Homeಫ್ಯಾಕ್ಟ್‌ಚೆಕ್Fact Check: ದುಬೈನ ಮಸೀದಿಯೊಂದರಲ್ಲಿ ಮುಸ್ಲಿಂ ಮಹಿಳೆಯರು ರಾಮ ಭಜನೆ ಹಾಡಿದ್ದಾರೆ ಎಂಬುದು ಸುಳ್ಳು

Fact Check: ದುಬೈನ ಮಸೀದಿಯೊಂದರಲ್ಲಿ ಮುಸ್ಲಿಂ ಮಹಿಳೆಯರು ರಾಮ ಭಜನೆ ಹಾಡಿದ್ದಾರೆ ಎಂಬುದು ಸುಳ್ಳು

- Advertisement -
- Advertisement -

“ದುಬೈನ ಮಸೀದಿಯೊಂದರಲ್ಲಿ ಮುಸ್ಲಿಂ ಮಹಿಳೆಯರು ರಾಮ ಭಜನೆ ಹಾಡುತ್ತಿರುವ ವಿಡಿಯೋ. ಇದು ಭಾರತದಲ್ಲಿ ನಡೆದಿದ್ದರೆ ಇಸ್ಲಾಂ ಅಪಾಯದಲ್ಲಿದೆ ಎನ್ನುತ್ತಿದ್ದರು” ಎಂದು ಪ್ರತಿಪಾದಿಸಿದ ಹಳೆಯ ವಿಡಿಯೋವೊಂದು ಮತ್ತೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾನುಗೌರಿ.ಕಾಂ ಸತ್ಯಾಸತ್ಯತೆ ಪರಿಶೀಲನೆ ನಡೆಸಿದೆ. ಇದಕ್ಕಾಗಿ ಗೂಗಲ್‌ನಲ್ಲಿ ನಾವು ವಿಡಿಯೋ ಹುಡುಕಾಡಿದ್ದೇವೆ. ಈ ವೇಳೆ “Sri Sathya Sai Official”ಎಂಬ ಯೂಟ್ಯೂಬ್ ಚಾನೆಲ್‌ನಲ್ಲಿ ನಮಗೆ ಮೂಲ ವಿಡಿಯೋ ದೊರೆತಿದೆ.

ಯೂಟ್ಯೂಬ್‌ನಲ್ಲಿರುವ ವಿಡಿಯೋ ದುಬೈನ ಮಸೀದಿಯಲ್ಲಿ ತೆಗೆಯಲಾಗಿಲ್ಲ, ಇದು ಆಂಧ್ರ ಪ್ರದೇಶದ ಪುಟ್ಟಪರ್ತಿಯಲ್ಲಿರುವ ಪ್ರಶಾಂತಿ ನಿಲಯಂನಲ್ಲಿ ನಡೆದ ಕಾರ್ಯಕ್ರಮಕ್ಕೆ ಸಂಬಂಧಿಸಿದೆ. ಶ್ರೀ ಸತ್ಯ ಸಾಯಿಬಾಬಾ ಅವರ ಮಹಾಸಮಾಧಿಯ ಮುಂದೆ ಈ ಕಾರ್ಯಕ್ರಮ ನಡೆದಿದೆ. ವಿಡಿಯೋದಲ್ಲಿರುವ ಕೆಲವು ಭಕ್ತರು ಬಹ್ರೇನ್, ಇರಾನ್, ಕುವೈತ್, ಒಮಾನ್, ಕತಾರ್, ಸೌದಿ ಅರೇಬಿಯಾ, ಸಿರಿಯಾ, ಟರ್ಕಿ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ಗೆ ಸೇರಿದವರಾಗಿದ್ದಾರೆ ಎಂದು ತಿಳಿದು ಬಂದಿದೆ.

“ಸರ್ವ ಧರ್ಮ ಸ್ವರೂಪ ಸಾಯಿ”- ಅರೇಬಿಯನ್ ಗಾಯಕವೃಂದ –10 ಜುಲೈ 2012″ ಎಂಬ ಶೀರ್ಷಿಕೆಯ ಯೂಟ್ಯೂಬ್ ವಿಡಿಯೋದಲ್ಲಿ ಮಧ್ಯಪ್ರಾಚ್ಯ ಮತ್ತು ಗಲ್ಫ್ ದೇಶಗಳನ್ನು ಒಳಗೊಂಡ ಸಾಯಿ ಸಂಘಟನೆಯ ಪ್ರದೇಶ 94 ರ ‘ಪ್ರಶಾಂತಿ’ ತೀರ್ಥಯಾತ್ರೆಯು ಪ್ರಶಾಂತಿ ನಿಲಯವನ್ನು ಇಸ್ಲಾಮಿಕ್ ಉತ್ಸಾಹದಿಂದ ಆವರಿಸಿದೆ. ಬಹ್ರೇನ್, ಇರಾನ್, ಕುವೈತ್, ಒಮಾನ್, ಕತಾರ್, ಸೌದಿ ಅರೇಬಿಯಾ, ಸಿರಿಯಾ, ಟರ್ಕಿ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್‌ನ ಭಕ್ತರು ಪ್ರಶಾಂತಿ ನಿಲಯಂನಲ್ಲಿ ಅರೆಬಿಕ್ ಸವಿಯನ್ನು ಒದಗಿಸಿದರು ಎಂದು ಬರೆಯಲಾಗಿದೆ.

ವಿಡಿಯೋ ಲಿಂಕ್ ಇಲ್ಲಿದೆ

ಆದ್ದರಿಂದ ವೈರಲ್ ವಿಡಿಯೋ ದುಬೈನ ಮಸೀದಿಯೊಂದರಲ್ಲಿ ಮುಸ್ಲಿಂ ಮಹಿಳೆಯರು ರಾಮ ಭಜನೆ ಹಾಡುತ್ತಿರುವ ವಿಡಿಯೋ ಅಲ್ಲ ಎಂಬುವುದು ಖಚಿತವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ತಪ್ಪಾದ ಮಾಹಿತಿಯೊಂದಿಗೆ ವಿಡಿಯೋ ಹಂಚಿಕೊಳ್ಳಲಾಗ್ತಿದೆ.

ಇದನ್ನೂ ಓದಿ : Fact Check: ರೈತ ಹೋರಾಟದ ಉದ್ದೇಶ ಮೋದಿ ವರ್ಚಸ್ಸು ಕುಂದಿಸುವುದಾ? ಮಾಧ್ಯಮ ವರದಿಗಳ ಸತ್ಯಾಸತ್ಯತೆ ಏನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...