Homeಫ್ಯಾಕ್ಟ್‌ಚೆಕ್FACT CHECK : ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಹೆಚ್ಚಿನ ತೆರಿಗೆ...

FACT CHECK : ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಹೆಚ್ಚಿನ ತೆರಿಗೆ ವಿಧಿಸುತ್ತಿದೆ ಎಂಬುವುದು ಸುಳ್ಳು

- Advertisement -
- Advertisement -

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ರಾಜ್ಯ ತೆರಿಗೆ ಮತ್ತು ಸುಂಕಗಳು ಕೇಂದ್ರ ತೆರಿಗೆಗಳಿಗಿಂತ ಹೆಚ್ಚಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಂಚಿಕೊಳ್ಳಲಾಗಿದೆ.

“ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಈ ರೀತಿಯ ಬೋರ್ಡ್‌ಗಳನ್ನು ಹೊಂದಿರಬೇಕು. ಮೂಲ ದರ: 35.50, ಕೇಂದ್ರ ಸರ್ಕಾರದ ತೆರಿಗೆ: 19.50, ರಾಜ್ಯ ಸರ್ಕಾರದ ತೆರಿಗೆ: 41.55 ವಿತರಕ: 6.50, ಒಟ್ಟು: 103.05 ಆಗ ಬೆಲೆ ಏರಿಕೆಗೆ ಯಾರು ಹೊಣೆ ಎಂದು ಸಾರ್ವಜನಿಕರಿಗೆ ಅರ್ಥವಾಗುತ್ತದೆ. ದಯವಿಟ್ಟು ಇದನ್ನು ನಿಮ್ಮ ಗುಂಪುಗಳು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ” ಎಂದು ವೈರಲ್‌ ಪೋಸ್ಟ್‌ಗಳಲ್ಲಿ ಬರೆದುಕೊಳ್ಳಲಾಗಿದೆ.

ಕಳೆದ ಅನೇಕ ವರ್ಷಗಳಿಂದ ಇದೇ ಪೋಸ್ಟ್‌ ಅನ್ನು ಹಂಚಿಕೊಳ್ಳಲಾಗುತ್ತಿದ್ದು, ದೆಹಲಿ ಮತ್ತು ಪಶ್ಚಿಮ ಬಂಗಾಳದ ಸರ್ಕಾರಗಳನ್ನು ಟೀಕಿಸಲು ಈ ಪೋಸ್ಟ್‌ ಅನ್ನು ಬಳಸಿಕೊಳ್ಳಲಾಗುತ್ತಿದೆ. ಮಮತಾ ಬ್ಯಾನರ್ಜಿಯವರು ಪೆಟ್ರೋಲ್ ಮೇಲೆ ರಾಜ್ಯ ತೆರಿಗೆಯನ್ನು ಹೆಚ್ಚಿಸಿದ್ದಾರೆ ಎಂದು ಪೋಸ್ಟರ್ ಮಾಡಿ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ನಡೆಸಿದಾಗ, ಪೋಸ್ಟರ್‌ನಲ್ಲಿರುವ ಮಾಹಿತಿ ಸುಳ್ಳು ಎಂದು ತಿಳಿದು ಬಂದಿದೆ.
ClearTax ನ ಮಾಹಿತಿ ಪ್ರಕಾರ “ಭಾರತದಲ್ಲಿ ಪೆಟ್ರೋಲ್ ಮೇಲಿನ ತೆರಿಗೆಯು ಪೆಟ್ರೋಲ್‌ನ ಚಿಲ್ಲರೆ ಮಾರಾಟ ಬೆಲೆಯ ಶೇ. 55 ಅನ್ನು ಒಳಗೊಂಡಿರುತ್ತದೆ. ಡೀಸೆಲ್ ಮೇಲಿನ ತೆರಿಗೆಯು ಅದರ ಚಿಲ್ಲರೆ ಮಾರಾಟ ಮೌಲ್ಯದ ಶೇ. 50 ಆಗಿದೆ. ಇದರ ಹೊರತಾಗಿ, ಮಾರಾಟ ತೆರಿಗೆ ಮತ್ತು ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಅನ್ನು ರಾಜ್ಯ ಸರ್ಕಾರಗಳು ವಿವಿಧ ದರಗಳಲ್ಲಿ ವಿಧಿಸುತ್ತವೆ.

ಭಾರತದ ಇಂಧನ ಬೆಲೆ ನಿಗದಿಯಲ್ಲಿರುವ ಪ್ರಮುಖ ಶುಲ್ಕಗಳು ಇಲ್ಲಿವೆ : ಕಚ್ಚಾ ತೈಲದ ಮೂಲ ಬೆಲೆ, ಅಬಕಾರಿ ತೆರಿಗೆ, ವಿತರಕರ ಕಮಿಷನ್ ಮತ್ತು ಶುಲ್ಕಗಳು ಮೌಲ್ಯವರ್ಧಿತ ತೆರಿಗೆ (ವ್ಯಾಟ್). ಈಗ, ಕಚ್ಚಾ ತೈಲ ಬೆಲೆಗಳು, ಡೀಲರ್ ಶುಲ್ಕಗಳು ಮತ್ತು ಅಬಕಾರಿ ಸುಂಕವು ಭಾರತದಾದ್ಯಂತ ಒಂದೇ ಆಗಿರುತ್ತದೆ. ಆದಾಗ್ಯೂ, ವ್ಯಾಟ್ ಮತ್ತು ಮಾರಾಟ ತೆರಿಗೆಯು ರಾಜ್ಯಗಳಾದ್ಯಂತ ಭಿನ್ನವಾಗಿರುತ್ತದೆ. ಇದು ಇಂಧನ ಬೆಲೆಗಳಲ್ಲಿ ವ್ಯತ್ಯಾಸಕ್ಕೆ ಕಾರಣವಾಗುತ್ತದೆ.

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯವಾರು ತೆರಿಗೆ ಪಟ್ಟಿ

ಇತ್ತೀಚೆಗೆ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 25.92 ರಿಂದ ಶೇಕಡಾ 29.84 ಕ್ಕೆ ಮತ್ತು ಡೀಸೆಲ್ ಮೇಲೆ ಶೇಕಡಾ 14.3 ರಿಂದ 18.4 ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್ ಬೆಲೆ 3.02 ರೂಪಾಯಿ ಹಾಗೂ ಪ್ರತಿ ಲೀಟರ್‌ ಡೀಸೆಲ್ ಬೆಲೆ 3 ರೂ. ಏರಿಕೆಯಾಗಿದೆ. ಪೆಟ್ರೋಲ್ ಚಿಲ್ಲರೆ ಮಾರಾಟ ದರ ಪ್ರತಿ ಲೀಟರ್‌ಗೆ 102.85 ರೂ. ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 88.93 ರೂ. ಆಗಿದೆ.

ಒಟ್ಟಿನಲ್ಲಿ, ಪೆಟ್ರೋಲ್‌ ದರದ ಮೇಲೆ ಕೇಂದ್ರ ಸರ್ಕಾರದ 19.50 ತೆರಿಗೆ ವಿಧಿಸಿದರೆ ರಾಜ್ಯ ಸರ್ಕಾರದ 41.55 ತೆರಿಗೆ ವಿಧಿಸಿಸುತ್ತಿದೆ ಎಂಬುದು ಸುಳ್ಳು. ವಾಸ್ತವವಾಗಿ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 25.92 ರಿಂದ ಶೇಕಡಾ 29.84 ಕ್ಕೆ ಮತ್ತು ಡೀಸೆಲ್ ಮೇಲೆ ಶೇಕಡಾ 14.3 ರಿಂದ 18.4 ಕ್ಕೆ ಹೆಚ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ರೈಲು ನಿಲ್ದಾಣದ ಮೇಲೆ ದಾಳಿ ನಡೆಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...