Homeಫ್ಯಾಕ್ಟ್‌ಚೆಕ್FACT CHECK : ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನಲ್ಲಿ ವಿರಾಟ್ ಕೊಹ್ಲಿಯ ಪ್ರತಿಮೆ ಸ್ಥಾಪಿಸಲಾಗಿದೆ ಎಂಬುವುದು...

FACT CHECK : ನ್ಯೂಯಾರ್ಕ್‌ನ ಟೈಮ್ಸ್‌ ಸ್ಕ್ವೇರ್‌ನಲ್ಲಿ ವಿರಾಟ್ ಕೊಹ್ಲಿಯ ಪ್ರತಿಮೆ ಸ್ಥಾಪಿಸಲಾಗಿದೆ ಎಂಬುವುದು ಸುಳ್ಳು

- Advertisement -
- Advertisement -

ಅಮೆರಿಕದ ಪ್ರಸಿದ್ಧ ‘ಟೈಮ್ಸ್‌ ಸ್ಕ್ವೇರ್‌’ನಲ್ಲಿ ಭಾರತದ ಕ್ರಿಕೆಟ್‌ ಆಟಗಾರ ವಿರಾಟ್ ಕೊಹ್ಲಿಯ ಪ್ರತಿಮೆ ಅನಾವರಣ ಮಾಡಲಾಗಿದೆ ಎಂಬ ಪೋಸ್ಟ್‌ವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

“ಅಮೆರಿಕದ ನ್ಯೂಯಾರ್ಕ್‌ನಲ್ಲಿ ವಿರಾಟ್ ಕೊಹ್ಲಿ ಅವರ ಪ್ರತಿಮೆ ಅನಾವರಣ ಮಾಡಿದ್ದಾರೆ. ಅಲ್ಲಿನ ಜನರಿಗೆ ವಿರಾಟ್ ಕೊಹ್ಲಿ ಕ್ರಿಕೆಟ್‌ಗಿಂತಲೂ ದೊಡ್ಡವರು” ಎಂಬ ಪೋಸ್ಟರ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾಗಿದೆ.

ಫ್ಯಾಕ್ಟ್‌ಚೆಕ್‌ : ಸಾಮಾಜಿಕ ಜಾಲತಾಣದ ಪೋಸ್ಟ್‌ಗಳ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ಗೂಗಲ್‌ನಲ್ಲಿ ಈ ಕುರಿತು ಮಾಹಿತಿ ಹುಡುಕಿದಾಗ, ಅಂತಹ ಯಾವುದೇ ಪ್ರತಿಮೆ ಅನಾವರಣ ಮಾಡಿದ ಬಗ್ಗೆ ವರದಿಗಳು ನಮಗೆ ಲಭ್ಯವಾಗಿಲ್ಲ.

ನ್ಯೂಯಾರ್ಕ್ ಸಿಟಿಯ ಟೈಮ್ ಸ್ಕ್ವೇರ್‌ನ ಸಾಮಾಜಿಕ ಮಾಧ್ಯಮದ ಹ್ಯಾಂಡಲ್‌ಗಳನ್ನು ನಾವು ಪರಿಶೀಲಿಸಿದ್ದೇವೆ. ಅಲ್ಲಿ ವಿರಾಟ್ ಕೊಹ್ಲಿ ಅವರ ಪ್ರತಿಮೆ ಅನಾವರಣದ ಬಗ್ಗೆ ಯಾವುದೇ ಮಾಹಿತಿ ಕಂಡುಬಂದಿಲ್ಲ. ಹೆಚ್ಚುವರಿಯಾಗಿ, ಜೂನ್ 28, 2024 ರಂದು @timessquarenyc ನ Instagram ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಅಂತಹ ಯಾವುದೇ ಪ್ರತಿಮೆ ಸ್ಥಾಪಿಸಿರುವುದನ್ನು ತೋರಿಸಿಲ್ಲ.

ಹಾಗೆಯೇ ಟೈಮ್ ಸ್ಕ್ವೇರ್‌ನ ವೆಬ್‌ಸೈಟ್‌ನಲ್ಲೂ ವಿರಾಟ್‌ ಕೊಹ್ಲಿಯ ಪ್ರತಿಮೆ ಅನಾವರಣಗೊಳಿಸಿದ ಬಗ್ಗೆ ಯಾವುದೇ ಮಾಹಿತಿ ಕಂಡು ಬಂದಿಲ್ಲ.

ಅರ್ಥ್‌ಕ್ಯಾಮ್ ಮೂಲಕ ಪ್ರಸಾರ ಮಾಡಲಾದ ಟೈಮ್ಸ್ ಸ್ಕ್ವೇರ್‌ನ ನೇರ ದೃಶ್ಯಾವಳಿಗಳಲ್ಲೂ ಅಂತಹ ಯಾವುದೇ ಪ್ರತಿಮೆಯನ್ನು ತೋರಿಸಲಿಲ್ಲ.

ಗೂಗಲ್‌ನಲ್ಲಿ “Virat Kohli” “statue” ಮತ್ತು “Duroflex”ಎಂದು ಕೀವರ್ಡ್ ಹುಡುಕಿದಾಗ ಜೂನ್ 23,2024 ರಂದು ಮ್ಯಾಟ್ರೆಸ್ ಸಂಸ್ಥೆಯ ಇನ್‌ಸ್ಟಾಗ್ರಾಂ ಪೋಸ್ಟ್‌ ಲಭ್ಯವಾಗಿದೆ. ಅದರಲ್ಲಿ, ವೈರಲ್ ಆದ ವಿಡಿಯೋ ಇದ್ದು, ಆ ವಿಡಿಯೋದಲ್ಲಿ “ಈಗಷ್ಟೇ ಅನಾವರಣಗೊಂಡಿದೆ: ಐಕಾನಿಕ್ ಟೈಮ್ಸ್ ಸ್ಕ್ವೇರ್‌ನಲ್ಲಿ ವಿರಾಟ್ ಕೊಹ್ಲಿಯ ದೊಡ್ಡ ಪ್ರತಿಮೆ. ಈ ರಾಜನ ಕರ್ತವ್ಯ, ನಾವು ಜಾಗತಿಕವಾಗಿ ವಿಸ್ತರಣೆ ಹೊಂದುತ್ತಿದ್ದು ಇತಿಹಾಸವನ್ನು ನಿರ್ಮಿಸುತ್ತಿದ್ದೇವೆ! ನ್ಯೂಯಾರ್ಕ್, ವೆಸ್ಟ್ ಇಂಡೀಸ್ ಮತ್ತು ವಿಶ್ವಕಪ್ 2024 ರ ಉದ್ದಕ್ಕೂ ವಿರಾಟ್ ಅವರ ನೆಚ್ಚಿನ ಡ್ಯುರೊಫ್ಲೆಕ್ಸ್ ಹಾಸಿಗೆಯನ್ನು ಅವರಿಗೆ ತಲುಪಿಸಲಾಗುತ್ತಿದೆ! #ViratSleepsOnDuroflex *CGIವಿಡಿಯೋ” ಎಂದಿದೆ.

ಪೋಸ್ಟ್‌ನಲ್ಲಿ ಬಳಸಲಾದ ಹ್ಯಾಶ್‌ಟ್ಯಾಗ್‌ಗಳು –“#GreatSleepGreatHealth #ViratKohli #worldcup #cricket #CGI #cgianimation– ದೃಶ್ಯವು ಕಂಪ್ಯೂಟರ್‌ನಿಂದ ರಚಿಸಲ್ಪಟ್ಟ ವಿಡಿಯೋ ಚಿತ್ರಣವಾಗಿದೆ ಎಂದು ಮತ್ತಷ್ಟು ಒತ್ತಿಹೇಳುತ್ತದೆ.

ಡ್ಯುರೊಫ್ಲೆಕ್ಸ್‌ನ ಪ್ರೊಫೈಲ್ ಅನ್ನು ನೋಡಿದ್ದು ಅಂತಹ ಅನೇಕ CGI ಮೂಲಕ ರಚಿತವಾದ ವಿವರಗಳು ಲಭ್ಯವಾಗಿವೆ.

ಟೈಮ್ಸ್ ಸ್ಕ್ವೇರ್‌ನಲ್ಲಿರುವ ಕೊಹ್ಲಿಯ ಪ್ರತಿಮೆಯನ್ನು ತೋರಿಸುವ ಅದೇ ತುಣುಕನ್ನು ಅವರ X ಖಾತೆಯಲ್ಲಿ “#CGI” ಎಂಬ ಹ್ಯಾಶ್‌ಟ್ಯಾಗ್‌ನೊಂದಿಗೆ ಹಂಚಿಕೊಳ್ಳಲಾಗಿದೆ.

ಇದನ್ನು ಡ್ಯುರೊಫ್ಲೆಕ್ಸ್‌ನ ಯೂಟ್ಯೂಬ್ ಚಾನೆಲ್ ಮತ್ತು ಫೇಸ್‌ಬುಕ್ ಪುಟದಲ್ಲಿ “#CGI #cgi ಅನಿಮೇಷನ್” ಎಂಬ ಹ್ಯಾಶ್‌ಟ್ಯಾಗ್‌ಗಳೊಂದಿಗೆ ಹಂಚಿಕೊಳ್ಳಲಾಗಿದೆ.

ನಾವು ನಡೆಸಿದ ಪರಿಶೀಲನೆಯಲ್ಲಿ ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್‌ನಲ್ಲಿ ವಿರಾಟ್ ಕೊಹ್ಲಿಯ ಬೃಹತ್ ಪ್ರತಿಮೆಯನ್ನು ತೋರಿಸುವ ವೈರಲ್ ದೃಶ್ಯಗಳು CGI ನಿಂದ ರಚಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ : FACT CHECK : ಸಂಬಂಧಿಕರಲ್ಲದ ಹೊರಗಿನವರಿಗೆ ರೈಲು ಟಿಕೆಟ್ ಬುಕ್ ಮಾಡಿದ್ರೆ ಜೈಲು ಸೇರಬೇಕಾಗುತ್ತದೆ ಎನ್ನುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...

ಸಿಜೆ ರಾಯ್ ಸಾವು| ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ; ಸಾಕ್ಷ್ಯಗಳು ಆತ್ಮಹತ್ಯೆಯನ್ನು ಸೂಚಿಸುತ್ತವೆ: ಎಸ್‌ಐಟಿ

ಬೆಂಗಳೂರು: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಸಾವಿನ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ)ಕ್ಕೆ ಅಪರಾಧ ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಅಥವಾ ಡೈರಿ ಪತ್ತೆಯಾಗಿಲ್ಲ, ಮತ್ತು ಪ್ರಾಥಮಿಕ...

ಕೇಂದ್ರ ಬಜೆಟ್ ಅನ್ನು ‘ಹಂಪ್ಟಿ ಡಂಪ್ಟಿ’ ಎಂದ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ

ಕೇಂದ್ರ ಬಜೆಟ್ ಅನ್ನು 'ಹಂಪ್ಟಿ ಡಂಪ್ಟಿ ಬಜೆಟ್' ಎಂದು ಮುಖ್ಯಮಂತ್ರಿ ಎಂದಿರುವ ಮಮತಾ ಬ್ಯಾನರ್ಜಿ, ಕೇಂದ್ರ ಸರ್ಕಾರ 'ದಿಕ್ಕು ತೋಚದ' ಬಜೆಟ್ ಮಂಡಿಸಿದೆ ಎಂದು ಭಾನುವಾರ ಟೀಕಿಸಿದರು. ರಾಷ್ಟ್ರ ರಾಜಧಾನಿಗೆ ಹೊರಡುವ ಮುನ್ನ, ಮುಂಬರುವ...

‘ತೆರೆಮರೆಯಲ್ಲಿ ಏನೋ ಅನುಮಾನಾಸ್ಪದ ಘಟನೆ ನಡೆದಿದೆ..’; ಅಜಿತ್ ವಿಮಾನ ಅಪಘಾತದ ಕುರಿತು ಅನುಮಾನ ವ್ಯಕ್ತಪಡಿಸಿದ ರಾವತ್

ಜನವರಿ 28, 2026 ರಂದು ಮಹಾರಾಷ್ಟ್ರದ ಬಾರಾಮತಿ ಬಳಿ ನಡೆದ ವಿಮಾನ ಅಪಘಾತದಲ್ಲಿ ಉಪಮುಖ್ಯಮಂತ್ರಿ ಮತ್ತು ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಹಠಾತ್ ಸಾವು ಸಾಕಷ್ಟು ಅನುಮಾನಗಳನ್ನು ಹುಟ್ಟುಹಾಕಿದೆ. ರಾಜಕೀಯ ವಲಯದಿಂದ...

ಸಿಜೆ ರಾಯ್ ಸಾವಿನ ನ್ಯಾಯಾಂಗ ತನಿಖೆ ಆಗ್ರಹಿಸಿದ ಕೇರಳ ಸಿಎಂ ಪಿಣರಾಯಿ ವಿಜಯನ್ : ಲೋಕಸಭೆಯಲ್ಲಿ ಚರ್ಚೆಗೆ ಕಾಂಗ್ರೆಸ್ ಆಗ್ರಹ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿ.ಜೆ ರಾಯ್ ಅವರ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸುವಂತೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಭಾನುವಾರ...