Homeಫ್ಯಾಕ್ಟ್‌ಚೆಕ್FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

- Advertisement -
- Advertisement -

“ನವ ಭಾರತ ವೇಗವಾಗಿ ಮುನ್ನೆಡೆಯುತ್ತಿದೆ. 2014ರಲ್ಲಿ ಭಾರತದಲ್ಲಿ ಇದ್ದದ್ದು ಕೇವಲ 300 ಸ್ಟಾರ್ಟ್‌ ಅಪ್‌ಗಳು, ಈಗ 1 ಲಕ್ಷಕ್ಕೂ ಅಧಿಕ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿವೆ. ಅದಕ್ಕೆ ದೇಶದಲ್ಲಿ ಮೋದಿಜಿ ಇದ್ದರೆ ಎಲ್ಲವೂ ಸಾಧ್ಯ” ಎಂದು ಪೋಸ್ಟ್ ಕಾರ್ಟ್ ಕನ್ನಡ ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟರ್ ಹಂಚಿಕೊಂಡಿದೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರು ಕೂಡ, “2014ರಲ್ಲಿ ದೇಶದಲ್ಲಿ ಕೇವಲ 350 ಸ್ಟಾರ್ಟ್‌ ಅಪ್‌ಗಳಿದ್ದವು. ಮೋದಿ ಪ್ರಧಾನಿಯಾದ ನಂತರ 300 ಪಟ್ಟು ಬೆಳವಣಿಗೆಯಾಗಿದೆ” ಎಂದಿದ್ದರು. ಈ ಕುರಿತು ಎಕಾನಾಮಿಕ್ಸ್ ಟೈಮ್ಸ್ 28, ಏಪ್ರಿಲ್ 2024ರಂದು ವರದಿ ಮಾಡಿತ್ತು.

“ಮೋದಿ ಪ್ರಧಾನಿಯಾಗುವ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು. ಈಗ ಒಂದು ಲಕ್ಷಕ್ಕೂ ಅಧಿಕ ಆಗಿವೆ” ಎಂದು ಯೂಟ್ಯೂಬರ್ ಗೌರವ್ ಚೌಧರಿ ಹೇಳಿದ್ದರು. ಈ ಕುರಿತು ಮೇ 20, 2024ರಂದು ಎಎನ್‌ಐ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.

ಫ್ಯಾಕ್ಟ್‌ಚೆಕ್ : 2014ಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್‌ ಅಪ್‌ಗಳಿದ್ದದ್ದು ನಿಜವೇ? ಎಂದು ನಾವು ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಸ್ಟ್ಯಾಟಿಸ್ಟ ಅಂಕಿ ಅಂಶಗಳ ಎಂಬ ವೆಬ್‌ಸೈಟ್‌ನಲ್ಲಿ ಭಾರತದ ಸ್ಟಾರ್ಟ್ ಅಪ್‌ಗಳ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಟ್ಯಾಟಿಸ್ಟ ಹೇಳಿದಂತೆ 2012ನೇ ವರ್ಷದಲ್ಲಿ ಭಾರತದಲ್ಲಿ 5,000 ಸ್ಟಾರ್ಟ್‌ ಅಪ್‌ಗಳು ನೋಂದಾಯಿಸಿಕೊಂಡಿದ್ದವು. 2013ರಲ್ಲಿ ಈ ಸಂಖ್ಯೆ ಕುಸಿದು 3,000 ಹೊಸ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿತ್ತು. 2014ರಲ್ಲಿ 4,500 ಮತ್ತು 2015ರಲ್ಲಿ ಬರೋಬ್ಬರಿ 8,000 ಹೊಸ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿ ಪ್ರಾರಂಭಗೊಂಡಿವೆ.

ಈ ಅಂಕಿ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಹೇಳುವುದಾದರೆ 2014ರಲ್ಲಿ ಅಥವಾ ಅದಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬ ಹೇಳಿಕೆ ಸುಳ್ಳು.

ಸ್ಟ್ಯಾಟಿಸ್ಟದ ಅಂಕಿ ಅಂಶಗಳ ಪ್ರಕಾರ, 2019ರ ಬಳಿಕ ದೇಶದಲ್ಲಿ ಹೊಸ ಸ್ಟಾರ್ಟ್‌ ಅಪ್‌ಗಳ ನೋಂದಣಿ ಸಂಪೂರ್ಣ ಕುಸಿದಿದೆ. 2019ರಲ್ಲಿ 3,500, 2020ರಲ್ಲಿ 1,250, 2021ರಲ್ಲಿ 1,436, 2022ರಲ್ಲಿ 652 ಮತ್ತು 2023ರಲ್ಲಿ ಕೇವಲ 489 ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ.

ಸ್ಟ್ಯಾಟಿಸ್ಟದ ಅಂಕಿ ಅಂಶಗಳು ನಂಬಲು ಅರ್ಹವಾಗಿದೆ. ಏಕೆಂದರೆ, ಈ ವೆಬ್‌ಸೈಟ್‌ನ ಅಂಕಿ ಅಂಶಗಳನ್ನು ಪ್ರಮುಖ ಕಂಪನಿಗಳಾದ ಗೂಗಲ್, ಅಡೋಬ್, ಪಿ&ಜಿ ಸ್ಯಾಮ್‌ಸಂಗ್ ಕೂಡ ಪರಿಗಣಿಸುತ್ತವೆ.

ಸದ್ಯ ಭಾರತದಲ್ಲಿ 1,12,718 ಸ್ಟಾರ್ಟ್‌ ಅಪ್‌ಗಳಿವೆ ಎಂದು ಇನ್ವೆಸ್ಟ್ ಇಂಡಿಯಾ ವರದಿ ಮಾಡಿದೆ. ಆದರೆ ಅವುಗಳಲ್ಲಿ ಶೇ.95ಗಿಂತಲೂ ಹೆಚ್ಚಿನ ಸ್ಟಾರ್ಟ್‌ ಅಪ್‌ಗಳು ವಿಫಲವಾಗಿವೆ ಎಂದು ತಜ್ಞರ ಹೇಳಿಕೆಯನ್ನು ಆಧರಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.
ಒಟ್ಟಾರೆಯಾಗಿ ಹೇಳುವುದಾದರೆ, ನಮಗೆ 2014ರ ಬಳಿಕ, ಅಂದರೆ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ಟಾರ್ಟ್‌ ಅಪ್‌ ಇಂಡಿಯಾ, ಡಿಜಿಟಿಲ್ ಇಂಡಿಯಾದಂತಹ ಯೋಜನೆಗಳನ್ನು ಬಳಸಿಕೊಂಡು ಅನೇಕ ಸ್ಟಾರ್ಟ್‌ ಅಪ್‌ಗಳು ಪ್ರಾರಂಭಗೊಂಡಿರುವುವುದು ನಿಜ. ಆದರೆ, ಇದೇ ರೀತಿ 2014ಕ್ಕಿಂತ ಮುನ್ನ ಕಾಂಗ್ರೆಸ್ ಸರ್ಕಾರದ ಅಧಿಕಾರವದಿಯಲ್ಲೂ ಅನೇಕ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ. 2014ರಲ್ಲಿ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳು ಮಾತ್ರ ಇತ್ತು ಎಂಬ ಹೇಳಿಕೆ ಸುಳ್ಳು.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು ‘ಚೀನಾ ಸಂವಿಧಾನದ’ ಪ್ರತಿಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...