿದೂತ’ ಸಮುದಾಯದ 8 ಜಿಹಾದಿ ಯುವಕರಿಗೆ ವಿಶೇಷ ಆತಿಥ್ಯ ನೀಡಿದರು. ಈ ಟ್ರೀಟ್‌ಮೆಂಟ್ ಸರಿಯಾಗಿದೆ ಅಲ್ಲವೇ?” ಎಂದು ಬರೆದುಕೊಂಡಿದ್ದರು.

ವಿಡಿಯೋದಲ್ಲಿ ಪೊಲೀಸ್ ಸಮವಸ್ತ್ರ ತೊಟ್ಟವರು ಕೆಲ ವ್ಯಕ್ತಿಗಳನ್ನು ಕೊಠಡಿಯೊಳಗೆ ಕೂಡಿ ಹಾಕಿ ಲಾಠಿಯಿಂದ ಹೊಡೆಯುತ್ತಿರುವ ದೃಶ್ಯವಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋದ ಸತ್ಯಾಸತ್ಯತೆಯನ್ನು ನಾವು ಪರಿಶೀಲನೆ ನಡೆಸಿದ್ದೇವೆ. ಈ ವೇಳೆ ಇದು ಉತ್ತರ ಪ್ರದೇಶದ ಹಳೆಯ ವಿಡಿಯೋ ಎಂದು ಗೊತ್ತಾಗಿದೆ.

ವಿಡಿಯೋ ಸ್ಕ್ರೀನ್ ಶಾಟ್‌ ಅನ್ನು ನಾವು ಗೂಗಲ್ ರಿವರ್ಸ್‌ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದ್ದೇವೆ. ಈ ವೇಳೆ ಜುಲೈ 5, 2022ರಂದು ಎನ್‌ಡಿಟಿವಿಯಲ್ಲಿ ಈ ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ.

“ಕಳೆದ ತಿಂಗಳು ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ನಡೆದ ಪ್ರತಿಭಟನೆಯ ನಂತರ ವೈರಲ್ ವಿಡಿಯೋದಲ್ಲಿ ಪೊಲೀಸರ ಕಸ್ಟಡಿಯಲ್ಲಿದ್ದ ಎಂಟು ಮಂದಿಯನ್ನು ಆರೋಪ ಮುಕ್ತಗೊಳಿಸಲಾಗಿದೆ. ಅವರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಪೊಲೀಸರು ಹೇಳಿದ ನಂತರ ಸ್ಥಳೀಯ ನ್ಯಾಯಾಲಯ ಅವರನ್ನು ಬಿಡುಗಡೆ ಮಾಡಿದೆ. ಅವರು ನಿನ್ನೆ ಜೈಲಿನಿಂದ ಹೊರ ಬಂದಿದ್ದಾರೆ. ಇದರರ್ಥ ಈಗ ಅಮಾನತುಗೊಂಡಿರುವ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಅವರು ಪ್ರವಾದಿ ಮುಹಮ್ಮದರ ವಿರುದ್ಧ ನೀಡಿದ ಹೇಳಿಕೆಗಳ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ ನಡೆಸಿದ 85 ಜನರ ವಿರುದ್ಧ ಆರಂಭದಲ್ಲಿ ದಾಖಲಿಸಲಾದ ಎಫ್‌ಐಆರ್‌ನಲ್ಲಿ ಇವರ ಹೆಸರುಗಳಿಲ್ಲ ಎಂದಾಗಿದೆ. ಎನ್‌ಡಿಟಿವಿಯ ವರದಿಯ ನಂತರ ಪೊಲೀಸ್ ದೌರ್ಜನ್ಯದ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ” ಎಂದು ವಿಡಿಯೋ ಕುರಿತು ಎನ್‌ಡಿಟಿವಿ ವಿವರಿಸಿದೆ.

“ಜೂನ್ 21, 2022ರಂದು ಇಂಡಿಯಾ ಟುಡೇ ಪ್ರಕಟಿಸಿದ ವರದಿಯಲ್ಲೂ ವೈರಲ್ ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ವರದಿಯಲ್ಲಿ “ಉತ್ತರ ಪ್ರದೇಶದಲ್ಲಿ ನೂಪುರ್ ಶರ್ಮಾ ಅವರ ಪ್ರವಾದಿಯ ಕುರಿತ ಹೇಳಿಕೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಗಳ ಮೇಲಿನ ಪೊಲೀಸ್ ದೌರ್ಜನ್ಯ ಮತ್ತು ಅಮಾನವೀಯ ವರ್ತನೆಯ ಆರೋಪಗಳ ಕುರಿತು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಹೆಚ್‌ಆರ್‌ಸಿ) ಎಸ್‌ಎಸ್‌ಪಿ ಸಹರಾನ್‌ಪುರದಿಂದ ಪ್ರತಿಕ್ರಿಯೆ ಕೇಳಿದೆ” ಎಂದು ಹೇಳಲಾಗಿದೆ.

“ವಕೀಲ ಮಹ್‌ರೂಫ್ ಅನ್ಸಾರಿ ಅವರು ನೀಡಿದ ದೂರಿನ ಪ್ರಕಾರ, ಜೂನ್ 10 ರಂದು, ಸಹರಾನ್‌ಪುರದ ಠಾಣಾ ಕೊತ್ವಾಲಿ ನಗರದ ಪೊಲೀಸ್ ಅಧಿಕಾರಿಗಳ ತಂಡವು ಕೆಲವು ಪ್ರತಿಭಟನಾಕಾರರನ್ನು ಬಂಧಿಸಿತ್ತು. ನಂತರ ಅವರನ್ನು ಪೊಲೀಸ್ ಕಸ್ಟಡಿಯಲ್ಲಿ ನಿರ್ದಯವಾಗಿ ಥಳಿಸಲಾಗಿದೆ” ಎಂದು ವರದಿ ವಿವರಿಸಿದೆ.

ಹಸುವಿನ ಬಾಲ ಕತ್ತರಿಸಿದ ಆರೋಪಿಯ ಬಂಧನ

ಹಸುವಿನ ಬಾಲ ಕತ್ತರಿಸಿ ದೇವಸ್ಥಾನ ಬಾಗಿಲಿಗೆ ಎಸೆದ ಘಟನೆ ಆಗಸ್ಟ್ 25, 2024ರಂದು ರಾಜಸ್ಥಾನದ ಬಿಲ್ವಾರದಲ್ಲಿ ನಡೆದಿರುವುದು ನಿಜ. ಎಬಿಪಿ ಲೈವ್ ವರದಿಯ ಪ್ರಕಾರ, ಹಸುವಿನ ಬಾಲ ಕತ್ತರಿಸಿ ಬಿಲ್ವಾರದ ಗಾಂಧಿ ಸಾಗರದ ಬಳಿ ಇರುವ ವೀರ್ ಹನುಮಾನ್ ದೇವಸ್ಥಾನ ಮುಂಭಾಗ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊತ್ವಾಲಿ ಪೊಲೀಸರು ಹುಸೇನ್ ಕಾಲೋನಿ ಶಾಸ್ತ್ರಿನಗರ ನಿವಾಸಿ ನಿಸಾರ್ ಮೊಹಮ್ಮದ್ ಅವರ ಮಗ ಬಬ್ಲು ಶಾ (40 ವರ್ಷ) ಎಂಬಾತನನ್ನು ಬಂಧಿಸಿದ್ದಾರೆ. ಇನ್ನೂ ನಾಲ್ವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ.

ಆದರೆ, ಪೊಲೀಸರು ಥಳಿಸಿರು ವಿಡಿಯೋ ಹಸುವಿನ ಬಾಲ ಕತ್ತರಿಸಿದ ಘಟನೆಗೆ ಸಂಬಂಧಿಸಿದ್ದಲ್ಲ. ಅದು ನೂಪೂರ್ ಶರ್ಮಾ ಹೇಳಿಕೆ ವಿರುದ್ದ ಪ್ರತಿಭಟಿಸಿದ್ದ ಯುವಕರನ್ನು ಪೊಲೀಸರು ಕೂಡಿ ಹಾಕಿ ಅಮಾನುಷವಾಗಿ ಥಳಿಸಿದ ಘಟನೆಯದ್ದಾಗಿದೆ.

ಇದನ್ನೂ ಓದಿ : FACT CHECK : ಕಂದಹಾರ್ ವಿಮಾನ ಅಪಹರಣದ ವೆಬ್‌ ಸೀರಿಸ್‌ನಲ್ಲಿ ಹಿಂದೂಗಳಿಗೆ ಅವಮಾನ? ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...