Homeಫ್ಯಾಕ್ಟ್‌ಚೆಕ್FACT CHECK : ಯಾದಗಿರಿಯಲ್ಲಿ ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬುವುದು ಸುಳ್ಳು

FACT CHECK : ಯಾದಗಿರಿಯಲ್ಲಿ ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬುವುದು ಸುಳ್ಳು

- Advertisement -
- Advertisement -

ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ರೈತರೊಬ್ಬರ ಜಮೀನನನ್ನು ವಕ್ಫ್ ಬೋರ್ಡ್‌ ಕಿತ್ತುಕೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ಹಬ್ಬಿದೆ.

ಡಿಜಿಟಲ್ ನ್ಯೂಸ್ ಆಪ್‌ ಒಂದರಲ್ಲಿ ತೆಲುಗು ಭಾಷೆಯಲ್ಲಿ ಪ್ರಕಟಗೊಂಡ ಸುದ್ದಿಯನ್ನು ಹಲವು ಬಲಪಂಥೀಯ ಎಕ್ಸ್‌ ಬಳಕೆದಾರರು ಹಂಚಿಕೊಂಡಿದ್ದಾರೆ.

Tathvam-asi(@ssaratht) ಎಂಬ ಎಕ್ಸ್ ಬಳಕೆದಾರೊಬ್ಬರು ಸುದ್ದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು ” ಮತ್ತೊಂದು ಲ್ಯಾಂಡ್ ಜಿಹಾದ್. ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ರೈತ ಅರ್ಜುನಪ್ಪ ತಮ್ಮ ಜಮೀನು ವಕ್ಫ್ ಮಂಡಳಿ ಸ್ವಾಧೀನಪಡಿಸಿಕೊಂಡಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ”

“ಅವರ ಜಮೀನಿನಲ್ಲಿ ಬಹಳ ಹಿಂದೆಯೇ ದರ್ಗಾ ನಿರ್ಮಿಸಲಾಗಿದ್ದು, ಮಗಳ ಮದುವೆಗಾಗಿ ಜಮೀನು ಮಾರಾಟ ಮಾಡಲು ಮುಂದಾದಾಗ ಅಧಿಕಾರಿಗಳು ಈ ಜಮೀನು ವಕ್ಫ್ ಮಂಡಳಿಗೆ ಸೇರಿದ್ದು, ಅದರ ಮೇಲೆ ತನಗೆ ಯಾವುದೇ ಹಕ್ಕಿಲ್ಲ ಎಂದು ತಿಳಿಸಿದ್ದಾರೆ.”

“ಒಂದು ವೇಳೆ ಭೂಮಿಯನ್ನು ಮರಳಿ ಪಡೆಯಲು ಸಾಧ್ಯವಾಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ರೈತನ ಆಯ್ಕೆಯಾಗಿದೆ. ಅವರು 3 ವರ್ಷಗಳಿಂದ ಇದಕ್ಕಾಗಿ ಹೋರಾಡುತ್ತಿದ್ದಾರೆ. ಇದು ಹಿಂದೂಗಳ ಭವಿಷ್ಯ. ಇದು ಎಲ್ಲೆಡೆ ನಡೆಯುತ್ತಿದೆ. ತಮಿಳುನಾಡು, ತೆಲಂಗಾಣ ಅಥವಾ ಕರ್ನಾಟಕವಾಗಲಿ ವಕ್ಫ್ ಭೂ ಕಬಳಿಕೆ ನಿಜ.”

“ಇತ್ತೀಚೆಗೆ ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ದೊಡ್ಡ ಸಂಸ್ಥೆಗಳಿಗೂ ಈ ತೊಂದರೆ ಎದುರಾಗಿದೆ ಎಂಬುವುದನ್ನು ನೆನಪಿಸಿಕೊಳ್ಳಿ. ಅವರು ಶ್ರೀಮಂತರು ಮತ್ತು ಪ್ರಸಿದ್ಧರು, ಅವರು ನ್ಯಾಯಾಲಯಗಳಿಗೆ ಹೋಗಿ ವಕ್ಫ್ ವಿರುದ್ದ ಹೋರಾಡಿದು. ಆದರೆ, ಒಬ್ಬ ಬಡ ಹಿಂದೂ 3 ವರ್ಷಗಳಿಂದ ಯಾವುದೇ ಬೆಂಬಲವಿಲ್ಲದೆ ಹೋರಾಡುತ್ತಿದ್ದಾನೆ. ಕಾನೂನು ಶ್ರೀಮಂತರಿಗೆ ಮಾತ್ರ ಎಂಬುವುದು ಇದರಿಂದ ಸಾಬೀತಾಗಿದೆ.” ಎಂದು ಬರೆದುಕೊಂಡಿದ್ದಾರೆ.

‘My India My Pride'(@munothbharath) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಅದೇ ರೀತಿ ಪೋಸ್ಟ್ ಹಾಕಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾವು ಮೊದಲು ಯಾದಗಿರಿ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್ ರೈತನಿಂದ ಜಮೀನು ವಾಪಸ್ ಪಡೆದುಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಆಗಿದೆಯಾ? ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಅಂತಹ ಯಾವುದೇ ಸುದ್ದಿ ನಮಗೆ ಕಂಡು ಬಂದಿಲ್ಲ.

ಯಾದಗಿರಿ ಜಿಲ್ಲೆಯಲ್ಲಿ ಶಾಬಾದ್‌ ಎಂಬ ಗ್ರಾಮ ಇದೆಯೇ ಎಂಬ ಬಗ್ಗೆ ನಾವು ಪರಿಶೀಲಿಸಿದ್ದೇವೆ. ಯಾದಗಿರಿ ಜಿಲ್ಲಾಡಳಿತದ ಅಧಿಕೃತ ವೆಬ್‌ ಸೈಟ್‌ನಲ್ಲಿ ‘ಶಾಬಾದ್‌’ ಎಂಬ ಗ್ರಾಮದ ಹೆಸರು ಕಂಡು ಬಂದಿಲ್ಲ.

ವೈರಲ್ ಸುದ್ದಿಯಲ್ಲಿರುವ ದರ್ಗಾ ಎನ್ನಲಾದ ಕಟ್ಟಡದ ಫೋಟೋವನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಅದು ‘ನಾಗ್ಪುರದಲ್ಲಿರುವ ಬಾಬಾ ಆಶಿಕ್‌ ಶಾಲ ಮಶೂಕ್‌ ಶಾ ರಹ್ಮತುಲ್ಲಾ ಅಲೈಹಿ ಇಸಾಸನಿ ತೆಕ್ಡಿ’ ಹೆಸರಿನ ದರ್ಗಾ ಎಂದು ಕಂಡು ಬಂದಿದೆ. ಈ ಕುರಿತ ಫೇಸ್‌ಬುಕ್‌ ಪೇಜ್ ಕೂಡ ಲಭ್ಯವಾಗಿದೆ.

ಗೂಗಲ್ ಮ್ಯಾಪ್‌ನಲ್ಲಿ ಸರ್ಚ್ ಮಾಡಿದಾಗ ನಾಗ್ಪುರದ ಇಸಸಾನಿಯಲ್ಲಿ ‘ಬಾಬಾ ಆಶಿಕ್‌ ಶಾಲ ಮಶೂಕ್‌ ಶಾ ರಹ್ಮತುಲ್ಲಾಹಿ ಅಲೈಹಿ’ ದರ್ಗಾ ಇದೆ ಎಂದು ಕಂಡುಕೊಂಡಿದ್ದೇವೆ.

 

ಗೂಗಲ್ ಮ್ಯಾಪ್ ಫೋಟೋ                                  ವೈರಲ್ ಸುದ್ದಿಯಲ್ಲಿರುವ ಫೋಟೋ

ವೈರಲ್‌ ಸುದ್ದಿಯಲ್ಲಿರುವ ಫೋಟೋ ಮತ್ತು ಗೂಗಲ್‌ ಮ್ಯಾಪ್‌ ಫೋಟೋ ಎರಡನ್ನೂ ಪರಿಶೀಲಿಸಿದ ವೇಳೆ ಎರಡರಲ್ಲೂ ಸಾಮ್ಯತೆ ಕಂಡು ಬಂದಿದೆ.

ಈ ಕುರಿತು ಇನ್ನಷ್ಟು ಖಚಿತಪಡಿಸಿಕೊಳ್ಳಲು ಯಾದಗಿರಿ ಜಿಲ್ಲೆಯ ವಕ್ಫ್ ಅಧಿಕಾರಿಯೊಬ್ಬರ ಜೊತೆ ನಾವು ದೂರವಾಣಿ ಮೂಲಕ ಮಾತನಾಡಿದ್ದೇವೆ. ಅವರು “ಈ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ. ವೈರಲ್ ಸುದ್ದಿಯಲ್ಲಿರುವ ಜಮೀನಿನ ಸರ್ವೆ ನಂಬರ್ ಕೊಟ್ಟರೆ ನಾವು ಪರಿಶೀಲನೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ವೈರಲ್ ಸುದ್ದಿಯಲ್ಲಿ ವಕ್ಫ್ ಇಲಾಖೆ ರೈತನ ಜಮೀನು ಕಿತ್ತುಕೊಂಡಿದೆ ಎಂದು ಹೇಳಲಾಗಿದೆ. ಆದರೆ, ವಕ್ಫ್ ಅಧಿಕಾರಿ ಈ ಬಗ್ಗೆ ನಮಗೆ ಮಾಹಿತಿಯೇ ಇಲ್ಲ ಎಂದಿದ್ದಾರೆ. ಅಲ್ಲದೆ, ವೈರಲ್ ಸುದ್ದಿಯಲ್ಲಿರುವ ದರ್ಗಾ ಎನ್ನಲಾದ ಕಟ್ಟಡದ ಫೋಟೋವನ್ನು ಗೂಗಲ್‌ನಲ್ಲಿ ಹುಡುಕಿದಾಗ, ಅದು ನಾಗ್ಪುರದ ಒಂದು ದರ್ಗಾವನ್ನು ತೋರಿಸುತ್ತಿದೆ. ಆದ್ದರಿಂದ ವೈರಲ್ ಸುದ್ದಿ ಸುಳ್ಳು ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಮುಸ್ಲಿಂ ವ್ಯಕ್ತಿ ಹಿಂದೂಗಳನ್ನು ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ನಕಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...