Homeಫ್ಯಾಕ್ಟ್‌ಚೆಕ್FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

- Advertisement -
- Advertisement -

“ನವ ಭಾರತ ವೇಗವಾಗಿ ಮುನ್ನೆಡೆಯುತ್ತಿದೆ. 2014ರಲ್ಲಿ ಭಾರತದಲ್ಲಿ ಇದ್ದದ್ದು ಕೇವಲ 300 ಸ್ಟಾರ್ಟ್‌ ಅಪ್‌ಗಳು, ಈಗ 1 ಲಕ್ಷಕ್ಕೂ ಅಧಿಕ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿವೆ. ಅದಕ್ಕೆ ದೇಶದಲ್ಲಿ ಮೋದಿಜಿ ಇದ್ದರೆ ಎಲ್ಲವೂ ಸಾಧ್ಯ” ಎಂದು ಪೋಸ್ಟ್ ಕಾರ್ಟ್ ಕನ್ನಡ ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟರ್ ಹಂಚಿಕೊಂಡಿದೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರು ಕೂಡ, “2014ರಲ್ಲಿ ದೇಶದಲ್ಲಿ ಕೇವಲ 350 ಸ್ಟಾರ್ಟ್‌ ಅಪ್‌ಗಳಿದ್ದವು. ಮೋದಿ ಪ್ರಧಾನಿಯಾದ ನಂತರ 300 ಪಟ್ಟು ಬೆಳವಣಿಗೆಯಾಗಿದೆ” ಎಂದಿದ್ದರು. ಈ ಕುರಿತು ಎಕಾನಾಮಿಕ್ಸ್ ಟೈಮ್ಸ್ 28, ಏಪ್ರಿಲ್ 2024ರಂದು ವರದಿ ಮಾಡಿತ್ತು.

“ಮೋದಿ ಪ್ರಧಾನಿಯಾಗುವ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು. ಈಗ ಒಂದು ಲಕ್ಷಕ್ಕೂ ಅಧಿಕ ಆಗಿವೆ” ಎಂದು ಯೂಟ್ಯೂಬರ್ ಗೌರವ್ ಚೌಧರಿ ಹೇಳಿದ್ದರು. ಈ ಕುರಿತು ಮೇ 20, 2024ರಂದು ಎಎನ್‌ಐ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.

ಫ್ಯಾಕ್ಟ್‌ಚೆಕ್ : 2014ಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್‌ ಅಪ್‌ಗಳಿದ್ದದ್ದು ನಿಜವೇ? ಎಂದು ನಾವು ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಸ್ಟ್ಯಾಟಿಸ್ಟ ಅಂಕಿ ಅಂಶಗಳ ಎಂಬ ವೆಬ್‌ಸೈಟ್‌ನಲ್ಲಿ ಭಾರತದ ಸ್ಟಾರ್ಟ್ ಅಪ್‌ಗಳ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಟ್ಯಾಟಿಸ್ಟ ಹೇಳಿದಂತೆ 2012ನೇ ವರ್ಷದಲ್ಲಿ ಭಾರತದಲ್ಲಿ 5,000 ಸ್ಟಾರ್ಟ್‌ ಅಪ್‌ಗಳು ನೋಂದಾಯಿಸಿಕೊಂಡಿದ್ದವು. 2013ರಲ್ಲಿ ಈ ಸಂಖ್ಯೆ ಕುಸಿದು 3,000 ಹೊಸ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿತ್ತು. 2014ರಲ್ಲಿ 4,500 ಮತ್ತು 2015ರಲ್ಲಿ ಬರೋಬ್ಬರಿ 8,000 ಹೊಸ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿ ಪ್ರಾರಂಭಗೊಂಡಿವೆ.

ಈ ಅಂಕಿ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಹೇಳುವುದಾದರೆ 2014ರಲ್ಲಿ ಅಥವಾ ಅದಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬ ಹೇಳಿಕೆ ಸುಳ್ಳು.

ಸ್ಟ್ಯಾಟಿಸ್ಟದ ಅಂಕಿ ಅಂಶಗಳ ಪ್ರಕಾರ, 2019ರ ಬಳಿಕ ದೇಶದಲ್ಲಿ ಹೊಸ ಸ್ಟಾರ್ಟ್‌ ಅಪ್‌ಗಳ ನೋಂದಣಿ ಸಂಪೂರ್ಣ ಕುಸಿದಿದೆ. 2019ರಲ್ಲಿ 3,500, 2020ರಲ್ಲಿ 1,250, 2021ರಲ್ಲಿ 1,436, 2022ರಲ್ಲಿ 652 ಮತ್ತು 2023ರಲ್ಲಿ ಕೇವಲ 489 ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ.

ಸ್ಟ್ಯಾಟಿಸ್ಟದ ಅಂಕಿ ಅಂಶಗಳು ನಂಬಲು ಅರ್ಹವಾಗಿದೆ. ಏಕೆಂದರೆ, ಈ ವೆಬ್‌ಸೈಟ್‌ನ ಅಂಕಿ ಅಂಶಗಳನ್ನು ಪ್ರಮುಖ ಕಂಪನಿಗಳಾದ ಗೂಗಲ್, ಅಡೋಬ್, ಪಿ&ಜಿ ಸ್ಯಾಮ್‌ಸಂಗ್ ಕೂಡ ಪರಿಗಣಿಸುತ್ತವೆ.

ಸದ್ಯ ಭಾರತದಲ್ಲಿ 1,12,718 ಸ್ಟಾರ್ಟ್‌ ಅಪ್‌ಗಳಿವೆ ಎಂದು ಇನ್ವೆಸ್ಟ್ ಇಂಡಿಯಾ ವರದಿ ಮಾಡಿದೆ. ಆದರೆ ಅವುಗಳಲ್ಲಿ ಶೇ.95ಗಿಂತಲೂ ಹೆಚ್ಚಿನ ಸ್ಟಾರ್ಟ್‌ ಅಪ್‌ಗಳು ವಿಫಲವಾಗಿವೆ ಎಂದು ತಜ್ಞರ ಹೇಳಿಕೆಯನ್ನು ಆಧರಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.
ಒಟ್ಟಾರೆಯಾಗಿ ಹೇಳುವುದಾದರೆ, ನಮಗೆ 2014ರ ಬಳಿಕ, ಅಂದರೆ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ಟಾರ್ಟ್‌ ಅಪ್‌ ಇಂಡಿಯಾ, ಡಿಜಿಟಿಲ್ ಇಂಡಿಯಾದಂತಹ ಯೋಜನೆಗಳನ್ನು ಬಳಸಿಕೊಂಡು ಅನೇಕ ಸ್ಟಾರ್ಟ್‌ ಅಪ್‌ಗಳು ಪ್ರಾರಂಭಗೊಂಡಿರುವುವುದು ನಿಜ. ಆದರೆ, ಇದೇ ರೀತಿ 2014ಕ್ಕಿಂತ ಮುನ್ನ ಕಾಂಗ್ರೆಸ್ ಸರ್ಕಾರದ ಅಧಿಕಾರವದಿಯಲ್ಲೂ ಅನೇಕ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ. 2014ರಲ್ಲಿ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳು ಮಾತ್ರ ಇತ್ತು ಎಂಬ ಹೇಳಿಕೆ ಸುಳ್ಳು.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು ‘ಚೀನಾ ಸಂವಿಧಾನದ’ ಪ್ರತಿಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...