Homeಫ್ಯಾಕ್ಟ್‌ಚೆಕ್FACT CHECK : ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ರೈಲು ನಿಲ್ದಾಣದ ಮೇಲೆ ದಾಳಿ...

FACT CHECK : ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ರೈಲು ನಿಲ್ದಾಣದ ಮೇಲೆ ದಾಳಿ ನಡೆಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ರೈಲಿನ ಹಾರ್ನ್‌ನಿಂದ ನಮಾಝ್‌ಗೆ ಅಡ್ಡಿಯಾಗುತ್ತಿದೆ ಎಂದು ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನ ಮಹಿಶಾಸುರ ರೈಲು ನಿಲ್ದಾಣವನ್ನು ಜನರು ಧ್ವಂಸಗೊಳಿಸಿದ್ದಾರೆ ಎಂದು ಆರೋಪಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗಿದೆ.

Mini Razdan (@mini_razdan10) ಎಂಬ ಎಕ್ಸ್‌ ಬಳಕೆದಾರ ಜುಲೈ 6ರಂದು ಮೊದಲು ಈ ವಿಡಿಯೋ ಪೋಸ್ಟ್‌ ಮಾಡಿದ್ದು, ಬಳಿಕ ಅನೇಕರು ವಿಡಿಯೋ ಹಂಚಿಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ವಿಡಿಯೋ ಪಶ್ಚಿಮ ಬಂಗಾಳದ ಮುರ್ಶಿದಾಬಾದ್‌ನದ್ದು ಎಂಬುವುದು ನಿಜ. ಆದರೆ, ಅದು 2019ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರುದ್ದ ಪ್ರತಿಭಟಿಸುತ್ತಿದ್ದ ಜನರು ರೈಲ್ವೆ ನಿಲ್ದಾಣದ ಮೇಲೆ ದಾಳಿ ನಡೆಸಿ ಆಕ್ರೋಶ ವ್ಯಕ್ತಪಡಿಸಿರುವ ದೃಶ್ಯ ಎಂದು ತಿಳಿದು ಬಂದಿದೆ.

ಇದೇ ವಿಡಿಯೋ ಈ ಹಿಂದೆ ಬೇರೆ ಬೇರೆ ಬರಹಗಳೊಂದಿಗೆ ವೈರಲ್ ಆಗಿತ್ತು. ಆಗ ಕೆಲ ಮಾಧ್ಯಮಗಳು ಫ್ಯಾಕ್ಟ್‌ಚೆಕ್ ಮಾಡಿ ಸತ್ಯಾಸತ್ಯೆ ತಿಳಿಸಿತ್ತು.

ದಿ ಕ್ವಿಂಟ್ 29 ಏಪ್ರಿಲ್ 2022ರಂದು ನಡೆಸಿದ ಫ್ಯಾಕ್ಟ್‌ಚೆಕ್ ಸುದ್ದಿಯ ಲಿಂಕ್ ಇಲ್ಲಿದೆ

ವಿಡಿಯೋದ ಕುರಿತು ಇನ್ನಷ್ಟು ಖಚಿತಪಡಿಸಿಕೊಳ್ಳಲು ನಾವು ಫೋಟೋ ಮತ್ತು ಕೀ ವರ್ಡ್‌ ಬಳಸಿ ಗೂಗಲ್‌ನಲ್ಲಿ ಮಾಹಿತಿ ಹುಡುಕಿದ್ದೇವೆ. ಈ ವೇಳೆ 16 ಡಿಸೆಂಬರ್ 2019ರಲ್ಲಿ ಹಾಕಲಾದ ಫೇಸ್‌ಬುಕ್‌ ಪೋಸ್ಟ್‌ ಒಂದು ಲಭ್ಯವಾಗಿದೆ. ಆ ಪೋಸ್ಟ್‌ನಲ್ಲಿರುವ ವಿಡಿಯೋ ಮತ್ತು ವೈರಲ್ ವಿಡಿಯೋ ಒಂದೇ ಎಂಬುವುದನ್ನು ಗಮನಿಸಬಹುದು. ಪೋಸ್ಟ್‌ನಲ್ಲಿ ನವೋಪಾರ ರೈಲು ನಿಲ್ದಾಣದ ದೃಶ್ಯ ಎಂದು ಬರೆಯಲಾಗಿದೆ. ನವೋಪಾರದ ರೈಲು ನಿಲ್ದಾಣದ ಹೆಸರು ಮಹಿಶಾಸುರ ಎಂದಾಗಿದೆ.

ಡಿಸೆಂಬರ್ 14, 2019ರಂದು ಮತ್ತೊಬ್ಬರು ಫೇಸ್‌ಬುಕ್ ಬಳಕೆದಾರರು ಕೂಡ ವೈರಲ್ ವಿಡಿಯೋವನ್ನು ಹಂಚಿಕೊಂಡಿದ್ದರು. ಈ ಪೋಸ್ಟ್‌ನಲ್ಲಿಯೂ ನವೋಪಾರ ರೈಲ್ವೆ ನಿಲ್ದಾಣದ ದೃಶ್ಯ ಎಂದು ಉಲ್ಲೇಖಿಸಲಾಗಿದೆ. ಪೋಸ್ಟ್‌ನ ಕೊನೆಯಲ್ಲಿ CAB (Citizenship Amendment Bill) ಎಂದು ಹ್ಯಾಷ್‌ಟ್ಯಾಗ್ ಕೊಟ್ಟಿರುವುದು ಅದು ಸಿಎಎ ಪ್ರತಿಭಟನೆಯ ಸಂದರ್ಭದ ವಿಡಿಯೋವೊ ಎಂಬುವುದನ್ನು ಹೇಳುತ್ತದೆ.

ವೈರಲ್ ಆಗಿರುವ ವಿಡಿಯೋ ಮತ್ತು ಮುರ್ಶಿದಾಬಾದ್‌ನ ನವೋಪಾರ ಮಹಿಶಾಸುರ ರೈಲ್ವೆ ನಿಲ್ದಾಣವನ್ನು ಸಿಎಎ ಪ್ರತಿಭಟನಾಕಾರರು ಧ್ವಂಸಗೊಳಿಸಿದ ಹಳೆಯ ವಿಡಿಯೊದಲ್ಲಿನ ಕೆಲವು ಸಾಮ್ಯತೆಗಳನ್ನು ನೋಡಬಹುದು.

People vandalised the Naopara Mahishasura railway station during anti-CAA protests in 2019.

15 ಡಿಸೆಂಬರ್ 2019 ರಂದು ಬೆಂಗಾಲಿ ನ್ಯೂಸ್ ಪೋರ್ಟಲ್ ‘ಬರ್ತಮನ್ ಪತ್ರಿಕಾ‘ದಲ್ಲಿ ಸಿಎಎ ಪ್ರತಿಭಟನಾಕಾರರು ರೈಲು ನಿಲ್ದಾಣಗಳ ಮೇಲೆ ದಾಳಿ ನಡೆಸಿರುವ ಕುರಿತು ವರದಿ ಪ್ರಕಟಿಸಿತ್ತು. ಆ ವರದಿಯಲ್ಲೂ ನವೋಪಾರಾ ಮಹಿಷಾಸುರ ನಿಲ್ದಾಣದ ಮೇಲಿನ ದಾಳಿಯ ಕುರಿತು ಉಲ್ಲೇಖಿಸಲಾಗಿದೆ.

ಲಭ್ಯ ಮೂಲಗಳನ್ನು ಬಳಸಿ ನಾವು ನಡೆಸಿದ ಪರಿಶೀಲನೆಯಲ್ಲಿ ವೈರಲ್ ವಿಡಿಯೋ ಪಶ್ಚಿಮ ಬಂಗಾಳದ ನವೋಪಾರ ಮಹಿಶಾಸುರ ರೈಲ್ವೆ ನಿಲ್ದಾಣದ ಮೇಲೆ 2019ರ ಸಿಎಎ ವಿರೋಧಿ ಪ್ರತಿಭಟನೆ ನಡೆದ ದಾಳಿಯದ್ದು, ಅಲ್ಲದೆ ಅಝಾನ್‌ಗೆ ಅಡ್ಡಿಯಾಗುತ್ತದೆ ಎಂದು ರೈಲು ನಿಲ್ದಾಣ ಧ್ವಂಸಗೊಳಿಸಿದ್ದು ಅಲ್ಲ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ನೀಟ್ ಟಾಪರ್‌ಗಳ ಜಾಹೀರಾತಿಗೆ ಕೋಮು ಬಣ್ಣ ಬಳಿದು ಪೇಪರ್ ಲೀಕ್ ಫಲಾನುಭವಿಗಳು ಎಂದ ಬಲಪಂಥೀಯರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...