Homeಫ್ಯಾಕ್ಟ್‌ಚೆಕ್FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಕೇಸರಿ ಬಟ್ಟೆ ಹೊದ್ದು ಮಲಗಿದ್ದ ವ್ಯಕ್ತಿಗೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ” ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ತ್ರೀನೇತ್ರ ಸೂತ್ರಧಾರ‘ ಎಂಬ ಫೇಸ್‌ಬುಕ್ ಬಳಕೆದಾರರೊಬ್ಬರು ಅಕ್ಟೋಬರ್ 7,2024 ರಂದು ಈ ವಿಡಿಯೋ ಹಂಚಿಕೊಂಡು, “ದೆಹಲಿಯ ಮಾಡೆಲ್ ಟೌನ್‌ನ ಕಾನೂನು ಮತ್ತು ಸುವ್ಯವಸ್ಥೆ ಇದು. ವ್ಯಕ್ತಿಯೊಬ್ಬ ಕೇಸರಿ ಬಟ್ಟೆಯನ್ನು ಹೊದ್ದುಕೊಂಡು ಆರಾಮವಾಗಿ ಮಲಗಿದ್ದಾನೆ… ಶಾಂತಿದೂತರು ಬೈಕ್‌ನಲ್ಲಿ ಬಂದು ವಿನಾಕಾರಣ ದೊಣ್ಣೆಯಿಂದ ಹೊಡೆಯಲಾರಂಭಿಸಿದ್ದಾರೆ” ಎಂದು ಬರೆದುಕೊಂಡಿದ್ದರು.

ಇದೇ ಬರಹದೊಂದಿಗೆ, ಸದಾ ಕೋಮು ದ್ವೇಷದ ಸುದ್ದಿಗಳನ್ನು ಹಬ್ಬುವ ಬಲಪಂಥೀಯ ಎಕ್ಸ್ ಖಾತೆ ಶ್ರೇಯಾ (@Shreya_Sanatani)ದಲ್ಲೂ ಅಕ್ಟೋಬರ್ 7, 2024ರಂದು ವಿಡಿಯೋ ಹಂಚಿಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ಕೇಸರಿ ಬಟ್ಟೆ ಹೊದ್ದು ಮಲಗಿದ್ದ ವ್ಯಕ್ತಿಗೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂಬುವುದು ಶುದ್ದ ಸುಳ್ಳು.

ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ನಮಗೆ ಅನೇಕ ವರದಿಗಳು ಲಭ್ಯವಾಗಿದೆ. ವರದಿಗಳ ಪ್ರಕಾರ, “ಸಾರ್ವಜನಿಕ ಪಾರ್ಕ್ ಒಂದರಲ್ಲಿ ಮೂತ್ರ ಮಾಡದಂತೆ ವ್ಯಕ್ತಿಯೊಬ್ಬ ಹೇಳಿದ್ದು, ಈ ಕಾರಣಕ್ಕೆ ಮರುದಿನ ಆತನನ್ನು ಅಮಾನುಷವಾಗಿ ಥಳಿಸಲಾಗಿದೆ. ಈ ಪ್ರರಕಣದಲ್ಲಿ ಭಾಗಿಯಾದವರೆಲ್ಲರೂ ಹಿಂದೂಗಳಾಗಿದ್ದಾರೆ.

ಈ ಘಟನೆಯ ಕುರಿತು ಅಕ್ಟೋಬರ್ 6, 2024 ರಂದು ರಿಪಬ್ಲಿಕ್ ವರ್ಲ್ಡ್ ಪ್ರಕಟಿಸಿದ ವರದಿ ನಮಗೆ ಲಭ್ಯವಾಗಿದೆ. ಅದರ ಪ್ರಕಾರ, ದೆಹಲಿಯ ಮಾಡೆಲ್ ಟೌನ್ ಪ್ರದೇಶದಲ್ಲಿ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಲಾಗಿದೆ. ಉತ್ತರ ದೆಹಲಿಯ ಮಾಡೆಲ್ ಟೌನ್ ಪ್ರದೇಶದಲ್ಲಿ ಶುಕ್ರವಾರ ನಡೆದ ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಕ್ಟೋಬರ್ 6, 2024 ರಂದು ಇಂಡಿಯಾ ಟಿವಿ ಪ್ರಕಟಿಸಿದ್ದ ವರದಿಯಲ್ಲೂ, “ಪಾರ್ಕ್‌ನಲ್ಲಿ ಮೂತ್ರ ವಿಸರ್ಜನೆ ಮಾಡಿದ ಆರೋಪಿಯನ್ನು ತಡೆದ ವ್ಯಕ್ತಿಯೊಬ್ಬನಿಗೆ ಮಾರನೇ ದಿನ ದೊಣ್ಣೆಯಿಂದ ಥಳಿಸಲಾಗಿದೆ. ಆರ್ಯನ್ ಎಂದು ಗುರುತಿಸಲಾದ ಆರೋಪಿ ಮರುದಿನ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ತನ್ನನ್ನು ಮೂತ್ರ ಮಾಡದಂತೆ ತಡೆದ ವ್ಯಕ್ತಿಯನ್ನು ಥಳಿಸಿದ್ದಾನೆ. ಇದಾದ ಬಳಿಕ ಅವರು ಬೈಕ್ ನಲ್ಲಿ ತೆರಳಿದ್ದಾರೆ ಎಂದಿದೆ.

ಮುಂದುವರಿದು, “ಈ ಘಟನೆ ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ವಾಯುವ್ಯ ದೆಹಲಿಯ ಮಾಡೆಲ್ ಟೌನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಮಧ್ಯಾಹ್ನ ಫುಟ್‌ಪಾತ್‌ನಲ್ಲಿ ಕೇಸರಿ ಬಣ್ಣದ ಬೆಡ್ ಶೀಟ್ ಹಾಕಿ ಮಲಗಿದ್ದ ರಾಮ್‌ಪಾಲ್‌ಗೆ ಆರ್ಯನ್ ಥಳಿಸಲು ಆರಂಭಿಸಿದ್ದ. ಸಂತ್ರಸ್ತ ಎದ್ದು ಕುಳಿತ ನಂತರವೂ ಆರೋಪಿ ದೊಣ್ಣೆಯಿಂದ ಹಲ್ಲೆ ಮುಂದುವರಿಸಿದ್ದಾನೆ, ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ” ಎಂದು ಹೇಳಲಾಗಿದೆ.

ಅಕ್ಟೋಬರ್ 7, 2024 ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದ ವರದಿಯಲ್ಲೂ “ವಾಯವ್ಯ ದೆಹಲಿಯ ಮಾಡೆಲ್ ಟೌನ್​ನಲ್ಲಿ ಇಬ್ಬರು ಪುರುಷರು ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುವುದನ್ನು ಆಕ್ಷೇಪಿಸಿದ್ದಕ್ಕಾಗಿ 28 ವರ್ಷದ ವ್ಯಕ್ತಿಯನ್ನು ದೊಣ್ಣೆಯಿಂದ ಥಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತನನ್ನು ಮಾಡೆಲ್ ಟೌನ್ ನಿವಾಸಿ ರಾಮ್ ಪಾಲ್ ಎಂದು ಗುರುತಿಸಲಾಗಿದ್ದು, ಟೆಂಟ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದಾನೆ. ಬೆಳಿಗ್ಗೆ 7 ಗಂಟೆ ಸುಮಾರಿಗೆ ಆತನ ಅಂಗಡಿಯ ಮುಂದೆ ಮಲಗಿದ್ದಾಗ ಈ ಘಟನೆ ನಡೆದಿದೆ” ಎಂದಿದೆ.

ಒಟ್ಟಿನಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುದನ್ನು ಆಕ್ಷೇಪಿಸಿದ ರಾಮ್‌ಪಾಲ್ ಎಂಬ ವ್ಯಕ್ತಿಗೆ ಆರ್ಯನ್ ಎಂಬಾತ ಹಲ್ಲೆ ನಡೆಸಿರುವ ವಿಡಿಯೋ ಆಗಿದೆ ವೈರಲ್ ಆಗಿರುವುದು. ಅಲ್ಲದೆ, ಅದರಲ್ಲಿ ಯಾವುದೇ ಕೋಮು ಆಯಾಮ ಇಲ್ಲ. ಕೇಸರಿ ಬಟ್ಟೆ ಹೊದ್ದು ಮಲಗಿದ್ದ ವ್ಯಕ್ತಿಗೆ ಶಾಂತಿದೂತರು (ಮುಸ್ಲಿಮರು) ಥಳಿಸಿದ್ದಾರೆ ಎಂಬುವುದು ಶುದ್ದ ಸುಳ್ಳು ಮತ್ತು ಕೋಮು ದ್ವೇಷದ ಪ್ರತಿಪಾದನೆಯಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಮಹಿಳೆ ಮುಂದೆ ಶರ್ಟ್ ಬಿಚ್ಚಿದ ಮುಸ್ಲಿಂ ಯುವಕನಿಗೆ ಥಳಿತ..ವೈರಲ್ ವಿಡಿಯೋದ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...