Homeಫ್ಯಾಕ್ಟ್‌ಚೆಕ್FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

- Advertisement -
- Advertisement -

“ನವ ಭಾರತ ವೇಗವಾಗಿ ಮುನ್ನೆಡೆಯುತ್ತಿದೆ. 2014ರಲ್ಲಿ ಭಾರತದಲ್ಲಿ ಇದ್ದದ್ದು ಕೇವಲ 300 ಸ್ಟಾರ್ಟ್‌ ಅಪ್‌ಗಳು, ಈಗ 1 ಲಕ್ಷಕ್ಕೂ ಅಧಿಕ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿವೆ. ಅದಕ್ಕೆ ದೇಶದಲ್ಲಿ ಮೋದಿಜಿ ಇದ್ದರೆ ಎಲ್ಲವೂ ಸಾಧ್ಯ” ಎಂದು ಪೋಸ್ಟ್ ಕಾರ್ಟ್ ಕನ್ನಡ ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟರ್ ಹಂಚಿಕೊಂಡಿದೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರು ಕೂಡ, “2014ರಲ್ಲಿ ದೇಶದಲ್ಲಿ ಕೇವಲ 350 ಸ್ಟಾರ್ಟ್‌ ಅಪ್‌ಗಳಿದ್ದವು. ಮೋದಿ ಪ್ರಧಾನಿಯಾದ ನಂತರ 300 ಪಟ್ಟು ಬೆಳವಣಿಗೆಯಾಗಿದೆ” ಎಂದಿದ್ದರು. ಈ ಕುರಿತು ಎಕಾನಾಮಿಕ್ಸ್ ಟೈಮ್ಸ್ 28, ಏಪ್ರಿಲ್ 2024ರಂದು ವರದಿ ಮಾಡಿತ್ತು.

“ಮೋದಿ ಪ್ರಧಾನಿಯಾಗುವ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು. ಈಗ ಒಂದು ಲಕ್ಷಕ್ಕೂ ಅಧಿಕ ಆಗಿವೆ” ಎಂದು ಯೂಟ್ಯೂಬರ್ ಗೌರವ್ ಚೌಧರಿ ಹೇಳಿದ್ದರು. ಈ ಕುರಿತು ಮೇ 20, 2024ರಂದು ಎಎನ್‌ಐ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.

ಫ್ಯಾಕ್ಟ್‌ಚೆಕ್ : 2014ಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್‌ ಅಪ್‌ಗಳಿದ್ದದ್ದು ನಿಜವೇ? ಎಂದು ನಾವು ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಸ್ಟ್ಯಾಟಿಸ್ಟ ಅಂಕಿ ಅಂಶಗಳ ಎಂಬ ವೆಬ್‌ಸೈಟ್‌ನಲ್ಲಿ ಭಾರತದ ಸ್ಟಾರ್ಟ್ ಅಪ್‌ಗಳ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಟ್ಯಾಟಿಸ್ಟ ಹೇಳಿದಂತೆ 2012ನೇ ವರ್ಷದಲ್ಲಿ ಭಾರತದಲ್ಲಿ 5,000 ಸ್ಟಾರ್ಟ್‌ ಅಪ್‌ಗಳು ನೋಂದಾಯಿಸಿಕೊಂಡಿದ್ದವು. 2013ರಲ್ಲಿ ಈ ಸಂಖ್ಯೆ ಕುಸಿದು 3,000 ಹೊಸ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿತ್ತು. 2014ರಲ್ಲಿ 4,500 ಮತ್ತು 2015ರಲ್ಲಿ ಬರೋಬ್ಬರಿ 8,000 ಹೊಸ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿ ಪ್ರಾರಂಭಗೊಂಡಿವೆ.

ಈ ಅಂಕಿ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಹೇಳುವುದಾದರೆ 2014ರಲ್ಲಿ ಅಥವಾ ಅದಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬ ಹೇಳಿಕೆ ಸುಳ್ಳು.

ಸ್ಟ್ಯಾಟಿಸ್ಟದ ಅಂಕಿ ಅಂಶಗಳ ಪ್ರಕಾರ, 2019ರ ಬಳಿಕ ದೇಶದಲ್ಲಿ ಹೊಸ ಸ್ಟಾರ್ಟ್‌ ಅಪ್‌ಗಳ ನೋಂದಣಿ ಸಂಪೂರ್ಣ ಕುಸಿದಿದೆ. 2019ರಲ್ಲಿ 3,500, 2020ರಲ್ಲಿ 1,250, 2021ರಲ್ಲಿ 1,436, 2022ರಲ್ಲಿ 652 ಮತ್ತು 2023ರಲ್ಲಿ ಕೇವಲ 489 ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ.

ಸ್ಟ್ಯಾಟಿಸ್ಟದ ಅಂಕಿ ಅಂಶಗಳು ನಂಬಲು ಅರ್ಹವಾಗಿದೆ. ಏಕೆಂದರೆ, ಈ ವೆಬ್‌ಸೈಟ್‌ನ ಅಂಕಿ ಅಂಶಗಳನ್ನು ಪ್ರಮುಖ ಕಂಪನಿಗಳಾದ ಗೂಗಲ್, ಅಡೋಬ್, ಪಿ&ಜಿ ಸ್ಯಾಮ್‌ಸಂಗ್ ಕೂಡ ಪರಿಗಣಿಸುತ್ತವೆ.

ಸದ್ಯ ಭಾರತದಲ್ಲಿ 1,12,718 ಸ್ಟಾರ್ಟ್‌ ಅಪ್‌ಗಳಿವೆ ಎಂದು ಇನ್ವೆಸ್ಟ್ ಇಂಡಿಯಾ ವರದಿ ಮಾಡಿದೆ. ಆದರೆ ಅವುಗಳಲ್ಲಿ ಶೇ.95ಗಿಂತಲೂ ಹೆಚ್ಚಿನ ಸ್ಟಾರ್ಟ್‌ ಅಪ್‌ಗಳು ವಿಫಲವಾಗಿವೆ ಎಂದು ತಜ್ಞರ ಹೇಳಿಕೆಯನ್ನು ಆಧರಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.
ಒಟ್ಟಾರೆಯಾಗಿ ಹೇಳುವುದಾದರೆ, ನಮಗೆ 2014ರ ಬಳಿಕ, ಅಂದರೆ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ಟಾರ್ಟ್‌ ಅಪ್‌ ಇಂಡಿಯಾ, ಡಿಜಿಟಿಲ್ ಇಂಡಿಯಾದಂತಹ ಯೋಜನೆಗಳನ್ನು ಬಳಸಿಕೊಂಡು ಅನೇಕ ಸ್ಟಾರ್ಟ್‌ ಅಪ್‌ಗಳು ಪ್ರಾರಂಭಗೊಂಡಿರುವುವುದು ನಿಜ. ಆದರೆ, ಇದೇ ರೀತಿ 2014ಕ್ಕಿಂತ ಮುನ್ನ ಕಾಂಗ್ರೆಸ್ ಸರ್ಕಾರದ ಅಧಿಕಾರವದಿಯಲ್ಲೂ ಅನೇಕ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ. 2014ರಲ್ಲಿ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳು ಮಾತ್ರ ಇತ್ತು ಎಂಬ ಹೇಳಿಕೆ ಸುಳ್ಳು.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು ‘ಚೀನಾ ಸಂವಿಧಾನದ’ ಪ್ರತಿಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...