Homeಫ್ಯಾಕ್ಟ್‌ಚೆಕ್FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

- Advertisement -
- Advertisement -

“ನವ ಭಾರತ ವೇಗವಾಗಿ ಮುನ್ನೆಡೆಯುತ್ತಿದೆ. 2014ರಲ್ಲಿ ಭಾರತದಲ್ಲಿ ಇದ್ದದ್ದು ಕೇವಲ 300 ಸ್ಟಾರ್ಟ್‌ ಅಪ್‌ಗಳು, ಈಗ 1 ಲಕ್ಷಕ್ಕೂ ಅಧಿಕ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿವೆ. ಅದಕ್ಕೆ ದೇಶದಲ್ಲಿ ಮೋದಿಜಿ ಇದ್ದರೆ ಎಲ್ಲವೂ ಸಾಧ್ಯ” ಎಂದು ಪೋಸ್ಟ್ ಕಾರ್ಟ್ ಕನ್ನಡ ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟರ್ ಹಂಚಿಕೊಂಡಿದೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರು ಕೂಡ, “2014ರಲ್ಲಿ ದೇಶದಲ್ಲಿ ಕೇವಲ 350 ಸ್ಟಾರ್ಟ್‌ ಅಪ್‌ಗಳಿದ್ದವು. ಮೋದಿ ಪ್ರಧಾನಿಯಾದ ನಂತರ 300 ಪಟ್ಟು ಬೆಳವಣಿಗೆಯಾಗಿದೆ” ಎಂದಿದ್ದರು. ಈ ಕುರಿತು ಎಕಾನಾಮಿಕ್ಸ್ ಟೈಮ್ಸ್ 28, ಏಪ್ರಿಲ್ 2024ರಂದು ವರದಿ ಮಾಡಿತ್ತು.

“ಮೋದಿ ಪ್ರಧಾನಿಯಾಗುವ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು. ಈಗ ಒಂದು ಲಕ್ಷಕ್ಕೂ ಅಧಿಕ ಆಗಿವೆ” ಎಂದು ಯೂಟ್ಯೂಬರ್ ಗೌರವ್ ಚೌಧರಿ ಹೇಳಿದ್ದರು. ಈ ಕುರಿತು ಮೇ 20, 2024ರಂದು ಎಎನ್‌ಐ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.

ಫ್ಯಾಕ್ಟ್‌ಚೆಕ್ : 2014ಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್‌ ಅಪ್‌ಗಳಿದ್ದದ್ದು ನಿಜವೇ? ಎಂದು ನಾವು ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಸ್ಟ್ಯಾಟಿಸ್ಟ ಅಂಕಿ ಅಂಶಗಳ ಎಂಬ ವೆಬ್‌ಸೈಟ್‌ನಲ್ಲಿ ಭಾರತದ ಸ್ಟಾರ್ಟ್ ಅಪ್‌ಗಳ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಟ್ಯಾಟಿಸ್ಟ ಹೇಳಿದಂತೆ 2012ನೇ ವರ್ಷದಲ್ಲಿ ಭಾರತದಲ್ಲಿ 5,000 ಸ್ಟಾರ್ಟ್‌ ಅಪ್‌ಗಳು ನೋಂದಾಯಿಸಿಕೊಂಡಿದ್ದವು. 2013ರಲ್ಲಿ ಈ ಸಂಖ್ಯೆ ಕುಸಿದು 3,000 ಹೊಸ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿತ್ತು. 2014ರಲ್ಲಿ 4,500 ಮತ್ತು 2015ರಲ್ಲಿ ಬರೋಬ್ಬರಿ 8,000 ಹೊಸ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿ ಪ್ರಾರಂಭಗೊಂಡಿವೆ.

ಈ ಅಂಕಿ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಹೇಳುವುದಾದರೆ 2014ರಲ್ಲಿ ಅಥವಾ ಅದಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬ ಹೇಳಿಕೆ ಸುಳ್ಳು.

ಸ್ಟ್ಯಾಟಿಸ್ಟದ ಅಂಕಿ ಅಂಶಗಳ ಪ್ರಕಾರ, 2019ರ ಬಳಿಕ ದೇಶದಲ್ಲಿ ಹೊಸ ಸ್ಟಾರ್ಟ್‌ ಅಪ್‌ಗಳ ನೋಂದಣಿ ಸಂಪೂರ್ಣ ಕುಸಿದಿದೆ. 2019ರಲ್ಲಿ 3,500, 2020ರಲ್ಲಿ 1,250, 2021ರಲ್ಲಿ 1,436, 2022ರಲ್ಲಿ 652 ಮತ್ತು 2023ರಲ್ಲಿ ಕೇವಲ 489 ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ.

ಸ್ಟ್ಯಾಟಿಸ್ಟದ ಅಂಕಿ ಅಂಶಗಳು ನಂಬಲು ಅರ್ಹವಾಗಿದೆ. ಏಕೆಂದರೆ, ಈ ವೆಬ್‌ಸೈಟ್‌ನ ಅಂಕಿ ಅಂಶಗಳನ್ನು ಪ್ರಮುಖ ಕಂಪನಿಗಳಾದ ಗೂಗಲ್, ಅಡೋಬ್, ಪಿ&ಜಿ ಸ್ಯಾಮ್‌ಸಂಗ್ ಕೂಡ ಪರಿಗಣಿಸುತ್ತವೆ.

ಸದ್ಯ ಭಾರತದಲ್ಲಿ 1,12,718 ಸ್ಟಾರ್ಟ್‌ ಅಪ್‌ಗಳಿವೆ ಎಂದು ಇನ್ವೆಸ್ಟ್ ಇಂಡಿಯಾ ವರದಿ ಮಾಡಿದೆ. ಆದರೆ ಅವುಗಳಲ್ಲಿ ಶೇ.95ಗಿಂತಲೂ ಹೆಚ್ಚಿನ ಸ್ಟಾರ್ಟ್‌ ಅಪ್‌ಗಳು ವಿಫಲವಾಗಿವೆ ಎಂದು ತಜ್ಞರ ಹೇಳಿಕೆಯನ್ನು ಆಧರಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.
ಒಟ್ಟಾರೆಯಾಗಿ ಹೇಳುವುದಾದರೆ, ನಮಗೆ 2014ರ ಬಳಿಕ, ಅಂದರೆ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ಟಾರ್ಟ್‌ ಅಪ್‌ ಇಂಡಿಯಾ, ಡಿಜಿಟಿಲ್ ಇಂಡಿಯಾದಂತಹ ಯೋಜನೆಗಳನ್ನು ಬಳಸಿಕೊಂಡು ಅನೇಕ ಸ್ಟಾರ್ಟ್‌ ಅಪ್‌ಗಳು ಪ್ರಾರಂಭಗೊಂಡಿರುವುವುದು ನಿಜ. ಆದರೆ, ಇದೇ ರೀತಿ 2014ಕ್ಕಿಂತ ಮುನ್ನ ಕಾಂಗ್ರೆಸ್ ಸರ್ಕಾರದ ಅಧಿಕಾರವದಿಯಲ್ಲೂ ಅನೇಕ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ. 2014ರಲ್ಲಿ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳು ಮಾತ್ರ ಇತ್ತು ಎಂಬ ಹೇಳಿಕೆ ಸುಳ್ಳು.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು ‘ಚೀನಾ ಸಂವಿಧಾನದ’ ಪ್ರತಿಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...