Homeಫ್ಯಾಕ್ಟ್‌ಚೆಕ್FACT CHECK : ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ರೈಲು ನಿಲ್ದಾಣದ ಮೇಲೆ ದಾಳಿ...

FACT CHECK : ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ರೈಲು ನಿಲ್ದಾಣದ ಮೇಲೆ ದಾಳಿ ನಡೆಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನ ಮಹಿಶಾಸುರ ರೈಲು ನಿಲ್ದಾಣವನ್ನು ಜನರು ಧ್ವಂಸಗೊಳಿಸಿದ್ದಾರೆ ಎಂದು ಆರೋಪಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

Mini Razdan (@mini_razdan10) ಎಂಬ ಎಕ್ಸ್‌ ಬಳಕೆದಾರ ಜುಲೈ 6ರಂದು ಮೊದಲು ಈ ವಿಡಿಯೋ ಪೋಸ್ಟ್‌ ಮಾಡಿದ್ದು, ಬಳಿಕ ಅನೇಕರು ವಿಡಿಯೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನದ್ದು ಎಂಬುವುದು ನಿಜ. ಆದರೆ, ಅದು 2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ದ ಪ್ರತಿಭಟಿಸುತ್ತಿದ್ದ ಜನರು ರೈಲ್ವೆ ನಿಲ್ದಾಣದ ಮೇಲೆ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ದೃಶ್ಯ ಎಂದು ತಿಳಿದು ಬಂದಿದೆ.

ಇದೇ ವಿಡಿಯೋ ಈ ಹಿಂದೆ ಬೇರೆ ಬೇರೆ ಬರಹಗಳೊಂದಿಗೆ ವೈರಲ್ ಆಗಿತ್ತು. ಆಗ ಕೆಲ ಮಾಧ್ಯಮಗಳು ಫ್ಯಾಕ್ಟ್‌ಚೆಕ್ ಮಾಡಿ ಸತ್ಯಾಸತ್ಯೆ ತಿಳಿಸಿತ್ತು.

ದಿ ಕ್ವಿಂಟ್ 29 ಏಪ್ರಿಲ್ 2022ರಂದು ನಡೆಸಿದ ಫ್ಯಾಕ್ಟ್‌ಚೆಕ್ ಸುದ್ದಿಯ ಲಿಂಕ್ ಇಲ್ಲಿದೆ

ವಿಡಿಯೋದ ಕುರಿತು ಇನ್ನಷ್ಟು ಖಚಿತಪಡಿಸಿಕೊಳ್ಳಲು ನಾವು ಫೋಟೋ ಮತ್ತು ಕೀ ವರ್ಡ್‌ ಬಳಸಿ ಗೂಗಲ್‌ನಲ್ಲಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ 16 ಡಿಸೆಂಬರ್ 2019ರಲ್ಲಿ ಹಾಕಲಾದ ಫೇಸ್‌ಬುಕ್‌ ಪೋಸ್ಟ್‌ ಒಂದು ಲಭ್ಯವಾಗಿದೆ. ಆ ಪೋಸ್ಟ್‌ನಲ್ಲಿರುವ ವಿಡಿಯೋ ಮತ್ತು ವೈರಲ್ ವಿಡಿಯೋ ಒಂದೇ ಎಂಬುವುದನ್ನು ಗಮನಿಸಬಹುದು. ಪೋಸ್ಟ್‌ನಲ್ಲಿ ನವೋಪಾರ ರೈಲು ನಿಲ್ದಾಣದ ದೃಶ್ಯ ಎಂದು ಬರೆಯಲಾಗಿದೆ. ನವೋಪಾರದ ರೈಲು ನಿಲ್ದಾಣದ ಹೆಸರು ಮಹಿಶಾಸುರ ಎಂದಾಗಿದೆ.

ಡಿಸೆಂಬರ್ 14, 2019ರಂದು ಮತ್ತೊಬ್ಬರು ಫೇಸ್‌ಬುಕ್ ಬಳಕೆದಾರರು ಕೂಡ ವೈರಲ್ ವಿಡಿಯೋವನ್ನು ಹಂಚಿಕೊಂಡಿದ್ದರು. ಈ ಪೋಸ್ಟ್‌ನಲ್ಲಿಯೂ ನವೋಪಾರ ರೈಲ್ವೆ ನಿಲ್ದಾಣದ ದೃಶ್ಯ ಎಂದು ಉಲ್ಲೇಖಿಸಲಾಗಿದೆ. ಪೋಸ್ಟ್‌ನ ಕೊನೆಯಲ್ಲಿ CAB (Citizenship Amendment Bill) ಎಂದು ಹ್ಯಾಷ್‌ಟ್ಯಾಗ್ ಕೊಟ್ಟಿರುವುದು ಅದು ಸಿಎಎ ಪ್ರತಿಭಟನೆಯ ಸಂದರ್ಭದ ವಿಡಿಯೋವೊ ಎಂಬುವುದನ್ನು ಹೇಳುತ್ತದೆ.

ವೈರಲ್ ಆಗಿರುವ ವಿಡಿಯೋ ಮತ್ತು ಮುರ್ಶಿದಾಬಾದ್‌ನ ನವೋಪಾರ ಮಹಿಶಾಸುರ ರೈಲ್ವೆ ನಿಲ್ದಾಣವನ್ನು ಸಿಎಎ ಪ್ರತಿಭಟನಾಕಾರರು ಧ್ವಂಸಗೊಳಿಸಿದ ಹಳೆಯ ವಿಡಿಯೊದಲ್ಲಿನ ಕೆಲವು ಸಾಮ್ಯತೆಗಳನ್ನು ನೋಡಬಹುದು.

People vandalised the Naopara Mahishasura railway station during anti-CAA protests in 2019.

15 ಡಿಸೆಂಬರ್ 2019 ರಂದು ಬೆಂಗಾಲಿ ನ್ಯೂಸ್ ಪೋರ್ಟಲ್ ‘ಬರ್ತಮನ್ ಪತ್ರಿಕಾ‘ದಲ್ಲಿ ಸಿಎಎ ಪ್ರತಿಭಟನಾಕಾರರು ರೈಲು ನಿಲ್ದಾಣಗಳ ಮೇಲೆ ದಾಳಿ ನಡೆಸಿರುವ ಕುರಿತು ವರದಿ ಪ್ರಕಟಿಸಿತ್ತು. ಆ ವರದಿಯಲ್ಲೂ ನವೋಪಾರಾ ಮಹಿಷಾಸುರ ನಿಲ್ದಾಣದ ಮೇಲಿನ ದಾಳಿಯ ಕುರಿತು ಉಲ್ಲೇಖಿಸಲಾಗಿದೆ.

ಲಭ್ಯ ಮೂಲಗಳನ್ನು ಬಳಸಿ ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ವಿಡಿಯೋ ಪಶ್ಚಿಮ ಬಂಗಾಳದ ನವೋಪಾರ ಮಹಿಶಾಸುರ ರೈಲ್ವೆ ನಿಲ್ದಾಣದ ಮೇಲೆ 2019ರ ಸಿಎಎ ವಿರೋಧಿ ಪ್ರತಿಭಟನೆ ನಡೆದ ದಾಳಿಯದ್ದು, ಅಲ್ಲದೆ ಅಝಾನ್‌ಗೆ ಅಡ್ಡಿಯಾಗುತ್ತದೆ ಎಂದು ರೈಲು ನಿಲ್ದಾಣ ಧ್ವಂಸಗೊಳಿಸಿದ್ದು ಅಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ನೀಟ್ ಟಾಪರ್‌ಗಳ ಜಾಹೀರಾತಿಗೆ ಕೋಮು ಬಣ್ಣ ಬಳಿದು ಪೇಪರ್ ಲೀಕ್ ಫಲಾನುಭವಿಗಳು ಎಂದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...