Homeಫ್ಯಾಕ್ಟ್‌ಚೆಕ್FACT CHECK : ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ರೈಲು ನಿಲ್ದಾಣದ ಮೇಲೆ ದಾಳಿ...

FACT CHECK : ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ರೈಲು ನಿಲ್ದಾಣದ ಮೇಲೆ ದಾಳಿ ನಡೆಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನ ಮಹಿಶಾಸುರ ರೈಲು ನಿಲ್ದಾಣವನ್ನು ಜನರು ಧ್ವಂಸಗೊಳಿಸಿದ್ದಾರೆ ಎಂದು ಆರೋಪಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

Mini Razdan (@mini_razdan10) ಎಂಬ ಎಕ್ಸ್‌ ಬಳಕೆದಾರ ಜುಲೈ 6ರಂದು ಮೊದಲು ಈ ವಿಡಿಯೋ ಪೋಸ್ಟ್‌ ಮಾಡಿದ್ದು, ಬಳಿಕ ಅನೇಕರು ವಿಡಿಯೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನದ್ದು ಎಂಬುವುದು ನಿಜ. ಆದರೆ, ಅದು 2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ದ ಪ್ರತಿಭಟಿಸುತ್ತಿದ್ದ ಜನರು ರೈಲ್ವೆ ನಿಲ್ದಾಣದ ಮೇಲೆ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ದೃಶ್ಯ ಎಂದು ತಿಳಿದು ಬಂದಿದೆ.

ಇದೇ ವಿಡಿಯೋ ಈ ಹಿಂದೆ ಬೇರೆ ಬೇರೆ ಬರಹಗಳೊಂದಿಗೆ ವೈರಲ್ ಆಗಿತ್ತು. ಆಗ ಕೆಲ ಮಾಧ್ಯಮಗಳು ಫ್ಯಾಕ್ಟ್‌ಚೆಕ್ ಮಾಡಿ ಸತ್ಯಾಸತ್ಯೆ ತಿಳಿಸಿತ್ತು.

ದಿ ಕ್ವಿಂಟ್ 29 ಏಪ್ರಿಲ್ 2022ರಂದು ನಡೆಸಿದ ಫ್ಯಾಕ್ಟ್‌ಚೆಕ್ ಸುದ್ದಿಯ ಲಿಂಕ್ ಇಲ್ಲಿದೆ

ವಿಡಿಯೋದ ಕುರಿತು ಇನ್ನಷ್ಟು ಖಚಿತಪಡಿಸಿಕೊಳ್ಳಲು ನಾವು ಫೋಟೋ ಮತ್ತು ಕೀ ವರ್ಡ್‌ ಬಳಸಿ ಗೂಗಲ್‌ನಲ್ಲಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ 16 ಡಿಸೆಂಬರ್ 2019ರಲ್ಲಿ ಹಾಕಲಾದ ಫೇಸ್‌ಬುಕ್‌ ಪೋಸ್ಟ್‌ ಒಂದು ಲಭ್ಯವಾಗಿದೆ. ಆ ಪೋಸ್ಟ್‌ನಲ್ಲಿರುವ ವಿಡಿಯೋ ಮತ್ತು ವೈರಲ್ ವಿಡಿಯೋ ಒಂದೇ ಎಂಬುವುದನ್ನು ಗಮನಿಸಬಹುದು. ಪೋಸ್ಟ್‌ನಲ್ಲಿ ನವೋಪಾರ ರೈಲು ನಿಲ್ದಾಣದ ದೃಶ್ಯ ಎಂದು ಬರೆಯಲಾಗಿದೆ. ನವೋಪಾರದ ರೈಲು ನಿಲ್ದಾಣದ ಹೆಸರು ಮಹಿಶಾಸುರ ಎಂದಾಗಿದೆ.

ಡಿಸೆಂಬರ್ 14, 2019ರಂದು ಮತ್ತೊಬ್ಬರು ಫೇಸ್‌ಬುಕ್ ಬಳಕೆದಾರರು ಕೂಡ ವೈರಲ್ ವಿಡಿಯೋವನ್ನು ಹಂಚಿಕೊಂಡಿದ್ದರು. ಈ ಪೋಸ್ಟ್‌ನಲ್ಲಿಯೂ ನವೋಪಾರ ರೈಲ್ವೆ ನಿಲ್ದಾಣದ ದೃಶ್ಯ ಎಂದು ಉಲ್ಲೇಖಿಸಲಾಗಿದೆ. ಪೋಸ್ಟ್‌ನ ಕೊನೆಯಲ್ಲಿ CAB (Citizenship Amendment Bill) ಎಂದು ಹ್ಯಾಷ್‌ಟ್ಯಾಗ್ ಕೊಟ್ಟಿರುವುದು ಅದು ಸಿಎಎ ಪ್ರತಿಭಟನೆಯ ಸಂದರ್ಭದ ವಿಡಿಯೋವೊ ಎಂಬುವುದನ್ನು ಹೇಳುತ್ತದೆ.

ವೈರಲ್ ಆಗಿರುವ ವಿಡಿಯೋ ಮತ್ತು ಮುರ್ಶಿದಾಬಾದ್‌ನ ನವೋಪಾರ ಮಹಿಶಾಸುರ ರೈಲ್ವೆ ನಿಲ್ದಾಣವನ್ನು ಸಿಎಎ ಪ್ರತಿಭಟನಾಕಾರರು ಧ್ವಂಸಗೊಳಿಸಿದ ಹಳೆಯ ವಿಡಿಯೊದಲ್ಲಿನ ಕೆಲವು ಸಾಮ್ಯತೆಗಳನ್ನು ನೋಡಬಹುದು.

People vandalised the Naopara Mahishasura railway station during anti-CAA protests in 2019.

15 ಡಿಸೆಂಬರ್ 2019 ರಂದು ಬೆಂಗಾಲಿ ನ್ಯೂಸ್ ಪೋರ್ಟಲ್ ‘ಬರ್ತಮನ್ ಪತ್ರಿಕಾ‘ದಲ್ಲಿ ಸಿಎಎ ಪ್ರತಿಭಟನಾಕಾರರು ರೈಲು ನಿಲ್ದಾಣಗಳ ಮೇಲೆ ದಾಳಿ ನಡೆಸಿರುವ ಕುರಿತು ವರದಿ ಪ್ರಕಟಿಸಿತ್ತು. ಆ ವರದಿಯಲ್ಲೂ ನವೋಪಾರಾ ಮಹಿಷಾಸುರ ನಿಲ್ದಾಣದ ಮೇಲಿನ ದಾಳಿಯ ಕುರಿತು ಉಲ್ಲೇಖಿಸಲಾಗಿದೆ.

ಲಭ್ಯ ಮೂಲಗಳನ್ನು ಬಳಸಿ ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ವಿಡಿಯೋ ಪಶ್ಚಿಮ ಬಂಗಾಳದ ನವೋಪಾರ ಮಹಿಶಾಸುರ ರೈಲ್ವೆ ನಿಲ್ದಾಣದ ಮೇಲೆ 2019ರ ಸಿಎಎ ವಿರೋಧಿ ಪ್ರತಿಭಟನೆ ನಡೆದ ದಾಳಿಯದ್ದು, ಅಲ್ಲದೆ ಅಝಾನ್‌ಗೆ ಅಡ್ಡಿಯಾಗುತ್ತದೆ ಎಂದು ರೈಲು ನಿಲ್ದಾಣ ಧ್ವಂಸಗೊಳಿಸಿದ್ದು ಅಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ನೀಟ್ ಟಾಪರ್‌ಗಳ ಜಾಹೀರಾತಿಗೆ ಕೋಮು ಬಣ್ಣ ಬಳಿದು ಪೇಪರ್ ಲೀಕ್ ಫಲಾನುಭವಿಗಳು ಎಂದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...