Homeಫ್ಯಾಕ್ಟ್‌ಚೆಕ್FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

FACT CHECK : ವ್ಯಕ್ತಿಯೊಬ್ಬರು ಕೇಸರಿ ಬಟ್ಟೆ ಹೊದ್ದು ಮಲಗಿದ್ದಕ್ಕೆ ಮುಸ್ಲಿಮರು ಥಳಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

“ಕೇಸರಿ ಬಟ್ಟೆ ಹೊದ್ದು ಮಲಗಿದ್ದ ವ್ಯಕ್ತಿಗೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ” ಎಂದು ಪ್ರತಿಪಾದಿಸಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ತ್ರೀನೇತ್ರ ಸೂತ್ರಧಾರ‘ ಎಂಬ ಫೇಸ್‌ಬುಕ್ ಬಳಕೆದಾರರೊಬ್ಬರು ಅಕ್ಟೋಬರ್ 7,2024 ರಂದು ಈ ವಿಡಿಯೋ ಹಂಚಿಕೊಂಡು, “ದೆಹಲಿಯ ಮಾಡೆಲ್ ಟೌನ್‌ನ ಕಾನೂನು ಮತ್ತು ಸುವ್ಯವಸ್ಥೆ ಇದು. ವ್ಯಕ್ತಿಯೊಬ್ಬ ಕೇಸರಿ ಬಟ್ಟೆಯನ್ನು ಹೊದ್ದುಕೊಂಡು ಆರಾಮವಾಗಿ ಮಲಗಿದ್ದಾನೆ… ಶಾಂತಿದೂತರು ಬೈಕ್‌ನಲ್ಲಿ ಬಂದು ವಿನಾಕಾರಣ ದೊಣ್ಣೆಯಿಂದ ಹೊಡೆಯಲಾರಂಭಿಸಿದ್ದಾರೆ” ಎಂದು ಬರೆದುಕೊಂಡಿದ್ದರು.

ಇದೇ ಬರಹದೊಂದಿಗೆ, ಸದಾ ಕೋಮು ದ್ವೇಷದ ಸುದ್ದಿಗಳನ್ನು ಹಬ್ಬುವ ಬಲಪಂಥೀಯ ಎಕ್ಸ್ ಖಾತೆ ಶ್ರೇಯಾ (@Shreya_Sanatani)ದಲ್ಲೂ ಅಕ್ಟೋಬರ್ 7, 2024ರಂದು ವಿಡಿಯೋ ಹಂಚಿಕೊಳ್ಳಲಾಗಿತ್ತು.

ಫ್ಯಾಕ್ಟ್‌ಚೆಕ್ : ಕೇಸರಿ ಬಟ್ಟೆ ಹೊದ್ದು ಮಲಗಿದ್ದ ವ್ಯಕ್ತಿಗೆ ಮುಸ್ಲಿಮರು ಹಲ್ಲೆ ನಡೆಸಿದ್ದಾರೆ ಎಂಬುವುದು ಶುದ್ದ ಸುಳ್ಳು.

ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ನಮಗೆ ಅನೇಕ ವರದಿಗಳು ಲಭ್ಯವಾಗಿದೆ. ವರದಿಗಳ ಪ್ರಕಾರ, “ಸಾರ್ವಜನಿಕ ಪಾರ್ಕ್ ಒಂದರಲ್ಲಿ ಮೂತ್ರ ಮಾಡದಂತೆ ವ್ಯಕ್ತಿಯೊಬ್ಬ ಹೇಳಿದ್ದು, ಈ ಕಾರಣಕ್ಕೆ ಮರುದಿನ ಆತನನ್ನು ಅಮಾನುಷವಾಗಿ ಥಳಿಸಲಾಗಿದೆ. ಈ ಪ್ರರಕಣದಲ್ಲಿ ಭಾಗಿಯಾದವರೆಲ್ಲರೂ ಹಿಂದೂಗಳಾಗಿದ್ದಾರೆ.

ಈ ಘಟನೆಯ ಕುರಿತು ಅಕ್ಟೋಬರ್ 6, 2024 ರಂದು ರಿಪಬ್ಲಿಕ್ ವರ್ಲ್ಡ್ ಪ್ರಕಟಿಸಿದ ವರದಿ ನಮಗೆ ಲಭ್ಯವಾಗಿದೆ. ಅದರ ಪ್ರಕಾರ, ದೆಹಲಿಯ ಮಾಡೆಲ್ ಟೌನ್ ಪ್ರದೇಶದಲ್ಲಿ ಸಾರ್ವಜನಿಕವಾಗಿ ಮೂತ್ರ ವಿಸರ್ಜನೆ ಮಾಡಬೇಡಿ ಎಂದು ಹೇಳಿದ್ದಕ್ಕೆ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದವರನ್ನು ಬಂಧಿಸಲಾಗಿದೆ. ಉತ್ತರ ದೆಹಲಿಯ ಮಾಡೆಲ್ ಟೌನ್ ಪ್ರದೇಶದಲ್ಲಿ ಶುಕ್ರವಾರ ನಡೆದ ಈ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಕ್ಟೋಬರ್ 6, 2024 ರಂದು ಇಂಡಿಯಾ ಟಿವಿ ಪ್ರಕಟಿಸಿದ್ದ ವರದಿಯಲ್ಲೂ, “ಪಾರ್ಕ್‌ನಲ್ಲಿ ಮೂತ್ರ ವಿಸರ್ಜನೆ ಮಾಡಿದ ಆರೋಪಿಯನ್ನು ತಡೆದ ವ್ಯಕ್ತಿಯೊಬ್ಬನಿಗೆ ಮಾರನೇ ದಿನ ದೊಣ್ಣೆಯಿಂದ ಥಳಿಸಲಾಗಿದೆ. ಆರ್ಯನ್ ಎಂದು ಗುರುತಿಸಲಾದ ಆರೋಪಿ ಮರುದಿನ ತನ್ನ ಸ್ನೇಹಿತರೊಂದಿಗೆ ಸೇರಿಕೊಂಡು ತನ್ನನ್ನು ಮೂತ್ರ ಮಾಡದಂತೆ ತಡೆದ ವ್ಯಕ್ತಿಯನ್ನು ಥಳಿಸಿದ್ದಾನೆ. ಇದಾದ ಬಳಿಕ ಅವರು ಬೈಕ್ ನಲ್ಲಿ ತೆರಳಿದ್ದಾರೆ ಎಂದಿದೆ.

ಮುಂದುವರಿದು, “ಈ ಘಟನೆ ಸಮೀಪದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಂತರ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ವಾಯುವ್ಯ ದೆಹಲಿಯ ಮಾಡೆಲ್ ಟೌನ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಶುಕ್ರವಾರ ಮಧ್ಯಾಹ್ನ ಫುಟ್‌ಪಾತ್‌ನಲ್ಲಿ ಕೇಸರಿ ಬಣ್ಣದ ಬೆಡ್ ಶೀಟ್ ಹಾಕಿ ಮಲಗಿದ್ದ ರಾಮ್‌ಪಾಲ್‌ಗೆ ಆರ್ಯನ್ ಥಳಿಸಲು ಆರಂಭಿಸಿದ್ದ. ಸಂತ್ರಸ್ತ ಎದ್ದು ಕುಳಿತ ನಂತರವೂ ಆರೋಪಿ ದೊಣ್ಣೆಯಿಂದ ಹಲ್ಲೆ ಮುಂದುವರಿಸಿದ್ದಾನೆ, ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ” ಎಂದು ಹೇಳಲಾಗಿದೆ.

ಅಕ್ಟೋಬರ್ 7, 2024 ಟೈಮ್ಸ್ ಆಫ್ ಇಂಡಿಯಾ ಪ್ರಕಟಿಸಿದ ವರದಿಯಲ್ಲೂ “ವಾಯವ್ಯ ದೆಹಲಿಯ ಮಾಡೆಲ್ ಟೌನ್​ನಲ್ಲಿ ಇಬ್ಬರು ಪುರುಷರು ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುವುದನ್ನು ಆಕ್ಷೇಪಿಸಿದ್ದಕ್ಕಾಗಿ 28 ವರ್ಷದ ವ್ಯಕ್ತಿಯನ್ನು ದೊಣ್ಣೆಯಿಂದ ಥಳಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಂತ್ರಸ್ತನನ್ನು ಮಾಡೆಲ್ ಟೌನ್ ನಿವಾಸಿ ರಾಮ್ ಪಾಲ್ ಎಂದು ಗುರುತಿಸಲಾಗಿದ್ದು, ಟೆಂಟ್ ಹೌಸ್ ನಲ್ಲಿ ಕೆಲಸ ಮಾಡುತ್ತಿದ್ದಾನೆ. ಬೆಳಿಗ್ಗೆ 7 ಗಂಟೆ ಸುಮಾರಿಗೆ ಆತನ ಅಂಗಡಿಯ ಮುಂದೆ ಮಲಗಿದ್ದಾಗ ಈ ಘಟನೆ ನಡೆದಿದೆ” ಎಂದಿದೆ.

ಒಟ್ಟಿನಲ್ಲಿ, ಸಾರ್ವಜನಿಕ ಸ್ಥಳದಲ್ಲಿ ಮೂತ್ರ ವಿಸರ್ಜನೆ ಮಾಡುದನ್ನು ಆಕ್ಷೇಪಿಸಿದ ರಾಮ್‌ಪಾಲ್ ಎಂಬ ವ್ಯಕ್ತಿಗೆ ಆರ್ಯನ್ ಎಂಬಾತ ಹಲ್ಲೆ ನಡೆಸಿರುವ ವಿಡಿಯೋ ಆಗಿದೆ ವೈರಲ್ ಆಗಿರುವುದು. ಅಲ್ಲದೆ, ಅದರಲ್ಲಿ ಯಾವುದೇ ಕೋಮು ಆಯಾಮ ಇಲ್ಲ. ಕೇಸರಿ ಬಟ್ಟೆ ಹೊದ್ದು ಮಲಗಿದ್ದ ವ್ಯಕ್ತಿಗೆ ಶಾಂತಿದೂತರು (ಮುಸ್ಲಿಮರು) ಥಳಿಸಿದ್ದಾರೆ ಎಂಬುವುದು ಶುದ್ದ ಸುಳ್ಳು ಮತ್ತು ಕೋಮು ದ್ವೇಷದ ಪ್ರತಿಪಾದನೆಯಾಗಿದೆ.

ಇದನ್ನೂ ಓದಿ : FACT CHECK : ಹಿಂದೂ ಮಹಿಳೆ ಮುಂದೆ ಶರ್ಟ್ ಬಿಚ್ಚಿದ ಮುಸ್ಲಿಂ ಯುವಕನಿಗೆ ಥಳಿತ..ವೈರಲ್ ವಿಡಿಯೋದ ಅಸಲಿಯತ್ತೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...