Homeಫ್ಯಾಕ್ಟ್‌ಚೆಕ್FACT CHECK : ಯಾದಗಿರಿಯಲ್ಲಿ ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬುವುದು ಸುಳ್ಳು

FACT CHECK : ಯಾದಗಿರಿಯಲ್ಲಿ ರೈತನ ಜಮೀನನ್ನು ವಕ್ಫ್ ಬೋರ್ಡ್ ಕಿತ್ತುಕೊಂಡಿದೆ ಎಂಬುವುದು ಸುಳ್ಳು

- Advertisement -
- Advertisement -

ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ರೈತರೊಬ್ಬರ ಜಮೀನನನ್ನು ವಕ್ಫ್ ಬೋರ್ಡ್‌ ಕಿತ್ತುಕೊಂಡಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯೊಂದು ಹಬ್ಬಿದೆ.

ಡಿಜಿಟಲ್ ನ್ಯೂಸ್ ಆಪ್‌ ಒಂದರಲ್ಲಿ ತೆಲುಗು ಭಾಷೆಯಲ್ಲಿ ಪ್ರಕಟಗೊಂಡ ಸುದ್ದಿಯನ್ನು ಹಲವು ಬಲಪಂಥೀಯ ಎಕ್ಸ್‌ ಬಳಕೆದಾರರು ಹಂಚಿಕೊಂಡಿದ್ದಾರೆ.

Tathvam-asi(@ssaratht) ಎಂಬ ಎಕ್ಸ್ ಬಳಕೆದಾರೊಬ್ಬರು ಸುದ್ದಿಯ ಸ್ಕ್ರೀನ್ ಶಾಟ್ ಹಂಚಿಕೊಂಡು ” ಮತ್ತೊಂದು ಲ್ಯಾಂಡ್ ಜಿಹಾದ್. ಕರ್ನಾಟಕದ ಯಾದಗಿರಿ ಜಿಲ್ಲೆಯ ಶಾಬಾದ್ ಗ್ರಾಮದಲ್ಲಿ ರೈತ ಅರ್ಜುನಪ್ಪ ತಮ್ಮ ಜಮೀನು ವಕ್ಫ್ ಮಂಡಳಿ ಸ್ವಾಧೀನಪಡಿಸಿಕೊಂಡಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ”

“ಅವರ ಜಮೀನಿನಲ್ಲಿ ಬಹಳ ಹಿಂದೆಯೇ ದರ್ಗಾ ನಿರ್ಮಿಸಲಾಗಿದ್ದು, ಮಗಳ ಮದುವೆಗಾಗಿ ಜಮೀನು ಮಾರಾಟ ಮಾಡಲು ಮುಂದಾದಾಗ ಅಧಿಕಾರಿಗಳು ಈ ಜಮೀನು ವಕ್ಫ್ ಮಂಡಳಿಗೆ ಸೇರಿದ್ದು, ಅದರ ಮೇಲೆ ತನಗೆ ಯಾವುದೇ ಹಕ್ಕಿಲ್ಲ ಎಂದು ತಿಳಿಸಿದ್ದಾರೆ.”

“ಒಂದು ವೇಳೆ ಭೂಮಿಯನ್ನು ಮರಳಿ ಪಡೆಯಲು ಸಾಧ್ಯವಾಗದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ರೈತನ ಆಯ್ಕೆಯಾಗಿದೆ. ಅವರು 3 ವರ್ಷಗಳಿಂದ ಇದಕ್ಕಾಗಿ ಹೋರಾಡುತ್ತಿದ್ದಾರೆ. ಇದು ಹಿಂದೂಗಳ ಭವಿಷ್ಯ. ಇದು ಎಲ್ಲೆಡೆ ನಡೆಯುತ್ತಿದೆ. ತಮಿಳುನಾಡು, ತೆಲಂಗಾಣ ಅಥವಾ ಕರ್ನಾಟಕವಾಗಲಿ ವಕ್ಫ್ ಭೂ ಕಬಳಿಕೆ ನಿಜ.”

“ಇತ್ತೀಚೆಗೆ ಹೈದರಾಬಾದ್ ಮತ್ತು ಬೆಂಗಳೂರಿನಲ್ಲಿ ದೊಡ್ಡ ಸಂಸ್ಥೆಗಳಿಗೂ ಈ ತೊಂದರೆ ಎದುರಾಗಿದೆ ಎಂಬುವುದನ್ನು ನೆನಪಿಸಿಕೊಳ್ಳಿ. ಅವರು ಶ್ರೀಮಂತರು ಮತ್ತು ಪ್ರಸಿದ್ಧರು, ಅವರು ನ್ಯಾಯಾಲಯಗಳಿಗೆ ಹೋಗಿ ವಕ್ಫ್ ವಿರುದ್ದ ಹೋರಾಡಿದು. ಆದರೆ, ಒಬ್ಬ ಬಡ ಹಿಂದೂ 3 ವರ್ಷಗಳಿಂದ ಯಾವುದೇ ಬೆಂಬಲವಿಲ್ಲದೆ ಹೋರಾಡುತ್ತಿದ್ದಾನೆ. ಕಾನೂನು ಶ್ರೀಮಂತರಿಗೆ ಮಾತ್ರ ಎಂಬುವುದು ಇದರಿಂದ ಸಾಬೀತಾಗಿದೆ.” ಎಂದು ಬರೆದುಕೊಂಡಿದ್ದಾರೆ.

‘My India My Pride'(@munothbharath) ಎಂಬ ಮತ್ತೊಂದು ಎಕ್ಸ್ ಖಾತೆಯಲ್ಲೂ ಅದೇ ರೀತಿ ಪೋಸ್ಟ್ ಹಾಕಲಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ಸುದ್ದಿಯ ಸತ್ಯಾಸತ್ಯತೆ ತಿಳಿಯಲು ನಾವು ಮೊದಲು ಯಾದಗಿರಿ ಜಿಲ್ಲೆಯಲ್ಲಿ ವಕ್ಫ್ ಬೋರ್ಡ್ ರೈತನಿಂದ ಜಮೀನು ವಾಪಸ್ ಪಡೆದುಕೊಂಡಿರುವ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಆಗಿದೆಯಾ? ಎಂದು ಪರಿಶೀಲಿಸಿದ್ದೇವೆ. ಈ ವೇಳೆ ಅಂತಹ ಯಾವುದೇ ಸುದ್ದಿ ನಮಗೆ ಕಂಡು ಬಂದಿಲ್ಲ.

ಯಾದಗಿರಿ ಜಿಲ್ಲೆಯಲ್ಲಿ ಶಾಬಾದ್‌ ಎಂಬ ಗ್ರಾಮ ಇದೆಯೇ ಎಂಬ ಬಗ್ಗೆ ನಾವು ಪರಿಶೀಲಿಸಿದ್ದೇವೆ. ಯಾದಗಿರಿ ಜಿಲ್ಲಾಡಳಿತದ ಅಧಿಕೃತ ವೆಬ್‌ ಸೈಟ್‌ನಲ್ಲಿ ‘ಶಾಬಾದ್‌’ ಎಂಬ ಗ್ರಾಮದ ಹೆಸರು ಕಂಡು ಬಂದಿಲ್ಲ.

ವೈರಲ್ ಸುದ್ದಿಯಲ್ಲಿರುವ ದರ್ಗಾ ಎನ್ನಲಾದ ಕಟ್ಟಡದ ಫೋಟೋವನ್ನು ನಾವು ಗೂಗಲ್ ರಿವರ್ಸ್ ಇಮೇಜ್‌ನಲ್ಲಿ ಹುಡುಕಾಡಿದ್ದೇವೆ. ಈ ವೇಳೆ ಅದು ‘ನಾಗ್ಪುರದಲ್ಲಿರುವ ಬಾಬಾ ಆಶಿಕ್‌ ಶಾಲ ಮಶೂಕ್‌ ಶಾ ರಹ್ಮತುಲ್ಲಾ ಅಲೈಹಿ ಇಸಾಸನಿ ತೆಕ್ಡಿ’ ಹೆಸರಿನ ದರ್ಗಾ ಎಂದು ಕಂಡು ಬಂದಿದೆ. ಈ ಕುರಿತ ಫೇಸ್‌ಬುಕ್‌ ಪೇಜ್ ಕೂಡ ಲಭ್ಯವಾಗಿದೆ.

ಗೂಗಲ್ ಮ್ಯಾಪ್‌ನಲ್ಲಿ ಸರ್ಚ್ ಮಾಡಿದಾಗ ನಾಗ್ಪುರದ ಇಸಸಾನಿಯಲ್ಲಿ ‘ಬಾಬಾ ಆಶಿಕ್‌ ಶಾಲ ಮಶೂಕ್‌ ಶಾ ರಹ್ಮತುಲ್ಲಾಹಿ ಅಲೈಹಿ’ ದರ್ಗಾ ಇದೆ ಎಂದು ಕಂಡುಕೊಂಡಿದ್ದೇವೆ.

 

ಗೂಗಲ್ ಮ್ಯಾಪ್ ಫೋಟೋ                                  ವೈರಲ್ ಸುದ್ದಿಯಲ್ಲಿರುವ ಫೋಟೋ

ವೈರಲ್‌ ಸುದ್ದಿಯಲ್ಲಿರುವ ಫೋಟೋ ಮತ್ತು ಗೂಗಲ್‌ ಮ್ಯಾಪ್‌ ಫೋಟೋ ಎರಡನ್ನೂ ಪರಿಶೀಲಿಸಿದ ವೇಳೆ ಎರಡರಲ್ಲೂ ಸಾಮ್ಯತೆ ಕಂಡು ಬಂದಿದೆ.

ಈ ಕುರಿತು ಇನ್ನಷ್ಟು ಖಚಿತಪಡಿಸಿಕೊಳ್ಳಲು ಯಾದಗಿರಿ ಜಿಲ್ಲೆಯ ವಕ್ಫ್ ಅಧಿಕಾರಿಯೊಬ್ಬರ ಜೊತೆ ನಾವು ದೂರವಾಣಿ ಮೂಲಕ ಮಾತನಾಡಿದ್ದೇವೆ. ಅವರು “ಈ ಬಗ್ಗೆ ನಮಗೆ ಯಾವುದೇ ಮಾಹಿತಿಯಿಲ್ಲ. ವೈರಲ್ ಸುದ್ದಿಯಲ್ಲಿರುವ ಜಮೀನಿನ ಸರ್ವೆ ನಂಬರ್ ಕೊಟ್ಟರೆ ನಾವು ಪರಿಶೀಲನೆ ನಡೆಸುತ್ತೇವೆ” ಎಂದು ಹೇಳಿದ್ದಾರೆ.

ವೈರಲ್ ಸುದ್ದಿಯಲ್ಲಿ ವಕ್ಫ್ ಇಲಾಖೆ ರೈತನ ಜಮೀನು ಕಿತ್ತುಕೊಂಡಿದೆ ಎಂದು ಹೇಳಲಾಗಿದೆ. ಆದರೆ, ವಕ್ಫ್ ಅಧಿಕಾರಿ ಈ ಬಗ್ಗೆ ನಮಗೆ ಮಾಹಿತಿಯೇ ಇಲ್ಲ ಎಂದಿದ್ದಾರೆ. ಅಲ್ಲದೆ, ವೈರಲ್ ಸುದ್ದಿಯಲ್ಲಿರುವ ದರ್ಗಾ ಎನ್ನಲಾದ ಕಟ್ಟಡದ ಫೋಟೋವನ್ನು ಗೂಗಲ್‌ನಲ್ಲಿ ಹುಡುಕಿದಾಗ, ಅದು ನಾಗ್ಪುರದ ಒಂದು ದರ್ಗಾವನ್ನು ತೋರಿಸುತ್ತಿದೆ. ಆದ್ದರಿಂದ ವೈರಲ್ ಸುದ್ದಿ ಸುಳ್ಳು ಎಂದು ಹೇಳಬಹುದು.

ಇದನ್ನೂ ಓದಿ : FACT CHECK : ಮುಸ್ಲಿಂ ವ್ಯಕ್ತಿ ಹಿಂದೂಗಳನ್ನು ನಿಂದಿಸಿದ್ದಾರೆ ಎನ್ನಲಾದ ವಿಡಿಯೋ ನಕಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...