Homeಫ್ಯಾಕ್ಟ್‌ಚೆಕ್FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

- Advertisement -
- Advertisement -

“ನವ ಭಾರತ ವೇಗವಾಗಿ ಮುನ್ನೆಡೆಯುತ್ತಿದೆ. 2014ರಲ್ಲಿ ಭಾರತದಲ್ಲಿ ಇದ್ದದ್ದು ಕೇವಲ 300 ಸ್ಟಾರ್ಟ್‌ ಅಪ್‌ಗಳು, ಈಗ 1 ಲಕ್ಷಕ್ಕೂ ಅಧಿಕ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿವೆ. ಅದಕ್ಕೆ ದೇಶದಲ್ಲಿ ಮೋದಿಜಿ ಇದ್ದರೆ ಎಲ್ಲವೂ ಸಾಧ್ಯ” ಎಂದು ಪೋಸ್ಟ್ ಕಾರ್ಟ್ ಕನ್ನಡ ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟರ್ ಹಂಚಿಕೊಂಡಿದೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರು ಕೂಡ, “2014ರಲ್ಲಿ ದೇಶದಲ್ಲಿ ಕೇವಲ 350 ಸ್ಟಾರ್ಟ್‌ ಅಪ್‌ಗಳಿದ್ದವು. ಮೋದಿ ಪ್ರಧಾನಿಯಾದ ನಂತರ 300 ಪಟ್ಟು ಬೆಳವಣಿಗೆಯಾಗಿದೆ” ಎಂದಿದ್ದರು. ಈ ಕುರಿತು ಎಕಾನಾಮಿಕ್ಸ್ ಟೈಮ್ಸ್ 28, ಏಪ್ರಿಲ್ 2024ರಂದು ವರದಿ ಮಾಡಿತ್ತು.

“ಮೋದಿ ಪ್ರಧಾನಿಯಾಗುವ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು. ಈಗ ಒಂದು ಲಕ್ಷಕ್ಕೂ ಅಧಿಕ ಆಗಿವೆ” ಎಂದು ಯೂಟ್ಯೂಬರ್ ಗೌರವ್ ಚೌಧರಿ ಹೇಳಿದ್ದರು. ಈ ಕುರಿತು ಮೇ 20, 2024ರಂದು ಎಎನ್‌ಐ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.

ಫ್ಯಾಕ್ಟ್‌ಚೆಕ್ : 2014ಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್‌ ಅಪ್‌ಗಳಿದ್ದದ್ದು ನಿಜವೇ? ಎಂದು ನಾವು ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಸ್ಟ್ಯಾಟಿಸ್ಟ ಅಂಕಿ ಅಂಶಗಳ ಎಂಬ ವೆಬ್‌ಸೈಟ್‌ನಲ್ಲಿ ಭಾರತದ ಸ್ಟಾರ್ಟ್ ಅಪ್‌ಗಳ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಟ್ಯಾಟಿಸ್ಟ ಹೇಳಿದಂತೆ 2012ನೇ ವರ್ಷದಲ್ಲಿ ಭಾರತದಲ್ಲಿ 5,000 ಸ್ಟಾರ್ಟ್‌ ಅಪ್‌ಗಳು ನೋಂದಾಯಿಸಿಕೊಂಡಿದ್ದವು. 2013ರಲ್ಲಿ ಈ ಸಂಖ್ಯೆ ಕುಸಿದು 3,000 ಹೊಸ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿತ್ತು. 2014ರಲ್ಲಿ 4,500 ಮತ್ತು 2015ರಲ್ಲಿ ಬರೋಬ್ಬರಿ 8,000 ಹೊಸ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿ ಪ್ರಾರಂಭಗೊಂಡಿವೆ.

ಈ ಅಂಕಿ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಹೇಳುವುದಾದರೆ 2014ರಲ್ಲಿ ಅಥವಾ ಅದಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬ ಹೇಳಿಕೆ ಸುಳ್ಳು.

ಸ್ಟ್ಯಾಟಿಸ್ಟದ ಅಂಕಿ ಅಂಶಗಳ ಪ್ರಕಾರ, 2019ರ ಬಳಿಕ ದೇಶದಲ್ಲಿ ಹೊಸ ಸ್ಟಾರ್ಟ್‌ ಅಪ್‌ಗಳ ನೋಂದಣಿ ಸಂಪೂರ್ಣ ಕುಸಿದಿದೆ. 2019ರಲ್ಲಿ 3,500, 2020ರಲ್ಲಿ 1,250, 2021ರಲ್ಲಿ 1,436, 2022ರಲ್ಲಿ 652 ಮತ್ತು 2023ರಲ್ಲಿ ಕೇವಲ 489 ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ.

ಸ್ಟ್ಯಾಟಿಸ್ಟದ ಅಂಕಿ ಅಂಶಗಳು ನಂಬಲು ಅರ್ಹವಾಗಿದೆ. ಏಕೆಂದರೆ, ಈ ವೆಬ್‌ಸೈಟ್‌ನ ಅಂಕಿ ಅಂಶಗಳನ್ನು ಪ್ರಮುಖ ಕಂಪನಿಗಳಾದ ಗೂಗಲ್, ಅಡೋಬ್, ಪಿ&ಜಿ ಸ್ಯಾಮ್‌ಸಂಗ್ ಕೂಡ ಪರಿಗಣಿಸುತ್ತವೆ.

ಸದ್ಯ ಭಾರತದಲ್ಲಿ 1,12,718 ಸ್ಟಾರ್ಟ್‌ ಅಪ್‌ಗಳಿವೆ ಎಂದು ಇನ್ವೆಸ್ಟ್ ಇಂಡಿಯಾ ವರದಿ ಮಾಡಿದೆ. ಆದರೆ ಅವುಗಳಲ್ಲಿ ಶೇ.95ಗಿಂತಲೂ ಹೆಚ್ಚಿನ ಸ್ಟಾರ್ಟ್‌ ಅಪ್‌ಗಳು ವಿಫಲವಾಗಿವೆ ಎಂದು ತಜ್ಞರ ಹೇಳಿಕೆಯನ್ನು ಆಧರಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.
ಒಟ್ಟಾರೆಯಾಗಿ ಹೇಳುವುದಾದರೆ, ನಮಗೆ 2014ರ ಬಳಿಕ, ಅಂದರೆ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ಟಾರ್ಟ್‌ ಅಪ್‌ ಇಂಡಿಯಾ, ಡಿಜಿಟಿಲ್ ಇಂಡಿಯಾದಂತಹ ಯೋಜನೆಗಳನ್ನು ಬಳಸಿಕೊಂಡು ಅನೇಕ ಸ್ಟಾರ್ಟ್‌ ಅಪ್‌ಗಳು ಪ್ರಾರಂಭಗೊಂಡಿರುವುವುದು ನಿಜ. ಆದರೆ, ಇದೇ ರೀತಿ 2014ಕ್ಕಿಂತ ಮುನ್ನ ಕಾಂಗ್ರೆಸ್ ಸರ್ಕಾರದ ಅಧಿಕಾರವದಿಯಲ್ಲೂ ಅನೇಕ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ. 2014ರಲ್ಲಿ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳು ಮಾತ್ರ ಇತ್ತು ಎಂಬ ಹೇಳಿಕೆ ಸುಳ್ಳು.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು ‘ಚೀನಾ ಸಂವಿಧಾನದ’ ಪ್ರತಿಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...