Homeಫ್ಯಾಕ್ಟ್‌ಚೆಕ್FACT CHECK : ಯಾದಗಿರಿಯಲ್ಲಿ ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬುವುದು ಸುಳ್ಳು

FACT CHECK : ಯಾದಗಿರಿಯಲ್ಲಿ ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬುವುದು ಸುಳ್ಳು

- Advertisement -
- Advertisement -

ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ರೈತರೊಬ್ಬರ ಜಮೀನನನ್ನು ವಕ್ಫ್ ಬೋರ್ಡ್‌ ಕಿತ್ತುಕೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ಹಬ್ಬಿದೆ.

ಡಿಜಿಟಲ್ ನ್ಯೂಸ್ ಆಪ್‌ ಒಂದರಲ್ಲಿ ತೆಲುಗು ಭಾಷೆಯಲ್ಲಿ ಪ್ರಕಟಗೊಂಡ ಸುದ್ದಿಯನ್ನು ಹಲವು ಬಲಪಂಥೀಯ ಎಕ್ಸ್‌ ಬಳಕೆದಾರರು ಹಂಚಿಕೊಂಡಿದ್ದಾರೆ.

Tathvam-asi(@ssaratht) ಎಂಬ ಎಕ್ಸ್ ಬಳಕೆದಾರೊಬ್ಬರು ಸುದ್ದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು ” ಮತ್ತೊಂದು ಲ್ಯಾಂಡ್ ಜಿಹಾದ್. ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ರೈತ ಅರ್ಜುನಪ್ಪ ತಮ್ಮ ಜಮೀನು ವಕ್ಫ್ ಮಂಡಳಿ ಸ್ವಾಧೀನಪಡಿಸಿಕೊಂಡಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ”

“ಅವರ ಜಮೀನಿನಲ್ಲಿ ಬಹಳ ಹಿಂದೆಯೇ ದರ್ಗಾ ನಿರ್ಮಿಸಲಾಗಿದ್ದು, ಮಗಳ ಮದುವೆಗಾಗಿ ಜಮೀನು ಮಾರಾಟ ಮಾಡಲು ಮುಂದಾದಾಗ ಅಧಿಕಾರಿಗಳು ಈ ಜಮೀನು ವಕ್ಫ್ ಮಂಡಳಿಗೆ ಸೇರಿದ್ದು, ಅದರ ಮೇಲೆ ತನಗೆ ಯಾವುದೇ ಹಕ್ಕಿಲ್ಲ ಎಂದು ತಿಳಿಸಿದ್ದಾರೆ.”

“ಒಂದು ವೇಳೆ ಭೂಮಿಯನ್ನು ಮರಳಿ ಪಡೆಯಲು ಸಾಧ್ಯವಾಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ರೈತನ ಆಯ್ಕೆಯಾಗಿದೆ. ಅವರು 3 ವರ್ಷಗಳಿಂದ ಇದಕ್ಕಾಗಿ ಹೋರಾಡುತ್ತಿದ್ದಾರೆ. ಇದು ಹಿಂದೂಗಳ ಭವಿಷ್ಯ. ಇದು ಎಲ್ಲೆಡೆ ನಡೆಯುತ್ತಿದೆ. ತಮಿಳುನಾಡು, ತೆಲಂಗಾಣ ಅಥವಾ ಕರ್ನಾಟಕವಾಗಲಿ ವಕ್ಫ್ ಭೂ ಕಬಳಿಕೆ ನಿಜ.”

“ಇತ್ತೀಚೆಗೆ ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ದೊಡ್ಡ ಸಂಸ್ಥೆಗಳಿಗೂ ಈ ತೊಂದರೆ ಎದುರಾಗಿದೆ ಎಂಬುವುದನ್ನು ನೆನಪಿಸಿಕೊಳ್ಳಿ. ಅವರು ಶ್ರೀಮಂತರು ಮತ್ತು ಪ್ರಸಿದ್ಧರು, ಅವರು ನ್ಯಾಯಾಲಯಗಳಿಗೆ ಹೋಗಿ ವಕ್ಫ್ ವಿರುದ್ದ ಹೋರಾಡಿದು. ಆದರೆ, ಒಬ್ಬ ಬಡ ಹಿಂದೂ 3 ವರ್ಷಗಳಿಂದ ಯಾವುದೇ ಬೆಂಬಲವಿಲ್ಲದೆ ಹೋರಾಡುತ್ತಿದ್ದಾನೆ. ಕಾನೂನು ಶ್ರೀಮಂತರಿಗೆ ಮಾತ್ರ ಎಂಬುವುದು ಇದರಿಂದ ಸಾಬೀತಾಗಿದೆ.” ಎಂದು ಬರೆದುಕೊಂಡಿದ್ದಾರೆ.

‘My India My Pride'(@munothbharath) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಅದೇ ರೀತಿ ಪೋಸ್ಟ್ ಹಾಕಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾವು ಮೊದಲು ಯಾದಗಿರಿ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್ ರೈತನಿಂದ ಜಮೀನು ವಾಪಸ್ ಪಡೆದುಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಆಗಿದೆಯಾ? ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಅಂತಹ ಯಾವುದೇ ಸುದ್ದಿ ನಮಗೆ ಕಂಡು ಬಂದಿಲ್ಲ.

ಯಾದಗಿರಿ ಜಿಲ್ಲೆಯಲ್ಲಿ ಶಾಬಾದ್‌ ಎಂಬ ಗ್ರಾಮ ಇದೆಯೇ ಎಂಬ ಬಗ್ಗೆ ನಾವು ಪರಿಶೀಲಿಸಿದ್ದೇವೆ. ಯಾದಗಿರಿ ಜಿಲ್ಲಾಡಳಿತದ ಅಧಿಕೃತ ವೆಬ್‌ ಸೈಟ್‌ನಲ್ಲಿ ‘ಶಾಬಾದ್‌’ ಎಂಬ ಗ್ರಾಮದ ಹೆಸರು ಕಂಡು ಬಂದಿಲ್ಲ.

ವೈರಲ್ ಸುದ್ದಿಯಲ್ಲಿರುವ ದರ್ಗಾ ಎನ್ನಲಾದ ಕಟ್ಟಡದ ಫೋಟೋವನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಅದು ‘ನಾಗ್ಪುರದಲ್ಲಿರುವ ಬಾಬಾ ಆಶಿಕ್‌ ಶಾಲ ಮಶೂಕ್‌ ಶಾ ರಹ್ಮತುಲ್ಲಾ ಅಲೈಹಿ ಇಸಾಸನಿ ತೆಕ್ಡಿ’ ಹೆಸರಿನ ದರ್ಗಾ ಎಂದು ಕಂಡು ಬಂದಿದೆ. ಈ ಕುರಿತ ಫೇಸ್‌ಬುಕ್‌ ಪೇಜ್ ಕೂಡ ಲಭ್ಯವಾಗಿದೆ.

ಗೂಗಲ್ ಮ್ಯಾಪ್‌ನಲ್ಲಿ ಸರ್ಚ್ ಮಾಡಿದಾಗ ನಾಗ್ಪುರದ ಇಸಸಾನಿಯಲ್ಲಿ ‘ಬಾಬಾ ಆಶಿಕ್‌ ಶಾಲ ಮಶೂಕ್‌ ಶಾ ರಹ್ಮತುಲ್ಲಾಹಿ ಅಲೈಹಿ’ ದರ್ಗಾ ಇದೆ ಎಂದು ಕಂಡುಕೊಂಡಿದ್ದೇವೆ.

 

ಗೂಗಲ್ ಮ್ಯಾಪ್ ಫೋಟೋ                                  ವೈರಲ್ ಸುದ್ದಿಯಲ್ಲಿರುವ ಫೋಟೋ

ವೈರಲ್‌ ಸುದ್ದಿಯಲ್ಲಿರುವ ಫೋಟೋ ಮತ್ತು ಗೂಗಲ್‌ ಮ್ಯಾಪ್‌ ಫೋಟೋ ಎರಡನ್ನೂ ಪರಿಶೀಲಿಸಿದ ವೇಳೆ ಎರಡರಲ್ಲೂ ಸಾಮ್ಯತೆ ಕಂಡು ಬಂದಿದೆ.

ಈ ಕುರಿತು ಇನ್ನಷ್ಟು ಖಚಿತಪಡಿಸಿಕೊಳ್ಳಲು ಯಾದಗಿರಿ ಜಿಲ್ಲೆಯ ವಕ್ಫ್ ಅಧಿಕಾರಿಯೊಬ್ಬರ ಜೊತೆ ನಾವು ದೂರವಾಣಿ ಮೂಲಕ ಮಾತನಾಡಿದ್ದೇವೆ. ಅವರು “ಈ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ. ವೈರಲ್ ಸುದ್ದಿಯಲ್ಲಿರುವ ಜಮೀನಿನ ಸರ್ವೆ ನಂಬರ್ ಕೊಟ್ಟರೆ ನಾವು ಪರಿಶೀಲನೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ವೈರಲ್ ಸುದ್ದಿಯಲ್ಲಿ ವಕ್ಫ್ ಇಲಾಖೆ ರೈತನ ಜಮೀನು ಕಿತ್ತುಕೊಂಡಿದೆ ಎಂದು ಹೇಳಲಾಗಿದೆ. ಆದರೆ, ವಕ್ಫ್ ಅಧಿಕಾರಿ ಈ ಬಗ್ಗೆ ನಮಗೆ ಮಾಹಿತಿಯೇ ಇಲ್ಲ ಎಂದಿದ್ದಾರೆ. ಅಲ್ಲದೆ, ವೈರಲ್ ಸುದ್ದಿಯಲ್ಲಿರುವ ದರ್ಗಾ ಎನ್ನಲಾದ ಕಟ್ಟಡದ ಫೋಟೋವನ್ನು ಗೂಗಲ್‌ನಲ್ಲಿ ಹುಡುಕಿದಾಗ, ಅದು ನಾಗ್ಪುರದ ಒಂದು ದರ್ಗಾವನ್ನು ತೋರಿಸುತ್ತಿದೆ. ಆದ್ದರಿಂದ ವೈರಲ್ ಸುದ್ದಿ ಸುಳ್ಳು ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಮುಸ್ಲಿಂ ವ್ಯಕ್ತಿ ಹಿಂದೂಗಳನ್ನು ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ನಕಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...