Homeಫ್ಯಾಕ್ಟ್‌ಚೆಕ್FACT CHECK : ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ರೈಲು ನಿಲ್ದಾಣದ ಮೇಲೆ ದಾಳಿ...

FACT CHECK : ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ರೈಲು ನಿಲ್ದಾಣದ ಮೇಲೆ ದಾಳಿ ನಡೆಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನ ಮಹಿಶಾಸುರ ರೈಲು ನಿಲ್ದಾಣವನ್ನು ಜನರು ಧ್ವಂಸಗೊಳಿಸಿದ್ದಾರೆ ಎಂದು ಆರೋಪಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

Mini Razdan (@mini_razdan10) ಎಂಬ ಎಕ್ಸ್‌ ಬಳಕೆದಾರ ಜುಲೈ 6ರಂದು ಮೊದಲು ಈ ವಿಡಿಯೋ ಪೋಸ್ಟ್‌ ಮಾಡಿದ್ದು, ಬಳಿಕ ಅನೇಕರು ವಿಡಿಯೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನದ್ದು ಎಂಬುವುದು ನಿಜ. ಆದರೆ, ಅದು 2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ದ ಪ್ರತಿಭಟಿಸುತ್ತಿದ್ದ ಜನರು ರೈಲ್ವೆ ನಿಲ್ದಾಣದ ಮೇಲೆ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ದೃಶ್ಯ ಎಂದು ತಿಳಿದು ಬಂದಿದೆ.

ಇದೇ ವಿಡಿಯೋ ಈ ಹಿಂದೆ ಬೇರೆ ಬೇರೆ ಬರಹಗಳೊಂದಿಗೆ ವೈರಲ್ ಆಗಿತ್ತು. ಆಗ ಕೆಲ ಮಾಧ್ಯಮಗಳು ಫ್ಯಾಕ್ಟ್‌ಚೆಕ್ ಮಾಡಿ ಸತ್ಯಾಸತ್ಯೆ ತಿಳಿಸಿತ್ತು.

ದಿ ಕ್ವಿಂಟ್ 29 ಏಪ್ರಿಲ್ 2022ರಂದು ನಡೆಸಿದ ಫ್ಯಾಕ್ಟ್‌ಚೆಕ್ ಸುದ್ದಿಯ ಲಿಂಕ್ ಇಲ್ಲಿದೆ

ವಿಡಿಯೋದ ಕುರಿತು ಇನ್ನಷ್ಟು ಖಚಿತಪಡಿಸಿಕೊಳ್ಳಲು ನಾವು ಫೋಟೋ ಮತ್ತು ಕೀ ವರ್ಡ್‌ ಬಳಸಿ ಗೂಗಲ್‌ನಲ್ಲಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ 16 ಡಿಸೆಂಬರ್ 2019ರಲ್ಲಿ ಹಾಕಲಾದ ಫೇಸ್‌ಬುಕ್‌ ಪೋಸ್ಟ್‌ ಒಂದು ಲಭ್ಯವಾಗಿದೆ. ಆ ಪೋಸ್ಟ್‌ನಲ್ಲಿರುವ ವಿಡಿಯೋ ಮತ್ತು ವೈರಲ್ ವಿಡಿಯೋ ಒಂದೇ ಎಂಬುವುದನ್ನು ಗಮನಿಸಬಹುದು. ಪೋಸ್ಟ್‌ನಲ್ಲಿ ನವೋಪಾರ ರೈಲು ನಿಲ್ದಾಣದ ದೃಶ್ಯ ಎಂದು ಬರೆಯಲಾಗಿದೆ. ನವೋಪಾರದ ರೈಲು ನಿಲ್ದಾಣದ ಹೆಸರು ಮಹಿಶಾಸುರ ಎಂದಾಗಿದೆ.

ಡಿಸೆಂಬರ್ 14, 2019ರಂದು ಮತ್ತೊಬ್ಬರು ಫೇಸ್‌ಬುಕ್ ಬಳಕೆದಾರರು ಕೂಡ ವೈರಲ್ ವಿಡಿಯೋವನ್ನು ಹಂಚಿಕೊಂಡಿದ್ದರು. ಈ ಪೋಸ್ಟ್‌ನಲ್ಲಿಯೂ ನವೋಪಾರ ರೈಲ್ವೆ ನಿಲ್ದಾಣದ ದೃಶ್ಯ ಎಂದು ಉಲ್ಲೇಖಿಸಲಾಗಿದೆ. ಪೋಸ್ಟ್‌ನ ಕೊನೆಯಲ್ಲಿ CAB (Citizenship Amendment Bill) ಎಂದು ಹ್ಯಾಷ್‌ಟ್ಯಾಗ್ ಕೊಟ್ಟಿರುವುದು ಅದು ಸಿಎಎ ಪ್ರತಿಭಟನೆಯ ಸಂದರ್ಭದ ವಿಡಿಯೋವೊ ಎಂಬುವುದನ್ನು ಹೇಳುತ್ತದೆ.

ವೈರಲ್ ಆಗಿರುವ ವಿಡಿಯೋ ಮತ್ತು ಮುರ್ಶಿದಾಬಾದ್‌ನ ನವೋಪಾರ ಮಹಿಶಾಸುರ ರೈಲ್ವೆ ನಿಲ್ದಾಣವನ್ನು ಸಿಎಎ ಪ್ರತಿಭಟನಾಕಾರರು ಧ್ವಂಸಗೊಳಿಸಿದ ಹಳೆಯ ವಿಡಿಯೊದಲ್ಲಿನ ಕೆಲವು ಸಾಮ್ಯತೆಗಳನ್ನು ನೋಡಬಹುದು.

People vandalised the Naopara Mahishasura railway station during anti-CAA protests in 2019.

15 ಡಿಸೆಂಬರ್ 2019 ರಂದು ಬೆಂಗಾಲಿ ನ್ಯೂಸ್ ಪೋರ್ಟಲ್ ‘ಬರ್ತಮನ್ ಪತ್ರಿಕಾ‘ದಲ್ಲಿ ಸಿಎಎ ಪ್ರತಿಭಟನಾಕಾರರು ರೈಲು ನಿಲ್ದಾಣಗಳ ಮೇಲೆ ದಾಳಿ ನಡೆಸಿರುವ ಕುರಿತು ವರದಿ ಪ್ರಕಟಿಸಿತ್ತು. ಆ ವರದಿಯಲ್ಲೂ ನವೋಪಾರಾ ಮಹಿಷಾಸುರ ನಿಲ್ದಾಣದ ಮೇಲಿನ ದಾಳಿಯ ಕುರಿತು ಉಲ್ಲೇಖಿಸಲಾಗಿದೆ.

ಲಭ್ಯ ಮೂಲಗಳನ್ನು ಬಳಸಿ ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ವಿಡಿಯೋ ಪಶ್ಚಿಮ ಬಂಗಾಳದ ನವೋಪಾರ ಮಹಿಶಾಸುರ ರೈಲ್ವೆ ನಿಲ್ದಾಣದ ಮೇಲೆ 2019ರ ಸಿಎಎ ವಿರೋಧಿ ಪ್ರತಿಭಟನೆ ನಡೆದ ದಾಳಿಯದ್ದು, ಅಲ್ಲದೆ ಅಝಾನ್‌ಗೆ ಅಡ್ಡಿಯಾಗುತ್ತದೆ ಎಂದು ರೈಲು ನಿಲ್ದಾಣ ಧ್ವಂಸಗೊಳಿಸಿದ್ದು ಅಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ನೀಟ್ ಟಾಪರ್‌ಗಳ ಜಾಹೀರಾತಿಗೆ ಕೋಮು ಬಣ್ಣ ಬಳಿದು ಪೇಪರ್ ಲೀಕ್ ಫಲಾನುಭವಿಗಳು ಎಂದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...