Homeಫ್ಯಾಕ್ಟ್‌ಚೆಕ್FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

- Advertisement -
- Advertisement -

“ನವ ಭಾರತ ವೇಗವಾಗಿ ಮುನ್ನೆಡೆಯುತ್ತಿದೆ. 2014ರಲ್ಲಿ ಭಾರತದಲ್ಲಿ ಇದ್ದದ್ದು ಕೇವಲ 300 ಸ್ಟಾರ್ಟ್‌ ಅಪ್‌ಗಳು, ಈಗ 1 ಲಕ್ಷಕ್ಕೂ ಅಧಿಕ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿವೆ. ಅದಕ್ಕೆ ದೇಶದಲ್ಲಿ ಮೋದಿಜಿ ಇದ್ದರೆ ಎಲ್ಲವೂ ಸಾಧ್ಯ” ಎಂದು ಪೋಸ್ಟ್ ಕಾರ್ಟ್ ಕನ್ನಡ ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟರ್ ಹಂಚಿಕೊಂಡಿದೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರು ಕೂಡ, “2014ರಲ್ಲಿ ದೇಶದಲ್ಲಿ ಕೇವಲ 350 ಸ್ಟಾರ್ಟ್‌ ಅಪ್‌ಗಳಿದ್ದವು. ಮೋದಿ ಪ್ರಧಾನಿಯಾದ ನಂತರ 300 ಪಟ್ಟು ಬೆಳವಣಿಗೆಯಾಗಿದೆ” ಎಂದಿದ್ದರು. ಈ ಕುರಿತು ಎಕಾನಾಮಿಕ್ಸ್ ಟೈಮ್ಸ್ 28, ಏಪ್ರಿಲ್ 2024ರಂದು ವರದಿ ಮಾಡಿತ್ತು.

“ಮೋದಿ ಪ್ರಧಾನಿಯಾಗುವ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು. ಈಗ ಒಂದು ಲಕ್ಷಕ್ಕೂ ಅಧಿಕ ಆಗಿವೆ” ಎಂದು ಯೂಟ್ಯೂಬರ್ ಗೌರವ್ ಚೌಧರಿ ಹೇಳಿದ್ದರು. ಈ ಕುರಿತು ಮೇ 20, 2024ರಂದು ಎಎನ್‌ಐ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.

ಫ್ಯಾಕ್ಟ್‌ಚೆಕ್ : 2014ಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್‌ ಅಪ್‌ಗಳಿದ್ದದ್ದು ನಿಜವೇ? ಎಂದು ನಾವು ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಸ್ಟ್ಯಾಟಿಸ್ಟ ಅಂಕಿ ಅಂಶಗಳ ಎಂಬ ವೆಬ್‌ಸೈಟ್‌ನಲ್ಲಿ ಭಾರತದ ಸ್ಟಾರ್ಟ್ ಅಪ್‌ಗಳ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಟ್ಯಾಟಿಸ್ಟ ಹೇಳಿದಂತೆ 2012ನೇ ವರ್ಷದಲ್ಲಿ ಭಾರತದಲ್ಲಿ 5,000 ಸ್ಟಾರ್ಟ್‌ ಅಪ್‌ಗಳು ನೋಂದಾಯಿಸಿಕೊಂಡಿದ್ದವು. 2013ರಲ್ಲಿ ಈ ಸಂಖ್ಯೆ ಕುಸಿದು 3,000 ಹೊಸ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿತ್ತು. 2014ರಲ್ಲಿ 4,500 ಮತ್ತು 2015ರಲ್ಲಿ ಬರೋಬ್ಬರಿ 8,000 ಹೊಸ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿ ಪ್ರಾರಂಭಗೊಂಡಿವೆ.

ಈ ಅಂಕಿ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಹೇಳುವುದಾದರೆ 2014ರಲ್ಲಿ ಅಥವಾ ಅದಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬ ಹೇಳಿಕೆ ಸುಳ್ಳು.

ಸ್ಟ್ಯಾಟಿಸ್ಟದ ಅಂಕಿ ಅಂಶಗಳ ಪ್ರಕಾರ, 2019ರ ಬಳಿಕ ದೇಶದಲ್ಲಿ ಹೊಸ ಸ್ಟಾರ್ಟ್‌ ಅಪ್‌ಗಳ ನೋಂದಣಿ ಸಂಪೂರ್ಣ ಕುಸಿದಿದೆ. 2019ರಲ್ಲಿ 3,500, 2020ರಲ್ಲಿ 1,250, 2021ರಲ್ಲಿ 1,436, 2022ರಲ್ಲಿ 652 ಮತ್ತು 2023ರಲ್ಲಿ ಕೇವಲ 489 ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ.

ಸ್ಟ್ಯಾಟಿಸ್ಟದ ಅಂಕಿ ಅಂಶಗಳು ನಂಬಲು ಅರ್ಹವಾಗಿದೆ. ಏಕೆಂದರೆ, ಈ ವೆಬ್‌ಸೈಟ್‌ನ ಅಂಕಿ ಅಂಶಗಳನ್ನು ಪ್ರಮುಖ ಕಂಪನಿಗಳಾದ ಗೂಗಲ್, ಅಡೋಬ್, ಪಿ&ಜಿ ಸ್ಯಾಮ್‌ಸಂಗ್ ಕೂಡ ಪರಿಗಣಿಸುತ್ತವೆ.

ಸದ್ಯ ಭಾರತದಲ್ಲಿ 1,12,718 ಸ್ಟಾರ್ಟ್‌ ಅಪ್‌ಗಳಿವೆ ಎಂದು ಇನ್ವೆಸ್ಟ್ ಇಂಡಿಯಾ ವರದಿ ಮಾಡಿದೆ. ಆದರೆ ಅವುಗಳಲ್ಲಿ ಶೇ.95ಗಿಂತಲೂ ಹೆಚ್ಚಿನ ಸ್ಟಾರ್ಟ್‌ ಅಪ್‌ಗಳು ವಿಫಲವಾಗಿವೆ ಎಂದು ತಜ್ಞರ ಹೇಳಿಕೆಯನ್ನು ಆಧರಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.
ಒಟ್ಟಾರೆಯಾಗಿ ಹೇಳುವುದಾದರೆ, ನಮಗೆ 2014ರ ಬಳಿಕ, ಅಂದರೆ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ಟಾರ್ಟ್‌ ಅಪ್‌ ಇಂಡಿಯಾ, ಡಿಜಿಟಿಲ್ ಇಂಡಿಯಾದಂತಹ ಯೋಜನೆಗಳನ್ನು ಬಳಸಿಕೊಂಡು ಅನೇಕ ಸ್ಟಾರ್ಟ್‌ ಅಪ್‌ಗಳು ಪ್ರಾರಂಭಗೊಂಡಿರುವುವುದು ನಿಜ. ಆದರೆ, ಇದೇ ರೀತಿ 2014ಕ್ಕಿಂತ ಮುನ್ನ ಕಾಂಗ್ರೆಸ್ ಸರ್ಕಾರದ ಅಧಿಕಾರವದಿಯಲ್ಲೂ ಅನೇಕ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ. 2014ರಲ್ಲಿ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳು ಮಾತ್ರ ಇತ್ತು ಎಂಬ ಹೇಳಿಕೆ ಸುಳ್ಳು.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು ‘ಚೀನಾ ಸಂವಿಧಾನದ’ ಪ್ರತಿಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...