Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಯುಪಿಯಲ್ಲಿ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬುದು ಸುಳ್ಳು

ಫ್ಯಾಕ್ಟ್‌ಚೆಕ್: ಯುಪಿಯಲ್ಲಿ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬುದು ಸುಳ್ಳು

- Advertisement -
- Advertisement -

ಉತ್ತರ ಪ್ರದೇಶ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಡಿಸೆಂಬರ್ 6 ರಂದು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ರಿಜ್ವಿಯ ಮತಾಂತರದ ನಂತರ ಉತ್ತರ ಪ್ರದೇಶದ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬ ಹೇಳಿಕೆಯೊಂದಿಗೆ ಹಿಂದೂ ಪೂಜಾರಿಯ ಸುತ್ತ ಮುಸ್ಲಿಂ ಜನರು ಸುತ್ತವರೆದಿರುವ ಫೋಟೋವೊಂದನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ. ಫೆಬ್ರವರಿ 2022 ರಲ್ಲಿ ನಡೆಯಲಿರುವ ಯುಪಿ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈ ಹೇಳಿಕೆಯೊಂದಿರುವ ಪೋಸ್ಟ್‌ ವೈರಲ್ ಆಗುತ್ತಿದೆ.

[ವೈರಲ್ ಪಠ್ಯ: ಯುಪಿಯಲ್ಲಿ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು. ಜೈ ಶ್ರೀ ರಾಮ್,  ಸನಾತನ ಸತ್ಯ ]

ಹಲವಾರು ಫೇಸ್‌ಬುಕ್ ಬಳಕೆದಾರರು ಬಿಜೆಪಿ ಅಥವಾ ಹಿಂದುತ್ವವಾದಿ ಫೇಸ್‌ಬುಕ್‌ ಗುಂಪುಗಳಲ್ಲಿ ಈ ಹೇಳಿಕೆಯನ್ಜು ಪೋಸ್ಟ್ ಮಾಡಿದ್ದಾರೆ – ಮೋದಿ 2.0ವೋಟ್ ಮೋದಿ ಕೋಫಿರ್ ಏಕ್ ಬಾರ್ ಯೋಗಿ ಸರ್ಕಾರ್  ಮತ್ತು ಸುದರ್ಶನ್ ನ್ಯೂಸ್‌ನಲ್ಲಿ ಈ ಹೇಳಿಕೆಗಳನ್ನು ಪೋಸ್ಟ್‌ ಮಾಡಲಾಗಿದೆ. ಅದೇ ರೀತಿ, ಎಫ್‌ಬಿ ಪೇಜ್‌ಗಳಾದ ಬ್ರಹ್ಮ ರಾಷ್ಟ್ರ ಏಕಂ ಮತ್ತು ಜಾಗೋ ಭಾರತ್ ಜಾಗೋದಲ್ಲಿ ಕೂಡ ಇದೇ ಹೇಳಿಕೆಯನ್ನು ಹಂಚಿಕೊಳ್ಳಲಾಗಿದೆ. 

ಬಿಜೆಪಿ ರಾಜಕಾರಣಿ ಅನುಪೇಂದ್ರ ಸಿಂಗ್ ಕೂಡ ಇದೇ ಹೇಳಿಕೆಯನ್ನು ಫೋಟೋ ಇಲ್ಲದೆ ಹಂಚಿಕೊಂಡಿದ್ದಾರೆ. 

ಫ್ಯಾಕ್ಟ್‌ ಚೆಕ್:

ವೈರಲ್‌ ಆದ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ Google ನಲ್ಲಿ ಹುಡುಕಿದಾಗ, ಹಿಂದಿ ಭಾಷೆಯ ಸುದ್ದಿ ಔಟ್ಲೆಟ್ ಅಮರ್ ಉಜಾಲಾ ಈ ಚಿತ್ರವನ್ನು 2016 ರಲ್ಲಿ ಪ್ರಕಟಿಸಿರುವುದು ಕಂಡುಬಂದಿದೆ. ವೆಬ್‌ಸೈಟ್‌ನ ವರದಿಯ ಪ್ರಕಾರ, ಚಿತ್ರವು ಸೆಪ್ಟೆಂಬರ್ 23, 2016 ರಂದು ಮಥುರಾದ ಜಾಮಾ ಮಸೀದಿಯಲ್ಲಿ ಸೆರೆಹಿಡಿಯಲಾಗಿದೆ. ಇದು ಹಿಂದಿನ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಉರಿ ಪಟ್ಟಣದ ಸಮೀಪವಿರುವ ಭಾರತೀಯ ಸೇನಾ ಬ್ರಿಗೇಡ್ ಪ್ರಧಾನ ಕಚೇರಿಯ ಮೇಲೆ ಭಯೋತ್ಪಾದಕ ದಾಳಿ ನಡೆದ ನಂತರ ಪಾಕಿಸ್ತಾನದ ವಿರುದ್ದ ಪ್ರತಿಭಟನೆ ನಡೆಸಿದ ಸಂದರ್ಭದ್ದು ಎಂದು ವಿವರಿಸಿದೆ. ಈ ಘಟನೆಯ ವೀಡಿಯೊವನ್ನು ಅಮರ್ ಉಜಾಲಾ ಅವರ ವೆಬ್‌ಸೈಟ್‌ನಲ್ಲಿಯೂ ನೋಡಬಹುದು.

ನಂತರ, ಹೆಚ್ಚಿನ ಮಾಹಿತಿಗಾಗಿ ಡಿಸೆಂಬರ್‌ 6ರ ನಂತರ ಅಥವಾ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡಿವೆಯೇ ಎಂದು ಹುಡುಕಲಾಗಿದ್ದು, ಇದಕ್ಕೆ ಸಂಬಂಧಿದ ಅಥವಾ ಮತಾಂತರವನ್ನು ದೃಢೀಕರಿಸುವ ಯಾವುದೇ ಒಂದೇ ಒಂದು ವರದಿಯೂ ಕಂಡುಬಂದಿಲ್ಲ. 

ಆದ್ದರಿಂದ, ಐದು ವರ್ಷಗಳ ಹಳೆಯ ಚಿತ್ರವನ್ನು ಬಳಸಿಕೊಂಡು ಸುಳ್ಳು ಹೇಳಿಕೆಯೊಂದಿಗೆ ಪ್ರಚಾರ ಮಾಡಲಾಗಿದೆ ಎಂದು ಖಚಿತವಾಗಿದೆ.


Also Read: ಫ್ಯಾಕ್ಟ್‌ಚೆಕ್‌: ಕೆ.ಎಸ್ ಈಶ್ವರಪ್ಪನವರಿಗೆ ಬೈದಿದ್ದನ್ನು ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈಗುಳ ಎಂದು ತಿರುಚಲಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...