Homeಫ್ಯಾಕ್ಟ್‌ಚೆಕ್Fact Check: ಪಿ.ವಿ ನರಸಿಂಹ ರಾವ್‌ರನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವಮಾನಿಸಿದ್ದಾರೆ ಎಂಬುವುದು ಸುಳ್ಳು

Fact Check: ಪಿ.ವಿ ನರಸಿಂಹ ರಾವ್‌ರನ್ನು ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವಮಾನಿಸಿದ್ದಾರೆ ಎಂಬುವುದು ಸುಳ್ಳು

- Advertisement -
- Advertisement -

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಕಳೆದ ಶನಿವಾರ (ಮಾ.30) ಮಾಜಿ ಪ್ರಧಾನಿಗಳಾದ ಪಿ.ವಿ ನರಸಿಂಹರಾವ್, ಚೌಧರಿ ಚರಣ್ ಸಿಂಗ್, ವಿಜ್ಞಾನಿ ಎಂ.ಎಸ್ ಸ್ವಾಮಿನಾಥನ್ ಮತ್ತು ಎರಡು ಬಾರಿ ಬಿಹಾರದ ಮುಖ್ಯಮಂತ್ರಿಯಾಗಿದ್ದ ಕರ್ಪೂರಿ ಠಾಕೂರ್ ಅವರಿಗೆ ‘ಭಾರತ ರತ್ನ’ ಪ್ರಶಸ್ತಿ ಪ್ರಧಾನ ಮಾಡಿದ್ದಾರೆ.

ಮಾಜಿ ಪ್ರಧಾನಿ ಪಿ.ವಿ ನರಸಿಂಹರಾವ್ ಅವರಿಗೆ ಘೋಷಿಸಲಾಗಿದ್ದ ಮರಣೋತ್ತರ ಪ್ರಶಸ್ತಿಯನ್ನು ಅವರ ಮಗ ಪಿ.ವಿ ಪ್ರಭಾಕರ್ ರಾವ್ ಅವರು ಸ್ವೀಕರಿಸಿದ್ದಾರೆ.

ಪಿ.ವಿ ನರಸಿಂಹರಾವ್ ಅವರ ಪ್ರಶಸ್ತಿಯನ್ನು ನೀಡುವಾಗ ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ‘ಚಪ್ಪಾಳೆ ತಟ್ಟಿಲ್ಲ’ ಎಂದು ಪ್ರತಿಪಾದಿಸಲಾದ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಅನೇಕ ಸಾಮಾಜಿಕ ಜಾಲತಾಣ ಬಳಕೆದಾರರು “ಮಲ್ಲಿಕಾರ್ಜುನ ಖರ್ಗೆ ಅವರು ಚಪ್ಪಾಳೆ ತಟ್ಟದೆ ಸುಮ್ಮನೆ ಕೂರುವ ಮೂಲಕ ಪಿ.ವಿ ನರಸಿಂಹರಾವ್ ಅವರಿಗೆ ಅವಮಾನ ಮಾಡಿದ್ದಾರೆ, ಕಾಂಗ್ರೆಸ್‌ನ ಸಂಸ್ಕೃತಿ ತೋರಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು, “ಸೋನಿಯಾ ಗಾಂಧಿಯವರ ಸೂಚನೆಯಂತೆ ಖರ್ಗೆ ಅವರು ಚಪ್ಪಾಳೆ ತಟ್ಟಿಲ್ಲ” ಎಂದಿದ್ದಾರೆ.

ಫ್ಯಾಕ್ಟ್‌ಚೆಕ್: ವೈರಲ್ ಫೋಟೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಕೀ ವರ್ಡ್‌ ಬಳಸಿ ಗೂಗಲ್ ಸರ್ಚ್‌ ಮಾಡಿದ್ದೇವೆ. ಈ ವೇಳೆ ಮಲ್ಲಿಕಾರ್ಜುನ ಖರ್ಗೆ ಅವರು ಚಪ್ಪಾಳೆ ತಟ್ಟಿಲ್ಲ ಎಂಬ ವಾದಕ್ಕೆ ಸಂಬಂಧಪಟ್ಟಂತೆ ಯಾವುದೇ ಮಾಧ್ಯಮಗಳು ವರದಿ ಪ್ರಕಟಿಸಿರುವುದು ಕಂಡು ಬಂದಿಲ್ಲ.

ಪ್ರಧಾನಿ ನರೇಂದ್ರ ಮೋದಿಯವರು ಮಾರ್ಚ್‌ 30ರಂದು ಅದೇ ವೈರಲ್ ಫೋಟೋವನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದು, ನರಸಿಂಹ ರಾವ್ ಅವರಿಗೆ ಗೌರವ ಸಲ್ಲಿಸಿದ್ದಾರೆ.

ಪಿ.ವಿ ಪ್ರಭಾಕರ್ ರಾವ್ ಅವರು ತಂದೆಯ ಬದಲಾಗಿ ಪ್ರಶಸ್ತಿ ಸ್ವೀಕರಿಸಿದ ವಿಡಿಯೋವನ್ನು ರಾಷ್ಟ್ರಪತಿಗಳ ಅಧಿಕೃತ ಯೂಟ್ಯೂಬ್ ಖಾತೆಯಲ್ಲಿ ಮಾರ್ಚ್‌ 31ರಂದು ಅಪ್ಲೋಡ್‌ ಮಾಡಲಾಗಿದ್ದು, ಅದನ್ನು ಸರಿಯಾಗಿ ಗಮನಿಸಿದಾಗ ನಮಗೆ ಸತ್ಯ ಗೊತ್ತಾಗಿದೆ. ಒಟ್ಟು 41 ಸೆಕೆಂಡ್‌ನ ವಿಡಿಯೋದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಚಪ್ಪಾಳೆ ತಟ್ಟುವ ದೃಶ್ಯವಿದೆ.

ಪೋಸ್ಟ್ ಲಿಂಕ್ ಇಲ್ಲಿದೆ

ರಾಷ್ಟ್ರಪತಿಗಳ ಯೂಟ್ಯೂಬ್‌ನಲ್ಲಿರುವ ವಿಡಿಯೋದಲ್ಲಿ ಪಿ.ವಿ ಪ್ರಭಾಕರ್ ಅವರ ಹೆಸರು ಕರೆಯುವಾಗ ಮಲ್ಲಿಕಾರ್ಜುನ ಖರ್ಗೆ ಮೊದಲು ಚಪ್ಪಾಳೆ ತಟ್ಟಿ ಸುಮ್ಮನಾಗಿದ್ದಾರೆ. ಆದರೆ, ಇನ್ನುಳಿದ ನಾಯಕರಾದ ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಇವರೆಲ್ಲ ಚಪ್ಪಾಳೆ ತಟ್ಟುವುದನ್ನು ಮುಂದುವರೆಸಿದ್ದಾರೆ. ಖರ್ಗೆ ಅವರು ಚಪ್ಪಾಳೆ ತಟ್ಟಿ ಸುಮ್ಮನಾದಾಗ ತೆಗೆದ ಫೋಟೋವನ್ನು ತಪ್ಪಾಗಿ ಹಂಚಿಕೊಂಡು, ಅವರು ಚಪ್ಪಾಳೆ ತಟ್ಟಿಲ್ಲ ಎನ್ನಲಾಗಿದೆ.

ವಿಡಿಯೋ ಲಿಂಕ್ ಇಲ್ಲಿದೆ

ಮಾರ್ಚ್‌ 30ರಂದು ದೂರ ದರ್ಶನದ ಯೂಟ್ಯೂಬ್ ಚಾನೆಲ್‌ನಲ್ಲೂ ಪ್ರಭಾಕರ್ ಅವರು ಪ್ರಶಸ್ತಿ ಸ್ವೀಕರಿಸಿದ ವಿಡಿಯೋ ಅಪ್ಲೋಡ್ ಮಾಡಲಾಗಿದೆ. ಅದರಲ್ಲೂ ಮಲ್ಲಿಕಾರ್ಜುನ ಖರ್ಗೆ ಅವರು ಚಪ್ಪಾಳೆ ತಟ್ಟುವ ದೃಶ್ಯವಿದೆ. ಹಾಗಾಗಿ , ಪಿ.ವಿ ನರಸಿಂಹ ರಾವ್ ಅವರ ಪ್ರಶಸ್ತಿ ಪ್ರದಾನ ಮಾಡುವಾಗ ಖರ್ಗೆ ಅವರು ಚಪ್ಪಾಳೆ ತಟ್ಟಿಲ್ಲ ಎನ್ನುವುದು ಸುಳ್ಳು.

ಇದನ್ನೂ ಓದಿ : Fact Check: ಚುನಾವಣಾ ಬಾಂಡ್‌ ಕುರಿತು ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...