Homeಫ್ಯಾಕ್ಟ್‌ಚೆಕ್FACT CHECK : ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಹೆಚ್ಚಿನ ತೆರಿಗೆ...

FACT CHECK : ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಹೆಚ್ಚಿನ ತೆರಿಗೆ ವಿಧಿಸುತ್ತಿದೆ ಎಂಬುವುದು ಸುಳ್ಳು

- Advertisement -
- Advertisement -

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ರಾಜ್ಯ ತೆರಿಗೆ ಮತ್ತು ಸುಂಕಗಳು ಕೇಂದ್ರ ತೆರಿಗೆಗಳಿಗಿಂತ ಹೆಚ್ಚಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಂಚಿಕೊಳ್ಳಲಾಗಿದೆ.

“ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಈ ರೀತಿಯ ಬೋರ್ಡ್‌ಗಳನ್ನು ಹೊಂದಿರಬೇಕು. ಮೂಲ ದರ: 35.50, ಕೇಂದ್ರ ಸರ್ಕಾರದ ತೆರಿಗೆ: 19.50, ರಾಜ್ಯ ಸರ್ಕಾರದ ತೆರಿಗೆ: 41.55 ವಿತರಕ: 6.50, ಒಟ್ಟು: 103.05 ಆಗ ಬೆಲೆ ಏರಿಕೆಗೆ ಯಾರು ಹೊಣೆ ಎಂದು ಸಾರ್ವಜನಿಕರಿಗೆ ಅರ್ಥವಾಗುತ್ತದೆ. ದಯವಿಟ್ಟು ಇದನ್ನು ನಿಮ್ಮ ಗುಂಪುಗಳು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ” ಎಂದು ವೈರಲ್‌ ಪೋಸ್ಟ್‌ಗಳಲ್ಲಿ ಬರೆದುಕೊಳ್ಳಲಾಗಿದೆ.

ಕಳೆದ ಅನೇಕ ವರ್ಷಗಳಿಂದ ಇದೇ ಪೋಸ್ಟ್‌ ಅನ್ನು ಹಂಚಿಕೊಳ್ಳಲಾಗುತ್ತಿದ್ದು, ದೆಹಲಿ ಮತ್ತು ಪಶ್ಚಿಮ ಬಂಗಾಳದ ಸರ್ಕಾರಗಳನ್ನು ಟೀಕಿಸಲು ಈ ಪೋಸ್ಟ್‌ ಅನ್ನು ಬಳಸಿಕೊಳ್ಳಲಾಗುತ್ತಿದೆ. ಮಮತಾ ಬ್ಯಾನರ್ಜಿಯವರು ಪೆಟ್ರೋಲ್ ಮೇಲೆ ರಾಜ್ಯ ತೆರಿಗೆಯನ್ನು ಹೆಚ್ಚಿಸಿದ್ದಾರೆ ಎಂದು ಪೋಸ್ಟರ್ ಮಾಡಿ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ನಡೆಸಿದಾಗ, ಪೋಸ್ಟರ್‌ನಲ್ಲಿರುವ ಮಾಹಿತಿ ಸುಳ್ಳು ಎಂದು ತಿಳಿದು ಬಂದಿದೆ.
ClearTax ನ ಮಾಹಿತಿ ಪ್ರಕಾರ “ಭಾರತದಲ್ಲಿ ಪೆಟ್ರೋಲ್ ಮೇಲಿನ ತೆರಿಗೆಯು ಪೆಟ್ರೋಲ್‌ನ ಚಿಲ್ಲರೆ ಮಾರಾಟ ಬೆಲೆಯ ಶೇ. 55 ಅನ್ನು ಒಳಗೊಂಡಿರುತ್ತದೆ. ಡೀಸೆಲ್ ಮೇಲಿನ ತೆರಿಗೆಯು ಅದರ ಚಿಲ್ಲರೆ ಮಾರಾಟ ಮೌಲ್ಯದ ಶೇ. 50 ಆಗಿದೆ. ಇದರ ಹೊರತಾಗಿ, ಮಾರಾಟ ತೆರಿಗೆ ಮತ್ತು ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಅನ್ನು ರಾಜ್ಯ ಸರ್ಕಾರಗಳು ವಿವಿಧ ದರಗಳಲ್ಲಿ ವಿಧಿಸುತ್ತವೆ.

ಭಾರತದ ಇಂಧನ ಬೆಲೆ ನಿಗದಿಯಲ್ಲಿರುವ ಪ್ರಮುಖ ಶುಲ್ಕಗಳು ಇಲ್ಲಿವೆ : ಕಚ್ಚಾ ತೈಲದ ಮೂಲ ಬೆಲೆ, ಅಬಕಾರಿ ತೆರಿಗೆ, ವಿತರಕರ ಕಮಿಷನ್ ಮತ್ತು ಶುಲ್ಕಗಳು ಮೌಲ್ಯವರ್ಧಿತ ತೆರಿಗೆ (ವ್ಯಾಟ್). ಈಗ, ಕಚ್ಚಾ ತೈಲ ಬೆಲೆಗಳು, ಡೀಲರ್ ಶುಲ್ಕಗಳು ಮತ್ತು ಅಬಕಾರಿ ಸುಂಕವು ಭಾರತದಾದ್ಯಂತ ಒಂದೇ ಆಗಿರುತ್ತದೆ. ಆದಾಗ್ಯೂ, ವ್ಯಾಟ್ ಮತ್ತು ಮಾರಾಟ ತೆರಿಗೆಯು ರಾಜ್ಯಗಳಾದ್ಯಂತ ಭಿನ್ನವಾಗಿರುತ್ತದೆ. ಇದು ಇಂಧನ ಬೆಲೆಗಳಲ್ಲಿ ವ್ಯತ್ಯಾಸಕ್ಕೆ ಕಾರಣವಾಗುತ್ತದೆ.

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯವಾರು ತೆರಿಗೆ ಪಟ್ಟಿ

ಇತ್ತೀಚೆಗೆ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 25.92 ರಿಂದ ಶೇಕಡಾ 29.84 ಕ್ಕೆ ಮತ್ತು ಡೀಸೆಲ್ ಮೇಲೆ ಶೇಕಡಾ 14.3 ರಿಂದ 18.4 ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್ ಬೆಲೆ 3.02 ರೂಪಾಯಿ ಹಾಗೂ ಪ್ರತಿ ಲೀಟರ್‌ ಡೀಸೆಲ್ ಬೆಲೆ 3 ರೂ. ಏರಿಕೆಯಾಗಿದೆ. ಪೆಟ್ರೋಲ್ ಚಿಲ್ಲರೆ ಮಾರಾಟ ದರ ಪ್ರತಿ ಲೀಟರ್‌ಗೆ 102.85 ರೂ. ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 88.93 ರೂ. ಆಗಿದೆ.

ಒಟ್ಟಿನಲ್ಲಿ, ಪೆಟ್ರೋಲ್‌ ದರದ ಮೇಲೆ ಕೇಂದ್ರ ಸರ್ಕಾರದ 19.50 ತೆರಿಗೆ ವಿಧಿಸಿದರೆ ರಾಜ್ಯ ಸರ್ಕಾರದ 41.55 ತೆರಿಗೆ ವಿಧಿಸಿಸುತ್ತಿದೆ ಎಂಬುದು ಸುಳ್ಳು. ವಾಸ್ತವವಾಗಿ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 25.92 ರಿಂದ ಶೇಕಡಾ 29.84 ಕ್ಕೆ ಮತ್ತು ಡೀಸೆಲ್ ಮೇಲೆ ಶೇಕಡಾ 14.3 ರಿಂದ 18.4 ಕ್ಕೆ ಹೆಚ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ರೈಲು ನಿಲ್ದಾಣದ ಮೇಲೆ ದಾಳಿ ನಡೆಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...