Homeಫ್ಯಾಕ್ಟ್‌ಚೆಕ್FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

FACT CHECK : 2014ಕ್ಕಿಂತ ಮೊದಲು ಭಾರತದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬುವುದು ಸುಳ್ಳು

- Advertisement -
- Advertisement -

“ನವ ಭಾರತ ವೇಗವಾಗಿ ಮುನ್ನೆಡೆಯುತ್ತಿದೆ. 2014ರಲ್ಲಿ ಭಾರತದಲ್ಲಿ ಇದ್ದದ್ದು ಕೇವಲ 300 ಸ್ಟಾರ್ಟ್‌ ಅಪ್‌ಗಳು, ಈಗ 1 ಲಕ್ಷಕ್ಕೂ ಅಧಿಕ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿವೆ. ಅದಕ್ಕೆ ದೇಶದಲ್ಲಿ ಮೋದಿಜಿ ಇದ್ದರೆ ಎಲ್ಲವೂ ಸಾಧ್ಯ” ಎಂದು ಪೋಸ್ಟ್ ಕಾರ್ಟ್ ಕನ್ನಡ ತನ್ನ ಫೇಸ್‌ಬುಕ್ ಖಾತೆಯಲ್ಲಿ ಪೋಸ್ಟರ್ ಹಂಚಿಕೊಂಡಿದೆ.

ಕೇಂದ್ರ ಸಚಿವ ಜಿತೇಂದ್ರ ಸಿಂಗ್‌ ಅವರು ಕೂಡ, “2014ರಲ್ಲಿ ದೇಶದಲ್ಲಿ ಕೇವಲ 350 ಸ್ಟಾರ್ಟ್‌ ಅಪ್‌ಗಳಿದ್ದವು. ಮೋದಿ ಪ್ರಧಾನಿಯಾದ ನಂತರ 300 ಪಟ್ಟು ಬೆಳವಣಿಗೆಯಾಗಿದೆ” ಎಂದಿದ್ದರು. ಈ ಕುರಿತು ಎಕಾನಾಮಿಕ್ಸ್ ಟೈಮ್ಸ್ 28, ಏಪ್ರಿಲ್ 2024ರಂದು ವರದಿ ಮಾಡಿತ್ತು.

“ಮೋದಿ ಪ್ರಧಾನಿಯಾಗುವ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು. ಈಗ ಒಂದು ಲಕ್ಷಕ್ಕೂ ಅಧಿಕ ಆಗಿವೆ” ಎಂದು ಯೂಟ್ಯೂಬರ್ ಗೌರವ್ ಚೌಧರಿ ಹೇಳಿದ್ದರು. ಈ ಕುರಿತು ಮೇ 20, 2024ರಂದು ಎಎನ್‌ಐ ಎಕ್ಸ್‌ನಲ್ಲಿ ವಿಡಿಯೋ ಹಂಚಿಕೊಂಡಿದೆ.

ಫ್ಯಾಕ್ಟ್‌ಚೆಕ್ : 2014ಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್‌ ಅಪ್‌ಗಳಿದ್ದದ್ದು ನಿಜವೇ? ಎಂದು ನಾವು ಗೂಗಲ್‌ನಲ್ಲಿ ಮಾಹಿತಿ ಹುಡುಕಿದಾಗ ಸ್ಟ್ಯಾಟಿಸ್ಟ ಅಂಕಿ ಅಂಶಗಳ ಎಂಬ ವೆಬ್‌ಸೈಟ್‌ನಲ್ಲಿ ಭಾರತದ ಸ್ಟಾರ್ಟ್ ಅಪ್‌ಗಳ ಕುರಿತು ಮಾಹಿತಿ ಲಭ್ಯವಾಗಿದೆ. ಸ್ಟ್ಯಾಟಿಸ್ಟ ಹೇಳಿದಂತೆ 2012ನೇ ವರ್ಷದಲ್ಲಿ ಭಾರತದಲ್ಲಿ 5,000 ಸ್ಟಾರ್ಟ್‌ ಅಪ್‌ಗಳು ನೋಂದಾಯಿಸಿಕೊಂಡಿದ್ದವು. 2013ರಲ್ಲಿ ಈ ಸಂಖ್ಯೆ ಕುಸಿದು 3,000 ಹೊಸ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿತ್ತು. 2014ರಲ್ಲಿ 4,500 ಮತ್ತು 2015ರಲ್ಲಿ ಬರೋಬ್ಬರಿ 8,000 ಹೊಸ ಸ್ಟಾರ್ಟ್‌ ಅಪ್‌ಗಳು ಭಾರತದಲ್ಲಿ ಪ್ರಾರಂಭಗೊಂಡಿವೆ.

ಈ ಅಂಕಿ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಹೇಳುವುದಾದರೆ 2014ರಲ್ಲಿ ಅಥವಾ ಅದಕ್ಕಿಂತ ಮುನ್ನ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳಿದ್ದವು ಎಂಬ ಹೇಳಿಕೆ ಸುಳ್ಳು.

ಸ್ಟ್ಯಾಟಿಸ್ಟದ ಅಂಕಿ ಅಂಶಗಳ ಪ್ರಕಾರ, 2019ರ ಬಳಿಕ ದೇಶದಲ್ಲಿ ಹೊಸ ಸ್ಟಾರ್ಟ್‌ ಅಪ್‌ಗಳ ನೋಂದಣಿ ಸಂಪೂರ್ಣ ಕುಸಿದಿದೆ. 2019ರಲ್ಲಿ 3,500, 2020ರಲ್ಲಿ 1,250, 2021ರಲ್ಲಿ 1,436, 2022ರಲ್ಲಿ 652 ಮತ್ತು 2023ರಲ್ಲಿ ಕೇವಲ 489 ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ.

ಸ್ಟ್ಯಾಟಿಸ್ಟದ ಅಂಕಿ ಅಂಶಗಳು ನಂಬಲು ಅರ್ಹವಾಗಿದೆ. ಏಕೆಂದರೆ, ಈ ವೆಬ್‌ಸೈಟ್‌ನ ಅಂಕಿ ಅಂಶಗಳನ್ನು ಪ್ರಮುಖ ಕಂಪನಿಗಳಾದ ಗೂಗಲ್, ಅಡೋಬ್, ಪಿ&ಜಿ ಸ್ಯಾಮ್‌ಸಂಗ್ ಕೂಡ ಪರಿಗಣಿಸುತ್ತವೆ.

ಸದ್ಯ ಭಾರತದಲ್ಲಿ 1,12,718 ಸ್ಟಾರ್ಟ್‌ ಅಪ್‌ಗಳಿವೆ ಎಂದು ಇನ್ವೆಸ್ಟ್ ಇಂಡಿಯಾ ವರದಿ ಮಾಡಿದೆ. ಆದರೆ ಅವುಗಳಲ್ಲಿ ಶೇ.95ಗಿಂತಲೂ ಹೆಚ್ಚಿನ ಸ್ಟಾರ್ಟ್‌ ಅಪ್‌ಗಳು ವಿಫಲವಾಗಿವೆ ಎಂದು ತಜ್ಞರ ಹೇಳಿಕೆಯನ್ನು ಆಧರಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿತ್ತು.
ಒಟ್ಟಾರೆಯಾಗಿ ಹೇಳುವುದಾದರೆ, ನಮಗೆ 2014ರ ಬಳಿಕ, ಅಂದರೆ ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸ್ಟಾರ್ಟ್‌ ಅಪ್‌ ಇಂಡಿಯಾ, ಡಿಜಿಟಿಲ್ ಇಂಡಿಯಾದಂತಹ ಯೋಜನೆಗಳನ್ನು ಬಳಸಿಕೊಂಡು ಅನೇಕ ಸ್ಟಾರ್ಟ್‌ ಅಪ್‌ಗಳು ಪ್ರಾರಂಭಗೊಂಡಿರುವುವುದು ನಿಜ. ಆದರೆ, ಇದೇ ರೀತಿ 2014ಕ್ಕಿಂತ ಮುನ್ನ ಕಾಂಗ್ರೆಸ್ ಸರ್ಕಾರದ ಅಧಿಕಾರವದಿಯಲ್ಲೂ ಅನೇಕ ಸ್ಟಾರ್ಟ್‌ ಅಪ್‌ಗಳು ನೋಂದಣಿ ಮಾಡಿಕೊಂಡಿವೆ. 2014ರಲ್ಲಿ ದೇಶದಲ್ಲಿ ಕೇವಲ 300 ಸ್ಟಾರ್ಟ್ ಅಪ್‌ಗಳು ಮಾತ್ರ ಇತ್ತು ಎಂಬ ಹೇಳಿಕೆ ಸುಳ್ಳು.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ಪ್ರದರ್ಶಿಸಿದ್ದು ‘ಚೀನಾ ಸಂವಿಧಾನದ’ ಪ್ರತಿಯಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...