Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌ಚೆಕ್: ಯುಪಿಯಲ್ಲಿ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬುದು ಸುಳ್ಳು

ಫ್ಯಾಕ್ಟ್‌ಚೆಕ್: ಯುಪಿಯಲ್ಲಿ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬುದು ಸುಳ್ಳು

- Advertisement -
- Advertisement -

ಉತ್ತರ ಪ್ರದೇಶ ಶಿಯಾ ವಕ್ಫ್ ಮಂಡಳಿಯ ಮಾಜಿ ಅಧ್ಯಕ್ಷ ವಾಸಿಂ ರಿಜ್ವಿ ಡಿಸೆಂಬರ್ 6 ರಂದು ಹಿಂದೂ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ, ರಿಜ್ವಿಯ ಮತಾಂತರದ ನಂತರ ಉತ್ತರ ಪ್ರದೇಶದ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು ಎಂಬ ಹೇಳಿಕೆಯೊಂದಿಗೆ ಹಿಂದೂ ಪೂಜಾರಿಯ ಸುತ್ತ ಮುಸ್ಲಿಂ ಜನರು ಸುತ್ತವರೆದಿರುವ ಫೋಟೋವೊಂದನ್ನು ಹಲವಾರು ಸಾಮಾಜಿಕ ಮಾಧ್ಯಮ ಬಳಕೆದಾರರು ಹಂಚಿಕೊಳ್ಳುತ್ತಿದ್ದಾರೆ. ಫೆಬ್ರವರಿ 2022 ರಲ್ಲಿ ನಡೆಯಲಿರುವ ಯುಪಿ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈ ಹೇಳಿಕೆಯೊಂದಿರುವ ಪೋಸ್ಟ್‌ ವೈರಲ್ ಆಗುತ್ತಿದೆ.

[ವೈರಲ್ ಪಠ್ಯ: ಯುಪಿಯಲ್ಲಿ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡರು. ಜೈ ಶ್ರೀ ರಾಮ್,  ಸನಾತನ ಸತ್ಯ ]

ಹಲವಾರು ಫೇಸ್‌ಬುಕ್ ಬಳಕೆದಾರರು ಬಿಜೆಪಿ ಅಥವಾ ಹಿಂದುತ್ವವಾದಿ ಫೇಸ್‌ಬುಕ್‌ ಗುಂಪುಗಳಲ್ಲಿ ಈ ಹೇಳಿಕೆಯನ್ಜು ಪೋಸ್ಟ್ ಮಾಡಿದ್ದಾರೆ – ಮೋದಿ 2.0ವೋಟ್ ಮೋದಿ ಕೋಫಿರ್ ಏಕ್ ಬಾರ್ ಯೋಗಿ ಸರ್ಕಾರ್  ಮತ್ತು ಸುದರ್ಶನ್ ನ್ಯೂಸ್‌ನಲ್ಲಿ ಈ ಹೇಳಿಕೆಗಳನ್ನು ಪೋಸ್ಟ್‌ ಮಾಡಲಾಗಿದೆ. ಅದೇ ರೀತಿ, ಎಫ್‌ಬಿ ಪೇಜ್‌ಗಳಾದ ಬ್ರಹ್ಮ ರಾಷ್ಟ್ರ ಏಕಂ ಮತ್ತು ಜಾಗೋ ಭಾರತ್ ಜಾಗೋದಲ್ಲಿ ಕೂಡ ಇದೇ ಹೇಳಿಕೆಯನ್ನು ಹಂಚಿಕೊಳ್ಳಲಾಗಿದೆ. 

ಬಿಜೆಪಿ ರಾಜಕಾರಣಿ ಅನುಪೇಂದ್ರ ಸಿಂಗ್ ಕೂಡ ಇದೇ ಹೇಳಿಕೆಯನ್ನು ಫೋಟೋ ಇಲ್ಲದೆ ಹಂಚಿಕೊಂಡಿದ್ದಾರೆ. 

ಫ್ಯಾಕ್ಟ್‌ ಚೆಕ್:

ವೈರಲ್‌ ಆದ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ Google ನಲ್ಲಿ ಹುಡುಕಿದಾಗ, ಹಿಂದಿ ಭಾಷೆಯ ಸುದ್ದಿ ಔಟ್ಲೆಟ್ ಅಮರ್ ಉಜಾಲಾ ಈ ಚಿತ್ರವನ್ನು 2016 ರಲ್ಲಿ ಪ್ರಕಟಿಸಿರುವುದು ಕಂಡುಬಂದಿದೆ. ವೆಬ್‌ಸೈಟ್‌ನ ವರದಿಯ ಪ್ರಕಾರ, ಚಿತ್ರವು ಸೆಪ್ಟೆಂಬರ್ 23, 2016 ರಂದು ಮಥುರಾದ ಜಾಮಾ ಮಸೀದಿಯಲ್ಲಿ ಸೆರೆಹಿಡಿಯಲಾಗಿದೆ. ಇದು ಹಿಂದಿನ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಉರಿ ಪಟ್ಟಣದ ಸಮೀಪವಿರುವ ಭಾರತೀಯ ಸೇನಾ ಬ್ರಿಗೇಡ್ ಪ್ರಧಾನ ಕಚೇರಿಯ ಮೇಲೆ ಭಯೋತ್ಪಾದಕ ದಾಳಿ ನಡೆದ ನಂತರ ಪಾಕಿಸ್ತಾನದ ವಿರುದ್ದ ಪ್ರತಿಭಟನೆ ನಡೆಸಿದ ಸಂದರ್ಭದ್ದು ಎಂದು ವಿವರಿಸಿದೆ. ಈ ಘಟನೆಯ ವೀಡಿಯೊವನ್ನು ಅಮರ್ ಉಜಾಲಾ ಅವರ ವೆಬ್‌ಸೈಟ್‌ನಲ್ಲಿಯೂ ನೋಡಬಹುದು.

ನಂತರ, ಹೆಚ್ಚಿನ ಮಾಹಿತಿಗಾಗಿ ಡಿಸೆಂಬರ್‌ 6ರ ನಂತರ ಅಥವಾ 34 ಮುಸ್ಲಿಂ ಕುಟುಂಬಗಳು ಹಿಂದೂ ಧರ್ಮಕ್ಕೆ ಮತಾಂತರಗೊಂಡಿವೆಯೇ ಎಂದು ಹುಡುಕಲಾಗಿದ್ದು, ಇದಕ್ಕೆ ಸಂಬಂಧಿದ ಅಥವಾ ಮತಾಂತರವನ್ನು ದೃಢೀಕರಿಸುವ ಯಾವುದೇ ಒಂದೇ ಒಂದು ವರದಿಯೂ ಕಂಡುಬಂದಿಲ್ಲ. 

ಆದ್ದರಿಂದ, ಐದು ವರ್ಷಗಳ ಹಳೆಯ ಚಿತ್ರವನ್ನು ಬಳಸಿಕೊಂಡು ಸುಳ್ಳು ಹೇಳಿಕೆಯೊಂದಿಗೆ ಪ್ರಚಾರ ಮಾಡಲಾಗಿದೆ ಎಂದು ಖಚಿತವಾಗಿದೆ.


Also Read: ಫ್ಯಾಕ್ಟ್‌ಚೆಕ್‌: ಕೆ.ಎಸ್ ಈಶ್ವರಪ್ಪನವರಿಗೆ ಬೈದಿದ್ದನ್ನು ಸಿದ್ದರಾಮಯ್ಯನವರಿಗೆ ಸಿ.ಎಂ. ಇಬ್ರಾಹಿಂ ಏಕವಚನದಲ್ಲಿ ಬೈಗುಳ ಎಂದು ತಿರುಚಲಾಗಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...