Homeಫ್ಯಾಕ್ಟ್‌ಚೆಕ್FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

- Advertisement -
- Advertisement -

“ನವ ಭಾರತ ವೇಗವಾಗಿ ಮುನ್ನೆಡೆಯುತ್ತಿದೆ. 2014ರಲ್ಲಿ ಭಾರತದಲ್ಲಿ ಇದ್ದದ್ದು ಕೇವಲ 300 ಸ್ಟಾರ್ಟ್‌ ಅಪ್‌ಗಳು, ಈಗ 1 ಲಕ್ಷಕ್ಕೂ ಅಧಿಕ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿವೆ. ಅದಕ್ಕೆ ದೇಶದಲ್ಲಿ ಮೋದಿಜಿ ಇದ್ದರೆ ಎಲ್ಲವೂ ಸಾಧ್ಯ” ಎಂದು ಪೋಸ್ಟ್ ಕಾರ್ಟ್ ಕನ್ನಡ ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟರ್ ಹಂಚಿಕೊಂಡಿದೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರು ಕೂಡ, “2014ರಲ್ಲಿ ದೇಶದಲ್ಲಿ ಕೇವಲ 350 ಸ್ಟಾರ್ಟ್‌ ಅಪ್‌ಗಳಿದ್ದವು. ಮೋದಿ ಪ್ರಧಾನಿಯಾದ ನಂತರ 300 ಪಟ್ಟು ಬೆಳವಣಿಗೆಯಾಗಿದೆ” ಎಂದಿದ್ದರು. ಈ ಕುರಿತು ಎಕಾನಾಮಿಕ್ಸ್ ಟೈಮ್ಸ್ 28, ಏಪ್ರಿಲ್ 2024ರಂದು ವರದಿ ಮಾಡಿತ್ತು.

“ಮೋದಿ ಪ್ರಧಾನಿಯಾಗುವ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು. ಈಗ ಒಂದು ಲಕ್ಷಕ್ಕೂ ಅಧಿಕ ಆಗಿವೆ” ಎಂದು ಯೂಟ್ಯೂಬರ್ ಗೌರವ್ ಚೌಧರಿ ಹೇಳಿದ್ದರು. ಈ ಕುರಿತು ಮೇ 20, 2024ರಂದು ಎಎನ್‌ಐ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.

ಫ್ಯಾಕ್ಟ್‌ಚೆಕ್ : 2014ಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್‌ ಅಪ್‌ಗಳಿದ್ದದ್ದು ನಿಜವೇ? ಎಂದು ನಾವು ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಸ್ಟ್ಯಾಟಿಸ್ಟ ಅಂಕಿ ಅಂಶಗಳ ಎಂಬ ವೆಬ್‌ಸೈಟ್‌ನಲ್ಲಿ ಭಾರತದ ಸ್ಟಾರ್ಟ್ ಅಪ್‌ಗಳ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಟ್ಯಾಟಿಸ್ಟ ಹೇಳಿದಂತೆ 2012ನೇ ವರ್ಷದಲ್ಲಿ ಭಾರತದಲ್ಲಿ 5,000 ಸ್ಟಾರ್ಟ್‌ ಅಪ್‌ಗಳು ನೋಂದಾಯಿಸಿಕೊಂಡಿದ್ದವು. 2013ರಲ್ಲಿ ಈ ಸಂಖ್ಯೆ ಕುಸಿದು 3,000 ಹೊಸ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿತ್ತು. 2014ರಲ್ಲಿ 4,500 ಮತ್ತು 2015ರಲ್ಲಿ ಬರೋಬ್ಬರಿ 8,000 ಹೊಸ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿ ಪ್ರಾರಂಭಗೊಂಡಿವೆ.

ಈ ಅಂಕಿ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಹೇಳುವುದಾದರೆ 2014ರಲ್ಲಿ ಅಥವಾ ಅದಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬ ಹೇಳಿಕೆ ಸುಳ್ಳು.

ಸ್ಟ್ಯಾಟಿಸ್ಟದ ಅಂಕಿ ಅಂಶಗಳ ಪ್ರಕಾರ, 2019ರ ಬಳಿಕ ದೇಶದಲ್ಲಿ ಹೊಸ ಸ್ಟಾರ್ಟ್‌ ಅಪ್‌ಗಳ ನೋಂದಣಿ ಸಂಪೂರ್ಣ ಕುಸಿದಿದೆ. 2019ರಲ್ಲಿ 3,500, 2020ರಲ್ಲಿ 1,250, 2021ರಲ್ಲಿ 1,436, 2022ರಲ್ಲಿ 652 ಮತ್ತು 2023ರಲ್ಲಿ ಕೇವಲ 489 ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ.

ಸ್ಟ್ಯಾಟಿಸ್ಟದ ಅಂಕಿ ಅಂಶಗಳು ನಂಬಲು ಅರ್ಹವಾಗಿದೆ. ಏಕೆಂದರೆ, ಈ ವೆಬ್‌ಸೈಟ್‌ನ ಅಂಕಿ ಅಂಶಗಳನ್ನು ಪ್ರಮುಖ ಕಂಪನಿಗಳಾದ ಗೂಗಲ್, ಅಡೋಬ್, ಪಿ&ಜಿ ಸ್ಯಾಮ್‌ಸಂಗ್ ಕೂಡ ಪರಿಗಣಿಸುತ್ತವೆ.

ಸದ್ಯ ಭಾರತದಲ್ಲಿ 1,12,718 ಸ್ಟಾರ್ಟ್‌ ಅಪ್‌ಗಳಿವೆ ಎಂದು ಇನ್ವೆಸ್ಟ್ ಇಂಡಿಯಾ ವರದಿ ಮಾಡಿದೆ. ಆದರೆ ಅವುಗಳಲ್ಲಿ ಶೇ.95ಗಿಂತಲೂ ಹೆಚ್ಚಿನ ಸ್ಟಾರ್ಟ್‌ ಅಪ್‌ಗಳು ವಿಫಲವಾಗಿವೆ ಎಂದು ತಜ್ಞರ ಹೇಳಿಕೆಯನ್ನು ಆಧರಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.
ಒಟ್ಟಾರೆಯಾಗಿ ಹೇಳುವುದಾದರೆ, ನಮಗೆ 2014ರ ಬಳಿಕ, ಅಂದರೆ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ಟಾರ್ಟ್‌ ಅಪ್‌ ಇಂಡಿಯಾ, ಡಿಜಿಟಿಲ್ ಇಂಡಿಯಾದಂತಹ ಯೋಜನೆಗಳನ್ನು ಬಳಸಿಕೊಂಡು ಅನೇಕ ಸ್ಟಾರ್ಟ್‌ ಅಪ್‌ಗಳು ಪ್ರಾರಂಭಗೊಂಡಿರುವುವುದು ನಿಜ. ಆದರೆ, ಇದೇ ರೀತಿ 2014ಕ್ಕಿಂತ ಮುನ್ನ ಕಾಂಗ್ರೆಸ್ ಸರ್ಕಾರದ ಅಧಿಕಾರವದಿಯಲ್ಲೂ ಅನೇಕ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ. 2014ರಲ್ಲಿ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳು ಮಾತ್ರ ಇತ್ತು ಎಂಬ ಹೇಳಿಕೆ ಸುಳ್ಳು.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು ‘ಚೀನಾ ಸಂವಿಧಾನದ’ ಪ್ರತಿಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...