Homeಫ್ಯಾಕ್ಟ್‌ಚೆಕ್FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಕೇಸರಿ ಬಟ್ಟೆ ಹೊದ್ದು ಮಲಗಿದ್ದ ವ್ಯಕ್ತಿಗೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ” ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ತ್ರೀನೇತ್ರ ಸೂತ್ರಧಾರ‘ ಎಂಬ ಫೇಸ್‌ಬುಕ್ ಬಳಕೆದಾರರೊಬ್ಬರು ಅಕ್ಟೋಬರ್ 7,2024 ರಂದು ಈ ವಿಡಿಯೋ ಹಂಚಿಕೊಂಡು, “ದೆಹಲಿಯ ಮಾಡೆಲ್ ಟೌನ್‌ನ ಕಾನೂನು ಮತ್ತು ಸುವ್ಯವಸ್ಥೆ ಇದು. ವ್ಯಕ್ತಿಯೊಬ್ಬ ಕೇಸರಿ ಬಟ್ಟೆಯನ್ನು ಹೊದ್ದುಕೊಂಡು ಆರಾಮವಾಗಿ ಮಲಗಿದ್ದಾನೆ… ಶಾಂತಿದೂತರು ಬೈಕ್‌ನಲ್ಲಿ ಬಂದು ವಿನಾಕಾರಣ ದೊಣ್ಣೆಯಿಂದ ಹೊಡೆಯಲಾರಂಭಿಸಿದ್ದಾರೆ” ಎಂದು ಬರೆದುಕೊಂಡಿದ್ದರು.

ಇದೇ ಬರಹದೊಂದಿಗೆ, ಸದಾ ಕೋಮು ದ್ವೇಷದ ಸುದ್ದಿಗಳನ್ನು ಹಬ್ಬುವ ಬಲಪಂಥೀಯ ಎಕ್ಸ್ ಖಾತೆ ಶ್ರೇಯಾ (@Shreya_Sanatani)ದಲ್ಲೂ ಅಕ್ಟೋಬರ್ 7, 2024ರಂದು ವಿಡಿಯೋ ಹಂಚಿಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ಕೇಸರಿ ಬಟ್ಟೆ ಹೊದ್ದು ಮಲಗಿದ್ದ ವ್ಯಕ್ತಿಗೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂಬುವುದು ಶುದ್ದ ಸುಳ್ಳು.

ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ನಮಗೆ ಅನೇಕ ವರದಿಗಳು ಲಭ್ಯವಾಗಿದೆ. ವರದಿಗಳ ಪ್ರಕಾರ, “ಸಾರ್ವಜನಿಕ ಪಾರ್ಕ್ ಒಂದರಲ್ಲಿ ಮೂತ್ರ ಮಾಡದಂತೆ ವ್ಯಕ್ತಿಯೊಬ್ಬ ಹೇಳಿದ್ದು, ಈ ಕಾರಣಕ್ಕೆ ಮರುದಿನ ಆತನನ್ನು ಅಮಾನುಷವಾಗಿ ಥಳಿಸಲಾಗಿದೆ. ಈ ಪ್ರರಕಣದಲ್ಲಿ ಭಾಗಿಯಾದವರೆಲ್ಲರೂ ಹಿಂದೂಗಳಾಗಿದ್ದಾರೆ.

ಈ ಘಟನೆಯ ಕುರಿತು ಅಕ್ಟೋಬರ್ 6, 2024 ರಂದು ರಿಪಬ್ಲಿಕ್ ವರ್ಲ್ಡ್ ಪ್ರಕಟಿಸಿದ ವರದಿ ನಮಗೆ ಲಭ್ಯವಾಗಿದೆ. ಅದರ ಪ್ರಕಾರ, ದೆಹಲಿಯ ಮಾಡೆಲ್ ಟೌನ್ ಪ್ರದೇಶದಲ್ಲಿ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಲಾಗಿದೆ. ಉತ್ತರ ದೆಹಲಿಯ ಮಾಡೆಲ್ ಟೌನ್ ಪ್ರದೇಶದಲ್ಲಿ ಶುಕ್ರವಾರ ನಡೆದ ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಕ್ಟೋಬರ್ 6, 2024 ರಂದು ಇಂಡಿಯಾ ಟಿವಿ ಪ್ರಕಟಿಸಿದ್ದ ವರದಿಯಲ್ಲೂ, “ಪಾರ್ಕ್‌ನಲ್ಲಿ ಮೂತ್ರ ವಿಸರ್ಜನೆ ಮಾಡಿದ ಆರೋಪಿಯನ್ನು ತಡೆದ ವ್ಯಕ್ತಿಯೊಬ್ಬನಿಗೆ ಮಾರನೇ ದಿನ ದೊಣ್ಣೆಯಿಂದ ಥಳಿಸಲಾಗಿದೆ. ಆರ್ಯನ್ ಎಂದು ಗುರುತಿಸಲಾದ ಆರೋಪಿ ಮರುದಿನ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ತನ್ನನ್ನು ಮೂತ್ರ ಮಾಡದಂತೆ ತಡೆದ ವ್ಯಕ್ತಿಯನ್ನು ಥಳಿಸಿದ್ದಾನೆ. ಇದಾದ ಬಳಿಕ ಅವರು ಬೈಕ್ ನಲ್ಲಿ ತೆರಳಿದ್ದಾರೆ ಎಂದಿದೆ.

ಮುಂದುವರಿದು, “ಈ ಘಟನೆ ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ವಾಯುವ್ಯ ದೆಹಲಿಯ ಮಾಡೆಲ್ ಟೌನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಮಧ್ಯಾಹ್ನ ಫುಟ್‌ಪಾತ್‌ನಲ್ಲಿ ಕೇಸರಿ ಬಣ್ಣದ ಬೆಡ್ ಶೀಟ್ ಹಾಕಿ ಮಲಗಿದ್ದ ರಾಮ್‌ಪಾಲ್‌ಗೆ ಆರ್ಯನ್ ಥಳಿಸಲು ಆರಂಭಿಸಿದ್ದ. ಸಂತ್ರಸ್ತ ಎದ್ದು ಕುಳಿತ ನಂತರವೂ ಆರೋಪಿ ದೊಣ್ಣೆಯಿಂದ ಹಲ್ಲೆ ಮುಂದುವರಿಸಿದ್ದಾನೆ, ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ” ಎಂದು ಹೇಳಲಾಗಿದೆ.

ಅಕ್ಟೋಬರ್ 7, 2024 ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದ ವರದಿಯಲ್ಲೂ “ವಾಯವ್ಯ ದೆಹಲಿಯ ಮಾಡೆಲ್ ಟೌನ್​ನಲ್ಲಿ ಇಬ್ಬರು ಪುರುಷರು ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುವುದನ್ನು ಆಕ್ಷೇಪಿಸಿದ್ದಕ್ಕಾಗಿ 28 ವರ್ಷದ ವ್ಯಕ್ತಿಯನ್ನು ದೊಣ್ಣೆಯಿಂದ ಥಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತನನ್ನು ಮಾಡೆಲ್ ಟೌನ್ ನಿವಾಸಿ ರಾಮ್ ಪಾಲ್ ಎಂದು ಗುರುತಿಸಲಾಗಿದ್ದು, ಟೆಂಟ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದಾನೆ. ಬೆಳಿಗ್ಗೆ 7 ಗಂಟೆ ಸುಮಾರಿಗೆ ಆತನ ಅಂಗಡಿಯ ಮುಂದೆ ಮಲಗಿದ್ದಾಗ ಈ ಘಟನೆ ನಡೆದಿದೆ” ಎಂದಿದೆ.

ಒಟ್ಟಿನಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುದನ್ನು ಆಕ್ಷೇಪಿಸಿದ ರಾಮ್‌ಪಾಲ್ ಎಂಬ ವ್ಯಕ್ತಿಗೆ ಆರ್ಯನ್ ಎಂಬಾತ ಹಲ್ಲೆ ನಡೆಸಿರುವ ವಿಡಿಯೋ ಆಗಿದೆ ವೈರಲ್ ಆಗಿರುವುದು. ಅಲ್ಲದೆ, ಅದರಲ್ಲಿ ಯಾವುದೇ ಕೋಮು ಆಯಾಮ ಇಲ್ಲ. ಕೇಸರಿ ಬಟ್ಟೆ ಹೊದ್ದು ಮಲಗಿದ್ದ ವ್ಯಕ್ತಿಗೆ ಶಾಂತಿದೂತರು (ಮುಸ್ಲಿಮರು) ಥಳಿಸಿದ್ದಾರೆ ಎಂಬುವುದು ಶುದ್ದ ಸುಳ್ಳು ಮತ್ತು ಕೋಮು ದ್ವೇಷದ ಪ್ರತಿಪಾದನೆಯಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಮಹಿಳೆ ಮುಂದೆ ಶರ್ಟ್ ಬಿಚ್ಚಿದ ಮುಸ್ಲಿಂ ಯುವಕನಿಗೆ ಥಳಿತ..ವೈರಲ್ ವಿಡಿಯೋದ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...