Homeಫ್ಯಾಕ್ಟ್‌ಚೆಕ್FACT CHECK : ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಹೆಚ್ಚಿನ ತೆರಿಗೆ...

FACT CHECK : ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಹೆಚ್ಚಿನ ತೆರಿಗೆ ವಿಧಿಸುತ್ತಿದೆ ಎಂಬುವುದು ಸುಳ್ಳು

- Advertisement -
- Advertisement -

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ರಾಜ್ಯ ತೆರಿಗೆ ಮತ್ತು ಸುಂಕಗಳು ಕೇಂದ್ರ ತೆರಿಗೆಗಳಿಗಿಂತ ಹೆಚ್ಚಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಂಚಿಕೊಳ್ಳಲಾಗಿದೆ.

“ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಈ ರೀತಿಯ ಬೋರ್ಡ್‌ಗಳನ್ನು ಹೊಂದಿರಬೇಕು. ಮೂಲ ದರ: 35.50, ಕೇಂದ್ರ ಸರ್ಕಾರದ ತೆರಿಗೆ: 19.50, ರಾಜ್ಯ ಸರ್ಕಾರದ ತೆರಿಗೆ: 41.55 ವಿತರಕ: 6.50, ಒಟ್ಟು: 103.05 ಆಗ ಬೆಲೆ ಏರಿಕೆಗೆ ಯಾರು ಹೊಣೆ ಎಂದು ಸಾರ್ವಜನಿಕರಿಗೆ ಅರ್ಥವಾಗುತ್ತದೆ. ದಯವಿಟ್ಟು ಇದನ್ನು ನಿಮ್ಮ ಗುಂಪುಗಳು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ” ಎಂದು ವೈರಲ್‌ ಪೋಸ್ಟ್‌ಗಳಲ್ಲಿ ಬರೆದುಕೊಳ್ಳಲಾಗಿದೆ.

ಕಳೆದ ಅನೇಕ ವರ್ಷಗಳಿಂದ ಇದೇ ಪೋಸ್ಟ್‌ ಅನ್ನು ಹಂಚಿಕೊಳ್ಳಲಾಗುತ್ತಿದ್ದು, ದೆಹಲಿ ಮತ್ತು ಪಶ್ಚಿಮ ಬಂಗಾಳದ ಸರ್ಕಾರಗಳನ್ನು ಟೀಕಿಸಲು ಈ ಪೋಸ್ಟ್‌ ಅನ್ನು ಬಳಸಿಕೊಳ್ಳಲಾಗುತ್ತಿದೆ. ಮಮತಾ ಬ್ಯಾನರ್ಜಿಯವರು ಪೆಟ್ರೋಲ್ ಮೇಲೆ ರಾಜ್ಯ ತೆರಿಗೆಯನ್ನು ಹೆಚ್ಚಿಸಿದ್ದಾರೆ ಎಂದು ಪೋಸ್ಟರ್ ಮಾಡಿ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ನಡೆಸಿದಾಗ, ಪೋಸ್ಟರ್‌ನಲ್ಲಿರುವ ಮಾಹಿತಿ ಸುಳ್ಳು ಎಂದು ತಿಳಿದು ಬಂದಿದೆ.
ClearTax ನ ಮಾಹಿತಿ ಪ್ರಕಾರ “ಭಾರತದಲ್ಲಿ ಪೆಟ್ರೋಲ್ ಮೇಲಿನ ತೆರಿಗೆಯು ಪೆಟ್ರೋಲ್‌ನ ಚಿಲ್ಲರೆ ಮಾರಾಟ ಬೆಲೆಯ ಶೇ. 55 ಅನ್ನು ಒಳಗೊಂಡಿರುತ್ತದೆ. ಡೀಸೆಲ್ ಮೇಲಿನ ತೆರಿಗೆಯು ಅದರ ಚಿಲ್ಲರೆ ಮಾರಾಟ ಮೌಲ್ಯದ ಶೇ. 50 ಆಗಿದೆ. ಇದರ ಹೊರತಾಗಿ, ಮಾರಾಟ ತೆರಿಗೆ ಮತ್ತು ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಅನ್ನು ರಾಜ್ಯ ಸರ್ಕಾರಗಳು ವಿವಿಧ ದರಗಳಲ್ಲಿ ವಿಧಿಸುತ್ತವೆ.

ಭಾರತದ ಇಂಧನ ಬೆಲೆ ನಿಗದಿಯಲ್ಲಿರುವ ಪ್ರಮುಖ ಶುಲ್ಕಗಳು ಇಲ್ಲಿವೆ : ಕಚ್ಚಾ ತೈಲದ ಮೂಲ ಬೆಲೆ, ಅಬಕಾರಿ ತೆರಿಗೆ, ವಿತರಕರ ಕಮಿಷನ್ ಮತ್ತು ಶುಲ್ಕಗಳು ಮೌಲ್ಯವರ್ಧಿತ ತೆರಿಗೆ (ವ್ಯಾಟ್). ಈಗ, ಕಚ್ಚಾ ತೈಲ ಬೆಲೆಗಳು, ಡೀಲರ್ ಶುಲ್ಕಗಳು ಮತ್ತು ಅಬಕಾರಿ ಸುಂಕವು ಭಾರತದಾದ್ಯಂತ ಒಂದೇ ಆಗಿರುತ್ತದೆ. ಆದಾಗ್ಯೂ, ವ್ಯಾಟ್ ಮತ್ತು ಮಾರಾಟ ತೆರಿಗೆಯು ರಾಜ್ಯಗಳಾದ್ಯಂತ ಭಿನ್ನವಾಗಿರುತ್ತದೆ. ಇದು ಇಂಧನ ಬೆಲೆಗಳಲ್ಲಿ ವ್ಯತ್ಯಾಸಕ್ಕೆ ಕಾರಣವಾಗುತ್ತದೆ.

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯವಾರು ತೆರಿಗೆ ಪಟ್ಟಿ

ಇತ್ತೀಚೆಗೆ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 25.92 ರಿಂದ ಶೇಕಡಾ 29.84 ಕ್ಕೆ ಮತ್ತು ಡೀಸೆಲ್ ಮೇಲೆ ಶೇಕಡಾ 14.3 ರಿಂದ 18.4 ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್ ಬೆಲೆ 3.02 ರೂಪಾಯಿ ಹಾಗೂ ಪ್ರತಿ ಲೀಟರ್‌ ಡೀಸೆಲ್ ಬೆಲೆ 3 ರೂ. ಏರಿಕೆಯಾಗಿದೆ. ಪೆಟ್ರೋಲ್ ಚಿಲ್ಲರೆ ಮಾರಾಟ ದರ ಪ್ರತಿ ಲೀಟರ್‌ಗೆ 102.85 ರೂ. ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 88.93 ರೂ. ಆಗಿದೆ.

ಒಟ್ಟಿನಲ್ಲಿ, ಪೆಟ್ರೋಲ್‌ ದರದ ಮೇಲೆ ಕೇಂದ್ರ ಸರ್ಕಾರದ 19.50 ತೆರಿಗೆ ವಿಧಿಸಿದರೆ ರಾಜ್ಯ ಸರ್ಕಾರದ 41.55 ತೆರಿಗೆ ವಿಧಿಸಿಸುತ್ತಿದೆ ಎಂಬುದು ಸುಳ್ಳು. ವಾಸ್ತವವಾಗಿ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 25.92 ರಿಂದ ಶೇಕಡಾ 29.84 ಕ್ಕೆ ಮತ್ತು ಡೀಸೆಲ್ ಮೇಲೆ ಶೇಕಡಾ 14.3 ರಿಂದ 18.4 ಕ್ಕೆ ಹೆಚ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ರೈಲು ನಿಲ್ದಾಣದ ಮೇಲೆ ದಾಳಿ ನಡೆಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...