Homeಫ್ಯಾಕ್ಟ್‌ಚೆಕ್FACT CHECK : ಕುರಾನ್ ಬೋಧಿಸುವ ಭಾರತದ ವಿವಿಗಳಲ್ಲಿ ಭಗವದ್ಗೀತೆ, ರಾಮಾಯಣ ಅಧ್ಯಯನಕ್ಕೆ ಕೋರ್ಸ್‌ಗಳಿಲ್ಲ ಎನ್ನುವುದು...

FACT CHECK : ಕುರಾನ್ ಬೋಧಿಸುವ ಭಾರತದ ವಿವಿಗಳಲ್ಲಿ ಭಗವದ್ಗೀತೆ, ರಾಮಾಯಣ ಅಧ್ಯಯನಕ್ಕೆ ಕೋರ್ಸ್‌ಗಳಿಲ್ಲ ಎನ್ನುವುದು ಸುಳ್ಳು

- Advertisement -
- Advertisement -

“ಭಾರತದಲ್ಲಿ 20 ಸರ್ಕಾರಿ ಅನುದಾನಿತ ವಿಶ್ವ ವಿದ್ಯಾನಿಲಯಗಳು ಕುರಾನ್ ಅಧ್ಯಯನ ಮಾಡಲು ಕೋರ್ಸ್‌ಗಳನ್ನು ನೀಡುತ್ತಿವೆ. ಆದರೆ, ಭಗವದ್ಗೀತೆ ಅಥವಾ ರಾಮಾಯಣವನ್ನು ಅಧ್ಯಯನ ಮಾಡಲು ಯಾವುದೇ ಕೋರ್ಸ್‌ಗಳಿಲ್ಲ” ಎಂಬ ಪೋಸ್ಟ್‌ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಗಿದೆ.

ಅನೇಕ ಬಳಕೆದಾರರು ಈ ರೀತಿಯ ಪೋಸ್ಟ್‌ಗಳನ್ನು ತಮ್ಮ ಫೇಸ್‌ಬುಕ್‌ ಖಾತೆಗಳಲ್ಲಿ ಹಾಕಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ ಹೇಳಿರುವಂತೆ ಭಾರತದ ವಿವಿಧ ವಿಶ್ವ ವಿದ್ಯಾನಿಲಯಗಳು ಇಸ್ಲಾಮಿಕ್ ಅಧ್ಯಯನದ ಭಾಗವಾಗಿ ಕುರಾನ್ ಬೋಧಿಸುತ್ತಿರುವುದು ನಿಜ. ಆದರೆ, ಯಾವುದೇ ವಿವಿಗಳು ಭಗವದ್ಗೀತೆ ಅಥವಾ ರಾಮಾಯಣ ಬೋಧಿಸುತ್ತಿಲ್ಲ ಎನ್ನುವುದು ಸುಳ್ಳು.

ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ, ಮೊಹಮ್ಮದ್ ಅಲಿ ಜೌಹರ್ ಮತ್ತು ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯದಂತಹ ಭಾರತದ ಅನೇಕ ವಿಶ್ವವಿದ್ಯಾನಿಲಯಗಳು ತಮ್ಮ ಇಸ್ಲಾಮಿಕ್ ಅಧ್ಯಯನ ಪಠ್ಯಕ್ರಮದ ಭಾಗವಾಗಿ ಕುರಾನ್ ಕಲಿಸುತ್ತಿವೆ.

ಅದೇ ರೀತಿ, ದೇಶದ ಅನೇಕ ವಿಶ್ವ ವಿದ್ಯಾಲಯಗಳು ಭಗವದ್ಗೀತೆಯ ಕೋರ್ಸ್‌ಗಳನ್ನೂ ನೀಡುತ್ತಿವೆ. ಉದಾಹರಣೆಗೆ : ಕುರುಕ್ಷೇತ್ರ ವಿಶ್ವವಿದ್ಯಾನಿಲಯವು 2012ರಲ್ಲಿ ಭಗವದ್ಗೀತೆಯ ಕುರಿತು ಕೋರ್ಸ್ ಪರಿಚಯಿಸಿದೆ. ಇಂದಿರಾಗಾಂಧಿ ರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯವು (IGNOU)ಭಗವದ್ಗೀತೆ ಕುರಿತು ಸ್ನಾತಕೋತ್ತರ ಪ್ರಮಾಣಪತ್ರ ಕೋರ್ಸ್‌ ನೀಡುತ್ತಿದೆ. ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ದಿ ಆರ್ಟ್ಸ್ ಕೂಡ ಹಲವು ವರ್ಷಗಳಿಂದ ರಾಮಾಯಣ ಮತ್ತು ಮಹಾಭಾರತ ಕೋರ್ಸ್ ಅನ್ನು ನೀಡುತ್ತಿದೆ.

ಲಕ್ನೋ ವಿಶ್ವವಿದ್ಯಾಲಯವು 2020 ರಲ್ಲಿ ಭಗವದ್ಗೀತೆಯ ಆನ್‌ಲೈನ್ ಕೋರ್ಸ್ ಪರಿಚಯಿಸಿದೆ. ಗುಜರಾತ್, ಕರ್ನಾಟಕದಂತಹ ರಾಜ್ಯಗಳು ತಮ್ಮ ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಸೇರಿಸಿವೆ ಎಂದು ವರದಿಗಳಿವೆ.

ಡಿಸೆಂಬರ್ 2021 ರಲ್ಲಿ, ಲೋಕಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಶಿಕ್ಷಣ ಸಚಿವರು ಭಗವದ್ಗೀತೆಗೆ ಸಂಬಂಧಿಸಿದ ವಿಷಯವು ಈಗಾಗಲೇ ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE)ನಲ್ಲಿ ವಿವಿಧ ತರಗತಿಗಳ ಭಾಗವಾಗಿದೆ ಎಂದು ತಿಳಿಸಿದ್ದರು.

ಇದಲ್ಲದೆ, ಯೋಗ ವಿಷಯಕ್ಕಾಗಿ ಯುಜಿಸಿ-ನೆಟ್ ಪರೀಕ್ಷೆಯ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಅಳವಡಿಸಲಾಗಿದೆ. ರಾಜ್ಯಗಳು ತಮ್ಮ ಪಠ್ಯಕ್ರಮದಲ್ಲಿ ಭಗವದ್ಗೀತೆ, ರಾಮಾಯಣ ಕುರಿತ ವಿಷಯಗಳನ್ನು ಸೇರಿಸಲು ಅಧಿಕಾರ ಹೊಂದಿವೆ.

ನಾವು ಮೇಲೆ ಉಲ್ಲೇಖಿಸಿದ ಮಾಹಿತಿಯ ಪ್ರಕಾರ, ಭಾರತದ ವಿವಿದ ವಿಶ್ವವಿದ್ಯಾಲಯಗಳು ಸೇರಿದಂತೆ ಅನೇಕ ಶಿಕ್ಷಣ ಸಂಸ್ಥೆಗಳು ಭಗವದ್ಗೀತೆ, ರಾಮಾಯಣ ಬೋಧಿಸುತ್ತಿರುವುದು ಸ್ಪಷ್ಟವಾಗಿದೆ. ಹಾಗಾಗಿ, ಸಾಮಾಜಿಕ ಜಾಲತಾಣದ ಪೋಸ್ಟ್ ಸುಳ್ಳು.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿಯನ್ನು ಟೀಕಿಸಿರುವ ಉದ್ಧವ್ ಠಾಕ್ರೆಯ ವೈರಲ್ ಭಾಷಣ 2019ರದ್ದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...