Homeಫ್ಯಾಕ್ಟ್‌ಚೆಕ್FACT CHECK : ಯಾದಗಿರಿಯಲ್ಲಿ ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬುವುದು ಸುಳ್ಳು

FACT CHECK : ಯಾದಗಿರಿಯಲ್ಲಿ ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬುವುದು ಸುಳ್ಳು

- Advertisement -
- Advertisement -

ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ರೈತರೊಬ್ಬರ ಜಮೀನನನ್ನು ವಕ್ಫ್ ಬೋರ್ಡ್‌ ಕಿತ್ತುಕೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ಹಬ್ಬಿದೆ.

ಡಿಜಿಟಲ್ ನ್ಯೂಸ್ ಆಪ್‌ ಒಂದರಲ್ಲಿ ತೆಲುಗು ಭಾಷೆಯಲ್ಲಿ ಪ್ರಕಟಗೊಂಡ ಸುದ್ದಿಯನ್ನು ಹಲವು ಬಲಪಂಥೀಯ ಎಕ್ಸ್‌ ಬಳಕೆದಾರರು ಹಂಚಿಕೊಂಡಿದ್ದಾರೆ.

Tathvam-asi(@ssaratht) ಎಂಬ ಎಕ್ಸ್ ಬಳಕೆದಾರೊಬ್ಬರು ಸುದ್ದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು ” ಮತ್ತೊಂದು ಲ್ಯಾಂಡ್ ಜಿಹಾದ್. ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ರೈತ ಅರ್ಜುನಪ್ಪ ತಮ್ಮ ಜಮೀನು ವಕ್ಫ್ ಮಂಡಳಿ ಸ್ವಾಧೀನಪಡಿಸಿಕೊಂಡಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ”

“ಅವರ ಜಮೀನಿನಲ್ಲಿ ಬಹಳ ಹಿಂದೆಯೇ ದರ್ಗಾ ನಿರ್ಮಿಸಲಾಗಿದ್ದು, ಮಗಳ ಮದುವೆಗಾಗಿ ಜಮೀನು ಮಾರಾಟ ಮಾಡಲು ಮುಂದಾದಾಗ ಅಧಿಕಾರಿಗಳು ಈ ಜಮೀನು ವಕ್ಫ್ ಮಂಡಳಿಗೆ ಸೇರಿದ್ದು, ಅದರ ಮೇಲೆ ತನಗೆ ಯಾವುದೇ ಹಕ್ಕಿಲ್ಲ ಎಂದು ತಿಳಿಸಿದ್ದಾರೆ.”

“ಒಂದು ವೇಳೆ ಭೂಮಿಯನ್ನು ಮರಳಿ ಪಡೆಯಲು ಸಾಧ್ಯವಾಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ರೈತನ ಆಯ್ಕೆಯಾಗಿದೆ. ಅವರು 3 ವರ್ಷಗಳಿಂದ ಇದಕ್ಕಾಗಿ ಹೋರಾಡುತ್ತಿದ್ದಾರೆ. ಇದು ಹಿಂದೂಗಳ ಭವಿಷ್ಯ. ಇದು ಎಲ್ಲೆಡೆ ನಡೆಯುತ್ತಿದೆ. ತಮಿಳುನಾಡು, ತೆಲಂಗಾಣ ಅಥವಾ ಕರ್ನಾಟಕವಾಗಲಿ ವಕ್ಫ್ ಭೂ ಕಬಳಿಕೆ ನಿಜ.”

“ಇತ್ತೀಚೆಗೆ ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ದೊಡ್ಡ ಸಂಸ್ಥೆಗಳಿಗೂ ಈ ತೊಂದರೆ ಎದುರಾಗಿದೆ ಎಂಬುವುದನ್ನು ನೆನಪಿಸಿಕೊಳ್ಳಿ. ಅವರು ಶ್ರೀಮಂತರು ಮತ್ತು ಪ್ರಸಿದ್ಧರು, ಅವರು ನ್ಯಾಯಾಲಯಗಳಿಗೆ ಹೋಗಿ ವಕ್ಫ್ ವಿರುದ್ದ ಹೋರಾಡಿದು. ಆದರೆ, ಒಬ್ಬ ಬಡ ಹಿಂದೂ 3 ವರ್ಷಗಳಿಂದ ಯಾವುದೇ ಬೆಂಬಲವಿಲ್ಲದೆ ಹೋರಾಡುತ್ತಿದ್ದಾನೆ. ಕಾನೂನು ಶ್ರೀಮಂತರಿಗೆ ಮಾತ್ರ ಎಂಬುವುದು ಇದರಿಂದ ಸಾಬೀತಾಗಿದೆ.” ಎಂದು ಬರೆದುಕೊಂಡಿದ್ದಾರೆ.

‘My India My Pride'(@munothbharath) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಅದೇ ರೀತಿ ಪೋಸ್ಟ್ ಹಾಕಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾವು ಮೊದಲು ಯಾದಗಿರಿ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್ ರೈತನಿಂದ ಜಮೀನು ವಾಪಸ್ ಪಡೆದುಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಆಗಿದೆಯಾ? ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಅಂತಹ ಯಾವುದೇ ಸುದ್ದಿ ನಮಗೆ ಕಂಡು ಬಂದಿಲ್ಲ.

ಯಾದಗಿರಿ ಜಿಲ್ಲೆಯಲ್ಲಿ ಶಾಬಾದ್‌ ಎಂಬ ಗ್ರಾಮ ಇದೆಯೇ ಎಂಬ ಬಗ್ಗೆ ನಾವು ಪರಿಶೀಲಿಸಿದ್ದೇವೆ. ಯಾದಗಿರಿ ಜಿಲ್ಲಾಡಳಿತದ ಅಧಿಕೃತ ವೆಬ್‌ ಸೈಟ್‌ನಲ್ಲಿ ‘ಶಾಬಾದ್‌’ ಎಂಬ ಗ್ರಾಮದ ಹೆಸರು ಕಂಡು ಬಂದಿಲ್ಲ.

ವೈರಲ್ ಸುದ್ದಿಯಲ್ಲಿರುವ ದರ್ಗಾ ಎನ್ನಲಾದ ಕಟ್ಟಡದ ಫೋಟೋವನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಅದು ‘ನಾಗ್ಪುರದಲ್ಲಿರುವ ಬಾಬಾ ಆಶಿಕ್‌ ಶಾಲ ಮಶೂಕ್‌ ಶಾ ರಹ್ಮತುಲ್ಲಾ ಅಲೈಹಿ ಇಸಾಸನಿ ತೆಕ್ಡಿ’ ಹೆಸರಿನ ದರ್ಗಾ ಎಂದು ಕಂಡು ಬಂದಿದೆ. ಈ ಕುರಿತ ಫೇಸ್‌ಬುಕ್‌ ಪೇಜ್ ಕೂಡ ಲಭ್ಯವಾಗಿದೆ.

ಗೂಗಲ್ ಮ್ಯಾಪ್‌ನಲ್ಲಿ ಸರ್ಚ್ ಮಾಡಿದಾಗ ನಾಗ್ಪುರದ ಇಸಸಾನಿಯಲ್ಲಿ ‘ಬಾಬಾ ಆಶಿಕ್‌ ಶಾಲ ಮಶೂಕ್‌ ಶಾ ರಹ್ಮತುಲ್ಲಾಹಿ ಅಲೈಹಿ’ ದರ್ಗಾ ಇದೆ ಎಂದು ಕಂಡುಕೊಂಡಿದ್ದೇವೆ.

 

ಗೂಗಲ್ ಮ್ಯಾಪ್ ಫೋಟೋ                                  ವೈರಲ್ ಸುದ್ದಿಯಲ್ಲಿರುವ ಫೋಟೋ

ವೈರಲ್‌ ಸುದ್ದಿಯಲ್ಲಿರುವ ಫೋಟೋ ಮತ್ತು ಗೂಗಲ್‌ ಮ್ಯಾಪ್‌ ಫೋಟೋ ಎರಡನ್ನೂ ಪರಿಶೀಲಿಸಿದ ವೇಳೆ ಎರಡರಲ್ಲೂ ಸಾಮ್ಯತೆ ಕಂಡು ಬಂದಿದೆ.

ಈ ಕುರಿತು ಇನ್ನಷ್ಟು ಖಚಿತಪಡಿಸಿಕೊಳ್ಳಲು ಯಾದಗಿರಿ ಜಿಲ್ಲೆಯ ವಕ್ಫ್ ಅಧಿಕಾರಿಯೊಬ್ಬರ ಜೊತೆ ನಾವು ದೂರವಾಣಿ ಮೂಲಕ ಮಾತನಾಡಿದ್ದೇವೆ. ಅವರು “ಈ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ. ವೈರಲ್ ಸುದ್ದಿಯಲ್ಲಿರುವ ಜಮೀನಿನ ಸರ್ವೆ ನಂಬರ್ ಕೊಟ್ಟರೆ ನಾವು ಪರಿಶೀಲನೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ವೈರಲ್ ಸುದ್ದಿಯಲ್ಲಿ ವಕ್ಫ್ ಇಲಾಖೆ ರೈತನ ಜಮೀನು ಕಿತ್ತುಕೊಂಡಿದೆ ಎಂದು ಹೇಳಲಾಗಿದೆ. ಆದರೆ, ವಕ್ಫ್ ಅಧಿಕಾರಿ ಈ ಬಗ್ಗೆ ನಮಗೆ ಮಾಹಿತಿಯೇ ಇಲ್ಲ ಎಂದಿದ್ದಾರೆ. ಅಲ್ಲದೆ, ವೈರಲ್ ಸುದ್ದಿಯಲ್ಲಿರುವ ದರ್ಗಾ ಎನ್ನಲಾದ ಕಟ್ಟಡದ ಫೋಟೋವನ್ನು ಗೂಗಲ್‌ನಲ್ಲಿ ಹುಡುಕಿದಾಗ, ಅದು ನಾಗ್ಪುರದ ಒಂದು ದರ್ಗಾವನ್ನು ತೋರಿಸುತ್ತಿದೆ. ಆದ್ದರಿಂದ ವೈರಲ್ ಸುದ್ದಿ ಸುಳ್ಳು ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಮುಸ್ಲಿಂ ವ್ಯಕ್ತಿ ಹಿಂದೂಗಳನ್ನು ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ನಕಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...