Homeಫ್ಯಾಕ್ಟ್‌ಚೆಕ್FACT CHECK : ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಹೆಚ್ಚಿನ ತೆರಿಗೆ...

FACT CHECK : ಪೆಟ್ರೋಲ್, ಡೀಸೆಲ್ ಮೇಲೆ ಕೇಂದ್ರ ಸರ್ಕಾರಕ್ಕಿಂತ ರಾಜ್ಯ ಸರ್ಕಾರ ಹೆಚ್ಚಿನ ತೆರಿಗೆ ವಿಧಿಸುತ್ತಿದೆ ಎಂಬುವುದು ಸುಳ್ಳು

- Advertisement -
- Advertisement -

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ರಾಜ್ಯ ತೆರಿಗೆ ಮತ್ತು ಸುಂಕಗಳು ಕೇಂದ್ರ ತೆರಿಗೆಗಳಿಗಿಂತ ಹೆಚ್ಚಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ ಹಂಚಿಕೊಳ್ಳಲಾಗಿದೆ.

“ಎಲ್ಲಾ ಪೆಟ್ರೋಲ್ ಬಂಕ್‌ಗಳಲ್ಲಿ ಈ ರೀತಿಯ ಬೋರ್ಡ್‌ಗಳನ್ನು ಹೊಂದಿರಬೇಕು. ಮೂಲ ದರ: 35.50, ಕೇಂದ್ರ ಸರ್ಕಾರದ ತೆರಿಗೆ: 19.50, ರಾಜ್ಯ ಸರ್ಕಾರದ ತೆರಿಗೆ: 41.55 ವಿತರಕ: 6.50, ಒಟ್ಟು: 103.05 ಆಗ ಬೆಲೆ ಏರಿಕೆಗೆ ಯಾರು ಹೊಣೆ ಎಂದು ಸಾರ್ವಜನಿಕರಿಗೆ ಅರ್ಥವಾಗುತ್ತದೆ. ದಯವಿಟ್ಟು ಇದನ್ನು ನಿಮ್ಮ ಗುಂಪುಗಳು ಮತ್ತು ಸ್ನೇಹಿತರೊಂದಿಗೆ ಹಂಚಿಕೊಳ್ಳಿ” ಎಂದು ವೈರಲ್‌ ಪೋಸ್ಟ್‌ಗಳಲ್ಲಿ ಬರೆದುಕೊಳ್ಳಲಾಗಿದೆ.

ಕಳೆದ ಅನೇಕ ವರ್ಷಗಳಿಂದ ಇದೇ ಪೋಸ್ಟ್‌ ಅನ್ನು ಹಂಚಿಕೊಳ್ಳಲಾಗುತ್ತಿದ್ದು, ದೆಹಲಿ ಮತ್ತು ಪಶ್ಚಿಮ ಬಂಗಾಳದ ಸರ್ಕಾರಗಳನ್ನು ಟೀಕಿಸಲು ಈ ಪೋಸ್ಟ್‌ ಅನ್ನು ಬಳಸಿಕೊಳ್ಳಲಾಗುತ್ತಿದೆ. ಮಮತಾ ಬ್ಯಾನರ್ಜಿಯವರು ಪೆಟ್ರೋಲ್ ಮೇಲೆ ರಾಜ್ಯ ತೆರಿಗೆಯನ್ನು ಹೆಚ್ಚಿಸಿದ್ದಾರೆ ಎಂದು ಪೋಸ್ಟರ್ ಮಾಡಿ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ಗೂಗಲ್ ಸರ್ಚ್ ನಡೆಸಿದಾಗ, ಪೋಸ್ಟರ್‌ನಲ್ಲಿರುವ ಮಾಹಿತಿ ಸುಳ್ಳು ಎಂದು ತಿಳಿದು ಬಂದಿದೆ.
ClearTax ನ ಮಾಹಿತಿ ಪ್ರಕಾರ “ಭಾರತದಲ್ಲಿ ಪೆಟ್ರೋಲ್ ಮೇಲಿನ ತೆರಿಗೆಯು ಪೆಟ್ರೋಲ್‌ನ ಚಿಲ್ಲರೆ ಮಾರಾಟ ಬೆಲೆಯ ಶೇ. 55 ಅನ್ನು ಒಳಗೊಂಡಿರುತ್ತದೆ. ಡೀಸೆಲ್ ಮೇಲಿನ ತೆರಿಗೆಯು ಅದರ ಚಿಲ್ಲರೆ ಮಾರಾಟ ಮೌಲ್ಯದ ಶೇ. 50 ಆಗಿದೆ. ಇದರ ಹೊರತಾಗಿ, ಮಾರಾಟ ತೆರಿಗೆ ಮತ್ತು ಮೌಲ್ಯವರ್ಧಿತ ತೆರಿಗೆ (ವ್ಯಾಟ್) ಅನ್ನು ರಾಜ್ಯ ಸರ್ಕಾರಗಳು ವಿವಿಧ ದರಗಳಲ್ಲಿ ವಿಧಿಸುತ್ತವೆ.

ಭಾರತದ ಇಂಧನ ಬೆಲೆ ನಿಗದಿಯಲ್ಲಿರುವ ಪ್ರಮುಖ ಶುಲ್ಕಗಳು ಇಲ್ಲಿವೆ : ಕಚ್ಚಾ ತೈಲದ ಮೂಲ ಬೆಲೆ, ಅಬಕಾರಿ ತೆರಿಗೆ, ವಿತರಕರ ಕಮಿಷನ್ ಮತ್ತು ಶುಲ್ಕಗಳು ಮೌಲ್ಯವರ್ಧಿತ ತೆರಿಗೆ (ವ್ಯಾಟ್). ಈಗ, ಕಚ್ಚಾ ತೈಲ ಬೆಲೆಗಳು, ಡೀಲರ್ ಶುಲ್ಕಗಳು ಮತ್ತು ಅಬಕಾರಿ ಸುಂಕವು ಭಾರತದಾದ್ಯಂತ ಒಂದೇ ಆಗಿರುತ್ತದೆ. ಆದಾಗ್ಯೂ, ವ್ಯಾಟ್ ಮತ್ತು ಮಾರಾಟ ತೆರಿಗೆಯು ರಾಜ್ಯಗಳಾದ್ಯಂತ ಭಿನ್ನವಾಗಿರುತ್ತದೆ. ಇದು ಇಂಧನ ಬೆಲೆಗಳಲ್ಲಿ ವ್ಯತ್ಯಾಸಕ್ಕೆ ಕಾರಣವಾಗುತ್ತದೆ.

ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯವಾರು ತೆರಿಗೆ ಪಟ್ಟಿ

ಇತ್ತೀಚೆಗೆ ಕರ್ನಾಟಕ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಹೆಚ್ಚಿಸಿದೆ. ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 25.92 ರಿಂದ ಶೇಕಡಾ 29.84 ಕ್ಕೆ ಮತ್ತು ಡೀಸೆಲ್ ಮೇಲೆ ಶೇಕಡಾ 14.3 ರಿಂದ 18.4 ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ರಾಜ್ಯದಲ್ಲಿ ಪ್ರತಿ ಲೀಟರ್‌ ಪೆಟ್ರೋಲ್ ಬೆಲೆ 3.02 ರೂಪಾಯಿ ಹಾಗೂ ಪ್ರತಿ ಲೀಟರ್‌ ಡೀಸೆಲ್ ಬೆಲೆ 3 ರೂ. ಏರಿಕೆಯಾಗಿದೆ. ಪೆಟ್ರೋಲ್ ಚಿಲ್ಲರೆ ಮಾರಾಟ ದರ ಪ್ರತಿ ಲೀಟರ್‌ಗೆ 102.85 ರೂ. ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 88.93 ರೂ. ಆಗಿದೆ.

ಒಟ್ಟಿನಲ್ಲಿ, ಪೆಟ್ರೋಲ್‌ ದರದ ಮೇಲೆ ಕೇಂದ್ರ ಸರ್ಕಾರದ 19.50 ತೆರಿಗೆ ವಿಧಿಸಿದರೆ ರಾಜ್ಯ ಸರ್ಕಾರದ 41.55 ತೆರಿಗೆ ವಿಧಿಸಿಸುತ್ತಿದೆ ಎಂಬುದು ಸುಳ್ಳು. ವಾಸ್ತವವಾಗಿ ಪೆಟ್ರೋಲ್ ಮೇಲಿನ ಮಾರಾಟ ತೆರಿಗೆಯನ್ನು ಶೇಕಡಾ 25.92 ರಿಂದ ಶೇಕಡಾ 29.84 ಕ್ಕೆ ಮತ್ತು ಡೀಸೆಲ್ ಮೇಲೆ ಶೇಕಡಾ 14.3 ರಿಂದ 18.4 ಕ್ಕೆ ಹೆಚ್ಚಿಸಲಾಗಿದೆ ಎಂದು ರಾಜ್ಯ ಸರ್ಕಾರ ಅಧಿಸೂಚನೆಯಲ್ಲಿ ಪ್ರಕಟಿಸಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ರೈಲು ನಿಲ್ದಾಣದ ಮೇಲೆ ದಾಳಿ ನಡೆಸಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...